Homeಮುಖಪುಟಲಸಿಕೆಗಳು ಸಾರ್ವಜನಿಕ ಸ್ವತ್ತು, ಅವನ್ನು ರಾಜ್ಯಗಳಿಗೆ ಉಚಿತವಾಗಿ ಪೂರೈಸಬೇಕು: ಪ್ರಧಾನಿಗೆ ಕೇರಳ ಸಿಎಂ ಪತ್ರ

ಲಸಿಕೆಗಳು ಸಾರ್ವಜನಿಕ ಸ್ವತ್ತು, ಅವನ್ನು ರಾಜ್ಯಗಳಿಗೆ ಉಚಿತವಾಗಿ ಪೂರೈಸಬೇಕು: ಪ್ರಧಾನಿಗೆ ಕೇರಳ ಸಿಎಂ ಪತ್ರ

- Advertisement -
- Advertisement -

ಲಸಿಕೆಗಳು ಸಾರ್ವಜನಿಕ ಸ್ವತ್ತುಗಳಾಗಿದ್ದು, ಅವನ್ನು ರಾಜ್ಯಗಳಿಗೆ ಉಚಿತವಾಗಿ ಪೂರೈಸಬೇಕು ಎಂದು ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಪ್ರಧಾನಿಗೆ ಪತ್ರ ಬರೆದಿದ್ದಾರೆ.
ಕೋವಿಡ್ ಲಸಿಕೆ ವಿತರಣೆ ಕುರಿತು ಕೇಂದ್ರದ ಹೊಸ ನೀತಿಯನ್ನು ಮರುಪರಿಶೀಲಿಸುವಂತೆ ಅವರು ಆಗ್ರಹಿಸಿದ್ದಾರೆ.

18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ ಲಸಿಕೆಗಳನ್ನು ಲಭ್ಯವಾಗುವಂತೆ ಮಾಡುವ ಭಾರತ ಸರ್ಕಾರದ ಕ್ರಮವನ್ನು ಪಿಣರಾಯಿ ಸ್ವಾಗತಿಸಿದ್ದಾರೆ. ಇದುವರೆಗೆ ರಾಜ್ಯದಲ್ಲಿ ಸುಗಮ ವ್ಯಾಕ್ಸಿನೇಷನ್ ಖಾತ್ರಿಪಡಿಸುವಲ್ಲಿ ಕೇಂದ್ರವು ನೀಡಿದ ಬೆಂಬಲ ಮತ್ತು ಮಾರ್ಗದರ್ಶನಕ್ಕಾಗಿ ಅವರು ಧನ್ಯವಾದಗಳನ್ನು ಅರ್ಪಿಸಿದ್ದಾರೆ. ಲಸಿಕೆ ಯೋಜನೆಯನ್ನು ಜಾರಿಗೆ ತರಲು ಅಗತ್ಯವಿರುವ 50 ಲಕ್ಷ ಲಸಿಕೆ ಪ್ರಮಾಣಗಳ ಬೇಡಿಕೆಯ ಮನವಿಯನ್ನು ಅವರು ಪ್ರಧಾನಿಯ ಗಮನಕ್ಕೆ ತಂದಿದ್ದಾರೆ.

ಕೇರಳಕ್ಕೆ ಇದುವರೆಗೆ ಕೇವಲ 5.5 ಲಕ್ಷ ಡೋಸ್‌ಗಳು ಮಾತ್ರ ದೊರೆತಿವೆ, ಇದರಿಂದಾಗಿ ಸ್ಪಾಟ್ ನೋಂದಣಿಯನ್ನು ನಿಲ್ಲಿಸುವಂತೆ ಸರ್ಕಾರದ ಮೇಲೆ ಒತ್ತಡ ತಂದಿದೆ. ಇದು ಲಸಿಕಾ ಕಾರ್ಯಕ್ರಮವನ್ನು ತ್ವರಿತಗೊಳಿಸಲು ಅಡ್ಡಿಯಾಗಿದೆ. ಬಾಕಿ ಡೋಸ್‌ಗಳನ್ನು ಶೀಘ್ರವಾಗಿ ಹಂಚಿಕೆ ಮಾಡಬೇಕು ಎಂದು ಕೇಂದ್ರವನ್ನು ಅವರು ಒತ್ತಾಯಿಸಿದ್ದಾರೆ.

ಲಸಿಕೆ ವಿತರಣೆಯ ಕುರಿತು ಕೇಂದ್ರದ ಹೊಸ ನೀತಿಯಲ್ಲಿ, ಉತ್ಪಾದಕರಿಂದ ನೇರವಾಗಿ ಲಸಿಕೆ ಪಡೆಯಲು ರಾಜ್ಯ ಸರ್ಕಾರಗಳಿಗೆ ಸೂಚಿಸಲಾಗಿದೆ.

“ಸಾಂಕ್ರಾಮಿಕ ಪರಿಣಾಮಗಳಿಂದ ರಾಜ್ಯಗಳು ಈಗಾಗಲೇ ಹೆಚ್ಚುವರಿ ಹಣಕಾಸಿನ ಬದ್ಧತೆಗಳನ್ನು ಎದುರಿಸುತ್ತಿವೆ. ಹೀಗಾಗಿ ಲಸಿಕೆಗಳ ವೆಚ್ಚದಿಂದ ಹೊರೆಯಾಗಬಾರದು. ಲಸಿಕೆಗಳನ್ನು ಸಾರ್ವಜನಿಕರಿಗೆ ಉಚಿತವಾಗಿ ನೀಡಬೇಕು. ಲಸಿಕೆ ಪಡೆಯಲು ಮುಕ್ತ ಮಾರುಕಟ್ಟೆ ಕಂಪನಿಗಳೊಂದಿಗೆ ಸ್ಪರ್ಧಿಸಲು ಅವಕಾಶ ನೀಡುವುದಿಲ್ಲ ಎಂಬ ಭರವಸೆಯನ್ನು ಕೇಂದ್ರ ನೀಡಬೇಕು ಎಂದು ಪಿಣರಾಯಿ ವಿಜಯನ್ ಹೇಳಿದ್ದಾರೆ.

ಆರ್ಥಿಕ ಹಿಂಜರಿತ ಇನ್ನೂ ಮುಂದುವರಿದಂತೆ, ಲಸಿಕೆ ಖರೀದಿಸುವ ಹೆಚ್ಚುವರಿ ಹೊರೆ ರಾಜ್ಯದ ಹಣಕಾಸಿನ ಮೇಲೆ ಸಾಕಷ್ಟು ಒತ್ತಡವನ್ನುಂಟು ಮಾಡುತ್ತದೆ ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ, ಅದರ ಪ್ರತಿಯೊಂದನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡಲಾಗಿದೆ.

“ರಾಜ್ಯ ಸರ್ಕಾರಗಳು ಆರೋಗ್ಯ ಕ್ಷೇತ್ರದಲ್ಲಿ ಸಾಂವಿಧಾನಿಕ ಬಾಧ್ಯತೆಯನ್ನು ಹೊಂದಿವೆ ಮತ್ತು ಸಾಂಕ್ರಾಮಿಕ ಪರಿಸ್ಥಿತಿಯಲ್ಲಿ ಉಚಿತವಾಗಿ ಒದಗಿಸಬೇಕಾದ ಕೋವಿಡ್ ಲಸಿಕೆಯ ಖಚಿತ ಕೋಟಾ ಅಗತ್ಯವಿದೆ. ಲಸಿಕೆಗಳನ್ನು ರಾಜ್ಯಗಳಿಗೆ ಸಾರ್ವಜನಿಕ ಹಿತದೃಷ್ಟಿಯಿಂದ ಉಚಿತವಾಗಿ ನೀಡುವುದು ಕಡ್ಡಾಯವಾಗಿದೆ” ಎಂದು ಪತ್ರದಲ್ಲಿ ಹೇಳಲಾಗಿದೆ.

ಮಾನದಂಡಗಳ ಆಧಾರದ ಮೇಲೆ ಕೇಂದ್ರವು ತನ್ನ ಶೇಕಡಾ 50 ರಷ್ಟು ಕೋಟಾದಿಂದ ರಾಜ್ಯ ಸರ್ಕಾರಗಳಿಗೆ ಲಸಿಕೆ ಉಚಿತವಾಗಿ ನೀಡಲಿದೆ ಎಂದು ನೀತಿ ಹೇಳಿದ್ದರೂ, ಮುಕ್ತ ಮಾರುಕಟ್ಟೆ ಕಂಪನಿಗಳೊಂದಿಗೆ ಸ್ಪರ್ಧಿಸಲು ಅವಕಾಶ ನೀಡುವುದಿಲ್ಲ ಎಂಬ ಭರವಸೆ ರಾಜ್ಯಗಳಿಗೆ ಇದೆ ಎಂದು ಅವರು ಹೇಳಿದ್ದಾರೆ.

ಕೇರಳವು ಕೋವಿಡ್ ಎರಡನೇ ಅಲೆ ಎದುರಿಸುತ್ತಿದ್ದು, ಪ್ರತಿದಿನ ಗಣನೀಯ ಪ್ರಮಾಣದ ಏರಿಕೆಗೆ ಸಾಕ್ಷಿಯಾಗುತ್ತಿರುವಾಗ, ಹೆಚ್ಚುತ್ತಿರುವ ಪ್ರಕರಣಗಳ ರೇಖೆಯನ್ನು ಹತ್ತಿಕ್ಕಲು ಕೇಂದ್ರ ಮತ್ತು ರಾಜ್ಯಗಳು ಒಟ್ಟಾಗಿ ಕೆಲಸ ಮಾಡಬೇಕಾಗಿದೆ ಎಂದು ಹೇಳಿದ್ದಾರೆ.


ಇದನ್ನೂ ಓದಿ: ದೇಶದೆಲ್ಲೆಡೆ ಆಮ್ಲಜನಕ ಕೊರತೆ: ಒಂದು ವರ್ಷದಲ್ಲಿ ಭಾರತದ ಆಮ್ಲಜನಕ ರಫ್ತು 700% ಕ್ಕಿಂತ ಹೆಚ್ಚಾಗಿದೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...