Homeಕರ್ನಾಟಕಏರ್‌ಪೋರ್ಟ್-ಸಿಲ್ಕ್‌ಬೋರ್ಡ್ ಮೆಟ್ರೋ ಕಾಮಗಾರಿ ವಿಳಂಬಕ್ಕೆ ಮೋದಿಯವರೆ ಹೊಣೆಯೇ?: ಜಾಹೀರಾತಿಗೆ ಕೋಟಿ ರೂ ಖರ್ಚು ಏಕೆ?

ಏರ್‌ಪೋರ್ಟ್-ಸಿಲ್ಕ್‌ಬೋರ್ಡ್ ಮೆಟ್ರೋ ಕಾಮಗಾರಿ ವಿಳಂಬಕ್ಕೆ ಮೋದಿಯವರೆ ಹೊಣೆಯೇ?: ಜಾಹೀರಾತಿಗೆ ಕೋಟಿ ರೂ ಖರ್ಚು ಏಕೆ?

- Advertisement -
- Advertisement -

ಇಂದು ದೇಶದ್ಯಾಂತ ಪ್ರಮುಖ ದಿನಪತ್ರಿಕೆಗಳಲ್ಲಿ “ಬೆಂಗಳೂರು ಮೆಟ್ರೋ ಹಂತ II ಎ ಮತ್ತು II ಬಿ ಗೆ (ಬೆಂಗಳೂರಿನ ಏರ್‌ಪೋರ್ಟ್-ಕೆ.ಆರ್ ಪುರಂ- ಸಿಲ್ಕ್‌ಬೋರ್ಡ್ ಮೆಟ್ರೋ ಮಾರ್ಗ) ಕೇಂದ್ರ ಕ್ಯಾಬಿನೆಟ್ ಅನುಮೋದನೆ ನೀಡಿದ್ದಕ್ಕೆ ನರೇಂದ್ರ ಮೋದಿಯವರಿಗೆ ಧನ್ಯವಾದಗಳು” ಹೆಸರಿನಲ್ಲಿ ಪೂರ್ಣ ಪುಟದ ಜಾಹೀರಾತನ್ನು ಕರ್ನಾಟಕ ಸಿಎಂ ಯಡಿಯೂರಪ್ಪನವರು ನೀಡಿದ್ದಾರೆ. ಇದರ ವಿರುದ್ದ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಟೀಕೆ ಕೇಳಿಬಂದಿದ್ದು, ಈ ಮೆಟ್ರೋ ಕಾಮಗಾರಿ ವಿಳಂಬಕ್ಕೆ ಮೋದಿಯವರೆ ಹೊಣೆಯೇ?, ಜನ ಸಂಕಷ್ಟದಲ್ಲಿರುವಾಗ ಜಾಹೀರಾತಿಗೆ ಕೋಟಿ ರೂ ಖರ್ಚು ಏಕೆ? ಎಂಬ ಪ್ರಶ್ನೆಗಳು ಎದ್ದಿವೆ.

ರಾಜ್ಯ ಸರ್ಕಾರವು 3 ವರ್ಷಗಳ ಹಿಂದೆಯೇ (ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗ) ಈ ಮಾರ್ಗಗಳನ್ನು ಅನುಮೋದಿಸಿ, ಭೂಸ್ವಾಧೀನವನ್ನು ಪೂರ್ಣಗೊಳಿಸಿತು ಮತ್ತು ಟೆಂಡರ್ ಸಹ ಮಾಡಿತು. ಆದರೆ ಕೇಂದ್ರ ಕ್ಯಾಬಿನೆಟ್ ಅನುಮೋದನೆಗಾಗಿ ಇಷ್ಟು ದಿನ ಏಕೆ ಕಾಯಬೇಕಾಯಿತು, ಇಷ್ಟು ವರ್ಷ ಏಕೆ ತಡೆಹಿಡಿಯಿತು ಎಂದು ಡಾ.ಎಚ್.ವಿ ವಾಸು, ಪ್ರೊ.ಪುರುಷೋತ್ತಮ ಬಿಳಿಮಲೆ ಸೇರಿದಂತೆ ಹಲವರು ಪ್ರಶ್ನಿಸಿದ್ದಾರೆ.

ಯಡಿಯೂರಪ್ಪನವರು ನೀಡಿರುವ ಜಾಹೀರಾತಿನಲ್ಲಿ 5 ವರ್ಷಗಳಲ್ಲಿ ಪೂರೈಸುವ ಈ ಯೋಜನೆಗೆ 14,778 ಕೋಟಿ ರೂಗಳಿಗೆ ಅನುಮೋದನೆ ನೀಡಿದೆ ಎಂದು ಘೋಷಿಸಿದ್ದಾರೆ. ಅದು  ಮೆಟ್ರೋದ 2‌A ಮತ್ತು 2‌Bಯ ಒಟ್ಟು ಯೋಜನಾ ವೆಚ್ಚವಾಗಿದೆ. ಅಂದರೆ ಬೆಂಗಳೂರು ಮೆಟ್ರೋ ಹಂತ 2 (ಎ) ಮತ್ತು 2 (ಬಿ) ಯೋಜನೆಯ ಸೆಂಟ್ರಲ್ ಸಿಲ್ಕ್ ಬೋರ್ಡ್ ಜಂಕ್ಷನ್‌ನಿಂದ ಕೆ.ಆರ್.ಪುರಂ ಮತ್ತು ಕೆ.ಆರ್.ಪುರಂನಿಂದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದವರೆಗೆ 58.19 ಕಿ.ಮೀ ವಿಸ್ತರಣೆಗೆ 14,788 ಕೋಟಿ ರೂ. ಒಟ್ಟು ಯೋಜನಾ ವೆಚ್ಚ. ಇದರ ಪೂರ್ತಿ ಹಣವನ್ನು ಕೇಂದ್ರ ಸರ್ಕಾರ ನೀಡುವುದಿಲ್ಲ. ಕೇಂದ್ರ ಸಣ್ಣ ಪಾಲನ್ನಷ್ಟೇ ನೀಡುತ್ತದೆ. ರಾಜ್ಯಗಳೇ ಹೆಚ್ಚಿನ ಪಾಲು ಭರಿಸಿದರೂ ಅದರ ಕ್ರೆಡಿಟ್‌ ಅನ್ನು ಕೇಂದ್ರ ಸರ್ಕಾರಕ್ಕೆ ಏಕೆ ನೀಡಬೇಕು ಎಂದು ಅವರು ಪ್ರಶ್ನಿಸಿದ್ದಾರೆ.

ಇದರಲ್ಲಿ ಕೇಂದ್ರ ಸರ್ಕಾರವು ನೇರ ಅನುದಾನವನ್ನಾಗಿ ಶೇಕಡಾ 15 ರಷ್ಟನ್ನು ನೀಡುತ್ತದೆ. ಶೇ. 35 ರಷ್ಟು ಹಣವನ್ನು ರಾಜ್ಯ ಸರ್ಕಾರ ಭರಿಸಿದರೆ, ಶೇ.35 ರಷ್ಟು ಹಣವನ್ನು ಕೇಂದ್ರ ಸರ್ಕಾರದ ಬಹುಪಕ್ಷೀಯ ಮತ್ತು ದ್ವಿಪಕ್ಷೀಯ ಅಭಿವೃದ್ಧಿ ಸಂಸ್ಥೆಗಳ ಮೂಲಕ ಸಾಲ ಪಡೆಯಬೇಕಾಗಿದೆ. ಉಳಿದ ಶೇ.15 ರಷ್ಟು ಹಣವನ್ನು ಖಾಸಗಿ ವಲಯದಿಂದ ಸಂಗ್ರಹಿಸಲಾಗುತ್ತದೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವಿವರವಾದ ವರದಿ ಮಾಡಿದೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಅರುಣ್ ಜಾವಗಲ್ “ಹಲವು ವರ್ಷಗಳಿಂದ ಈ ಯೋಜನೆ ಅನುಮೋದನೆಗಾಗಿ ಕಾಯುತ್ತಿದೆ. ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದ ಕಾಲದಲ್ಲಿಯೇ ಬೆಂಗಳೂರು ಮೆಟ್ರೋ ಹಂತ II ಎ ಮತ್ತು II ಬಿ ಮಾರ್ಗಕ್ಕಾಗಿ ಬೇಕಾಗುವ ಹಣದಲ್ಲಿ ಶೇ.50 ಅನುದಾವನ್ನು ಕೇಂದ್ರ ಸರ್ಕಾರ ನೀಡಬೇಕೆಂದು ಒತ್ತಾಯಿಸಿದ್ದರು. ಆದರೆ ಅದಕ್ಕೆ ಕೇಂದ್ರ ಸರ್ಕಾರ ಒಪ್ಪಿರಲಿಲ್ಲ. ಈಗಲೂ ತಾನು ಕೊಡಬೇಕಾದ ಪಾಲನ್ನು ಕೇಂದ್ರ ಸರ್ಕಾರ ಕೊಡುತ್ತದೆ ಎಂಬುದರಲ್ಲಿ ನಂಬಿಕೆಯಿಲ್ಲ. ಇನ್ನು ಈ ಯೋಜನೆಗಾಗಿ ಸಾಲ ಮಾಡುವುದರಲ್ಲಿ ಎಷ್ಟನ್ನು ಕೇಂದ್ರ ಸರ್ಕಾರ ತೀರಿಸುತ್ತದೆ ಎಂಬುದನ್ನು ಸ್ಪಷ್ಟಪಡಿಸಿಲ್ಲ. ಈ ಕುರಿತು ಯಡಿಯೂರಪ್ಪನವರು ಸಾರ್ವಜನಿಕರಿಗೆ ಪಾರದಾರ್ಶಕ ಮಾಹಿತಿ ನೀಡಬೇಕೆಂದು” ಒತ್ತಾಯಿಸಿದರು.

ಇನ್ನು ಈ ಯೋಜನೆಗೆ ದೇಶಾದ್ಯಂತ ರಾಜ್ಯ ಸರ್ಕಾರದ ಹಣದಲ್ಲಿ ಜಾಹೀರಾತು ನೀಡುವ ಅಗತ್ಯವೇನಿತ್ತು ಎಂದು ಪ್ರಶ್ನಿಸಿರುವ ಅವರು, ಒಂದು ಕಡೆ ಸರಕಾರದ ಬಳಿ ದುಡ್ಡಿಲ್ಲ ಅಂತಾರೆ, ಇನ್ನೊಂದು ಕಡೆ ಪುಟಗಟ್ಟಲೇ ಜಾಹಿರಾತು ನೀಡ್ತಾರೆ. ಕೇಂದ್ರ ಸರಕಾರ ಕರ್ನಾಟಕದ ಯೋಜನೆಗೆ ದುಡ್ಡು ಕೊಡೋದು ನಾವು ಕೊಟ್ಟ ತೆರಿಗೆ ಹಣದಿಂದಲೇ. ಅಕಸ್ಮಾತ್ ನಿಮಗೆ ಏನಾದ್ರೂ ಧನ್ಯವಾದ ಹೇಳಬೇಕು ಅಂದ್ರೆ ನಿಮ್ಮ ಸ್ವಂತ ದುಡ್ಡಲ್ಲಿ ಜಾಹಿರಾತು ನೀಡಿ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿಯವರು ಈ ಕುರಿತು ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ. “ಇಂದು ನಾವು ಸಾವಿನ ಮನೆಯಲ್ಲಿದ್ದೇವೆ. ಇಂತಹ ಸಮಯದಲ್ಲಿ ರಾಜ್ಯಸರ್ಕಾರ ಮೆಟ್ರೋಗೆ ಕೇಂದ್ರ ಸರ್ಕಾರ ಹಣ ನೀಡುತ್ತಿದೆ ಎಂದು ದೊಡ್ಡ ದೊಡ್ಡ ಜಾಹೀರಾತು ನೀಡುತ್ತಿದೆ ಎಂದರೆ ಈ ಸರ್ಕಾರಕ್ಕೆ ಇನ್ನು ಬುದ್ದಿ ಬಂದಿಲ್ಲ ಎಂದರ್ಥ. ಇಂತಹ ವಿಷಮ ಪರಿಸ್ಥಿತಿಯಲ್ಲಿ ಜಾಹೀರಾತುಗಳ ಅವಶ್ಯಕತೆ ಇದೆಯೇ ಎಂಬುದನ್ನು ಈ ಮುರ್ಖ ಸರ್ಕಾರ ಮನವರಿಕೆ ಮಾಡಿಕೊಳ್ಳಬೇಕು. ರಾಜ್ಯದಲ್ಲಿ ಬೆಡ್‌ಗಳಿಲ್ಲ, ಆಕ್ಸಿಜನ್, ಔ‍‍ಷಧಿ ಕೊರತೆಯಿಂದ ಜನ ಸಾಯುತ್ತಿರುವ ಪರಿಸ್ಥಿತಿಯಲ್ಲಿ ಜಾಹೀರಾತು ನೀಡುವ ಮೂಲಕ ಸಾವಿನ ಮನೆಯ ಜನರೊಂದಿಗೆ ಚೆಲ್ಲಾಟವಾಡುತ್ತಿದ್ದೀರಿ” ಎಂದು ಕಿಡಿಕಾರಿದ್ದಾರೆ.


ಇದನ್ನೂ ಓದಿ: ಕೇಂದ್ರ ಬಜೆಟ್‌ನಲ್ಲಿ ಏರ್‌ಪೋರ್ಟ್-ಸಿಲ್ಕ್‌ಬೋರ್ಡ್ ಮೆಟ್ರೋ ಕಾಮಗಾರಿಗೆ 15,000 ಕೋಟಿ ಮಂಜೂರು?: ವಾಸ್ತವವೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...