Homeಕರ್ನಾಟಕಏರ್‌ಪೋರ್ಟ್-ಸಿಲ್ಕ್‌ಬೋರ್ಡ್ ಮೆಟ್ರೋ ಕಾಮಗಾರಿ ವಿಳಂಬಕ್ಕೆ ಮೋದಿಯವರೆ ಹೊಣೆಯೇ?: ಜಾಹೀರಾತಿಗೆ ಕೋಟಿ ರೂ ಖರ್ಚು ಏಕೆ?

ಏರ್‌ಪೋರ್ಟ್-ಸಿಲ್ಕ್‌ಬೋರ್ಡ್ ಮೆಟ್ರೋ ಕಾಮಗಾರಿ ವಿಳಂಬಕ್ಕೆ ಮೋದಿಯವರೆ ಹೊಣೆಯೇ?: ಜಾಹೀರಾತಿಗೆ ಕೋಟಿ ರೂ ಖರ್ಚು ಏಕೆ?

- Advertisement -
- Advertisement -

ಇಂದು ದೇಶದ್ಯಾಂತ ಪ್ರಮುಖ ದಿನಪತ್ರಿಕೆಗಳಲ್ಲಿ “ಬೆಂಗಳೂರು ಮೆಟ್ರೋ ಹಂತ II ಎ ಮತ್ತು II ಬಿ ಗೆ (ಬೆಂಗಳೂರಿನ ಏರ್‌ಪೋರ್ಟ್-ಕೆ.ಆರ್ ಪುರಂ- ಸಿಲ್ಕ್‌ಬೋರ್ಡ್ ಮೆಟ್ರೋ ಮಾರ್ಗ) ಕೇಂದ್ರ ಕ್ಯಾಬಿನೆಟ್ ಅನುಮೋದನೆ ನೀಡಿದ್ದಕ್ಕೆ ನರೇಂದ್ರ ಮೋದಿಯವರಿಗೆ ಧನ್ಯವಾದಗಳು” ಹೆಸರಿನಲ್ಲಿ ಪೂರ್ಣ ಪುಟದ ಜಾಹೀರಾತನ್ನು ಕರ್ನಾಟಕ ಸಿಎಂ ಯಡಿಯೂರಪ್ಪನವರು ನೀಡಿದ್ದಾರೆ. ಇದರ ವಿರುದ್ದ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಟೀಕೆ ಕೇಳಿಬಂದಿದ್ದು, ಈ ಮೆಟ್ರೋ ಕಾಮಗಾರಿ ವಿಳಂಬಕ್ಕೆ ಮೋದಿಯವರೆ ಹೊಣೆಯೇ?, ಜನ ಸಂಕಷ್ಟದಲ್ಲಿರುವಾಗ ಜಾಹೀರಾತಿಗೆ ಕೋಟಿ ರೂ ಖರ್ಚು ಏಕೆ? ಎಂಬ ಪ್ರಶ್ನೆಗಳು ಎದ್ದಿವೆ.

ರಾಜ್ಯ ಸರ್ಕಾರವು 3 ವರ್ಷಗಳ ಹಿಂದೆಯೇ (ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗ) ಈ ಮಾರ್ಗಗಳನ್ನು ಅನುಮೋದಿಸಿ, ಭೂಸ್ವಾಧೀನವನ್ನು ಪೂರ್ಣಗೊಳಿಸಿತು ಮತ್ತು ಟೆಂಡರ್ ಸಹ ಮಾಡಿತು. ಆದರೆ ಕೇಂದ್ರ ಕ್ಯಾಬಿನೆಟ್ ಅನುಮೋದನೆಗಾಗಿ ಇಷ್ಟು ದಿನ ಏಕೆ ಕಾಯಬೇಕಾಯಿತು, ಇಷ್ಟು ವರ್ಷ ಏಕೆ ತಡೆಹಿಡಿಯಿತು ಎಂದು ಡಾ.ಎಚ್.ವಿ ವಾಸು, ಪ್ರೊ.ಪುರುಷೋತ್ತಮ ಬಿಳಿಮಲೆ ಸೇರಿದಂತೆ ಹಲವರು ಪ್ರಶ್ನಿಸಿದ್ದಾರೆ.

ಯಡಿಯೂರಪ್ಪನವರು ನೀಡಿರುವ ಜಾಹೀರಾತಿನಲ್ಲಿ 5 ವರ್ಷಗಳಲ್ಲಿ ಪೂರೈಸುವ ಈ ಯೋಜನೆಗೆ 14,778 ಕೋಟಿ ರೂಗಳಿಗೆ ಅನುಮೋದನೆ ನೀಡಿದೆ ಎಂದು ಘೋಷಿಸಿದ್ದಾರೆ. ಅದು  ಮೆಟ್ರೋದ 2‌A ಮತ್ತು 2‌Bಯ ಒಟ್ಟು ಯೋಜನಾ ವೆಚ್ಚವಾಗಿದೆ. ಅಂದರೆ ಬೆಂಗಳೂರು ಮೆಟ್ರೋ ಹಂತ 2 (ಎ) ಮತ್ತು 2 (ಬಿ) ಯೋಜನೆಯ ಸೆಂಟ್ರಲ್ ಸಿಲ್ಕ್ ಬೋರ್ಡ್ ಜಂಕ್ಷನ್‌ನಿಂದ ಕೆ.ಆರ್.ಪುರಂ ಮತ್ತು ಕೆ.ಆರ್.ಪುರಂನಿಂದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದವರೆಗೆ 58.19 ಕಿ.ಮೀ ವಿಸ್ತರಣೆಗೆ 14,788 ಕೋಟಿ ರೂ. ಒಟ್ಟು ಯೋಜನಾ ವೆಚ್ಚ. ಇದರ ಪೂರ್ತಿ ಹಣವನ್ನು ಕೇಂದ್ರ ಸರ್ಕಾರ ನೀಡುವುದಿಲ್ಲ. ಕೇಂದ್ರ ಸಣ್ಣ ಪಾಲನ್ನಷ್ಟೇ ನೀಡುತ್ತದೆ. ರಾಜ್ಯಗಳೇ ಹೆಚ್ಚಿನ ಪಾಲು ಭರಿಸಿದರೂ ಅದರ ಕ್ರೆಡಿಟ್‌ ಅನ್ನು ಕೇಂದ್ರ ಸರ್ಕಾರಕ್ಕೆ ಏಕೆ ನೀಡಬೇಕು ಎಂದು ಅವರು ಪ್ರಶ್ನಿಸಿದ್ದಾರೆ.

ಇದರಲ್ಲಿ ಕೇಂದ್ರ ಸರ್ಕಾರವು ನೇರ ಅನುದಾನವನ್ನಾಗಿ ಶೇಕಡಾ 15 ರಷ್ಟನ್ನು ನೀಡುತ್ತದೆ. ಶೇ. 35 ರಷ್ಟು ಹಣವನ್ನು ರಾಜ್ಯ ಸರ್ಕಾರ ಭರಿಸಿದರೆ, ಶೇ.35 ರಷ್ಟು ಹಣವನ್ನು ಕೇಂದ್ರ ಸರ್ಕಾರದ ಬಹುಪಕ್ಷೀಯ ಮತ್ತು ದ್ವಿಪಕ್ಷೀಯ ಅಭಿವೃದ್ಧಿ ಸಂಸ್ಥೆಗಳ ಮೂಲಕ ಸಾಲ ಪಡೆಯಬೇಕಾಗಿದೆ. ಉಳಿದ ಶೇ.15 ರಷ್ಟು ಹಣವನ್ನು ಖಾಸಗಿ ವಲಯದಿಂದ ಸಂಗ್ರಹಿಸಲಾಗುತ್ತದೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವಿವರವಾದ ವರದಿ ಮಾಡಿದೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಅರುಣ್ ಜಾವಗಲ್ “ಹಲವು ವರ್ಷಗಳಿಂದ ಈ ಯೋಜನೆ ಅನುಮೋದನೆಗಾಗಿ ಕಾಯುತ್ತಿದೆ. ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದ ಕಾಲದಲ್ಲಿಯೇ ಬೆಂಗಳೂರು ಮೆಟ್ರೋ ಹಂತ II ಎ ಮತ್ತು II ಬಿ ಮಾರ್ಗಕ್ಕಾಗಿ ಬೇಕಾಗುವ ಹಣದಲ್ಲಿ ಶೇ.50 ಅನುದಾವನ್ನು ಕೇಂದ್ರ ಸರ್ಕಾರ ನೀಡಬೇಕೆಂದು ಒತ್ತಾಯಿಸಿದ್ದರು. ಆದರೆ ಅದಕ್ಕೆ ಕೇಂದ್ರ ಸರ್ಕಾರ ಒಪ್ಪಿರಲಿಲ್ಲ. ಈಗಲೂ ತಾನು ಕೊಡಬೇಕಾದ ಪಾಲನ್ನು ಕೇಂದ್ರ ಸರ್ಕಾರ ಕೊಡುತ್ತದೆ ಎಂಬುದರಲ್ಲಿ ನಂಬಿಕೆಯಿಲ್ಲ. ಇನ್ನು ಈ ಯೋಜನೆಗಾಗಿ ಸಾಲ ಮಾಡುವುದರಲ್ಲಿ ಎಷ್ಟನ್ನು ಕೇಂದ್ರ ಸರ್ಕಾರ ತೀರಿಸುತ್ತದೆ ಎಂಬುದನ್ನು ಸ್ಪಷ್ಟಪಡಿಸಿಲ್ಲ. ಈ ಕುರಿತು ಯಡಿಯೂರಪ್ಪನವರು ಸಾರ್ವಜನಿಕರಿಗೆ ಪಾರದಾರ್ಶಕ ಮಾಹಿತಿ ನೀಡಬೇಕೆಂದು” ಒತ್ತಾಯಿಸಿದರು.

ಇನ್ನು ಈ ಯೋಜನೆಗೆ ದೇಶಾದ್ಯಂತ ರಾಜ್ಯ ಸರ್ಕಾರದ ಹಣದಲ್ಲಿ ಜಾಹೀರಾತು ನೀಡುವ ಅಗತ್ಯವೇನಿತ್ತು ಎಂದು ಪ್ರಶ್ನಿಸಿರುವ ಅವರು, ಒಂದು ಕಡೆ ಸರಕಾರದ ಬಳಿ ದುಡ್ಡಿಲ್ಲ ಅಂತಾರೆ, ಇನ್ನೊಂದು ಕಡೆ ಪುಟಗಟ್ಟಲೇ ಜಾಹಿರಾತು ನೀಡ್ತಾರೆ. ಕೇಂದ್ರ ಸರಕಾರ ಕರ್ನಾಟಕದ ಯೋಜನೆಗೆ ದುಡ್ಡು ಕೊಡೋದು ನಾವು ಕೊಟ್ಟ ತೆರಿಗೆ ಹಣದಿಂದಲೇ. ಅಕಸ್ಮಾತ್ ನಿಮಗೆ ಏನಾದ್ರೂ ಧನ್ಯವಾದ ಹೇಳಬೇಕು ಅಂದ್ರೆ ನಿಮ್ಮ ಸ್ವಂತ ದುಡ್ಡಲ್ಲಿ ಜಾಹಿರಾತು ನೀಡಿ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿಯವರು ಈ ಕುರಿತು ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ. “ಇಂದು ನಾವು ಸಾವಿನ ಮನೆಯಲ್ಲಿದ್ದೇವೆ. ಇಂತಹ ಸಮಯದಲ್ಲಿ ರಾಜ್ಯಸರ್ಕಾರ ಮೆಟ್ರೋಗೆ ಕೇಂದ್ರ ಸರ್ಕಾರ ಹಣ ನೀಡುತ್ತಿದೆ ಎಂದು ದೊಡ್ಡ ದೊಡ್ಡ ಜಾಹೀರಾತು ನೀಡುತ್ತಿದೆ ಎಂದರೆ ಈ ಸರ್ಕಾರಕ್ಕೆ ಇನ್ನು ಬುದ್ದಿ ಬಂದಿಲ್ಲ ಎಂದರ್ಥ. ಇಂತಹ ವಿಷಮ ಪರಿಸ್ಥಿತಿಯಲ್ಲಿ ಜಾಹೀರಾತುಗಳ ಅವಶ್ಯಕತೆ ಇದೆಯೇ ಎಂಬುದನ್ನು ಈ ಮುರ್ಖ ಸರ್ಕಾರ ಮನವರಿಕೆ ಮಾಡಿಕೊಳ್ಳಬೇಕು. ರಾಜ್ಯದಲ್ಲಿ ಬೆಡ್‌ಗಳಿಲ್ಲ, ಆಕ್ಸಿಜನ್, ಔ‍‍ಷಧಿ ಕೊರತೆಯಿಂದ ಜನ ಸಾಯುತ್ತಿರುವ ಪರಿಸ್ಥಿತಿಯಲ್ಲಿ ಜಾಹೀರಾತು ನೀಡುವ ಮೂಲಕ ಸಾವಿನ ಮನೆಯ ಜನರೊಂದಿಗೆ ಚೆಲ್ಲಾಟವಾಡುತ್ತಿದ್ದೀರಿ” ಎಂದು ಕಿಡಿಕಾರಿದ್ದಾರೆ.


ಇದನ್ನೂ ಓದಿ: ಕೇಂದ್ರ ಬಜೆಟ್‌ನಲ್ಲಿ ಏರ್‌ಪೋರ್ಟ್-ಸಿಲ್ಕ್‌ಬೋರ್ಡ್ ಮೆಟ್ರೋ ಕಾಮಗಾರಿಗೆ 15,000 ಕೋಟಿ ಮಂಜೂರು?: ವಾಸ್ತವವೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...