Homeಅಂಕಣಗಳುಬಹುಜನ ಭಾರತ: ಬಹುತ್ವ ಭಿನ್ನಮತ ಸಹನೆ ಸಹಬಾಳುವೆಯ ಆಮ್ಲಜನಕವೂ ಬಲು ವೇಗದಲ್ಲಿ ಬರಿದಾಗುತ್ತಿದೆ

ಬಹುಜನ ಭಾರತ: ಬಹುತ್ವ ಭಿನ್ನಮತ ಸಹನೆ ಸಹಬಾಳುವೆಯ ಆಮ್ಲಜನಕವೂ ಬಲು ವೇಗದಲ್ಲಿ ಬರಿದಾಗುತ್ತಿದೆ

- Advertisement -
- Advertisement -

ಕೊರೊನಾ ವೈರಾಣು ವಿರುದ್ಧದ ಸಮರದಲ್ಲಿ ಆಮ್ಲಜನಕವೆಂಬ ಪ್ರಾಣವಾಯು ಬೆಲೆಕಟ್ಟಲಾಗದ ಹತಾರುಗಳಲ್ಲಿ ಒಂದು. ಈ ಅಂಶ ವರ್ಷದ ಹಿಂದೆ ಎರಗಿದ ಮೊದಲ ಕೋವಿಡ್ ದಾಳಿಯಲ್ಲಿ ಬೆಳಕಿನಷ್ಟೇ ನಿಚ್ಚಳವಾಗಿ ಗೊತ್ತಾಗಿತ್ತು. ಕೋವಿಡ್ ಮಹಾಸಾಂಕ್ರಾಮಿಕವನ್ನು ವಿನಾಶಕಾರಿ ವಿಪತ್ತು ಎಂದು ಭಾರತ ಸರ್ಕಾರ 2020ರ ಮಾರ್ಚ್ 14ರಂದೇ ಘೋಷಿಸಿತ್ತು. ಆನಂತರ ಘೋಷಿಸಲಾದ ಲಾಕ್‌ಡೌನ್ ಜಗತ್ತಿನ ಅತಿಕ್ರೂರ ಲಾಕ್‌ಡೌನ್ ಎಂದು ಇತಿಹಾಸಕ್ಕೆ ಸಂದು ಹೋಗಿದೆ.

ಆನಂತರ ನಿದ್ದೆಗೆ ಜಾರುವ ಕೇಂದ್ರ ಸರ್ಕಾರ ಎಚ್ಚೆತ್ತುಕೊಳ್ಳುವುದು ಏಳು ತಿಂಗಳ ನಂತರ. ದೇಶದ 150 ಜಿಲ್ಲಾ ಆಸ್ಪತ್ರೆಗಳಲ್ಲಿ ಆಮ್ಲಜನಕ ಉತ್ಪಾದನೆ ಘಟಕಗಳ ಸ್ಥಾಪನೆಯ ಟೆಂಡರ್ ಹೊರಟದ್ದು 2020ರ ಅಕ್ಟೋಬರ್ ತಿಂಗಳಿನಲ್ಲಿ. ಈ ಸಂಖ್ಯೆಗೆ ಇನ್ನೂ ಹನ್ನೆರಡು ಘಟಕಗಳನ್ನು ಸೇರಿಸಲಾಗಿತ್ತು. ಏಳು ತಿಂಗಳ ಮಹಾವಿಳಂಬದ ಹಿಂದಿನ ಕಾರಣ ಏನಿದ್ದೀತು ಊಹಿಸಬಲ್ಲಿರಾ? ಅದು ಹಣಕಾಸಿನ ಕೊರತೆಯಂತೆ!

150 ಉತ್ಪಾದನಾ ಘಟಕಗಳ ಸ್ಥಾಪನೆಗೆ ಬೇಕಿದ್ದ ಹಣವಾದರೂ ಎಷ್ಟು? ಕೇವಲ 201.58 ಕೋಟಿ ರುಪಾಯಿಗಳು. ಕಡೆಗೂ ಈ ಹಣವನ್ನು ಹಂಚಿಕೆ ಮಾಡಿದ್ದು PM- CARES ನಿಧಿಯಿಂದ. ಭಾರತ ಸರ್ಕಾರದ ಬೊಕ್ಕಸ ಅದೆಷ್ಟು ಬಡವಾಗಿತ್ತು!

ಟೆಂಡರ್ ಕರೆದು ಒಂದು ವರ್ಷವೇ ಉರುಳಿದೆ. 162ರಲ್ಲಿ ಸ್ಥಾಪಿಸಲಾಗಿರುವ ಘಟಕಗಳು ಕೇವಲ 33. ಇದೇ ಏಪ್ರಿಲ್ ಕಡೆಯ ವೇಳೆಗೆ ಇನ್ನೂ 59ನ್ನು ಸ್ಥಾಪಿಸಲಾಗುವುದಂತೆ. ಮೇ ಅಂತ್ಯದ ವೇಳೆಗೆ ಒಟ್ಟು 80 ಘಟಕಗಳು ಆಮ್ಲಜನಕವನ್ನು ಉತ್ಪಾದಿಸಲಿವೆಯಂತೆ. ಅರ್ಥಾತ್ ವರ್ಷದ ಹಿಂದೆ ಟೆಂಡರ್ ಕರೆಯಲಾಗಿದ್ದ ಕೇವಲ ಅರ್ಧದಷ್ಟು ಘಟಕಗಳು! ಜಿಲ್ಲಾ ಆಸ್ಪತ್ರೆಗಳದ್ದೇ ಈ ಕತೆಯಾದರೆ ತಾಲ್ಲೂಕುಗಳು, ಸಣ್ಣಪುಟ್ಟ ಊರು ಕೇರಿಗಳ ಜನರ ಪಾಡೇನು?

ಆಮ್ಲಜನಕದ ಕೊರತೆಯಿಂದ ಆಸ್ಪತ್ರೆಗಳ ಹೊರಗಷ್ಟೇ ಅಲ್ಲ, ಒಳಗೂ ರೋಗಿಗಳು ಸಾಯುತ್ತಿರುವುದು ಹೃದಯವಿದ್ರಾವಕ. ಈ ಸಾವುಗಳು ಅಪ್ಪಟ ಮಾನವನಿರ್ಮಿತ. ಆಳುವವರ ಅದಕ್ಷತೆ, ಬೇಜವಾಬ್ದಾರಿ, ನಿರ್ಲಕ್ಷ್ಯವೇ ಈ ಮರಣಗಳ ಹಿಂದಿನ ಕಾರಣ.

ಕೋವಿಡ್ ಮಹಾಸಾಂಕ್ರಾಮಿಕ ಇಲ್ಲದೆ ಹೋಗಿದ್ದರೂ ಜಿಲ್ಲಾ ಆಸ್ಪತ್ರೆಗಳು ತಮ್ಮವೇ ಆದ ಆಮ್ಲಜನಕ ಘಟಕಗಳನ್ನು ಹೊಂದಿರುವುದು ಅತ್ಯಗತ್ಯ. ಹಾವು ಕಡಿತ, ಮೆದುಳುಜ್ವರ, ರಸ್ತೆ ಅಪಘಾತ ಮುಂತಾದ ಕಾರಣಗಳಿಂದಾಗಿ ಆಸ್ಪತ್ರೆ ಸೇರುವ ಸಾವಿರಾರು ರೋಗಿಗಳ ಪ್ರಾಣ ಉಳಿಸಲು ಆಮ್ಲಜನಕ ಬೇಕೇ ಬೇಕು. ಮಹಾಸಾಂಕ್ರಾಮಿಕದ ನೆಪದಲ್ಲಿ ನಮ್ಮ ಆರೋಗ್ಯವ್ಯವಸ್ಥೆಯಲ್ಲಿ ಉಳಿದುಹೋಗಿರುವ ಭಾರೀ ಕಂದಕಗಳನ್ನು ಮುಚ್ಚಬೇಕಿದೆ. ಅವುಗಳಲ್ಲಿ ಆಮ್ಲಜನಕ ಘಟಕಗಳ ಸ್ಥಾಪನೆಯೂ ಸೇರಿದೆ ಎನ್ನುತ್ತಾರೆ ಆರೋಗ್ಯ ವ್ಯವಸ್ಥೆಗಳ ತಜ್ಞ ಟಿ.ಸುಂದರರಾಮನ್.

ಜಾಗಟೆ, ತಟ್ಟೆ ಬಾರಿಸಿ ಮೇಣದಬತ್ತಿಗಳನ್ನು ಹೊತ್ತಿಸುವ, ಶಂಖ ಊದಿಸುವ ನಾಟಕಗಳನ್ನು ಮಾಡಿಸದೆ ದೇಶದ ಸಾಂಕ್ರಾಮಿಕ ತಜ್ಞರೊಂದಿಗೆ ಸಮಾಲೋಚನೆ ನಡೆಸಿ ಅವರ ಸಲಹೆಗಳ ಪ್ರಕಾರ ನಡೆದುಕೊಂಡಿದ್ದರೆ ಇಂದಿನ ವಿಪತ್ತನ್ನು ಸಮರ್ಥವಾಗಿ ಎದುರಿಸಬಹುದಿತ್ತು.

ಮಹಾಸಾಂಕ್ರಾಮಿಕದ ನಟ್ಟ ನಡುವೆಯೂ ಮಧ್ಯಪ್ರದೇಶದ ಕಾಂಗ್ರೆಸ್ ಸರ್ಕಾರವನ್ನು ಉರುಳಿಸುವ ಕಾರ್ಯ ಬಿಡುವಿಲ್ಲದೆ ನಡೆಯಿತು. ರಾಜಸ್ತಾನವೂ ಈ ಮಾತಿಗೆ ಹೊರತಾಗಲಿಲ್ಲ. ಮಹಾರಾಷ್ಟ್ರದಲ್ಲಿ ಈ ಪ್ರಯತ್ನ ನಿಲ್ಲದೆ ನಡೆದಿದೆ. ಪಶ್ಚಿಮ ಬಂಗಾಳ ಮತ್ತು ಅಸ್ಸಾಮಿನಲ್ಲಿ ಅಧಿಕಾರ ಹಿಡಿಯುವುದೇ ಪರಮಗುರಿ. ಹರಿದ್ವಾರದ ಕುಂಭಮೇಳದಲ್ಲಿ ಯಾವುದೇ ಕೋವಿಡ್ ನಿಯಮ ಪಾಲಿಸದೆ ಮೂವತ್ತು ಲಕ್ಷಕ್ಕೂ ಹೆಚ್ಚು ಮಂದಿ ದಿನಗಟ್ಟಲೆ ನೆರೆದು ಭಾಗವಹಿಸಲು ಅವಕಾಶ ಮಾಡಿಕೊಡಲಾಯಿತು. ಇವರು ದೇಶದ ನಾನಾ ಭಾಗಗಳಿಂದ ಬಂದವರು. ಹಿಂತಿರುಗುವಾಗ ಬಹುತೇಕರು ಕೋವಿಡ್ ಪ್ರಸಾದ ಹೊತ್ತು ತೆರಳುವವರೇ. ಕಳೆದ ವರ್ಷ ಹಠಾತ್ತನೆ ಹೇರಿದ ಅಮಾನುಷ ಲಾಕ್‌ಡೌನ್ ಮಾನವ ಇತಿಹಾಸದ ಮಹಾವಲಸೆಯ ದುರಂತವನ್ನು ಸೃಷ್ಟಿಸಿತ್ತು. ಲಕ್ಷಾಂತರ ಶ್ರಮಜೀವಿಗಳು ನೂರಾರು ಕಿ.ಮೀ. ದೂರವನ್ನು ಬಿರುಬಿಸಿಲಿನ ದಳ್ಳುರಿಯಲ್ಲಿ ಕಾಲ್ನಡಿಗೆಯಲ್ಲಿ ಕ್ರಮಿಸಬೇಕಾಯಿತು. ಎಷ್ಟೋ ಮಂದಿ ರಸ್ತೆಯಲ್ಲೇ ಪ್ರಾಣಬಿಟ್ಟ ದುರಂತಗಳು ಜರುಗಿದವು. ಅಂತಹ ಜನರ ಮೇಲೆ ಸರ್ಕಾರಗಳು-ಪೊಲೀಸರು ಅಮಾನುಷವಾಗಿ ನಡೆದುಕೊಂಡರು. ಲವಲೇಶ ಕರುಣೆಯೂ ಅಲ್ಲಿ ಕಾಣದೆಹೋಯಿತು. ಕಾರ್ಮಿಕ ವಲಸೆಗಾರರು ತಮ್ಮ ಗೂಡು ಸೇರಿಕೊಳ್ಳಲು ರೈಲುಗಾಡಿಗಳನ್ನು ಓಡಿಸದ ಕೇಂದ್ರ ಸರ್ಕಾರ, ಮೊನ್ನೆ ಸಾಂಕ್ರಾಮಿಕದ ನಟ್ಟನಡುವೆಯೂ ಕುಂಭಮೇಳಕ್ಕೆ ವಿಶೇಷ ರೈಲುಗಾಡಿಗಳನ್ನು ಏರ್ಪಾಡು ಮಾಡಿ ಧನ್ಯವಾಯಿತು. ಖುದ್ದು ಪ್ರಧಾನಮಂತ್ರಿಯವರೇ ಮುಂದಾಗಿ ಕುಂಭಮೇಳಕ್ಕೆ ಬರುವಂತೆ ಜನರನ್ನು ಆಹ್ವಾನಿಸಿದರು. ಪತ್ರಿಕೆಗಳಲ್ಲಿ ಅಚ್ಚಾದ ಪುಟಗಟ್ಟಲೆ ಜಾಹೀರಾತುಗಳೇ ಈ ಮಾತಿಗೆ ಪುರಾವೆ. ದೇಶವನ್ನು ಕೋವಿಡ್ ವಿಪತ್ತಿನಿಂದ ಪಾರು ಮಾಡುವುದು ನಿನ್ನೆ ಮೊನ್ನೆ ಕೂಡ ಸರ್ಕಾರದ ಆದ್ಯತೆ ಆಗಿರಲಿಲ್ಲ.

ವಲಸಿಗ

ಆಸ್ಪತ್ರೆಗಳ ಹಾಸಿಗೆಗಳನ್ನು ಹಂಗಾಮಿಯಾಗಿ ಹೆಚ್ಚಿಸಲು ಬಂದೀತು. ಆದರೆ ವೈದ್ಯರು-ಶುಶ್ರೂಷಕರು ಮುಂತಾದ ಆರೋಗ್ಯ ಸಿಬ್ಬಂದಿಯನ್ನು ದಿನ ಬೆಳಗಾಗುವುದರಲ್ಲಿ ಸೃಷ್ಟಿಸಲು ಆದೀತೇ? ಈ ಸಿಬ್ಬಂದಿ ಈಗಾಗಲೆ ತನ್ನ ಸಾಮರ್ಥ್ಯ ಮೀರಿ ಶ್ರಮಿಸತೊಡಗಿದೆ. ಒಂದು ಮಿತಿಯ ಆಚೆಗೆ ತಳ್ಳಿದರೆ ಅದು ಕೂಡ ಕುಸಿದುಹೋದೀತು.

ದೇಶದ ಆರೋಗ್ಯವ್ಯವಸ್ಥೆ ಮತ್ತು ಶಿಕ್ಷಣ ವ್ಯವಸ್ಥೆಯನ್ನು ಖಾಸಗಿ ಬಂಡವಾಳಿಗರ ಕೈಗಿಟ್ಟರೆ ಎದುರಿಸಬೇಕಿರುವ ಅಪಾಯಗಳ ಮಾದರಿಯೊಂದು ನಮ್ಮ ಕಣ್ಣಮುಂದೆ ಅನಾವರಣಗೊಳ್ಳುತ್ತಿದೆ. ಖಾಸಗೀಕರಣದ ಮಹಾಪೂಜಾರಿಗಳು ಈ ಸುನಾಮಿ ಸಾಂಕ್ರಾಮಿಕದಿಂದ ಪಾಠ ಕಲಿಯಬೇಕಿದೆ.

ಬಹುತ್ವದ ಭಿನ್ನಮತದ ಸಹನೆ ಸಹಬಾಳುವೆಯ ಆಮ್ಲಜನಕ ಕೂಡ ಭಾರತ ದೇಶದಲ್ಲಿ ಭಾರೀ ವೇಗದಲ್ಲಿ ಬರಿದಾಗುತ್ತಿದೆ. ದೇಶ ಉಸಿರುಗಟ್ಟುವ ಈ ಅಪಾಯವನ್ನೂ ಮುಂದಾಗಿಯೇ ಮನಗಾಣುವುದು ಒಳಿತು.

ಇತಿಹಾಸ ಕಂಡಿರುವ ಮಹಾನ್ ಆತ್ಮಪ್ರಶಂಸಕರ ಸಾಲಿಗೆ ಈಗಾಗಲೆ ಸೇರಿಹೋಗಿದ್ದಾರೆ ನಮ್ಮ ದೇಶದ ಹಾಲಿ ಪ್ರಚಂಡ ನಾಯಕಮಣಿ. ರೋಮ್ ನಗರ ಹೊತ್ತಿ ಉರಿಯುತ್ತಿದ್ದಾಗ ಪಿಟೀಲು ಬಾರಿಸುತ್ತಿದ್ದ ನೀರೋ ಕಾಲಕಾಲಕ್ಕೆ ಇತಿಹಾಸದ ಪುಟಗಳಿಂದ ಎದ್ದು ಬರುತ್ತಲೇ ಇರುತ್ತಾನೆ. ಇದೀಗ ಭಾರತದಲ್ಲಿ ಕಾಣತೊಡಗಿದ್ದಾನೆ.


ಇದನ್ನೂ ಓದಿ: ಬಹುಜನ ಭಾರತ: ಕಲ್ಲನಾಗರಕೆ ಹಾಲೆರೆವವರ ಡಾಂಭಿಕತನ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...