Homeಅಂಕಣಗಳುಬಹುಜನ ಭಾರತ: ಬಹುತ್ವ ಭಿನ್ನಮತ ಸಹನೆ ಸಹಬಾಳುವೆಯ ಆಮ್ಲಜನಕವೂ ಬಲು ವೇಗದಲ್ಲಿ ಬರಿದಾಗುತ್ತಿದೆ

ಬಹುಜನ ಭಾರತ: ಬಹುತ್ವ ಭಿನ್ನಮತ ಸಹನೆ ಸಹಬಾಳುವೆಯ ಆಮ್ಲಜನಕವೂ ಬಲು ವೇಗದಲ್ಲಿ ಬರಿದಾಗುತ್ತಿದೆ

- Advertisement -
- Advertisement -

ಕೊರೊನಾ ವೈರಾಣು ವಿರುದ್ಧದ ಸಮರದಲ್ಲಿ ಆಮ್ಲಜನಕವೆಂಬ ಪ್ರಾಣವಾಯು ಬೆಲೆಕಟ್ಟಲಾಗದ ಹತಾರುಗಳಲ್ಲಿ ಒಂದು. ಈ ಅಂಶ ವರ್ಷದ ಹಿಂದೆ ಎರಗಿದ ಮೊದಲ ಕೋವಿಡ್ ದಾಳಿಯಲ್ಲಿ ಬೆಳಕಿನಷ್ಟೇ ನಿಚ್ಚಳವಾಗಿ ಗೊತ್ತಾಗಿತ್ತು. ಕೋವಿಡ್ ಮಹಾಸಾಂಕ್ರಾಮಿಕವನ್ನು ವಿನಾಶಕಾರಿ ವಿಪತ್ತು ಎಂದು ಭಾರತ ಸರ್ಕಾರ 2020ರ ಮಾರ್ಚ್ 14ರಂದೇ ಘೋಷಿಸಿತ್ತು. ಆನಂತರ ಘೋಷಿಸಲಾದ ಲಾಕ್‌ಡೌನ್ ಜಗತ್ತಿನ ಅತಿಕ್ರೂರ ಲಾಕ್‌ಡೌನ್ ಎಂದು ಇತಿಹಾಸಕ್ಕೆ ಸಂದು ಹೋಗಿದೆ.

ಆನಂತರ ನಿದ್ದೆಗೆ ಜಾರುವ ಕೇಂದ್ರ ಸರ್ಕಾರ ಎಚ್ಚೆತ್ತುಕೊಳ್ಳುವುದು ಏಳು ತಿಂಗಳ ನಂತರ. ದೇಶದ 150 ಜಿಲ್ಲಾ ಆಸ್ಪತ್ರೆಗಳಲ್ಲಿ ಆಮ್ಲಜನಕ ಉತ್ಪಾದನೆ ಘಟಕಗಳ ಸ್ಥಾಪನೆಯ ಟೆಂಡರ್ ಹೊರಟದ್ದು 2020ರ ಅಕ್ಟೋಬರ್ ತಿಂಗಳಿನಲ್ಲಿ. ಈ ಸಂಖ್ಯೆಗೆ ಇನ್ನೂ ಹನ್ನೆರಡು ಘಟಕಗಳನ್ನು ಸೇರಿಸಲಾಗಿತ್ತು. ಏಳು ತಿಂಗಳ ಮಹಾವಿಳಂಬದ ಹಿಂದಿನ ಕಾರಣ ಏನಿದ್ದೀತು ಊಹಿಸಬಲ್ಲಿರಾ? ಅದು ಹಣಕಾಸಿನ ಕೊರತೆಯಂತೆ!

150 ಉತ್ಪಾದನಾ ಘಟಕಗಳ ಸ್ಥಾಪನೆಗೆ ಬೇಕಿದ್ದ ಹಣವಾದರೂ ಎಷ್ಟು? ಕೇವಲ 201.58 ಕೋಟಿ ರುಪಾಯಿಗಳು. ಕಡೆಗೂ ಈ ಹಣವನ್ನು ಹಂಚಿಕೆ ಮಾಡಿದ್ದು PM- CARES ನಿಧಿಯಿಂದ. ಭಾರತ ಸರ್ಕಾರದ ಬೊಕ್ಕಸ ಅದೆಷ್ಟು ಬಡವಾಗಿತ್ತು!

ಟೆಂಡರ್ ಕರೆದು ಒಂದು ವರ್ಷವೇ ಉರುಳಿದೆ. 162ರಲ್ಲಿ ಸ್ಥಾಪಿಸಲಾಗಿರುವ ಘಟಕಗಳು ಕೇವಲ 33. ಇದೇ ಏಪ್ರಿಲ್ ಕಡೆಯ ವೇಳೆಗೆ ಇನ್ನೂ 59ನ್ನು ಸ್ಥಾಪಿಸಲಾಗುವುದಂತೆ. ಮೇ ಅಂತ್ಯದ ವೇಳೆಗೆ ಒಟ್ಟು 80 ಘಟಕಗಳು ಆಮ್ಲಜನಕವನ್ನು ಉತ್ಪಾದಿಸಲಿವೆಯಂತೆ. ಅರ್ಥಾತ್ ವರ್ಷದ ಹಿಂದೆ ಟೆಂಡರ್ ಕರೆಯಲಾಗಿದ್ದ ಕೇವಲ ಅರ್ಧದಷ್ಟು ಘಟಕಗಳು! ಜಿಲ್ಲಾ ಆಸ್ಪತ್ರೆಗಳದ್ದೇ ಈ ಕತೆಯಾದರೆ ತಾಲ್ಲೂಕುಗಳು, ಸಣ್ಣಪುಟ್ಟ ಊರು ಕೇರಿಗಳ ಜನರ ಪಾಡೇನು?

ಆಮ್ಲಜನಕದ ಕೊರತೆಯಿಂದ ಆಸ್ಪತ್ರೆಗಳ ಹೊರಗಷ್ಟೇ ಅಲ್ಲ, ಒಳಗೂ ರೋಗಿಗಳು ಸಾಯುತ್ತಿರುವುದು ಹೃದಯವಿದ್ರಾವಕ. ಈ ಸಾವುಗಳು ಅಪ್ಪಟ ಮಾನವನಿರ್ಮಿತ. ಆಳುವವರ ಅದಕ್ಷತೆ, ಬೇಜವಾಬ್ದಾರಿ, ನಿರ್ಲಕ್ಷ್ಯವೇ ಈ ಮರಣಗಳ ಹಿಂದಿನ ಕಾರಣ.

ಕೋವಿಡ್ ಮಹಾಸಾಂಕ್ರಾಮಿಕ ಇಲ್ಲದೆ ಹೋಗಿದ್ದರೂ ಜಿಲ್ಲಾ ಆಸ್ಪತ್ರೆಗಳು ತಮ್ಮವೇ ಆದ ಆಮ್ಲಜನಕ ಘಟಕಗಳನ್ನು ಹೊಂದಿರುವುದು ಅತ್ಯಗತ್ಯ. ಹಾವು ಕಡಿತ, ಮೆದುಳುಜ್ವರ, ರಸ್ತೆ ಅಪಘಾತ ಮುಂತಾದ ಕಾರಣಗಳಿಂದಾಗಿ ಆಸ್ಪತ್ರೆ ಸೇರುವ ಸಾವಿರಾರು ರೋಗಿಗಳ ಪ್ರಾಣ ಉಳಿಸಲು ಆಮ್ಲಜನಕ ಬೇಕೇ ಬೇಕು. ಮಹಾಸಾಂಕ್ರಾಮಿಕದ ನೆಪದಲ್ಲಿ ನಮ್ಮ ಆರೋಗ್ಯವ್ಯವಸ್ಥೆಯಲ್ಲಿ ಉಳಿದುಹೋಗಿರುವ ಭಾರೀ ಕಂದಕಗಳನ್ನು ಮುಚ್ಚಬೇಕಿದೆ. ಅವುಗಳಲ್ಲಿ ಆಮ್ಲಜನಕ ಘಟಕಗಳ ಸ್ಥಾಪನೆಯೂ ಸೇರಿದೆ ಎನ್ನುತ್ತಾರೆ ಆರೋಗ್ಯ ವ್ಯವಸ್ಥೆಗಳ ತಜ್ಞ ಟಿ.ಸುಂದರರಾಮನ್.

ಜಾಗಟೆ, ತಟ್ಟೆ ಬಾರಿಸಿ ಮೇಣದಬತ್ತಿಗಳನ್ನು ಹೊತ್ತಿಸುವ, ಶಂಖ ಊದಿಸುವ ನಾಟಕಗಳನ್ನು ಮಾಡಿಸದೆ ದೇಶದ ಸಾಂಕ್ರಾಮಿಕ ತಜ್ಞರೊಂದಿಗೆ ಸಮಾಲೋಚನೆ ನಡೆಸಿ ಅವರ ಸಲಹೆಗಳ ಪ್ರಕಾರ ನಡೆದುಕೊಂಡಿದ್ದರೆ ಇಂದಿನ ವಿಪತ್ತನ್ನು ಸಮರ್ಥವಾಗಿ ಎದುರಿಸಬಹುದಿತ್ತು.

ಮಹಾಸಾಂಕ್ರಾಮಿಕದ ನಟ್ಟ ನಡುವೆಯೂ ಮಧ್ಯಪ್ರದೇಶದ ಕಾಂಗ್ರೆಸ್ ಸರ್ಕಾರವನ್ನು ಉರುಳಿಸುವ ಕಾರ್ಯ ಬಿಡುವಿಲ್ಲದೆ ನಡೆಯಿತು. ರಾಜಸ್ತಾನವೂ ಈ ಮಾತಿಗೆ ಹೊರತಾಗಲಿಲ್ಲ. ಮಹಾರಾಷ್ಟ್ರದಲ್ಲಿ ಈ ಪ್ರಯತ್ನ ನಿಲ್ಲದೆ ನಡೆದಿದೆ. ಪಶ್ಚಿಮ ಬಂಗಾಳ ಮತ್ತು ಅಸ್ಸಾಮಿನಲ್ಲಿ ಅಧಿಕಾರ ಹಿಡಿಯುವುದೇ ಪರಮಗುರಿ. ಹರಿದ್ವಾರದ ಕುಂಭಮೇಳದಲ್ಲಿ ಯಾವುದೇ ಕೋವಿಡ್ ನಿಯಮ ಪಾಲಿಸದೆ ಮೂವತ್ತು ಲಕ್ಷಕ್ಕೂ ಹೆಚ್ಚು ಮಂದಿ ದಿನಗಟ್ಟಲೆ ನೆರೆದು ಭಾಗವಹಿಸಲು ಅವಕಾಶ ಮಾಡಿಕೊಡಲಾಯಿತು. ಇವರು ದೇಶದ ನಾನಾ ಭಾಗಗಳಿಂದ ಬಂದವರು. ಹಿಂತಿರುಗುವಾಗ ಬಹುತೇಕರು ಕೋವಿಡ್ ಪ್ರಸಾದ ಹೊತ್ತು ತೆರಳುವವರೇ. ಕಳೆದ ವರ್ಷ ಹಠಾತ್ತನೆ ಹೇರಿದ ಅಮಾನುಷ ಲಾಕ್‌ಡೌನ್ ಮಾನವ ಇತಿಹಾಸದ ಮಹಾವಲಸೆಯ ದುರಂತವನ್ನು ಸೃಷ್ಟಿಸಿತ್ತು. ಲಕ್ಷಾಂತರ ಶ್ರಮಜೀವಿಗಳು ನೂರಾರು ಕಿ.ಮೀ. ದೂರವನ್ನು ಬಿರುಬಿಸಿಲಿನ ದಳ್ಳುರಿಯಲ್ಲಿ ಕಾಲ್ನಡಿಗೆಯಲ್ಲಿ ಕ್ರಮಿಸಬೇಕಾಯಿತು. ಎಷ್ಟೋ ಮಂದಿ ರಸ್ತೆಯಲ್ಲೇ ಪ್ರಾಣಬಿಟ್ಟ ದುರಂತಗಳು ಜರುಗಿದವು. ಅಂತಹ ಜನರ ಮೇಲೆ ಸರ್ಕಾರಗಳು-ಪೊಲೀಸರು ಅಮಾನುಷವಾಗಿ ನಡೆದುಕೊಂಡರು. ಲವಲೇಶ ಕರುಣೆಯೂ ಅಲ್ಲಿ ಕಾಣದೆಹೋಯಿತು. ಕಾರ್ಮಿಕ ವಲಸೆಗಾರರು ತಮ್ಮ ಗೂಡು ಸೇರಿಕೊಳ್ಳಲು ರೈಲುಗಾಡಿಗಳನ್ನು ಓಡಿಸದ ಕೇಂದ್ರ ಸರ್ಕಾರ, ಮೊನ್ನೆ ಸಾಂಕ್ರಾಮಿಕದ ನಟ್ಟನಡುವೆಯೂ ಕುಂಭಮೇಳಕ್ಕೆ ವಿಶೇಷ ರೈಲುಗಾಡಿಗಳನ್ನು ಏರ್ಪಾಡು ಮಾಡಿ ಧನ್ಯವಾಯಿತು. ಖುದ್ದು ಪ್ರಧಾನಮಂತ್ರಿಯವರೇ ಮುಂದಾಗಿ ಕುಂಭಮೇಳಕ್ಕೆ ಬರುವಂತೆ ಜನರನ್ನು ಆಹ್ವಾನಿಸಿದರು. ಪತ್ರಿಕೆಗಳಲ್ಲಿ ಅಚ್ಚಾದ ಪುಟಗಟ್ಟಲೆ ಜಾಹೀರಾತುಗಳೇ ಈ ಮಾತಿಗೆ ಪುರಾವೆ. ದೇಶವನ್ನು ಕೋವಿಡ್ ವಿಪತ್ತಿನಿಂದ ಪಾರು ಮಾಡುವುದು ನಿನ್ನೆ ಮೊನ್ನೆ ಕೂಡ ಸರ್ಕಾರದ ಆದ್ಯತೆ ಆಗಿರಲಿಲ್ಲ.

ವಲಸಿಗ

ಆಸ್ಪತ್ರೆಗಳ ಹಾಸಿಗೆಗಳನ್ನು ಹಂಗಾಮಿಯಾಗಿ ಹೆಚ್ಚಿಸಲು ಬಂದೀತು. ಆದರೆ ವೈದ್ಯರು-ಶುಶ್ರೂಷಕರು ಮುಂತಾದ ಆರೋಗ್ಯ ಸಿಬ್ಬಂದಿಯನ್ನು ದಿನ ಬೆಳಗಾಗುವುದರಲ್ಲಿ ಸೃಷ್ಟಿಸಲು ಆದೀತೇ? ಈ ಸಿಬ್ಬಂದಿ ಈಗಾಗಲೆ ತನ್ನ ಸಾಮರ್ಥ್ಯ ಮೀರಿ ಶ್ರಮಿಸತೊಡಗಿದೆ. ಒಂದು ಮಿತಿಯ ಆಚೆಗೆ ತಳ್ಳಿದರೆ ಅದು ಕೂಡ ಕುಸಿದುಹೋದೀತು.

ದೇಶದ ಆರೋಗ್ಯವ್ಯವಸ್ಥೆ ಮತ್ತು ಶಿಕ್ಷಣ ವ್ಯವಸ್ಥೆಯನ್ನು ಖಾಸಗಿ ಬಂಡವಾಳಿಗರ ಕೈಗಿಟ್ಟರೆ ಎದುರಿಸಬೇಕಿರುವ ಅಪಾಯಗಳ ಮಾದರಿಯೊಂದು ನಮ್ಮ ಕಣ್ಣಮುಂದೆ ಅನಾವರಣಗೊಳ್ಳುತ್ತಿದೆ. ಖಾಸಗೀಕರಣದ ಮಹಾಪೂಜಾರಿಗಳು ಈ ಸುನಾಮಿ ಸಾಂಕ್ರಾಮಿಕದಿಂದ ಪಾಠ ಕಲಿಯಬೇಕಿದೆ.

ಬಹುತ್ವದ ಭಿನ್ನಮತದ ಸಹನೆ ಸಹಬಾಳುವೆಯ ಆಮ್ಲಜನಕ ಕೂಡ ಭಾರತ ದೇಶದಲ್ಲಿ ಭಾರೀ ವೇಗದಲ್ಲಿ ಬರಿದಾಗುತ್ತಿದೆ. ದೇಶ ಉಸಿರುಗಟ್ಟುವ ಈ ಅಪಾಯವನ್ನೂ ಮುಂದಾಗಿಯೇ ಮನಗಾಣುವುದು ಒಳಿತು.

ಇತಿಹಾಸ ಕಂಡಿರುವ ಮಹಾನ್ ಆತ್ಮಪ್ರಶಂಸಕರ ಸಾಲಿಗೆ ಈಗಾಗಲೆ ಸೇರಿಹೋಗಿದ್ದಾರೆ ನಮ್ಮ ದೇಶದ ಹಾಲಿ ಪ್ರಚಂಡ ನಾಯಕಮಣಿ. ರೋಮ್ ನಗರ ಹೊತ್ತಿ ಉರಿಯುತ್ತಿದ್ದಾಗ ಪಿಟೀಲು ಬಾರಿಸುತ್ತಿದ್ದ ನೀರೋ ಕಾಲಕಾಲಕ್ಕೆ ಇತಿಹಾಸದ ಪುಟಗಳಿಂದ ಎದ್ದು ಬರುತ್ತಲೇ ಇರುತ್ತಾನೆ. ಇದೀಗ ಭಾರತದಲ್ಲಿ ಕಾಣತೊಡಗಿದ್ದಾನೆ.


ಇದನ್ನೂ ಓದಿ: ಬಹುಜನ ಭಾರತ: ಕಲ್ಲನಾಗರಕೆ ಹಾಲೆರೆವವರ ಡಾಂಭಿಕತನ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...