Homeಮುಖಪುಟಆಮ್ಲಜನಕ ಸಾಗಣೆಗೆ ಹರಿಯಾಣದ ಅಧಿಕಾರಿಯಿಂದ ತಡೆ: ಮನೀಶ್ ಸಿಸೋಡಿಯಾ

ಆಮ್ಲಜನಕ ಸಾಗಣೆಗೆ ಹರಿಯಾಣದ ಅಧಿಕಾರಿಯಿಂದ ತಡೆ: ಮನೀಶ್ ಸಿಸೋಡಿಯಾ

- Advertisement -
- Advertisement -

ಹರಿಯಾಣ ಸರ್ಕಾರದ ಅಧಿಕಾರಿಯೊಬ್ಬರು ಫರಿದಾಬಾದ್‌ನ ಆಮ್ಲಜನಕ ಸ್ಥಾವರದಿಂದ ದೆಹಲಿಗೆ ಆಮ್ಲಜನಕ ಪೂರೈಕೆಯಾಗುವುದಕ್ಕೆ ತಡೆಯೊಡ್ಡಿದ್ದರು ಎಂದು ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ  ಆರೋಪಿಸಿದ್ದಾರೆ.

ದೆಹಲಿಯ ಆಮ್ಲಜನಕದ ಪ್ರಮಾಣವನ್ನು 378 ಮೆಟ್ರಿಕ್ ಟನ್‌ನಿಂದ 700 ಮೆಟ್ರಿಕ್ ಟನ್‌ಗೆ ಹೆಚ್ಚಿಸಬೇಕು ಎಂದು ಆಮ್ ಆದ್ಮಿ ಪಕ್ಷದ ಸರ್ಕಾರ ಒತ್ತಾಯಿಸುತ್ತಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ಮನೀಶ್ ಸಿಸೋಡಿಯಾ ಹೇಳಿದ್ದಾರೆ.

ಹರಿಯಾಣ ಸರ್ಕಾರದ ಅಧಿಕಾರಿಯೊಬ್ಬರು ಫರಿದಾಬಾದ್‌ನ ಸ್ಥಾವರದಿಂದ ದೆಹಲಿಗೆ ಆಮ್ಲಜನಕ ಪೂರೈಕೆಯಾಗುವುದನ್ನು ನಿಲ್ಲಿಸಿದ್ದಾರೆ. ಉತ್ತರಪ್ರದೇಶದಲ್ಲಿಯೂ ಮಂಗಳವಾರ ಇದೇ ರೀತಿಯ ಘಟನೆ ನಡೆದಿದೆ. ಇದರಿಂದ ಕೆಲವು ಆಸ್ಪತ್ರೆಗಳಲ್ಲಿ ಸಮಸ್ಯೆಗೆ ಕಾರಣವಾಯಿತು, ಈಗ ಆಮ್ಲಜನಕದ ಪೂರೈಕೆಯನ್ನು ಪುನಃ ಆರಂಭಿಸಲಾಗಿದೆ ಎಂದು ಸಿಸೋಡಿಯಾ ಹೇಳಿದ್ದಾರೆ.

ಇದನ್ನೂ ಓದಿ: ಆಮ್ಲಜನಕದ ವಾಹನಗಳ ಸಂಚಾರಕ್ಕೆ ಬ್ಯಾರಿಕೇಡ್ ಹಾಕಿ ಅಡ್ಡಿ ಪಡಿಸಿರುವುದು ಸರ್ಕಾರ, ರೈತರಲ್ಲ- ರೈತ ಸಂಘಟನೆ

“ಹೆಚ್ಚಿದ ಆಮ್ಲಜನಕದ ಬಳಕೆಯನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರವು ಆಮ್ಲಜನಕ ಕೋಟಾವನ್ನು 700 ಮೆಟ್ರಿಕ್ ಟನ್‌ಗೆ ಹೆಚ್ಚಿಸಬೇಕೆಂದು ನಾವು ಮತ್ತೆ ಒತ್ತಾಯಿಸುತ್ತೇವೆ. ಉತ್ತರ ಪ್ರದೇಶ, ಹರಿಯಾಣ, ರಾಜಸ್ಥಾನ ಸೇರಿದಂತೆ ಹಲವಾರು ರಾಜ್ಯಗಳ ರೋಗಿಗಳನ್ನು ದೆಹಲಿಯ ಆಸ್ಪತ್ರೆಗಳಲ್ಲಿ ದಾಖಲಿಸಲಾಗಿದೆ” ಎಂದು ಸಿಸೋಡಿಯಾ ಮಾಹಿತಿ ನೀಡಿದ್ದಾರೆ.

ದೆಹಲಿಯ ಹಲವಾರು ಆಸ್ಪತ್ರೆಗಳಿಗೆ ಹರಿಯಾಣ ಸರ್ಕಾರವು ಆಮ್ಲಜನಕವನ್ನು ಪೂರೈಸಲು ಅನುಮತಿಸುತ್ತಿಲ್ಲ. ನೂರಾರು ಕೊರೊನಾ ವೈರಸ್ ಸೋಂಕಿತ ರೋಗಿಗಳು ತಮ್ಮ ಜೀವ ಉಳಿಸಿಕೊಳ್ಳಲು ಹೋರಾಡುತ್ತಿದ್ದಾರೆ. ಆಮ್ಲಜನಕ ಪೂರೈಕೆಮಾಡಲು ನಮ್ಮಲ್ಲಿ ಸೀಮಿತ ಸ್ಟಾಕ್ ಮಾತ್ರ ಉಳಿದಿದೆ. ಇದರ ನಡುವೆ ಹರಿಯಾಣ ಸರ್ಕಾರ ಇಂತಹ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.

“ಹರಿಯಾಣದಿಂದ ದೆಹಲಿಗೆ ಆಮ್ಲಜನಕ ಪೂರೈಕೆಯನ್ನು ನಿಲ್ಲಿಸುವುದರಿಂದ ಹೆಚ್ಚಿನ ಸಂಖ್ಯೆಯ ಆಸ್ಪತ್ರೆಗಳ ಮೇಲೆ ತೀವ್ರತರದ ಪರಿಣಾಮ ಬೀರುತ್ತದೆ. ಇದರಿಂದ ಕೇಂದ್ರ ಸರ್ಕಾರವು ಮಧ್ಯಪ್ರವೇಶಿಸುವ ಅಗತ್ಯವಿದೆ ಎಂದು ಸಿಸೋಡಿಯಾ ಒತ್ತಾಯಿಸಿದ್ದರು.


ಇದನ್ನೂ ಓದಿ: ಸೋಂಕಿನಿಂದ ತತ್ತರಿಸಿರುವ ರಾಜ್ಯಗಳಿಗೆ ನೆರವಿನ ಹಸ್ತ ಬೇಕಿದೆ, ಬುರುಡೆ ಮಾತಲ್ಲ: ಪ್ರಧಾನಿಗೆ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...