Homeಅಂಕಣಗಳುಸುದ್ದಿಯೇನೇ ಮನೋಲ್ಲಾಸಿನಿ: ಭನವಾರಿ ದೇವಿ ಮತ್ತು ಅತ್ಯಾಚಾರದ ಕಾನೂನುಗಳು

ಸುದ್ದಿಯೇನೇ ಮನೋಲ್ಲಾಸಿನಿ: ಭನವಾರಿ ದೇವಿ ಮತ್ತು ಅತ್ಯಾಚಾರದ ಕಾನೂನುಗಳು

- Advertisement -
- Advertisement -

ರಮೇಶ್ ಜಾರಕಿಹೊಳಿ ಅವರ ಮನಿ ಒಳಗ ಸಿಡಿ ಪ್ಲೇಯರ್ ಇಲ್ಲ. ಅದು ಇರೋದು ಅವರ ಕಚೇರಿಯೊಳಗ. ಅವರು ಜಾಸ್ತಿ ಪಿಚ್ಚರು ನೋಡೋದಿಲ್ಲ. ಮೊನ್ನೆ ಮೊನ್ನೆಯಿಂದ ಟಿವಿ ನೋಡೋದು ಕಮ್ಮಿ ಅಗೆತಿ ಅಂತ ಅವರ ಪಿಎ ಸಾಹೇಬರು ಅಂದ್ರು ಮೊನ್ನೆ.

ಅದು ಯಾಕಾಪಾ ಅಂದ್ರ ಅವರು ತಮ್ಮ ವಿರುದ್ಧದ ಸುದ್ದಿ ಹಾಗೂ ಕೋವಿಡ್ ವೈರಸ್‌ಗಳಿಗೆ ಗುರಿಯಾಗಿ ತಮ್ಮ ಗೋಕಾಕ ಜಲಪಾತದ ಹತ್ತಿರದ ಮನಿ ಒಳಗ ಸುಧಾರಿಸಿಕೊಳ್ಳತಾ ಇದ್ದಾರ.

“ಗೋಕಾಕ ಸಾಹುಕಾರ್ ಅವರ ರಾಸಲೀಲೆ” ಅಂತ ಉದ್ದುದ್ದ ಸುದ್ದಿ ಬರೆದು ಊರೆಲ್ಲ ಗದ್ದಲ ಮಾಡಿದ ನಮ್ಮ ಮಾಧ್ಯಮಗಳು ಆ ಪ್ರಕರಣದ ಅಳಕ್ಕೆ ಇಳಿಯಲಿಲ್ಲ. ಹಂಗಂದ್ರ ಅದರ ಸರಿ ತಪ್ಪುಗಳ ಲೆಕ್ಕಾಚಾರ ಅಂತ ಅಲ್ಲ. ಆ ಘಟನೆಯ ಬೇರೆ ಬೇರೆ ಆಯಾಮಗಳ ವಿಚಾರ ಮಾಡಲಿಲ್ಲ ಅಂತ.

ಮೊದಲನೆದಾಗಿ ಮಾಧ್ಯಮಗಳ ಭಾಷೆ ಸೂಕ್ಷ್ಮವಾಗಿರಲಿಲ್ಲ. ಸಂತ್ರಸ್ತ ಯುವತಿಯನ್ನು ಸಿಡಿ ಲೇಡಿ ಅಂತ ಕರೆದ ನಮ್ಮ ಟಿವಿಯ ಹಿಡಿಗೂಟಗಳು (ಆಂಕರ್‌ಗಳು) ಆರೋಪಿ ರಾಜಕಾರಣಿಯನ್ನು ಬಣ್ಣಿಸುವಾಗ ಸಭ್ಯ ಭಾಷೆ ಬಳಸಿದವು. ಅವರ ಅಭಿಮಾನಿ ಯಾರೋ ವಕೀಲರ ನೋಟಿಸು ಕಳಿಸಿದರು ಅನ್ನುವ ಕಾರಣಕ್ಕೆ ಸಾಹುಕಾರ್ ಅನ್ನುವ ಪದ ಬಳಕೆ ಸಹಿತ ಬಿಟ್ಟವು.

ಆ ಹುಡುಗಿಗೆ ಅನ್ಯಾಯ ಅಗಿದೆಯೋ ಇಲ್ಲವೋ ಅನ್ನುವ ವಿಚಾರ ಮಾಡುವ ಬದಲಿಗೆ ‘ಅಕಿ ಯಾರು’, ‘ಯಾವ ಜಾತಿಯವಳು?’, ‘ಅಕಿ ಗೆಣೆಕಾರರು ಯಾರು’, ‘ಅವರ ಬೆನ್ನ ಹಿಂದಿನ ಮಹಾ ನಾಯಕರು ಯಾರು?’ ಇಂಥಾ ವಿಚಾರಗಳನ್ನು ಜನರ ತಲೆಯೊಳಗೆ ಒತ್ತಾಯದಿಂದ ತುಂಬಿದರು. ‘ಪಾಪ ಸಾಹುಕಾರರು ನೊಂದುಕೊಂಡರೇನೋ’ ಅಂತ ಬೇಜಾನ್ ಬೇಸರ ಮಾಡಿಕೊಂಡ ಟಿವಿ ಹಿಡಿಗೂಟಗಳು ‘ಆ ಬಡ ಹುಡುಗಿ ನೊಂದುಕೊಂಡಳೋ ಇಲ್ಲವೋ’ ಅಂತ ವಿಚಾರ ಸಹಿತ ಮಾಡಲಿಲ್ಲ.

ಇದೆಲ್ಲಾ ಆರಂಭವಾಗಿದ್ದು ಸಾಹುಕಾರರು ಗೃಹ ಸಚಿವರಿಗೆ ಬರೆದ ಒಂದು ಓಲೆಯಿಂದ. ರಾಜಕೀಯದಲ್ಲಿ ತಮ್ಮ ಬುಲೆಟ್ ಟ್ರೇನ್ ವೇಗದ ಬೆಳವಣಿಗೆಯನ್ನು ಸಹಿಸದ ಯಾರೋ ಕೆಲ ದುರುಳರು ತಮ್ಮ ವಿರುದ್ಧ ಷಡ್ಯಂತ್ರ ಮಾಡಿ ತಮ್ಮನ್ನು ಜೇನುಪಾಶದಲ್ಲಿ ಸಿಲುಕಿಸಿಬಿಟ್ಟಿದ್ದಾರೆ ಅಂತ ಅವರು ಗೋಳು ಹೇಳಿಕೊಂಡರು. ತನ್ನ ಸರ್ಕಾರದ ಹುಟ್ಟಿಗೆ ಕಾರಣವಾದ ಈ ಆಧುನಿಕ ಜಮೀನುದಾರನ ಗೋಳು ನೋಡಲಿಕ್ಕೆ ಆಗದ ಘನ ಸರಕಾರ ಮಂತ್ರಿಗಳಿಗೆ ಗಾಳ ಹಾಕಿದ ಕಂತ್ರಿಗಳು ಯಾರು ಅಂತ ತನಿಖೆ ಮಾಡಲು ಒಂದು ಸಿಟ್ (ಎಸ್‌ಐಟಿ) ನೇಮಿಸಿತು. ಆ ನಿಕಟಪೂರ್ವ ಮಂತ್ರಿಗಳಿಂದ ಸಂತ್ರಸ್ತ ಯುವತಿ ಅನ್ಯಾಯ ಮಾಡಿದರೋ ಇಲ್ಲವೋ ಅನ್ನೋದು ಆ ಸಿಟ್‌ನ ಲಿಸ್ಟ್‌ನಲ್ಲಿ ಇರಲಿಲ್ಲ.

ಶುರುವಾತಿಗೆ ಅದು ಹೆಸರಿಗೆ ತಕ್ಕ ಹಾಗೆ ಸಿಟ್ ಮಾಡಿತು. ಅಂದರೆ ಸುಮ್ಮನೆ ಕೂತುಬಿಟ್ಟಿತು.
ಆಮ್ಯಾಲೆ ಒಂದು ಪ್ರಥಮ ಮಾಹಿತಿ ವರದಿಯ ಪ್ರಹಸನ ನಡೀತು. ಒಬ್ಬ ಸಾಮಾಜಿಕ ಹಾರಾಟಗಾರರು ಒಂದು ದೂರು, ಅದಕ್ಕೆ ತಕ್ಕ ಸಾಕ್ಷಿ ಕೊಟ್ಟ ಮೇಲೆ ಅದರ ತಯಾರಿ ಆರಂಭವಾಯಿತು. ಉಚ್ಚ ನ್ಯಾಯಾಲಯ, ಸರ್ವೋಚ್ಚ ನ್ಯಾಯಾಲಯಗಳ ಹಲವಾರು ತೀರ್ಪುಗಳ ವಿರುದ್ಧ ರಾಜ್ಯದ ಪೊಲೀಸರು ನಡೆದುಕೊಂಡರು. ಇಷ್ಟು ಘೋರ ಅಪರಾಧದ ಆರೋಪ ಇದ್ದರೂ ದೂರು ದಾಖಲು ಆಗಲಿಲ್ಲ. ಎಫ್‌ಐಆರ್ ಮಾಡೋರು ಯಾರು ಅನ್ನೋದು ಗೊತ್ತಾಗೋ ಮೊದಲೇ ಅದರ ಜೀವ ಆರಿಹೋತು.

ಆನಂತರ, ಸಾರ್ವಜನಿಕರ ಒತ್ತಡ ಹೆಚ್ಚಿ, ನ್ಯಾಯಾಲಯದ ಮಧ್ಯಪ್ರವೇಶ ಆದನಂತರ ಇನ್ನೊಂದು ಎಫ್‌ಐಆರ್ ಆಯಿತು. ಇಷ್ಟು ಎಲ್ಲಾ ಆಗೋವಾಗ ಮೊದಲಿಗೆ ದೂರು ನೀಡಿದ ಸಾಮಾಜಿಕ ಹಾರಾಟಗಾರರು ಪ್ರಕರಣದಿಂದ ದೂರವಾದರು.

ಅಲ್ಲಿಗೆ ಈ ಪ್ರಕರಣದ ಅಪರಾಧದ ಆಯಾಮದ ಬಿಸಿ ಕಮ್ಮಿ ಆಗಿ ಅದರ ರಾಜಕಿಯ ಆಯಾಮದ ಉಗಿ ಎದ್ದಿತ್ತು. ಅದರ ಝಳ ಬೆಂಗಳೂರಿನಿಂದ ಶುರು ಆಗಿ ಗೋಕಾಕಗೆ ತಟ್ಟಿತ್ತು.

ಈಗ ಗೋಕಾಕ ಎಂಬ ಸರ್ವಾಧಿಪತ್ಯದ ರಾಜ್ಯದಲ್ಲಿ ಎಲ್ಲರೂ ಸಿಡಿ ಲೇಡಿ ಅನ್ನುವ ಪದ ಬಳಸತಾರ. ಅದರ ಅದು ಆ ಹುಡುಗಿಗೆ ಅಲ್ಲ. ರಾಜೀನಾಮೆ ನೀಡಿ ಸರಕಾರದೊಂದಿಗೆ ರಾಜಿ ಮಾಡಿಕೊಂಡ ಮಾಜಿ ಮಂತ್ರಿಯ ಬಗ್ಗೆ ಮಾತಾಡುವಾಗ. ಆದರೆ ಅದು ಕುಶಾಲಿಗೆ. ಆ ನಂತರ ಅವರ ಮಾತು ಗಂಭೀರ ಆಗತಾವ.

“ನಂ ಸಾಹುಕಾರ್ ಏನು ತಪ್ಪು ಮಾಡಿದ್ದಾನ ಹೇಳ್ರಿ?” ಅಂತ ನಿಮ್ಮನ್ನ ಪ್ರಶ್ನೆ ಮಾಡತಾರ. “ಎಲ್ಲ ಗಂಡಸರು ಮಾಡೋದನ್ನ ಮಾಡಿದ್ದಾನ. ಅವತ್ತ ಟಿವಿ ಒಳಗ ಹೇಳಲಿಲ್ಲೇನು ‘ನಾನು ಗಂಡಸು ಅವನು ಅಲ್ಲ ಅಂತ’. ಅದರಾಗ ತಪ್ಪು ಏನು ಐತಿ?, ಆ ಹುಡುಗಿನ ಪ್ರಚೋದನೆ ಮಾಡಿದರ ಇವರ ತಪ್ಪು ಏನು? ಅಕಿ ಇವರ ಕಡೆ ಮೊದಲು ಬಂದು ಎಲ್ಲ ಉಪಯೋಗ ತೊಗೊಂಡಳು. ಆಮ್ಯಾಲೆ ಸಾಹುಕಾರರಿಗೆ ತಿರುಗಿ ಬಿದ್ದಳು. ಬ್ಲಾಕ್‌ಮೇಲು ಮಾಡಿದಳು. ರೊಕ್ಕ ಕೇಳಿರ್‌ಬೇಕು, ಸಾಹುಕಾರರು ಕೊಡೋ ಅಷ್ಟು ಕೊಟ್ಟಿರಬೇಕು, ಆಮ್ಯಾಲೆ ಒಲ್ಲೆ ಅಂದಿರಬೇಕು. ಆವಾಗ ತನ್ನ ಬಾಯ್‌ಫ್ರೆಂಡ್ ಮತ್ತು ಅವನ ಫ್ರೆಂಡ್ಸ್ ಜೊತಿಗೆ ಸೇರಿಕೊಂಡು ಈ ಹಲ್ಕಾ ಕೆಲಸ ಮಾಡಿರಬೇಕು. ಈ ಟಿವಿ ಪತ್ರಕರ್ತರಿಗೆ ಹೆಂಗು ಕೆಲಸ ಇಲ್ಲ. ಲಾಕ್‌ಡೌನ್‌ದಾಗ ಅವರ ನೌಕರಿ ಹೋಗಿದ್ದಾವು. ಬಿಟ್ಟಿ ರೊಕ್ಕ ಸಿಗತದ ಅಂತ ಅದನ್ನ ವಿಡಿಯೋ ಮಾಡಿ ಬಿಟ್ಟರಬೇಕು” ಅಂತ ವಾದ ಮಾಡತಾರ.
ಭಾರತದಂತಹ ಗಂಡಾಳಿಕೆ ಸಮಾಜದೊಳಗ ಇದು ಏನು ಹೊಸದಲ್ಲ. ಆಶ್ಚರ್ಯಚಕಿತ ಮಾಡೋ ಅಂತ ವಿಷಯನೂ ಅಲ್ಲ.

ನಮ್ಮ ಜನ, ಮಾಧ್ಯಮ, ಪೊಲೀಸರು, ನ್ಯಾಯಾಲಯ ಎಲ್ಲರೂ ಹಿಂಗ ವಿಚಾರ ಮಾಡತಾರ ಅನ್ನಲಿಕ್ಕೆ ನಮ್ಮ ಇತಿಹಾಸ ಸಾಕ್ಷಿ ಅದ. ಈ ರೀತಿ ಮಾಡಲಿಲ್ಲ ಅಂದ್ರ ಆವಾಗ ಆಶ್ಚರ್ಯ ಆಗತದ.

ಇಂದಿಗೆ ಮೂವತ್ತು ವರ್ಷದ ಹಿಂದ ರಾಜಸ್ತಾನದ ಹಳ್ಳಿಯೊಳಗ ಭನವಾರಿ ದೇವಿ ಮೋಹನ ಲಾಲ್ ಅನ್ನುವ ಶೂದ್ರ ಜನಾಂಗಕ್ಕ ಸೇರಿದ ಹೆಣ್ಣು ಮಗಳ ಮೇಲೆ ಅತ್ಯಾಚಾರ ಆಗಿತ್ತು. ಇಂದಿನ ಅಂಗನವಾಡಿ- ಆಶಾ ಕಾರ್ಯಕರ್ತರ ರೀತಿಯಲ್ಲಿ ಅಂದು ಸಾಥಿನ ಆಗಿ ಕೆಲಸ ಮಾಡುತ್ತಿದ್ದ ಭನವಾರಿ ದೇವಿ ಮೇಲು ಜಾತಿ ಅನ್ನಿಸಿಕೊಳ್ಳುವ ಗೌಳಿ ಗುಜ್ಜರ ಜಾತಿಯ ಮನೆತನದ ಬಾಲ್ಯ ವಿವಾಹ ನಿಲ್ಲಿಸಲಿಕ್ಕೆ ಹೋದಳು. ಆ ಸಿಟ್ಟಿಗೆ ಆ ಐದು ಜನ ದನ ಕಾಯೋರು ಭನವಾರಿ ದೇವಿಯ ಗಂಡನನ್ನು ಥಳಿಸಿ ಅವಳನ್ನು ಗುಂಪು ಅತ್ಯಾಚಾರ ಮಾಡಿದರು. ಇದನ್ನು ಪ್ರತಿಭಟಿಸಿ ಮಹಿಳಾ ಸಂಘಟನೆಗಳು ದೆಹಲಿಯೊಳಗೆ ಹೋರಾಟ ಮಾಡಿದರು.

ಆದರ ನ್ಯಾಯಾಲಯ ಅದನ್ನ ಒಪ್ಪಲಿಲ್ಲ. ಅಲ್ಲಿನ ನ್ಯಾಯಾಧೀಶರು ಸಾಕ್ಷಿ ಸಾಲದು ಅಂತ ಆ ಐದು ಕಿರಾತಕರನ್ನ ಬಿಡುಗಡೆ ಮಾಡಿದರು. ಅವರು ಕೊಟ್ಟ ಕಾರಣಗಳು ಇವು:

1. ಗ್ರಾಮದ ಮುಖ್ಯಸ್ಥ ಅತ್ಯಾಚಾರದಂತಹ ಹೀನ ಕೆಲಸ ಮಾಡಲಾರ.

2. ವಿಭಿನ್ನ ಜಾತಿಯ ಜನ ಸೇರಿ ಗುಂಪು ಅತ್ಯಾಚಾರ ಮಾಡಲಾರರು.

3. ಚಿಕ್ಕಪ್ಪ ಹಾಗೂ ಅವರ ಅಣ್ಣನ ಮಗ ಸೇರಿ ಒಬ್ಬ ಮಹಿಳೆಯನ್ನು ಅತ್ಯಾಚಾರ ಮಾಡಲಿಕ್ಕೆ ಸಾಧ್ಯ ಇಲ್ಲ. ಅವರಿಗೆ ನಾಚಿಕೆ ಆದೀತು.

4. 50-60-70 ವರ್ಷದ ಹಿರಿಯ ನಾಗರಿಕರು ಈ ಕೆಲಸ ಮಾಡಲಾರರು.

5. ಮೇಲುಜಾತಿಯವರು ಕೆಳಜಾತಿಯ ಹೆಣ್ಣುಮಕ್ಕಳನ್ನು ಅತ್ಯಾಚಾರ ಮಾಡಲಾರರು. ಅದು ಅಪವಿತ್ರ ಅಂತ ಅವರಿಗೆ ಗೊತ್ತು.

6. ಹೆಂಡತಿಯನ್ನು ಅತ್ಯಾಚಾರ ಮಾಡುವಾಗ ಗಂಡನೇಕೆ ಸುಮ್ಮನೆ ಇದ್ದ? ಅದು ಅಸಾಧ್ಯ.

ಇತ್ಯಾದಿ.

ಈಗಲೂ ಇಂತಹ ಪ್ರಶ್ನೆಗಳನ್ನ ಕೇಳೋ ಜನ ಇದ್ದಾರ.

ಅನೇಕ ವರ್ಷದ ಹಿಂದ, ಹಿಂದಿ ಚಿತ್ರರಂಗದ ವಯಸ್ಸೇ ಆಗದ ಸುಂದರಿ ರೇಖಾ ನಟಿಸಿದ ಚಿತ್ರವೊಂದು ಭಾರಿ ಸುದ್ದಿ ಮಾಡಿತ್ತು. ಅದರೊಳಗ ರೇಖಾ ಭನವಾರಿ ದೇವಿ ಪಾತ್ರ ವಹಿಸಿದ್ದರು. ‘ರೇಖಾ ಅವರ ಮಾಸದ ಸೌಂದರ್ಯದ ಕಾರಣ ಅವರನ್ನ ನಾಯಕಿಯಾಗಿ ಆಯ್ಕೆ ಮಾಡಿರಬಹುದು’ ಅಂತ ನಮ್ಮ ಪಡ್ಡೆ ಬುದ್ಧಿಗೆ ಅನ್ನಿಸಬಹುದು. ಆದರೆ ಅದರ ನಿಜವಾದ ಕಾರಣ ಏನು ಅಂದ್ರ ಆ ಕಾಲದಾಗ ನಮ್ಮ ಜನರ ಮನಸ್ಸಿನೊಳಗ ಯಾವ ಪ್ರಶ್ನೆ – ಸಂದೇಹ ಇದ್ದವಲ್ಲ, ಅವೇ ಪ್ರಶ್ನೆ, ಸಂದೇಹ, ಇವತ್ತಿಗೂ ಅದಾವು. ಅದಕ್ಕೆ ಚಿರ ಜವ್ವನೆ ರೇಖಾ ಅವರನ್ನು ಭನವಾರಿ ದೇವಿ ಪಾತ್ರ ಮಾಡಲು ಆರಿಸಲಾಯಿತು.

ಇನ್ನೊಂದು ಸಾಮ್ಯ ಏನು ಅಂದ್ರ ಅಂದು ತಾಲೂಕು ನ್ಯಾಯಾಲಯದಿಂದ ಹಿಡಿದು ದೆಹಲಿಯ ಸರ್ವೋಚ್ಚ ನ್ಯಾಯಾಲಯದವರೆಗೆ ಹೆಂಗ ಭನವಾರಿ ದೇವಿ ಹೋರಾಟ ಮಾಡಿದಳಲ್ಲ, ಹಂಗ ಸಾಹುಕಾರರ ಸಂತ್ರಸ್ತ ಮಹಿಳೆ ಸಹಿತ ಗಟ್ಟಿತನದಿಂದ ಹೋರಾಟ ಶುರು ಮಾಡಿದ್ದಾಳ. ನಮ್ಮ ಸಮಾಜ ಅಕಿಗೆ ಹೆಂಗ ಸಾಥ್ ಕೊಡತದ ಅನ್ನೋದು ನೋಡಬೇಕು.

ಒಂದ ವ್ಯತ್ಯಾಸ ಎನಪಾ ಅಂದ್ರ ಆವಾಗ ಮಾಧ್ಯಮಗಳು ಭನವಾರಿ ದೇವಿ ಪರವಾಗಿ ಇದ್ದವು. ಸಾಹುಕಾರರ ಪರವಾಗಿ ಇರಲಿಲ್ಲ. ರಾಜಸ್ತಾನದ ಸ್ಥಳೀಯ ಪತ್ರಿಕೆಗಳು ಸಹಿತ ಜಮೀನುದಾರರನ್ನು ಎದುರು ಹಾಕಿಕೊಂಡು ಸುದ್ದಿ ಬರೆದವು. ಈಗ ಮಾತ್ರ ಮಾಧ್ಯಮಗಳು ಸಾಹುಕಾರರ ಪರವಾಗಿ ಇದ್ದಾವು. ಬಡವಿಯ ಚಿತ್ರ – ವಿಡಿಯೋಗಳನ್ನ ಟಿಆರ್‌ಪಿ ಸಲುವಾಗಿ ಮಾತ್ರ ಬಳಸಿಕೊಳ್ಳುತ್ತಾ ಅದಾವು.

ಅಲ್ಲವೇ ಮನೋಲ್ಲಾಸಿನಿ ?


ಇದನ್ನೂ ಓದಿ: ಭಿಕ್ಷೆ ಬೇಡಿ, ಸಾಲ ತನ್ನಿ ಇಲ್ಲವೇ ಕದ್ದುಕೊಂಡು ಬನ್ನಿ: ಆಮ್ಲಜನಕ ವಿಷಯವಾಗಿ ಕೇಂದ್ರದ ವಿರುದ್ಧ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...