Homeಕರ್ನಾಟಕಸರ್ಕಾರದ ಪ್ರಚಾರದ ಹುಚ್ಚು ನಾಚಿಕೆಗೇಡಿನದ್ದು: ಕುಮಾರಸ್ವಾಮಿ ಆಕ್ರೋಶ

ಸರ್ಕಾರದ ಪ್ರಚಾರದ ಹುಚ್ಚು ನಾಚಿಕೆಗೇಡಿನದ್ದು: ಕುಮಾರಸ್ವಾಮಿ ಆಕ್ರೋಶ

- Advertisement -
- Advertisement -

ಕೊರೊನಾ ವೈರಸ್‌ ಹೊಡೆತಕ್ಕೆ ರಾಷ್ಟ್ರವೇ ತತ್ತರಿಸಿದೆ. ಜನ ಚಿಕಿತ್ಸೆ ಸಿಗದೆ ಪರದಾಡುತ್ತಿದ್ದಾರೆ. ಇಂಥ ಸೂತಕದ ಸಂದರ್ಭದಲ್ಲಿ ರಾಜ್ಯಸರ್ಕಾರ ಕೋಟ್ಯಂತರ ರೂಪಾಯಿ ಹಣ ಖರ್ಚು ಮಾಡಿ ಎಲ್ಲ ಪತ್ರಿಕೆಗಳ ಮುಖಪುಟದಲ್ಲಿ ಪ್ರಧಾನಿ ನಗುಮೊಗದ ಜಾಹೀರಾತೊಂದನ್ನು ನೀಡಿದೆ. ಈ ಮೂಲಕ ಜನರ ನೋವನ್ನು ಗೇಲಿ ಮಾಡಿದೆ. ಇದು ನಿಜಕ್ಕೂ ಆತ್ಮಸಾಕ್ಷಿಯ ನಡೆಯಲ್ಲ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, “ಮೆಟ್ರೋ 2ನೇ ಹಂತದ ಯೋಜನೆಗಳಿಗೆ ಕೇಂದ್ರ ಅನುದಾನ ನೀಡಿದ್ದನ್ನೇ ನೆಪ ಮಾಡಿಕೊಂಡು ಸರ್ಕಾರ ಪ್ರಚಾರಕ್ಕೆ ಧುಮುಕಿದೆ. ರಾಜ್ಯಕ್ಕೆ ಕೇಂದ್ರ ನೀಡುವ ಅನುದಾನವೇನು ಭಿಕ್ಷೆಯಲ್ಲ. ಅದು ನಮ್ಮ ಹಕ್ಕು. ಅದರಲ್ಲಿ ಪ್ರಚಾರ ಪಡೆಯುವ, ಜಾಹೀರಾತು ನೀಡುವ ತುರ್ತು ಏನಿದೆ ಎಂಬುದನ್ನು ಸರ್ಕಾರ ಪರಾಮರ್ಶೆ ಮಾಡಬೇಕಿತ್ತು. ಇದು ಸರ್ಕಾರದ ಹೊಣೆಗೇಡಿತನ” ಎಂದು ಅಸಮಧಾನ ವ್ಯಕ್ತಪಡಿಸಿದ್ದಾರೆ.

ಇದನ್ನು ಓದಿ: ಏರ್‌ಪೋರ್ಟ್-ಸಿಲ್ಕ್‌ಬೋರ್ಡ್ ಮೆಟ್ರೋ ಕಾಮಗಾರಿ ವಿಳಂಬಕ್ಕೆ ಮೋದಿಯವರೆ ಹೊಣೆಯೇ?: ಜಾಹೀರಾತಿಗೆ ಕೋಟಿ ರೂ ಖರ್ಚು ಏಕೆ?

“ಸಮಾಜವೇ ಗಂಡಾಂತರದಲ್ಲಿ ಸಿಲುಕಿರುವಾಗ ಈ ಪ್ರಚಾರ ಪ್ರಿಯತೆ ಏಕೆ? ಜಾಹೀರಾತುಗಳಲ್ಲಿ ನೀವು ಬೀರುವ ನಗು ನೋವಿನಲ್ಲಿರುವವರನ್ನು ಅಣಕಿಸುತ್ತದೆ ಎಂಬ ಸೂಕ್ಷ್ಮತೆ ಇಲ್ಲವೇ? ಜಾಹೀರಾತುಗಳಿಗೆ ನೀಡುವ ಹಣವನ್ನು ವೈದ್ಯಕೀಯ ವ್ಯವಸ್ಥೆಗೆ ಬಳಸಿಕೊಂಡಿದ್ದಿದ್ದರೆ ಯಾರಾದರೂ ಬೇಡವೆನ್ನುತ್ತಿದ್ದರೆ? ಸರ್ಕಾರದ ಪ್ರಚಾರದ ಈ ಹುಚ್ಚು ನಾಚಿಕೆಗೇಡಿನದ್ದು” ಎಂದು ಅವರು ಕಿಡಿಕಾರಿದ್ದಾರೆ.

“ಸರ್ಕಾರ ಕೋವಿಡ್‌ ಅನ್ನು ನಿಭಾಯಿಸಿದ ರೀತಿ ಮತ್ತು ಅದರಲ್ಲಿ ನಡೆದಿರಬಹುದಾದ ಭ್ರಷ್ಟಾಚಾರದ ಬಗ್ಗೆ ಆರೋಪಗಳು ಬಂದವು. ಆದರೆ, ಕೋವಿಡ್‌ ವಿರುದ್ಧದ ಹೋರಾಟದಲ್ಲಿ ಸರ್ಕಾರ ನೈತಿಕತೆ ಪ್ರಶ್ನೆ ಎದುರಿಸಬಾರದು ಎಂಬ ಕಾರಣಕ್ಕೆ ನಾವೆಲ್ಲರೂ ಸುಮ್ಮನಿದ್ದೆವು. ಆದರೆ, ಕಣ್ಣ ಮುಂದಿನ ಇಂಥ ಬೇಜವಾಬ್ದಾರಿತನ, ಪ್ರಚಾರಪ್ರಿಯತೆಯನ್ನು ಸಹಿಸಲಾಗದು” ಎಂದು ಅವರು ಹೇಳಿದ್ದಾರೆ.

“ಈ ದುರಿತ ಕಾಲದಲ್ಲಿ ಸರ್ಕಾರ ಜನರ ಪ್ರಾಣ ರಕ್ಷಣೆಗಾಗಿ ಪಣತೊಡಬೇಕೆ ಹೊರತು, ಪ್ರಚಾರದಲ್ಲಿ ತೊಡಗಬಾರದಿತ್ತು. ಬಿಜೆಪಿಯ ಪ್ರಚಾರ ಪ್ರಿಯತೆ ಎಲ್ಲರಿಗೂ ತಿಳಿದಿರುವ ವಿಚಾರವೇ. ಆದರೆ, ಈ ಸನ್ನಿವೇಶದಲ್ಲಾದರೂ ಅದನ್ನು ನಿಲ್ಲಿಸಿ ಮಾದರಿ ನಡೆ ಅನುಸರಿಸಬೇಕಿತ್ತು. ಜನರ ವಿಶ್ವಾಸ ಗೆಲ್ಲಿ, ಇಲ್ಲದೇ ಹೋದರೆ, ನಿಮ್ಮ ಪ್ರಚಾರಗಳೆಲ್ಲವೂ ಋಣವಾಗುತ್ತದೆ” ಎಂದು ಅವರು ತಿಳಿಸಿದ್ದಾರೆ.

ಇದನ್ನು ಓದಿ: ಸೋಂಕಿನಿಂದ ತತ್ತರಿಸಿರುವ ರಾಜ್ಯಗಳಿಗೆ ನೆರವಿನ ಹಸ್ತ ಬೇಕಿದೆ, ಬುರುಡೆ ಮಾತಲ್ಲ: ಪ್ರಧಾನಿಗೆ ಸಿದ್ದರಾಮಯ್ಯ

ವಿಡಿಯೊ ನೋಡಿ: ದುಡಿವಾಗ ಬೇಕು…. ನಡೆವಾಗ ಬೇಡ…… ಭಾರತೀಯರು ಮರೆಯಬಾರದ ಚಿತ್ರಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...