Homeಕರೋನಾ ತಲ್ಲಣಬೆಡ್‌ಗಾಗಿ ಸೋಂಕಿತರ ಪರದಾಟ: ಬೆಂಗಳೂರಿನ 10,100 ಬೆಡ್‌ಗಳ ದೇಶದ ಅತಿದೊಡ್ಡ ಕೋವಿಡ್ ಕೇರ್ ಸೆಂಟರ್ ಏನಾಯಿತು?

ಬೆಡ್‌ಗಾಗಿ ಸೋಂಕಿತರ ಪರದಾಟ: ಬೆಂಗಳೂರಿನ 10,100 ಬೆಡ್‌ಗಳ ದೇಶದ ಅತಿದೊಡ್ಡ ಕೋವಿಡ್ ಕೇರ್ ಸೆಂಟರ್ ಏನಾಯಿತು?

- Advertisement -
- Advertisement -

ಕೋವಿಡ್ ಎರಡನೇ ಅಲೆಗೆ ಇಡೀ ದೇಶವೇ ತತ್ತರಿಸಿದೆ. ಎಲ್ಲೆಡೆ ಬೆಡ್‌ಗಾಗಿ, ಆಕ್ಸಿಜನ್‌ ಮತ್ತು ಔಷಧಿಗಾಗಿ ಆಹಾಕಾರ ಎದ್ದಿದೆ. ಕರ್ನಾಟಕದಲ್ಲಿಯೂ ಪರಿಸ್ಥಿತಿ ಮಿತಿ ಮೀರಿದ್ದು ಬೆಡ್‌ ಸಿಗದೇ ರಸ್ತೆಯಲ್ಲಿ, ಬೀದಿಬದಿಯಲ್ಲಿ ರೋಗಿಗಳು ಪರದಾಡುತ್ತಿರುವ ದೃಶ್ಯಗಳು ದಿನನಿತ್ಯ ವರದಿಯಾಗುತ್ತಿವೆ. ಕರ್ನಾಟಕಕ್ಕೆ ಇಂತಹ ಪರಿಸ್ಥಿತಿ ಏಕೆ ಬಂತು? ಕಳೆದ ಕೊರೊನಾ ಸೋಂಕು ಗೋಚರಿಸಿ 15 ತಿಂಗಳಾದರೂ ವೈದ್ಯಕೀಯ ಕ್ಷೇತ್ರವನ್ನು ಸಜ್ಜುಗೊಳಿಸಲು ರಾಜ್ಯ ಸರ್ಕಾರ ವಿಫಲವಾಗಿದ್ದೇಕೆ ಎಂಬ ಪ್ರಶ್ನೆಗೆ ಬಿ.ಎಸ್ ಯಡಿಯೂರಪ್ಪನವರು ಉತ್ತರಿಸುವರೆ?

ಇನ್ನು ಕಳೆದ ವರ್ಷ ಕೋವಿಡ್ ಪ್ರಕರಣಗಳು ತೀವ್ರಗತಿಯಲ್ಲಿ ಏರಿಕೆಯಾಗುತ್ತಿದ್ದಾಗ ಚಿಕಿತ್ಸೆ ಮತ್ತು ರೋಗಿಗಳ ಐಸೋಲೇಶನ್‌ಗಾಗಿ 10,100 ಹಾಸಿಗೆಗಳನ್ನು ಹೊಂದಿರುವ ದೇಶದ ಅತಿದೊಡ್ಡ ಕೋವಿಡ್ ಕೇರ್ ಸೆಂಟರ್ ಅನ್ನು ತುಮಕೂರು ರಸ್ತೆಯ ಬೆಂಗಳೂರು ಅಂತರರಾಷ್ಟ್ರೀಯ ಪ್ರದರ್ಶನ ಕೇಂದ್ರದಲ್ಲಿ (ಬಿಐಇಸಿ) ತೆರೆದಿತ್ತು. ಇದಕ್ಕಾಗಿ ರಾಜ್ಯ ಸರ್ಕಾರ ಕೋಟ್ಯಂತರ ರೂ ಖರ್ಚು ಮಾಡಿ ಭಾರೀ ಪ್ರಚಾರ ಗಿಟ್ಟಿಸಿತ್ತು.

ಆ ಸಂದರ್ಭದಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ಮಾತನಾಡಿ “ಈ ಸಾಂಕ್ರಾಮಿಕ ರೋಗವು ಇನ್ನೂ ಕೆಲವು ತಿಂಗಳುಗಳ ಕಾಲ ಉಳಿಯುತ್ತದೆ, ಮತ್ತು ಅದನ್ನು ನಿಭಾಯಿಸಲು ರಾಜ್ಯ ಸರ್ಕಾರ ಸಜ್ಜಾಗಿದೆ. ಅದರ ಭಾಗವಾಗಿ ದೇಶದ ಅತಿದೊಡ್ಡ ಕೋವಿಡ್ ಕೇರ್ ಸೆಂಟರ್ ಅನ್ನು ಸ್ಥಾಪಿಸುತ್ತಿದ್ದೇವೆ ಎಂದಿದ್ದರು. ಐಸಿಯು ರೋಗಿಗಳಿಗೆ 100 ಸೇರಿದಂತೆ 10,100 ಹಾಸಿಗೆಗಳೊಂದಿಗೆ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಹೊಂದಿರುವ ಕೇಂದ್ರ ಇದಾಗಿದ್ದು ಹಿರಿಯ ಐಎಎಸ್ ಅಧಿಕಾರಿಗಳ ತಂಡವು ಇದನ್ನು ಸ್ಥಾಪಿಸಿದೆ” ಎಂದಿದ್ದರು.

ವೈದ್ಯರು ಮತ್ತು ಪೊಲೀಸರು ಸೇರಿದಂತೆ 2,200 ಕ್ಕೂ ಹೆಚ್ಚು ಸಿಬ್ಬಂದಿಗಳನ್ನು ಇಲ್ಲಿ ನಿಯೋಜಿಸಲಾಗುವುದು. ಪ್ರತಿ 100 ರೋಗಿಗಳಿಗೆ ಒಬ್ಬ ವೈದ್ಯರು, ಇಬ್ಬರು ದಾದಿಯರು, ಇಬ್ಬರು ಶುಚಿಗೊಳಿಸುವ ಸಿಬ್ಬಂದಿ ಮತ್ತು ಮಾರ್ಷಲ್‌ಗಳು ಇರುತ್ತಾರೆ. ಕಸವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡುವ ವ್ಯವಸ್ಥೆ, ಮತ್ತು ಲಾಂಡ್ರಿಗಾಗಿ ಮೀಸಲಾದ ತಂಡ, ಬೆಡ್‌ಶೀಟ್‌ಗಳು, ಕಂಬಳಿಗಳು ಮತ್ತು ಮೆತ್ತೆ ಕವರ್‌ಗಳನ್ನು ತೊಳೆಯಲು ವ್ಯವಸ್ಥೆ ಇದೆ. ಕಡಿಮೆ ರೋಗಲಕ್ಷಣದ ರೋಗಿಗಳನ್ನು ಇಲ್ಲಿ ಇರಿಸಲಾಗುವುದು, ಹಾಸಿಗೆಯ ವ್ಯವಸ್ಥೆಗಾಗಿ ಕೇಂದ್ರೀಕೃತ ವ್ಯವಸ್ಥೆಯನ್ನು ಹೊಂದಿರುತ್ತದೆ. ಐಸಿಯು, ಇಸಿಜಿ ಮತ್ತು ಆಮ್ಲಜನಕ ಬೆಂಬಲ ಸೌಲಭ್ಯಗಳೂ ಇವೆ, ಮತ್ತು ಹತ್ತಿರದ ಆಸ್ಪತ್ರೆಯಲ್ಲಿ ಸ್ಥಾಪಿಸಲಾದ ನಿಯಂತ್ರಣ ಕೊಠಡಿಯು ಈ ಸೆಂಟರ್‌ಅನ್ನು 24×7 ಮೇಲ್ವಿಚಾರಣೆ ಮಾಡುತ್ತದೆ. “ಕೇಂದ್ರ ತಂಡವು ಈ ಸೆಂಟರ್‌ಗೆ ಭೇಟಿ ನೀಡಿ, ವ್ಯವಸ್ಥೆಗಳನ್ನು ಶ್ಲಾಘಿಸಿದೆ. ಕೊರೊನಾ ಮಾರ್ಗಸೂಚಿಗಳನ್ನು ಅನ್ಲಾಕ್ ಮಾಡಿದ ನಂತರ ಪ್ರಕರಣಗಳು ಏರಿಕೆಯಾದಲ್ಲಿ ಅವರನ್ನು ಇಲ್ಲಿ ದಾಖಲಿಸಲಾಗುತ್ತಿದೆ. ನಾವು ಸಜ್ಜುಗೊಂಡಿದ್ದೇವೆ’’ ಎಂದು ಯಡಿಯೂರಪ್ಪ ದೃಢವಾಗಿ ಹೇಳಿದ್ದರು.

ಇದಕ್ಕೆ ಮಾಧ್ಯಮಗಳು ಸಾಕಷ್ಟು ಮಹತ್ವ ಕೊಟ್ಟು ವರದಿ ಮಾಡಿದ್ದವು. ಇದು ಸಾರ್ವಜನಿಕರಲ್ಲಿ ಭರವಸೆ ಮೂಡಿಸಿತ್ತು. ನಿಜಕ್ಕೂ ಅಂತಹ ವ್ಯವಸ್ಥೆ ಅಂದಿಗಿಂತ ಇಂದು ತುರ್ತು ಅಗತ್ಯವಿದೆ. ಆದರೆ ನೀವೀಗ ತುಮಕೂರು ರಸ್ತೆಯ ಬೆಂಗಳೂರು ಅಂತರರಾಷ್ಟ್ರೀಯ ಪ್ರದರ್ಶನ ಕೇಂದ್ರಕ್ಕೆ ಹೋಗಿ ನೋಡಿದರೆ ಈ ದೇಶದ ಅತಿದೊಡ್ಡ ಕೋವಿಡ್ ಕೇರ್ ಸೆಂಟರ್ ಮಾಯವಾಗಿರುವುದು ನಿಮ್ಮ ಗಮನಕ್ಕೆ ಬರುತ್ತದೆ. ಕಳೆದ ವರ್ಷ ಜುಲೈ 27ರಂದು ಉದ್ಘಾಟನೆಯಾದ ಈ ಕೇಂದ್ರ ಈಗ ಉಪಯೋಗಕ್ಕೆ ಸಿಗುತ್ತಿಲ್ಲ ಏಕೆ?

ಏಕೆಂದರೆ ಉದ್ಘಾಟನೆಯಾದ ಒಂದೂವರೆ ತಿಂಗಳಿನಲ್ಲಿಯೇ ಸರ್ಕಾರ ಈ ಸೆಂಟರ್ ಅನ್ನು ಮುಚ್ಚಿಬಿಟ್ಟಿದೆ. ಅದಕ್ಕೆ ಕಾರಣ ಹೆಚ್ಚಿನ ಸೋಂಕಿತರು ದಾಖಲಾಗುತ್ತಿಲ್ಲವೆಂಬುದಾಗಿದೆ! ಸೆಪ್ಟಂಬರ್ 05 ರಂದು ಈ ಕುರಿತು ತೀರ್ಮಾನ ತೆಗೆದುಕೊಂಡ ಬಿಬಿಎಂಪಿ ಸೆಪ್ಟಂಬರ್ 15ಕ್ಕೆ ಇದಕ್ಕೆ ಎಳ್ಳುನೀರು ಬಿಟ್ಟಿದೆ. ಇದು ಕಾರ್ಯ ನಿರ್ವಹಿಸುತ್ತಿದ್ದಾಗಲೂ ಅಗತ್ಯ ಮೂಲಸೌರ್ಕರ್ಯಗಳಿಲ್ಲ, ಸಾಮಾಗ್ರಿ ಖರೀದಿಯಲ್ಲಿ ಕೋಟ್ಯಂತರ ರೂ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪಗಳು ಕೇಳಿಬಂದಿದ್ದವು..

ಇದನ್ನೂ ಓದಿ: ಒಂದೂವರೆ ತಿಂಗಳಷ್ಟೇ ಬಳಕೆ: ಬೆಂಗಳೂರಿನ ಅತಿ ದೊಡ್ಡ ಕೋವಿಡ್ ಕೇರ್ ಸೆಂಟರ್ ಮುಚ್ಚಲು ನಿರ್ಧಾರ!

ಅದೇನೇ ಇರಲಿ ಇಂದು ಆ ಕೋವಿಡ್ ಕೇರ್ ಇದ್ದಿದ್ದೇ ಆದಲ್ಲಿ ಜನ ಇಷ್ಟು ಪ್ರಮಾಣದಲ್ಲಿ ಬೆಡ್ ಇಲ್ಲದೆ ಬೀದಿಯಲ್ಲಿ ಸಾಯುವು ನರಳುವ ಪರಿಸ್ಥಿತಿ ಬರುತ್ತಿತ್ತೇ? ಜನ ಬಾರದಿದ್ದರೂ ಪರವಾಗಿಲ್ಲ ಮುಂದೆ ಬೇಕಾಗುತ್ತದೆ ಎಂಬ ಮುನ್ನೋಟದೊಂದಿಗೆ ಅದನ್ನು ಉಳಿಸಿಕೊಂಡಿದ್ದರೆ ಇಂದು ರಾಜ್ಯದಲ್ಲಿ ಭೀಕರ ಪರಿಸ್ಥಿತಿ ಬರುತ್ತಿರಲಿಲ್ಲ ಅಲ್ಲವೇ?

ಅಂದು ಪ್ರಕರಣಗಳು ಹೆಚ್ಚಾಗುತ್ತವೆ, ನಾವು ಸಜ್ಜಾಗಿದ್ದೇವೆ ಎಂದು ವೀರಾವೇಶದಿಂದ ಮಾತನಾಡಿದ್ದ ಯಡಿಯೂರಪ್ಪನವರು ಈಗ ಏನು ಮಾಡುತ್ತಿದ್ದಾರೆ? ಆರೋಗ್ಯ ಇಲಾಖೆಯ ಅಂಕಿ ಅಂಶಗಳ ಪ್ರಚಾರ ಕರ್ನಾಟಕದಲ್ಲಿ ಏಪ್ರಿಲ್ 21 ರಂದು ಒಟ್ಟು 116 ಸಾವುಗಳು ಸಂಭವಿಸಿ, 23,558 ಹೊಸ ಪ್ರಕರಣಗಳು ವರದಿಯಾಗಿವೆ. ಅದರಲ್ಲಿ ಬೆಂಗಳೂರು ಒಂದರಲ್ಲೆ ಇದುವರೆಗೂ 24,600 ಸಕ್ರಿಯ ಪ್ರಕರಣಗಳಿವೆ. ಇಂದು ಆ ಸೆಂಟರ್ ಇದ್ದಲ್ಲಿ ಎಷ್ಟು ಜನ ಅದರ ಪ್ರಯೋಜನ ಪಡೆಯಬಹುದಿತ್ತಲ್ಲವೇ?

ಇದೇ ಸಂದರ್ಭದಲ್ಲಿ ಗಮನಿಸಬೇಕಾದ ಇನ್ನೊಂದು ಸಂಗತಿಯಿದೆ. ದೆಹಲಿಯಲ್ಲೂ ಸರ್ದಾರ್ ಪಟೇಲ್ ಕೋವಿಡ್ ಕೇರ್ ಸೆಂಟರ್ ಮತ್ತು ಆಸ್ಪತ್ರೆಯನ್ನು ನಿರ್ಮಿಸಲಾಗಿತ್ತು. ಅದಿನ್ನೂ ಉಳಿದುಕೊಂಡಿದ್ದು, ಅದಕ್ಕೆ ಈಗ ಪುನರ್ ಚಾಲನೆ ಕೊಡಲು ಉದ್ದೇಶಿಸಲಾಗಿದೆ. ಆದರೆ ಕರ್ನಾಟಕದಲ್ಲಿ ಪುನರ್ ಚಾಲನೆ ಕೊಡುವ ಪರಿಸ್ಥಿತಿಯಿಲ್ಲ. ಕನಿಷ್ಠ, ಅಲ್ಲಿ ಕೂಡಲೇ ಪುನರ್ ನಿರ್ಮಾಣಕ್ಕೆ ಮುಂದಾಗಿ ಒಂದು ವಾರದ ಒಳಗಾದರೂ ಆಕ್ಸಿಜನ್ ಸರಬರಾಜು ಇರುವ ಹಾಸಿಗೆಗಳಾಗಿ ಅದನ್ನು ಕಟ್ಟಲು ಈ ಸರ್ಕಾರವು ಮುಂದಾಗುತ್ತದೆಯೇ ಎಂಬುದು ಈಗಿನ ಪ್ರಶ್ನೆಯಾಗಿದೆ.

ಈ ಸಂಬಂಧ ಸರ್ಕಾರದ ಉತ್ತರ ಪಡೆಯಲು ಸಚಿವ ಸುಧಾಕರ್ ಅವರಿಗೆ ನಾನುಗೌರಿ.ಕಾಂ ಪ್ರಯತ್ನಿಸುತ್ತಿದ್ದು, ಅವರು ಇದುವರೆಗೂ ಸಿಕ್ಕಿಲ್ಲ. ಅವರು ಪ್ರತಿಕ್ರಿಯಿಸಿದರೆ ಇಲ್ಲಿ ಅದನ್ನು ಅಪ್ʼಡೇಟ್ ಮಾಡಲಾಗುವುದು.


ಇದನ್ನೂ ಓದಿ: ಆಡಳಿತದಲ್ಲಿ ರಾಜ್ಯಪಾಲರ ಹಸ್ತಕ್ಷೇಪ: ಸಾಂವಿಧಾನಿಕ ಉಲ್ಲಂಘನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಈಗಲೂ ಕರ್ನಾಟಕದಲ್ಲಿ ಮಾಸ್ಕ್ ಹಾಕುವವರು ತೀರಾ ಕಡಿಮೆ. ಪೇಟೆಯಲ್ಲಿ ಪೊಲೀಸರಿಗೆ ಹೆದರಿ ಮಾಸ್ಕ್ ಧರಿಸಿದಂತೆ ತೋರುತ್ತದೆ. ವೈದ್ಯಕೀಯ ಪರಿಶೋಧನೆಯ ಸಂಖ್ಯೆಯೂ ಏನೇನೂ ಸಾಲದು.
    ಕೇರಳದಲ್ಲಿ ಮಾಡಿದಂತೆ ಪ್ರತಿಯೊಬ್ಬರನ್ನೂ ಟೆಸ್ಟ್ ಮಾಡಲಿ. ಆರೋಗ್ಯ ಇಲಾಖೆಗೆ ದಿನಕ್ಕೆ ಇಂತಿಷ್ಟು ಲಕ್ಷ ಜನರನ್ನು ಎಂದು ಟಾರ್ಗೆಟ್ ಕೊಟ್ಟು ಟೆಸ್ಟ್ ಮಾಡಲು ಕ್ರಮ ಕೈಗೊಳ್ಳಲಿ. ಆವಾಗ ಗೊತ್ತಾಗುವುದು ಕರ್ನಾಟಕದಲ್ಲಿಯ ಕೊರೋನಾ ವಿಜೃಂಭಣೆ. ಜನರನ್ನು ರಕ್ಷಿಸುವಲ್ಲಿ ಸರಕಾರ ಜವಾಬ್ದಾರಿ ತೆಗೆದುಕೊಳ್ಳಲಿ…. ಹೀಗೆ ರಾಜ್ಯಗಳೆಲ್ಲವೂ ಒಂದಾಗಿ ಶ್ರಮಿಸಲಿ. ಭಾರತ ರಕ್ಷೆಪಡುವುದು.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...