Homeಕರೋನಾ ತಲ್ಲಣಬೆಡ್‌ಗಾಗಿ ಸೋಂಕಿತರ ಪರದಾಟ: ಬೆಂಗಳೂರಿನ 10,100 ಬೆಡ್‌ಗಳ ದೇಶದ ಅತಿದೊಡ್ಡ ಕೋವಿಡ್ ಕೇರ್ ಸೆಂಟರ್ ಏನಾಯಿತು?

ಬೆಡ್‌ಗಾಗಿ ಸೋಂಕಿತರ ಪರದಾಟ: ಬೆಂಗಳೂರಿನ 10,100 ಬೆಡ್‌ಗಳ ದೇಶದ ಅತಿದೊಡ್ಡ ಕೋವಿಡ್ ಕೇರ್ ಸೆಂಟರ್ ಏನಾಯಿತು?

- Advertisement -
- Advertisement -

ಕೋವಿಡ್ ಎರಡನೇ ಅಲೆಗೆ ಇಡೀ ದೇಶವೇ ತತ್ತರಿಸಿದೆ. ಎಲ್ಲೆಡೆ ಬೆಡ್‌ಗಾಗಿ, ಆಕ್ಸಿಜನ್‌ ಮತ್ತು ಔಷಧಿಗಾಗಿ ಆಹಾಕಾರ ಎದ್ದಿದೆ. ಕರ್ನಾಟಕದಲ್ಲಿಯೂ ಪರಿಸ್ಥಿತಿ ಮಿತಿ ಮೀರಿದ್ದು ಬೆಡ್‌ ಸಿಗದೇ ರಸ್ತೆಯಲ್ಲಿ, ಬೀದಿಬದಿಯಲ್ಲಿ ರೋಗಿಗಳು ಪರದಾಡುತ್ತಿರುವ ದೃಶ್ಯಗಳು ದಿನನಿತ್ಯ ವರದಿಯಾಗುತ್ತಿವೆ. ಕರ್ನಾಟಕಕ್ಕೆ ಇಂತಹ ಪರಿಸ್ಥಿತಿ ಏಕೆ ಬಂತು? ಕಳೆದ ಕೊರೊನಾ ಸೋಂಕು ಗೋಚರಿಸಿ 15 ತಿಂಗಳಾದರೂ ವೈದ್ಯಕೀಯ ಕ್ಷೇತ್ರವನ್ನು ಸಜ್ಜುಗೊಳಿಸಲು ರಾಜ್ಯ ಸರ್ಕಾರ ವಿಫಲವಾಗಿದ್ದೇಕೆ ಎಂಬ ಪ್ರಶ್ನೆಗೆ ಬಿ.ಎಸ್ ಯಡಿಯೂರಪ್ಪನವರು ಉತ್ತರಿಸುವರೆ?

ಇನ್ನು ಕಳೆದ ವರ್ಷ ಕೋವಿಡ್ ಪ್ರಕರಣಗಳು ತೀವ್ರಗತಿಯಲ್ಲಿ ಏರಿಕೆಯಾಗುತ್ತಿದ್ದಾಗ ಚಿಕಿತ್ಸೆ ಮತ್ತು ರೋಗಿಗಳ ಐಸೋಲೇಶನ್‌ಗಾಗಿ 10,100 ಹಾಸಿಗೆಗಳನ್ನು ಹೊಂದಿರುವ ದೇಶದ ಅತಿದೊಡ್ಡ ಕೋವಿಡ್ ಕೇರ್ ಸೆಂಟರ್ ಅನ್ನು ತುಮಕೂರು ರಸ್ತೆಯ ಬೆಂಗಳೂರು ಅಂತರರಾಷ್ಟ್ರೀಯ ಪ್ರದರ್ಶನ ಕೇಂದ್ರದಲ್ಲಿ (ಬಿಐಇಸಿ) ತೆರೆದಿತ್ತು. ಇದಕ್ಕಾಗಿ ರಾಜ್ಯ ಸರ್ಕಾರ ಕೋಟ್ಯಂತರ ರೂ ಖರ್ಚು ಮಾಡಿ ಭಾರೀ ಪ್ರಚಾರ ಗಿಟ್ಟಿಸಿತ್ತು.

ಆ ಸಂದರ್ಭದಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ಮಾತನಾಡಿ “ಈ ಸಾಂಕ್ರಾಮಿಕ ರೋಗವು ಇನ್ನೂ ಕೆಲವು ತಿಂಗಳುಗಳ ಕಾಲ ಉಳಿಯುತ್ತದೆ, ಮತ್ತು ಅದನ್ನು ನಿಭಾಯಿಸಲು ರಾಜ್ಯ ಸರ್ಕಾರ ಸಜ್ಜಾಗಿದೆ. ಅದರ ಭಾಗವಾಗಿ ದೇಶದ ಅತಿದೊಡ್ಡ ಕೋವಿಡ್ ಕೇರ್ ಸೆಂಟರ್ ಅನ್ನು ಸ್ಥಾಪಿಸುತ್ತಿದ್ದೇವೆ ಎಂದಿದ್ದರು. ಐಸಿಯು ರೋಗಿಗಳಿಗೆ 100 ಸೇರಿದಂತೆ 10,100 ಹಾಸಿಗೆಗಳೊಂದಿಗೆ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಹೊಂದಿರುವ ಕೇಂದ್ರ ಇದಾಗಿದ್ದು ಹಿರಿಯ ಐಎಎಸ್ ಅಧಿಕಾರಿಗಳ ತಂಡವು ಇದನ್ನು ಸ್ಥಾಪಿಸಿದೆ” ಎಂದಿದ್ದರು.

ವೈದ್ಯರು ಮತ್ತು ಪೊಲೀಸರು ಸೇರಿದಂತೆ 2,200 ಕ್ಕೂ ಹೆಚ್ಚು ಸಿಬ್ಬಂದಿಗಳನ್ನು ಇಲ್ಲಿ ನಿಯೋಜಿಸಲಾಗುವುದು. ಪ್ರತಿ 100 ರೋಗಿಗಳಿಗೆ ಒಬ್ಬ ವೈದ್ಯರು, ಇಬ್ಬರು ದಾದಿಯರು, ಇಬ್ಬರು ಶುಚಿಗೊಳಿಸುವ ಸಿಬ್ಬಂದಿ ಮತ್ತು ಮಾರ್ಷಲ್‌ಗಳು ಇರುತ್ತಾರೆ. ಕಸವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡುವ ವ್ಯವಸ್ಥೆ, ಮತ್ತು ಲಾಂಡ್ರಿಗಾಗಿ ಮೀಸಲಾದ ತಂಡ, ಬೆಡ್‌ಶೀಟ್‌ಗಳು, ಕಂಬಳಿಗಳು ಮತ್ತು ಮೆತ್ತೆ ಕವರ್‌ಗಳನ್ನು ತೊಳೆಯಲು ವ್ಯವಸ್ಥೆ ಇದೆ. ಕಡಿಮೆ ರೋಗಲಕ್ಷಣದ ರೋಗಿಗಳನ್ನು ಇಲ್ಲಿ ಇರಿಸಲಾಗುವುದು, ಹಾಸಿಗೆಯ ವ್ಯವಸ್ಥೆಗಾಗಿ ಕೇಂದ್ರೀಕೃತ ವ್ಯವಸ್ಥೆಯನ್ನು ಹೊಂದಿರುತ್ತದೆ. ಐಸಿಯು, ಇಸಿಜಿ ಮತ್ತು ಆಮ್ಲಜನಕ ಬೆಂಬಲ ಸೌಲಭ್ಯಗಳೂ ಇವೆ, ಮತ್ತು ಹತ್ತಿರದ ಆಸ್ಪತ್ರೆಯಲ್ಲಿ ಸ್ಥಾಪಿಸಲಾದ ನಿಯಂತ್ರಣ ಕೊಠಡಿಯು ಈ ಸೆಂಟರ್‌ಅನ್ನು 24×7 ಮೇಲ್ವಿಚಾರಣೆ ಮಾಡುತ್ತದೆ. “ಕೇಂದ್ರ ತಂಡವು ಈ ಸೆಂಟರ್‌ಗೆ ಭೇಟಿ ನೀಡಿ, ವ್ಯವಸ್ಥೆಗಳನ್ನು ಶ್ಲಾಘಿಸಿದೆ. ಕೊರೊನಾ ಮಾರ್ಗಸೂಚಿಗಳನ್ನು ಅನ್ಲಾಕ್ ಮಾಡಿದ ನಂತರ ಪ್ರಕರಣಗಳು ಏರಿಕೆಯಾದಲ್ಲಿ ಅವರನ್ನು ಇಲ್ಲಿ ದಾಖಲಿಸಲಾಗುತ್ತಿದೆ. ನಾವು ಸಜ್ಜುಗೊಂಡಿದ್ದೇವೆ’’ ಎಂದು ಯಡಿಯೂರಪ್ಪ ದೃಢವಾಗಿ ಹೇಳಿದ್ದರು.

ಇದಕ್ಕೆ ಮಾಧ್ಯಮಗಳು ಸಾಕಷ್ಟು ಮಹತ್ವ ಕೊಟ್ಟು ವರದಿ ಮಾಡಿದ್ದವು. ಇದು ಸಾರ್ವಜನಿಕರಲ್ಲಿ ಭರವಸೆ ಮೂಡಿಸಿತ್ತು. ನಿಜಕ್ಕೂ ಅಂತಹ ವ್ಯವಸ್ಥೆ ಅಂದಿಗಿಂತ ಇಂದು ತುರ್ತು ಅಗತ್ಯವಿದೆ. ಆದರೆ ನೀವೀಗ ತುಮಕೂರು ರಸ್ತೆಯ ಬೆಂಗಳೂರು ಅಂತರರಾಷ್ಟ್ರೀಯ ಪ್ರದರ್ಶನ ಕೇಂದ್ರಕ್ಕೆ ಹೋಗಿ ನೋಡಿದರೆ ಈ ದೇಶದ ಅತಿದೊಡ್ಡ ಕೋವಿಡ್ ಕೇರ್ ಸೆಂಟರ್ ಮಾಯವಾಗಿರುವುದು ನಿಮ್ಮ ಗಮನಕ್ಕೆ ಬರುತ್ತದೆ. ಕಳೆದ ವರ್ಷ ಜುಲೈ 27ರಂದು ಉದ್ಘಾಟನೆಯಾದ ಈ ಕೇಂದ್ರ ಈಗ ಉಪಯೋಗಕ್ಕೆ ಸಿಗುತ್ತಿಲ್ಲ ಏಕೆ?

ಏಕೆಂದರೆ ಉದ್ಘಾಟನೆಯಾದ ಒಂದೂವರೆ ತಿಂಗಳಿನಲ್ಲಿಯೇ ಸರ್ಕಾರ ಈ ಸೆಂಟರ್ ಅನ್ನು ಮುಚ್ಚಿಬಿಟ್ಟಿದೆ. ಅದಕ್ಕೆ ಕಾರಣ ಹೆಚ್ಚಿನ ಸೋಂಕಿತರು ದಾಖಲಾಗುತ್ತಿಲ್ಲವೆಂಬುದಾಗಿದೆ! ಸೆಪ್ಟಂಬರ್ 05 ರಂದು ಈ ಕುರಿತು ತೀರ್ಮಾನ ತೆಗೆದುಕೊಂಡ ಬಿಬಿಎಂಪಿ ಸೆಪ್ಟಂಬರ್ 15ಕ್ಕೆ ಇದಕ್ಕೆ ಎಳ್ಳುನೀರು ಬಿಟ್ಟಿದೆ. ಇದು ಕಾರ್ಯ ನಿರ್ವಹಿಸುತ್ತಿದ್ದಾಗಲೂ ಅಗತ್ಯ ಮೂಲಸೌರ್ಕರ್ಯಗಳಿಲ್ಲ, ಸಾಮಾಗ್ರಿ ಖರೀದಿಯಲ್ಲಿ ಕೋಟ್ಯಂತರ ರೂ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪಗಳು ಕೇಳಿಬಂದಿದ್ದವು..

ಇದನ್ನೂ ಓದಿ: ಒಂದೂವರೆ ತಿಂಗಳಷ್ಟೇ ಬಳಕೆ: ಬೆಂಗಳೂರಿನ ಅತಿ ದೊಡ್ಡ ಕೋವಿಡ್ ಕೇರ್ ಸೆಂಟರ್ ಮುಚ್ಚಲು ನಿರ್ಧಾರ!

ಅದೇನೇ ಇರಲಿ ಇಂದು ಆ ಕೋವಿಡ್ ಕೇರ್ ಇದ್ದಿದ್ದೇ ಆದಲ್ಲಿ ಜನ ಇಷ್ಟು ಪ್ರಮಾಣದಲ್ಲಿ ಬೆಡ್ ಇಲ್ಲದೆ ಬೀದಿಯಲ್ಲಿ ಸಾಯುವು ನರಳುವ ಪರಿಸ್ಥಿತಿ ಬರುತ್ತಿತ್ತೇ? ಜನ ಬಾರದಿದ್ದರೂ ಪರವಾಗಿಲ್ಲ ಮುಂದೆ ಬೇಕಾಗುತ್ತದೆ ಎಂಬ ಮುನ್ನೋಟದೊಂದಿಗೆ ಅದನ್ನು ಉಳಿಸಿಕೊಂಡಿದ್ದರೆ ಇಂದು ರಾಜ್ಯದಲ್ಲಿ ಭೀಕರ ಪರಿಸ್ಥಿತಿ ಬರುತ್ತಿರಲಿಲ್ಲ ಅಲ್ಲವೇ?

ಅಂದು ಪ್ರಕರಣಗಳು ಹೆಚ್ಚಾಗುತ್ತವೆ, ನಾವು ಸಜ್ಜಾಗಿದ್ದೇವೆ ಎಂದು ವೀರಾವೇಶದಿಂದ ಮಾತನಾಡಿದ್ದ ಯಡಿಯೂರಪ್ಪನವರು ಈಗ ಏನು ಮಾಡುತ್ತಿದ್ದಾರೆ? ಆರೋಗ್ಯ ಇಲಾಖೆಯ ಅಂಕಿ ಅಂಶಗಳ ಪ್ರಚಾರ ಕರ್ನಾಟಕದಲ್ಲಿ ಏಪ್ರಿಲ್ 21 ರಂದು ಒಟ್ಟು 116 ಸಾವುಗಳು ಸಂಭವಿಸಿ, 23,558 ಹೊಸ ಪ್ರಕರಣಗಳು ವರದಿಯಾಗಿವೆ. ಅದರಲ್ಲಿ ಬೆಂಗಳೂರು ಒಂದರಲ್ಲೆ ಇದುವರೆಗೂ 24,600 ಸಕ್ರಿಯ ಪ್ರಕರಣಗಳಿವೆ. ಇಂದು ಆ ಸೆಂಟರ್ ಇದ್ದಲ್ಲಿ ಎಷ್ಟು ಜನ ಅದರ ಪ್ರಯೋಜನ ಪಡೆಯಬಹುದಿತ್ತಲ್ಲವೇ?

ಇದೇ ಸಂದರ್ಭದಲ್ಲಿ ಗಮನಿಸಬೇಕಾದ ಇನ್ನೊಂದು ಸಂಗತಿಯಿದೆ. ದೆಹಲಿಯಲ್ಲೂ ಸರ್ದಾರ್ ಪಟೇಲ್ ಕೋವಿಡ್ ಕೇರ್ ಸೆಂಟರ್ ಮತ್ತು ಆಸ್ಪತ್ರೆಯನ್ನು ನಿರ್ಮಿಸಲಾಗಿತ್ತು. ಅದಿನ್ನೂ ಉಳಿದುಕೊಂಡಿದ್ದು, ಅದಕ್ಕೆ ಈಗ ಪುನರ್ ಚಾಲನೆ ಕೊಡಲು ಉದ್ದೇಶಿಸಲಾಗಿದೆ. ಆದರೆ ಕರ್ನಾಟಕದಲ್ಲಿ ಪುನರ್ ಚಾಲನೆ ಕೊಡುವ ಪರಿಸ್ಥಿತಿಯಿಲ್ಲ. ಕನಿಷ್ಠ, ಅಲ್ಲಿ ಕೂಡಲೇ ಪುನರ್ ನಿರ್ಮಾಣಕ್ಕೆ ಮುಂದಾಗಿ ಒಂದು ವಾರದ ಒಳಗಾದರೂ ಆಕ್ಸಿಜನ್ ಸರಬರಾಜು ಇರುವ ಹಾಸಿಗೆಗಳಾಗಿ ಅದನ್ನು ಕಟ್ಟಲು ಈ ಸರ್ಕಾರವು ಮುಂದಾಗುತ್ತದೆಯೇ ಎಂಬುದು ಈಗಿನ ಪ್ರಶ್ನೆಯಾಗಿದೆ.

ಈ ಸಂಬಂಧ ಸರ್ಕಾರದ ಉತ್ತರ ಪಡೆಯಲು ಸಚಿವ ಸುಧಾಕರ್ ಅವರಿಗೆ ನಾನುಗೌರಿ.ಕಾಂ ಪ್ರಯತ್ನಿಸುತ್ತಿದ್ದು, ಅವರು ಇದುವರೆಗೂ ಸಿಕ್ಕಿಲ್ಲ. ಅವರು ಪ್ರತಿಕ್ರಿಯಿಸಿದರೆ ಇಲ್ಲಿ ಅದನ್ನು ಅಪ್ʼಡೇಟ್ ಮಾಡಲಾಗುವುದು.


ಇದನ್ನೂ ಓದಿ: ಆಡಳಿತದಲ್ಲಿ ರಾಜ್ಯಪಾಲರ ಹಸ್ತಕ್ಷೇಪ: ಸಾಂವಿಧಾನಿಕ ಉಲ್ಲಂಘನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಈಗಲೂ ಕರ್ನಾಟಕದಲ್ಲಿ ಮಾಸ್ಕ್ ಹಾಕುವವರು ತೀರಾ ಕಡಿಮೆ. ಪೇಟೆಯಲ್ಲಿ ಪೊಲೀಸರಿಗೆ ಹೆದರಿ ಮಾಸ್ಕ್ ಧರಿಸಿದಂತೆ ತೋರುತ್ತದೆ. ವೈದ್ಯಕೀಯ ಪರಿಶೋಧನೆಯ ಸಂಖ್ಯೆಯೂ ಏನೇನೂ ಸಾಲದು.
    ಕೇರಳದಲ್ಲಿ ಮಾಡಿದಂತೆ ಪ್ರತಿಯೊಬ್ಬರನ್ನೂ ಟೆಸ್ಟ್ ಮಾಡಲಿ. ಆರೋಗ್ಯ ಇಲಾಖೆಗೆ ದಿನಕ್ಕೆ ಇಂತಿಷ್ಟು ಲಕ್ಷ ಜನರನ್ನು ಎಂದು ಟಾರ್ಗೆಟ್ ಕೊಟ್ಟು ಟೆಸ್ಟ್ ಮಾಡಲು ಕ್ರಮ ಕೈಗೊಳ್ಳಲಿ. ಆವಾಗ ಗೊತ್ತಾಗುವುದು ಕರ್ನಾಟಕದಲ್ಲಿಯ ಕೊರೋನಾ ವಿಜೃಂಭಣೆ. ಜನರನ್ನು ರಕ್ಷಿಸುವಲ್ಲಿ ಸರಕಾರ ಜವಾಬ್ದಾರಿ ತೆಗೆದುಕೊಳ್ಳಲಿ…. ಹೀಗೆ ರಾಜ್ಯಗಳೆಲ್ಲವೂ ಒಂದಾಗಿ ಶ್ರಮಿಸಲಿ. ಭಾರತ ರಕ್ಷೆಪಡುವುದು.

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...