Homeಕರೋನಾ ತಲ್ಲಣಬೆಡ್‌ಗಾಗಿ ಸೋಂಕಿತರ ಪರದಾಟ: ಬೆಂಗಳೂರಿನ 10,100 ಬೆಡ್‌ಗಳ ದೇಶದ ಅತಿದೊಡ್ಡ ಕೋವಿಡ್ ಕೇರ್ ಸೆಂಟರ್ ಏನಾಯಿತು?

ಬೆಡ್‌ಗಾಗಿ ಸೋಂಕಿತರ ಪರದಾಟ: ಬೆಂಗಳೂರಿನ 10,100 ಬೆಡ್‌ಗಳ ದೇಶದ ಅತಿದೊಡ್ಡ ಕೋವಿಡ್ ಕೇರ್ ಸೆಂಟರ್ ಏನಾಯಿತು?

- Advertisement -
- Advertisement -

ಕೋವಿಡ್ ಎರಡನೇ ಅಲೆಗೆ ಇಡೀ ದೇಶವೇ ತತ್ತರಿಸಿದೆ. ಎಲ್ಲೆಡೆ ಬೆಡ್‌ಗಾಗಿ, ಆಕ್ಸಿಜನ್‌ ಮತ್ತು ಔಷಧಿಗಾಗಿ ಆಹಾಕಾರ ಎದ್ದಿದೆ. ಕರ್ನಾಟಕದಲ್ಲಿಯೂ ಪರಿಸ್ಥಿತಿ ಮಿತಿ ಮೀರಿದ್ದು ಬೆಡ್‌ ಸಿಗದೇ ರಸ್ತೆಯಲ್ಲಿ, ಬೀದಿಬದಿಯಲ್ಲಿ ರೋಗಿಗಳು ಪರದಾಡುತ್ತಿರುವ ದೃಶ್ಯಗಳು ದಿನನಿತ್ಯ ವರದಿಯಾಗುತ್ತಿವೆ. ಕರ್ನಾಟಕಕ್ಕೆ ಇಂತಹ ಪರಿಸ್ಥಿತಿ ಏಕೆ ಬಂತು? ಕಳೆದ ಕೊರೊನಾ ಸೋಂಕು ಗೋಚರಿಸಿ 15 ತಿಂಗಳಾದರೂ ವೈದ್ಯಕೀಯ ಕ್ಷೇತ್ರವನ್ನು ಸಜ್ಜುಗೊಳಿಸಲು ರಾಜ್ಯ ಸರ್ಕಾರ ವಿಫಲವಾಗಿದ್ದೇಕೆ ಎಂಬ ಪ್ರಶ್ನೆಗೆ ಬಿ.ಎಸ್ ಯಡಿಯೂರಪ್ಪನವರು ಉತ್ತರಿಸುವರೆ?

ಇನ್ನು ಕಳೆದ ವರ್ಷ ಕೋವಿಡ್ ಪ್ರಕರಣಗಳು ತೀವ್ರಗತಿಯಲ್ಲಿ ಏರಿಕೆಯಾಗುತ್ತಿದ್ದಾಗ ಚಿಕಿತ್ಸೆ ಮತ್ತು ರೋಗಿಗಳ ಐಸೋಲೇಶನ್‌ಗಾಗಿ 10,100 ಹಾಸಿಗೆಗಳನ್ನು ಹೊಂದಿರುವ ದೇಶದ ಅತಿದೊಡ್ಡ ಕೋವಿಡ್ ಕೇರ್ ಸೆಂಟರ್ ಅನ್ನು ತುಮಕೂರು ರಸ್ತೆಯ ಬೆಂಗಳೂರು ಅಂತರರಾಷ್ಟ್ರೀಯ ಪ್ರದರ್ಶನ ಕೇಂದ್ರದಲ್ಲಿ (ಬಿಐಇಸಿ) ತೆರೆದಿತ್ತು. ಇದಕ್ಕಾಗಿ ರಾಜ್ಯ ಸರ್ಕಾರ ಕೋಟ್ಯಂತರ ರೂ ಖರ್ಚು ಮಾಡಿ ಭಾರೀ ಪ್ರಚಾರ ಗಿಟ್ಟಿಸಿತ್ತು.

ಆ ಸಂದರ್ಭದಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ಮಾತನಾಡಿ “ಈ ಸಾಂಕ್ರಾಮಿಕ ರೋಗವು ಇನ್ನೂ ಕೆಲವು ತಿಂಗಳುಗಳ ಕಾಲ ಉಳಿಯುತ್ತದೆ, ಮತ್ತು ಅದನ್ನು ನಿಭಾಯಿಸಲು ರಾಜ್ಯ ಸರ್ಕಾರ ಸಜ್ಜಾಗಿದೆ. ಅದರ ಭಾಗವಾಗಿ ದೇಶದ ಅತಿದೊಡ್ಡ ಕೋವಿಡ್ ಕೇರ್ ಸೆಂಟರ್ ಅನ್ನು ಸ್ಥಾಪಿಸುತ್ತಿದ್ದೇವೆ ಎಂದಿದ್ದರು. ಐಸಿಯು ರೋಗಿಗಳಿಗೆ 100 ಸೇರಿದಂತೆ 10,100 ಹಾಸಿಗೆಗಳೊಂದಿಗೆ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಹೊಂದಿರುವ ಕೇಂದ್ರ ಇದಾಗಿದ್ದು ಹಿರಿಯ ಐಎಎಸ್ ಅಧಿಕಾರಿಗಳ ತಂಡವು ಇದನ್ನು ಸ್ಥಾಪಿಸಿದೆ” ಎಂದಿದ್ದರು.

ವೈದ್ಯರು ಮತ್ತು ಪೊಲೀಸರು ಸೇರಿದಂತೆ 2,200 ಕ್ಕೂ ಹೆಚ್ಚು ಸಿಬ್ಬಂದಿಗಳನ್ನು ಇಲ್ಲಿ ನಿಯೋಜಿಸಲಾಗುವುದು. ಪ್ರತಿ 100 ರೋಗಿಗಳಿಗೆ ಒಬ್ಬ ವೈದ್ಯರು, ಇಬ್ಬರು ದಾದಿಯರು, ಇಬ್ಬರು ಶುಚಿಗೊಳಿಸುವ ಸಿಬ್ಬಂದಿ ಮತ್ತು ಮಾರ್ಷಲ್‌ಗಳು ಇರುತ್ತಾರೆ. ಕಸವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡುವ ವ್ಯವಸ್ಥೆ, ಮತ್ತು ಲಾಂಡ್ರಿಗಾಗಿ ಮೀಸಲಾದ ತಂಡ, ಬೆಡ್‌ಶೀಟ್‌ಗಳು, ಕಂಬಳಿಗಳು ಮತ್ತು ಮೆತ್ತೆ ಕವರ್‌ಗಳನ್ನು ತೊಳೆಯಲು ವ್ಯವಸ್ಥೆ ಇದೆ. ಕಡಿಮೆ ರೋಗಲಕ್ಷಣದ ರೋಗಿಗಳನ್ನು ಇಲ್ಲಿ ಇರಿಸಲಾಗುವುದು, ಹಾಸಿಗೆಯ ವ್ಯವಸ್ಥೆಗಾಗಿ ಕೇಂದ್ರೀಕೃತ ವ್ಯವಸ್ಥೆಯನ್ನು ಹೊಂದಿರುತ್ತದೆ. ಐಸಿಯು, ಇಸಿಜಿ ಮತ್ತು ಆಮ್ಲಜನಕ ಬೆಂಬಲ ಸೌಲಭ್ಯಗಳೂ ಇವೆ, ಮತ್ತು ಹತ್ತಿರದ ಆಸ್ಪತ್ರೆಯಲ್ಲಿ ಸ್ಥಾಪಿಸಲಾದ ನಿಯಂತ್ರಣ ಕೊಠಡಿಯು ಈ ಸೆಂಟರ್‌ಅನ್ನು 24×7 ಮೇಲ್ವಿಚಾರಣೆ ಮಾಡುತ್ತದೆ. “ಕೇಂದ್ರ ತಂಡವು ಈ ಸೆಂಟರ್‌ಗೆ ಭೇಟಿ ನೀಡಿ, ವ್ಯವಸ್ಥೆಗಳನ್ನು ಶ್ಲಾಘಿಸಿದೆ. ಕೊರೊನಾ ಮಾರ್ಗಸೂಚಿಗಳನ್ನು ಅನ್ಲಾಕ್ ಮಾಡಿದ ನಂತರ ಪ್ರಕರಣಗಳು ಏರಿಕೆಯಾದಲ್ಲಿ ಅವರನ್ನು ಇಲ್ಲಿ ದಾಖಲಿಸಲಾಗುತ್ತಿದೆ. ನಾವು ಸಜ್ಜುಗೊಂಡಿದ್ದೇವೆ’’ ಎಂದು ಯಡಿಯೂರಪ್ಪ ದೃಢವಾಗಿ ಹೇಳಿದ್ದರು.

ಇದಕ್ಕೆ ಮಾಧ್ಯಮಗಳು ಸಾಕಷ್ಟು ಮಹತ್ವ ಕೊಟ್ಟು ವರದಿ ಮಾಡಿದ್ದವು. ಇದು ಸಾರ್ವಜನಿಕರಲ್ಲಿ ಭರವಸೆ ಮೂಡಿಸಿತ್ತು. ನಿಜಕ್ಕೂ ಅಂತಹ ವ್ಯವಸ್ಥೆ ಅಂದಿಗಿಂತ ಇಂದು ತುರ್ತು ಅಗತ್ಯವಿದೆ. ಆದರೆ ನೀವೀಗ ತುಮಕೂರು ರಸ್ತೆಯ ಬೆಂಗಳೂರು ಅಂತರರಾಷ್ಟ್ರೀಯ ಪ್ರದರ್ಶನ ಕೇಂದ್ರಕ್ಕೆ ಹೋಗಿ ನೋಡಿದರೆ ಈ ದೇಶದ ಅತಿದೊಡ್ಡ ಕೋವಿಡ್ ಕೇರ್ ಸೆಂಟರ್ ಮಾಯವಾಗಿರುವುದು ನಿಮ್ಮ ಗಮನಕ್ಕೆ ಬರುತ್ತದೆ. ಕಳೆದ ವರ್ಷ ಜುಲೈ 27ರಂದು ಉದ್ಘಾಟನೆಯಾದ ಈ ಕೇಂದ್ರ ಈಗ ಉಪಯೋಗಕ್ಕೆ ಸಿಗುತ್ತಿಲ್ಲ ಏಕೆ?

ಏಕೆಂದರೆ ಉದ್ಘಾಟನೆಯಾದ ಒಂದೂವರೆ ತಿಂಗಳಿನಲ್ಲಿಯೇ ಸರ್ಕಾರ ಈ ಸೆಂಟರ್ ಅನ್ನು ಮುಚ್ಚಿಬಿಟ್ಟಿದೆ. ಅದಕ್ಕೆ ಕಾರಣ ಹೆಚ್ಚಿನ ಸೋಂಕಿತರು ದಾಖಲಾಗುತ್ತಿಲ್ಲವೆಂಬುದಾಗಿದೆ! ಸೆಪ್ಟಂಬರ್ 05 ರಂದು ಈ ಕುರಿತು ತೀರ್ಮಾನ ತೆಗೆದುಕೊಂಡ ಬಿಬಿಎಂಪಿ ಸೆಪ್ಟಂಬರ್ 15ಕ್ಕೆ ಇದಕ್ಕೆ ಎಳ್ಳುನೀರು ಬಿಟ್ಟಿದೆ. ಇದು ಕಾರ್ಯ ನಿರ್ವಹಿಸುತ್ತಿದ್ದಾಗಲೂ ಅಗತ್ಯ ಮೂಲಸೌರ್ಕರ್ಯಗಳಿಲ್ಲ, ಸಾಮಾಗ್ರಿ ಖರೀದಿಯಲ್ಲಿ ಕೋಟ್ಯಂತರ ರೂ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪಗಳು ಕೇಳಿಬಂದಿದ್ದವು..

ಇದನ್ನೂ ಓದಿ: ಒಂದೂವರೆ ತಿಂಗಳಷ್ಟೇ ಬಳಕೆ: ಬೆಂಗಳೂರಿನ ಅತಿ ದೊಡ್ಡ ಕೋವಿಡ್ ಕೇರ್ ಸೆಂಟರ್ ಮುಚ್ಚಲು ನಿರ್ಧಾರ!

ಅದೇನೇ ಇರಲಿ ಇಂದು ಆ ಕೋವಿಡ್ ಕೇರ್ ಇದ್ದಿದ್ದೇ ಆದಲ್ಲಿ ಜನ ಇಷ್ಟು ಪ್ರಮಾಣದಲ್ಲಿ ಬೆಡ್ ಇಲ್ಲದೆ ಬೀದಿಯಲ್ಲಿ ಸಾಯುವು ನರಳುವ ಪರಿಸ್ಥಿತಿ ಬರುತ್ತಿತ್ತೇ? ಜನ ಬಾರದಿದ್ದರೂ ಪರವಾಗಿಲ್ಲ ಮುಂದೆ ಬೇಕಾಗುತ್ತದೆ ಎಂಬ ಮುನ್ನೋಟದೊಂದಿಗೆ ಅದನ್ನು ಉಳಿಸಿಕೊಂಡಿದ್ದರೆ ಇಂದು ರಾಜ್ಯದಲ್ಲಿ ಭೀಕರ ಪರಿಸ್ಥಿತಿ ಬರುತ್ತಿರಲಿಲ್ಲ ಅಲ್ಲವೇ?

ಅಂದು ಪ್ರಕರಣಗಳು ಹೆಚ್ಚಾಗುತ್ತವೆ, ನಾವು ಸಜ್ಜಾಗಿದ್ದೇವೆ ಎಂದು ವೀರಾವೇಶದಿಂದ ಮಾತನಾಡಿದ್ದ ಯಡಿಯೂರಪ್ಪನವರು ಈಗ ಏನು ಮಾಡುತ್ತಿದ್ದಾರೆ? ಆರೋಗ್ಯ ಇಲಾಖೆಯ ಅಂಕಿ ಅಂಶಗಳ ಪ್ರಚಾರ ಕರ್ನಾಟಕದಲ್ಲಿ ಏಪ್ರಿಲ್ 21 ರಂದು ಒಟ್ಟು 116 ಸಾವುಗಳು ಸಂಭವಿಸಿ, 23,558 ಹೊಸ ಪ್ರಕರಣಗಳು ವರದಿಯಾಗಿವೆ. ಅದರಲ್ಲಿ ಬೆಂಗಳೂರು ಒಂದರಲ್ಲೆ ಇದುವರೆಗೂ 24,600 ಸಕ್ರಿಯ ಪ್ರಕರಣಗಳಿವೆ. ಇಂದು ಆ ಸೆಂಟರ್ ಇದ್ದಲ್ಲಿ ಎಷ್ಟು ಜನ ಅದರ ಪ್ರಯೋಜನ ಪಡೆಯಬಹುದಿತ್ತಲ್ಲವೇ?

ಇದೇ ಸಂದರ್ಭದಲ್ಲಿ ಗಮನಿಸಬೇಕಾದ ಇನ್ನೊಂದು ಸಂಗತಿಯಿದೆ. ದೆಹಲಿಯಲ್ಲೂ ಸರ್ದಾರ್ ಪಟೇಲ್ ಕೋವಿಡ್ ಕೇರ್ ಸೆಂಟರ್ ಮತ್ತು ಆಸ್ಪತ್ರೆಯನ್ನು ನಿರ್ಮಿಸಲಾಗಿತ್ತು. ಅದಿನ್ನೂ ಉಳಿದುಕೊಂಡಿದ್ದು, ಅದಕ್ಕೆ ಈಗ ಪುನರ್ ಚಾಲನೆ ಕೊಡಲು ಉದ್ದೇಶಿಸಲಾಗಿದೆ. ಆದರೆ ಕರ್ನಾಟಕದಲ್ಲಿ ಪುನರ್ ಚಾಲನೆ ಕೊಡುವ ಪರಿಸ್ಥಿತಿಯಿಲ್ಲ. ಕನಿಷ್ಠ, ಅಲ್ಲಿ ಕೂಡಲೇ ಪುನರ್ ನಿರ್ಮಾಣಕ್ಕೆ ಮುಂದಾಗಿ ಒಂದು ವಾರದ ಒಳಗಾದರೂ ಆಕ್ಸಿಜನ್ ಸರಬರಾಜು ಇರುವ ಹಾಸಿಗೆಗಳಾಗಿ ಅದನ್ನು ಕಟ್ಟಲು ಈ ಸರ್ಕಾರವು ಮುಂದಾಗುತ್ತದೆಯೇ ಎಂಬುದು ಈಗಿನ ಪ್ರಶ್ನೆಯಾಗಿದೆ.

ಈ ಸಂಬಂಧ ಸರ್ಕಾರದ ಉತ್ತರ ಪಡೆಯಲು ಸಚಿವ ಸುಧಾಕರ್ ಅವರಿಗೆ ನಾನುಗೌರಿ.ಕಾಂ ಪ್ರಯತ್ನಿಸುತ್ತಿದ್ದು, ಅವರು ಇದುವರೆಗೂ ಸಿಕ್ಕಿಲ್ಲ. ಅವರು ಪ್ರತಿಕ್ರಿಯಿಸಿದರೆ ಇಲ್ಲಿ ಅದನ್ನು ಅಪ್ʼಡೇಟ್ ಮಾಡಲಾಗುವುದು.


ಇದನ್ನೂ ಓದಿ: ಆಡಳಿತದಲ್ಲಿ ರಾಜ್ಯಪಾಲರ ಹಸ್ತಕ್ಷೇಪ: ಸಾಂವಿಧಾನಿಕ ಉಲ್ಲಂಘನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಈಗಲೂ ಕರ್ನಾಟಕದಲ್ಲಿ ಮಾಸ್ಕ್ ಹಾಕುವವರು ತೀರಾ ಕಡಿಮೆ. ಪೇಟೆಯಲ್ಲಿ ಪೊಲೀಸರಿಗೆ ಹೆದರಿ ಮಾಸ್ಕ್ ಧರಿಸಿದಂತೆ ತೋರುತ್ತದೆ. ವೈದ್ಯಕೀಯ ಪರಿಶೋಧನೆಯ ಸಂಖ್ಯೆಯೂ ಏನೇನೂ ಸಾಲದು.
    ಕೇರಳದಲ್ಲಿ ಮಾಡಿದಂತೆ ಪ್ರತಿಯೊಬ್ಬರನ್ನೂ ಟೆಸ್ಟ್ ಮಾಡಲಿ. ಆರೋಗ್ಯ ಇಲಾಖೆಗೆ ದಿನಕ್ಕೆ ಇಂತಿಷ್ಟು ಲಕ್ಷ ಜನರನ್ನು ಎಂದು ಟಾರ್ಗೆಟ್ ಕೊಟ್ಟು ಟೆಸ್ಟ್ ಮಾಡಲು ಕ್ರಮ ಕೈಗೊಳ್ಳಲಿ. ಆವಾಗ ಗೊತ್ತಾಗುವುದು ಕರ್ನಾಟಕದಲ್ಲಿಯ ಕೊರೋನಾ ವಿಜೃಂಭಣೆ. ಜನರನ್ನು ರಕ್ಷಿಸುವಲ್ಲಿ ಸರಕಾರ ಜವಾಬ್ದಾರಿ ತೆಗೆದುಕೊಳ್ಳಲಿ…. ಹೀಗೆ ರಾಜ್ಯಗಳೆಲ್ಲವೂ ಒಂದಾಗಿ ಶ್ರಮಿಸಲಿ. ಭಾರತ ರಕ್ಷೆಪಡುವುದು.

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...