Homeಕರ್ನಾಟಕಆಡಳಿತದಲ್ಲಿ ರಾಜ್ಯಪಾಲರ ಹಸ್ತಕ್ಷೇಪ: ಸಾಂವಿಧಾನಿಕ ಉಲ್ಲಂಘನೆ

ಆಡಳಿತದಲ್ಲಿ ರಾಜ್ಯಪಾಲರ ಹಸ್ತಕ್ಷೇಪ: ಸಾಂವಿಧಾನಿಕ ಉಲ್ಲಂಘನೆ

- Advertisement -
- Advertisement -

ಇಲ್ಲಿ ರಾಜ್ಯಪಾಲರ ಅಧ್ಯಕ್ಷತೆಯಲ್ಲಿ ಸರ್ವಪಕ್ಷ ಸಭೆ ನಡೆಯುತ್ತದೆ. ಕರ್ನಾಟಕಕ್ಕೆ ರಾಜ್ಯಪಾಲರಾದ ನಂತರ ಎಂದೂ ವಿಶ್ವವಿದ್ಯಾಲಯಗಳ ಉಪ ಕುಲಪತಿಗಳ ಸಭೆ ಕರೆಯದ ರಾಜ್ಯಪಾಲ ವಜುಭಾಯಿ ವಾಲಾರವರು ಬುಧವಾರ ಅಂತಹ ಸಭೆಯೊಂದನ್ನು ನಡೆಸಿದರು. ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆ ನೀಡುವ ಜವಾಬ್ದಾರಿಯನ್ನು ವಿ.ಸಿ.ಗಳಿಗೆ ವಹಿಸುವ ವಿಷಯಕ್ಕೆ ಈ ಸಭೆ. ಉನ್ನತ ಶಿಕ್ಷಣ ಸಚಿವ ಮತ್ತು ಡಿಸಿಎಂ ಅಶ್ವತ್ ನಾರಾಯಣ್ ಈ ಸಭೆಯನ್ನು ರಾಜ್ಯಪಾಲರ ಅಧ್ಯಕ್ಷತೆಯಲ್ಲಿ ಸಂಘಟಿಸಿದ್ದರು.

ಇವೆರಡೂ ಘಟನೆಗಳನ್ನು ನೋಡಿದರೆ ಮುಖ್ಯಮಂತ್ರಿ ಬಿಟ್ಟರೆ ರಾಜ್ಯದ ಸಚಿವ ಸಂಪುಟದ ಯಾರಿಗೂ ಅಧಿಕಾರವೇ ಇಲ್ಲವೇ? ರಾಜ್ಯಪಾಲರ ಮೂಲಕ ಕೇಂದ್ರ ಸರ್ಕಾರವೇ ಇಲ್ಲಿ ಆಡಳಿತ ನಡೆಸುತ್ತಿದೆಯೇ? ಇದೇನು ಲೆಫ್ಟಿನೆಂಟ್ ಗವರ್ನರ್‌ಗಳನ್ನು ಹೊಂದಿರುವ ದೆಹಲಿ ಅಥವಾ ಪುದುಚೇರಿಯೇ ಎಂಬ ಪ್ರಶ್ನೆಗಳು ಎದ್ದಿದ್ದು ನಿಜ.

ಈಗಷ್ಟೇ ಮುಖ್ಯಮಂತ್ರಿ ಯಡಿಯೂರಪ್ಪ ಮಣಿಪಾಲ್ ಆಸ್ಪತ್ರೆಯಿಂದ ಹೊರ ಬಂದಿದ್ದಾರೆ. ಅವರು ಆಸ್ಪತ್ರೆಯಲ್ಲಿದ್ದಾಗ ಇಲ್ಲಿ ಸಾಂವಿಧಾನಿಕ ಉಲ್ಲಂಘನೆಯಂತೂ ಆಗಿದೆ.
ರಾಜ್ಯದ ಕೋವಿಡ್ ಪರಿಸ್ಥಿತಿ ನಿಯಂತ್ರಣಕ್ಕೆ ರಾಜ್ಯಪಾಲರು ಮಂಗಳವಾರ ಸರ್ವ ಪಕ್ಷ ಸಭೆ ಕರೆದಿದ್ದರು. ಇದು ಅಸಂವಿಧಾನಿಕ ಮಾರ್ಗವೇ ಆಗಿತ್ತು. ವಿಪಕ್ಷ ನಾಯಕ ಸಿದ್ದರಾಮಯ್ಯ, ಕುಮಾರಸ್ವಾಮಿ ಇದನ್ನು ಪ್ರಶ್ನಿಸಿಯೂ ರಾಜ್ಯಪಾಲ ಹುದ್ದೆಗೆ ಗೌರವ ಕೊಟ್ಟು ತಮ್ಮ ಅಭಿಪ್ರಾಯ ದಾಖಲಿಸಿದರು. ಈ ಸಭೆ ಕುರಿತಂತೆ ಹಲವಾರು ಸಂವಿಧಾನ ತಜ್ಞರು, ವಕೀಲರು ಮತ್ತು ರಾಜಕಾರಣಿಗಳು ಆಕ್ಷೇಪ ಎತ್ತಿದ್ದರು.

ಕೇಂದ್ರ ಸರ್ಕಾರದ ಧೋರಣೆಯೇ ಹಾಗಿದೆಯಲ್ಲವೇ? ಅದು ಮುಖ್ಯಮಂತ್ರಿಗಳಿಗಿಂತ ಅಥವಾ ರಾಜ್ಯದ ಇತರ ಚುನಾಯಿತ ಪ್ರತಿನಿಧಿಗಳಿಗಿಂತ ಕೇಂದ್ರದಿಂದ ನೇಮಕಗೊಂಡ ರಾಜ್ಯಪಾಲರುಗಳಿಗೆ ಆದ್ಯತೆ ನೀಡುತ್ತ ಬಂದಿದೆ. ಕೊರೋನಾ ನಿಯಂತ್ರಣ ಕುರಿತಂತೆ ಈ ಹಿಂದೆ ಪ್ರಧಾನಿ ಮೋದಿಯವರು ಎಲ್ಲ ರಾಜ್ಯಪಾಲರೊಂದಿಗೆ ವಿಡಿಯೋ ಸಂವಾದ ನಡೆಸಿದ್ದನ್ನು ಇಲ್ಲಿ ಗಮನಿಸಬಹುದು.

ಇದೇ ಪರಂಪರೆಯಲ್ಲಿ ರಾಜ್ಯ ಸರ್ಕಾರ ನಡೆದಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕೋವಿಡ್ ಪೀಡಿತರಾಗಿ ಆಸ್ಪತ್ರೆಯಲ್ಲಿ ಇದ್ದ ಸಂದರ್ಭ ಬಳಸಿಕೊಂಡು ಮಂಗಳವಾರ ಕೋವಿಡ್ ಪರಿಸ್ಥಿತಿ ಚರ್ಚಿಸಲು ರಾಜ್ಯಪಾಲರ ಅಧ್ಯಕ್ಷತೆಯಲ್ಲಿ ಸರ್ವಪಕ್ಷ ಸಭೆ ಜರುಗಿ, ವಿವಾದಕ್ಕೆ ಕಾರಣವಾಗಿದೆ.

ಆಸ್ಪತ್ರೆಯಲ್ಲಿದ್ದಾಗ ಯಡಿಯೂರಪ್ಪರ ಆರೋಗ್ಯ ಸ್ಥಿರವಾಗಿತ್ತು ಮತ್ತು ಅವರು ಸಂಪುಟ ಸಚಿವರು ಮತ್ತು ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದ್ದರು. ಆದರೆ ಸರ್ವಪಕ್ಷ ಸಭೆಯಲ್ಲೆಕೆ ವಿಡಿಯೋ ಸಂವಾದದ ನೆರವು ಪಡೆಯಲಿಲ್ಲ?

ರಾಜ್ಯಪಾಲರು ಚುನಾಯಿತ ಪ್ರತಿನಿಧಿಯಲ್ಲ. ಅವರು ಕೇಂದ್ರಸರ್ಕಾರದ ಸೂಚನೆ ಮೇರೆಗೆ ರಾಷ್ಟ್ರಪತಿಗಳಿಂದ ನೇಮಕಗೊಂಡವರು. ಮುಖ್ಯಮಂತ್ರಿ ಅನುಪಸ್ಥಿತಿಯಲ್ಲಿ ಸಭಾಪತಿ ಅಥವಾ ಉಪ ಮುಖ್ಯಮಂತ್ರಿ ಮತ್ತು ಆರೋಗ್ಯ ಮಂತ್ರಿಗಳ ಅಧ್ಯಕ್ಷತೆಯಲ್ಲಿ ಸರ್ವಪಕ್ಷ ಸಭೆ ನಡೆಸಬಹುದಿತ್ತು ಅಲ್ಲವೇ? ಮೂವರು ಡಿಸಿಎಂಗಳ ಪೈಕಿ ಹಿರಿಯರಾದ ಗೋವಿಂದ ಕಾರಜೋಳರ ಅಧ್ಯಕ್ಷತೆಯಲ್ಲಿ ಸಭೆ ನಡೆಸಬಹುದಿತ್ತಲ್ಲ? ಅಥವಾ ನಮ್ಮ ಸಚಿವರೆಲ್ಲರೂ ಜನರಿಗೆ ಉತ್ತರಿಸುವ ನೈತಿಕತೆಯನ್ನೇ ಕಳೆದುಕೊಂಡು ತಮ್ಮ ಜವಾಬ್ದಾರಿಯನ್ನು ರಾಜ್ಯಪಾಲರಿಗೆ ವರ್ಗಾಯಿಸಿದರೆ?

ಕೇಂದ್ರ ಸರ್ಕಾರ ಹಾಕಿಕೊಟ್ಟ ಅಪ್ರಜಾತಾಂತ್ರಿಕ ಮಾದರಿ ಈಗ ರಾಜ್ಯಕ್ಕೂ ಕಾಲಿಟ್ಟಿದೆ. ಮಂಗಳವಾರದ ಸಭೆ ಕುರಿತು ಪ್ರತಿಕ್ರಿಯಿಸಿದ ಸಿಪಿಎಂ ಪಕ್ಷದ ರಾಜ್ಯ ಸಮಿತಿ ಸದಸ್ಯ ಎಸ್.ವೈ. ಗುರುಶಾಂತ್, ಇದು ಸರ್ಕಾರದ ಬೌದ್ಧಿಕ ದಿವಾಳಿತನವನ್ನು ತೋರಿಸುತ್ತದೆ. ಮುಖ್ಯಮಂತ್ರಿ ಇಲ್ಲವೆಂದರೆ ಒಬ್ಬ ಡಿಸಿಎಂ ಅವರಿಗೆ ಈ ಜವಾಬ್ದಾರಿ ನೀಡಬೇಕಿತ್ತು. ಡಿಸಿಎಂಗಳು ಇರುವುದಾದರೂ ಏತಕ್ಕೆ? ಸರ್ವಪಕ್ಷ ಸಭೆ ಎಂದರೆ ಅದು ರಾಜಕೀಯ ಪ್ರತಿನಿಧಿಗಳ ಸಭೆ. ಅಲ್ಲಿ ರಾಜ್ಯಪಾಲರಿಗೇನು ಕೆಲಸ? ರಾಜ್ಯಪಾಲರ ಮೂಲಕ ಹೇಳಿಸುವಂತಹ ದಿವಾಳಿತನಕ್ಕೆ ಈ ಸರ್ಕಾರ ತಲುಪಿದೆ. ಇದೊಂದು ಕೆಟ್ಟ ಮತ್ತು ಪ್ರಜಾಪ್ರಭುತ್ವ ವಿರೋಧಿ ಕ್ರಮ ಎಂದು’ ಹೇಳಿದರು.

ಕರ್ನಾಟಕ ರಾಷ್ಟ್ರ ಸಮಿತಿಯ ಅಧ್ಯಕ್ಷ ರವಿಕೃಷ್ಣಾ ರೆಡ್ಡಿ ಮಾತನಾಡಿ, ‘ಅತ್ಯಂತ ಬೇಜವಾಬ್ದಾರಿ ಮತ್ತು ಹೊಣೆಗೇಡಿ ಸರ್ಕಾರವಿದು. ತಮ್ಮ ಜವಾಬ್ದಾರಿಯನ್ನು ಚುನಾಯಿತರಲ್ಲದ ರಾಜ್ಯಪಾಲರಿಗೆ ವರ್ಗಾಯಿಸುವ ಮೂಲಕ ಕೈ ತೊಳೆದುಕೊಂಡು, ಮತದಾರರಿಗೆ ಅವಮಾನ ಮಾಡಿದೆ ಈ ಸರ್ಕಾರ. ಶುದ್ಧ ಶತಮೂರ್ಖ ಜನಪ್ರತಿನಿಧಿಗಳ ಸರ್ಕಾರವಿದು’ ಎಂದು ಕಿಡಿಕಾರಿದ್ದಾರೆ.

ಸಿಎಂ ಬಂದಾಯ್ತು, ಮುಂದೆ?

ಈಗ ಸಿಎಂ ಯಡಿಯೂರಪ್ಪ ಆಸ್ಪತ್ರೆಯಿಂದ ಬಂದಿದ್ದಾರೆ. ಈಗಲೂ ರಾಜ್ಯಪಾಲರ ಮೂಲಕವೇ ಆಡಳಿತ ನಡೆಯಲಿದೆಯೇ? ಅಥವಾ ಈ ಹಿಂದೆಯೂ ಯಡಿಯೂರಪ್ಪ ರಾಜ್ಯಪಾಲರು, ಆ ಮೂಲಕ ಪರೋಕ್ಷವಾಗಿ ಕೇಂದ್ರ ಬಿಜೆಪಿ ಹೇಳಿದಂತೆಯೇ ದಿನನಿತ್ಯದ ತೀರ್ಮಾನ ತೆಗೆದುಕೊಳ್ಳುತ್ತಿದ್ದರೇ?

ಒಟ್ಟಿನಲ್ಲಿ ಕೇಂದ್ರ ಸರ್ಕಾರ ಅಥವಾ ರಾಷ್ಟ್ರೀಯ ಬಿಜೆಪಿ ಕರ್ನಾಟಕವನ್ನು ಆಳುತ್ತಿದೆಯಾ ಎಂಬ ಸಂಶಯ ಕಾಡುತ್ತಿದೆಯಲ್ಲವೆ?

  • ಪಿ.ಕೆ.ಮಲ್ಲನಗೌಡರ್

ಇದನ್ನು ಓದಿ: ಆಡಳಿತದಲ್ಲಿ ರಾಜ್ಯಪಾಲರ ಹಸ್ತಕ್ಷೇಪ: ಬಿಎಸ್‌ವೈ ವಿರುದ್ಧ ಬಿಜೆಪಿ ಹೈಕಮಾಂಡ್ ತಂತ್ರವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...