Homeಕರ್ನಾಟಕಆಡಳಿತದಲ್ಲಿ ರಾಜ್ಯಪಾಲರ ಹಸ್ತಕ್ಷೇಪ: ಸಾಂವಿಧಾನಿಕ ಉಲ್ಲಂಘನೆ

ಆಡಳಿತದಲ್ಲಿ ರಾಜ್ಯಪಾಲರ ಹಸ್ತಕ್ಷೇಪ: ಸಾಂವಿಧಾನಿಕ ಉಲ್ಲಂಘನೆ

- Advertisement -
- Advertisement -

ಇಲ್ಲಿ ರಾಜ್ಯಪಾಲರ ಅಧ್ಯಕ್ಷತೆಯಲ್ಲಿ ಸರ್ವಪಕ್ಷ ಸಭೆ ನಡೆಯುತ್ತದೆ. ಕರ್ನಾಟಕಕ್ಕೆ ರಾಜ್ಯಪಾಲರಾದ ನಂತರ ಎಂದೂ ವಿಶ್ವವಿದ್ಯಾಲಯಗಳ ಉಪ ಕುಲಪತಿಗಳ ಸಭೆ ಕರೆಯದ ರಾಜ್ಯಪಾಲ ವಜುಭಾಯಿ ವಾಲಾರವರು ಬುಧವಾರ ಅಂತಹ ಸಭೆಯೊಂದನ್ನು ನಡೆಸಿದರು. ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆ ನೀಡುವ ಜವಾಬ್ದಾರಿಯನ್ನು ವಿ.ಸಿ.ಗಳಿಗೆ ವಹಿಸುವ ವಿಷಯಕ್ಕೆ ಈ ಸಭೆ. ಉನ್ನತ ಶಿಕ್ಷಣ ಸಚಿವ ಮತ್ತು ಡಿಸಿಎಂ ಅಶ್ವತ್ ನಾರಾಯಣ್ ಈ ಸಭೆಯನ್ನು ರಾಜ್ಯಪಾಲರ ಅಧ್ಯಕ್ಷತೆಯಲ್ಲಿ ಸಂಘಟಿಸಿದ್ದರು.

ಇವೆರಡೂ ಘಟನೆಗಳನ್ನು ನೋಡಿದರೆ ಮುಖ್ಯಮಂತ್ರಿ ಬಿಟ್ಟರೆ ರಾಜ್ಯದ ಸಚಿವ ಸಂಪುಟದ ಯಾರಿಗೂ ಅಧಿಕಾರವೇ ಇಲ್ಲವೇ? ರಾಜ್ಯಪಾಲರ ಮೂಲಕ ಕೇಂದ್ರ ಸರ್ಕಾರವೇ ಇಲ್ಲಿ ಆಡಳಿತ ನಡೆಸುತ್ತಿದೆಯೇ? ಇದೇನು ಲೆಫ್ಟಿನೆಂಟ್ ಗವರ್ನರ್‌ಗಳನ್ನು ಹೊಂದಿರುವ ದೆಹಲಿ ಅಥವಾ ಪುದುಚೇರಿಯೇ ಎಂಬ ಪ್ರಶ್ನೆಗಳು ಎದ್ದಿದ್ದು ನಿಜ.

ಈಗಷ್ಟೇ ಮುಖ್ಯಮಂತ್ರಿ ಯಡಿಯೂರಪ್ಪ ಮಣಿಪಾಲ್ ಆಸ್ಪತ್ರೆಯಿಂದ ಹೊರ ಬಂದಿದ್ದಾರೆ. ಅವರು ಆಸ್ಪತ್ರೆಯಲ್ಲಿದ್ದಾಗ ಇಲ್ಲಿ ಸಾಂವಿಧಾನಿಕ ಉಲ್ಲಂಘನೆಯಂತೂ ಆಗಿದೆ.
ರಾಜ್ಯದ ಕೋವಿಡ್ ಪರಿಸ್ಥಿತಿ ನಿಯಂತ್ರಣಕ್ಕೆ ರಾಜ್ಯಪಾಲರು ಮಂಗಳವಾರ ಸರ್ವ ಪಕ್ಷ ಸಭೆ ಕರೆದಿದ್ದರು. ಇದು ಅಸಂವಿಧಾನಿಕ ಮಾರ್ಗವೇ ಆಗಿತ್ತು. ವಿಪಕ್ಷ ನಾಯಕ ಸಿದ್ದರಾಮಯ್ಯ, ಕುಮಾರಸ್ವಾಮಿ ಇದನ್ನು ಪ್ರಶ್ನಿಸಿಯೂ ರಾಜ್ಯಪಾಲ ಹುದ್ದೆಗೆ ಗೌರವ ಕೊಟ್ಟು ತಮ್ಮ ಅಭಿಪ್ರಾಯ ದಾಖಲಿಸಿದರು. ಈ ಸಭೆ ಕುರಿತಂತೆ ಹಲವಾರು ಸಂವಿಧಾನ ತಜ್ಞರು, ವಕೀಲರು ಮತ್ತು ರಾಜಕಾರಣಿಗಳು ಆಕ್ಷೇಪ ಎತ್ತಿದ್ದರು.

ಕೇಂದ್ರ ಸರ್ಕಾರದ ಧೋರಣೆಯೇ ಹಾಗಿದೆಯಲ್ಲವೇ? ಅದು ಮುಖ್ಯಮಂತ್ರಿಗಳಿಗಿಂತ ಅಥವಾ ರಾಜ್ಯದ ಇತರ ಚುನಾಯಿತ ಪ್ರತಿನಿಧಿಗಳಿಗಿಂತ ಕೇಂದ್ರದಿಂದ ನೇಮಕಗೊಂಡ ರಾಜ್ಯಪಾಲರುಗಳಿಗೆ ಆದ್ಯತೆ ನೀಡುತ್ತ ಬಂದಿದೆ. ಕೊರೋನಾ ನಿಯಂತ್ರಣ ಕುರಿತಂತೆ ಈ ಹಿಂದೆ ಪ್ರಧಾನಿ ಮೋದಿಯವರು ಎಲ್ಲ ರಾಜ್ಯಪಾಲರೊಂದಿಗೆ ವಿಡಿಯೋ ಸಂವಾದ ನಡೆಸಿದ್ದನ್ನು ಇಲ್ಲಿ ಗಮನಿಸಬಹುದು.

ಇದೇ ಪರಂಪರೆಯಲ್ಲಿ ರಾಜ್ಯ ಸರ್ಕಾರ ನಡೆದಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕೋವಿಡ್ ಪೀಡಿತರಾಗಿ ಆಸ್ಪತ್ರೆಯಲ್ಲಿ ಇದ್ದ ಸಂದರ್ಭ ಬಳಸಿಕೊಂಡು ಮಂಗಳವಾರ ಕೋವಿಡ್ ಪರಿಸ್ಥಿತಿ ಚರ್ಚಿಸಲು ರಾಜ್ಯಪಾಲರ ಅಧ್ಯಕ್ಷತೆಯಲ್ಲಿ ಸರ್ವಪಕ್ಷ ಸಭೆ ಜರುಗಿ, ವಿವಾದಕ್ಕೆ ಕಾರಣವಾಗಿದೆ.

ಆಸ್ಪತ್ರೆಯಲ್ಲಿದ್ದಾಗ ಯಡಿಯೂರಪ್ಪರ ಆರೋಗ್ಯ ಸ್ಥಿರವಾಗಿತ್ತು ಮತ್ತು ಅವರು ಸಂಪುಟ ಸಚಿವರು ಮತ್ತು ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದ್ದರು. ಆದರೆ ಸರ್ವಪಕ್ಷ ಸಭೆಯಲ್ಲೆಕೆ ವಿಡಿಯೋ ಸಂವಾದದ ನೆರವು ಪಡೆಯಲಿಲ್ಲ?

ರಾಜ್ಯಪಾಲರು ಚುನಾಯಿತ ಪ್ರತಿನಿಧಿಯಲ್ಲ. ಅವರು ಕೇಂದ್ರಸರ್ಕಾರದ ಸೂಚನೆ ಮೇರೆಗೆ ರಾಷ್ಟ್ರಪತಿಗಳಿಂದ ನೇಮಕಗೊಂಡವರು. ಮುಖ್ಯಮಂತ್ರಿ ಅನುಪಸ್ಥಿತಿಯಲ್ಲಿ ಸಭಾಪತಿ ಅಥವಾ ಉಪ ಮುಖ್ಯಮಂತ್ರಿ ಮತ್ತು ಆರೋಗ್ಯ ಮಂತ್ರಿಗಳ ಅಧ್ಯಕ್ಷತೆಯಲ್ಲಿ ಸರ್ವಪಕ್ಷ ಸಭೆ ನಡೆಸಬಹುದಿತ್ತು ಅಲ್ಲವೇ? ಮೂವರು ಡಿಸಿಎಂಗಳ ಪೈಕಿ ಹಿರಿಯರಾದ ಗೋವಿಂದ ಕಾರಜೋಳರ ಅಧ್ಯಕ್ಷತೆಯಲ್ಲಿ ಸಭೆ ನಡೆಸಬಹುದಿತ್ತಲ್ಲ? ಅಥವಾ ನಮ್ಮ ಸಚಿವರೆಲ್ಲರೂ ಜನರಿಗೆ ಉತ್ತರಿಸುವ ನೈತಿಕತೆಯನ್ನೇ ಕಳೆದುಕೊಂಡು ತಮ್ಮ ಜವಾಬ್ದಾರಿಯನ್ನು ರಾಜ್ಯಪಾಲರಿಗೆ ವರ್ಗಾಯಿಸಿದರೆ?

ಕೇಂದ್ರ ಸರ್ಕಾರ ಹಾಕಿಕೊಟ್ಟ ಅಪ್ರಜಾತಾಂತ್ರಿಕ ಮಾದರಿ ಈಗ ರಾಜ್ಯಕ್ಕೂ ಕಾಲಿಟ್ಟಿದೆ. ಮಂಗಳವಾರದ ಸಭೆ ಕುರಿತು ಪ್ರತಿಕ್ರಿಯಿಸಿದ ಸಿಪಿಎಂ ಪಕ್ಷದ ರಾಜ್ಯ ಸಮಿತಿ ಸದಸ್ಯ ಎಸ್.ವೈ. ಗುರುಶಾಂತ್, ಇದು ಸರ್ಕಾರದ ಬೌದ್ಧಿಕ ದಿವಾಳಿತನವನ್ನು ತೋರಿಸುತ್ತದೆ. ಮುಖ್ಯಮಂತ್ರಿ ಇಲ್ಲವೆಂದರೆ ಒಬ್ಬ ಡಿಸಿಎಂ ಅವರಿಗೆ ಈ ಜವಾಬ್ದಾರಿ ನೀಡಬೇಕಿತ್ತು. ಡಿಸಿಎಂಗಳು ಇರುವುದಾದರೂ ಏತಕ್ಕೆ? ಸರ್ವಪಕ್ಷ ಸಭೆ ಎಂದರೆ ಅದು ರಾಜಕೀಯ ಪ್ರತಿನಿಧಿಗಳ ಸಭೆ. ಅಲ್ಲಿ ರಾಜ್ಯಪಾಲರಿಗೇನು ಕೆಲಸ? ರಾಜ್ಯಪಾಲರ ಮೂಲಕ ಹೇಳಿಸುವಂತಹ ದಿವಾಳಿತನಕ್ಕೆ ಈ ಸರ್ಕಾರ ತಲುಪಿದೆ. ಇದೊಂದು ಕೆಟ್ಟ ಮತ್ತು ಪ್ರಜಾಪ್ರಭುತ್ವ ವಿರೋಧಿ ಕ್ರಮ ಎಂದು’ ಹೇಳಿದರು.

ಕರ್ನಾಟಕ ರಾಷ್ಟ್ರ ಸಮಿತಿಯ ಅಧ್ಯಕ್ಷ ರವಿಕೃಷ್ಣಾ ರೆಡ್ಡಿ ಮಾತನಾಡಿ, ‘ಅತ್ಯಂತ ಬೇಜವಾಬ್ದಾರಿ ಮತ್ತು ಹೊಣೆಗೇಡಿ ಸರ್ಕಾರವಿದು. ತಮ್ಮ ಜವಾಬ್ದಾರಿಯನ್ನು ಚುನಾಯಿತರಲ್ಲದ ರಾಜ್ಯಪಾಲರಿಗೆ ವರ್ಗಾಯಿಸುವ ಮೂಲಕ ಕೈ ತೊಳೆದುಕೊಂಡು, ಮತದಾರರಿಗೆ ಅವಮಾನ ಮಾಡಿದೆ ಈ ಸರ್ಕಾರ. ಶುದ್ಧ ಶತಮೂರ್ಖ ಜನಪ್ರತಿನಿಧಿಗಳ ಸರ್ಕಾರವಿದು’ ಎಂದು ಕಿಡಿಕಾರಿದ್ದಾರೆ.

ಸಿಎಂ ಬಂದಾಯ್ತು, ಮುಂದೆ?

ಈಗ ಸಿಎಂ ಯಡಿಯೂರಪ್ಪ ಆಸ್ಪತ್ರೆಯಿಂದ ಬಂದಿದ್ದಾರೆ. ಈಗಲೂ ರಾಜ್ಯಪಾಲರ ಮೂಲಕವೇ ಆಡಳಿತ ನಡೆಯಲಿದೆಯೇ? ಅಥವಾ ಈ ಹಿಂದೆಯೂ ಯಡಿಯೂರಪ್ಪ ರಾಜ್ಯಪಾಲರು, ಆ ಮೂಲಕ ಪರೋಕ್ಷವಾಗಿ ಕೇಂದ್ರ ಬಿಜೆಪಿ ಹೇಳಿದಂತೆಯೇ ದಿನನಿತ್ಯದ ತೀರ್ಮಾನ ತೆಗೆದುಕೊಳ್ಳುತ್ತಿದ್ದರೇ?

ಒಟ್ಟಿನಲ್ಲಿ ಕೇಂದ್ರ ಸರ್ಕಾರ ಅಥವಾ ರಾಷ್ಟ್ರೀಯ ಬಿಜೆಪಿ ಕರ್ನಾಟಕವನ್ನು ಆಳುತ್ತಿದೆಯಾ ಎಂಬ ಸಂಶಯ ಕಾಡುತ್ತಿದೆಯಲ್ಲವೆ?

  • ಪಿ.ಕೆ.ಮಲ್ಲನಗೌಡರ್

ಇದನ್ನು ಓದಿ: ಆಡಳಿತದಲ್ಲಿ ರಾಜ್ಯಪಾಲರ ಹಸ್ತಕ್ಷೇಪ: ಬಿಎಸ್‌ವೈ ವಿರುದ್ಧ ಬಿಜೆಪಿ ಹೈಕಮಾಂಡ್ ತಂತ್ರವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...