Homeಕರೋನಾ ತಲ್ಲಣಕರ್ನಾಟಕದ ಜನರ ತುರ್ತು ಒತ್ತಾಯ ಪತ್ರ: ಪ್ರತಿದಿನ ವರದಿ ಪ್ರಕಟಿಸಲು ಸಿಎಂ & ಆರೋಗ್ಯ ಸಚಿವರ...

ಕರ್ನಾಟಕದ ಜನರ ತುರ್ತು ಒತ್ತಾಯ ಪತ್ರ: ಪ್ರತಿದಿನ ವರದಿ ಪ್ರಕಟಿಸಲು ಸಿಎಂ & ಆರೋಗ್ಯ ಸಚಿವರ ಮೇಲೆ ಒತ್ತಡ

- Advertisement -
- Advertisement -

ಕೋವಿಡ್‌ ಮರಣಗಳನ್ನು ತಡೆಗಟ್ಟಲು ನಿಗದಿತವಾಗಿ ನಿರ್ದಿಷ್ಟ ಕ್ರಮಗಳಿಗೆ ಆಗ್ರಹಿಸಿ ‘ಕರ್ನಾಟಕ ಜನಾರೋಗ್ಯ ಚಳುವಳಿ’ಯು ಮುಖ್ಯಮಂತ್ರಿ ಮತ್ತು ಆರೋಗ್ಯ ಸಚಿವರಿಗೆ ಒತ್ತಾಯ ಪತ್ರವನ್ನು ಗುರುವಾರ ಕಳುಹಿಸಿದೆ.

‘ಕರ್ನಾಟಕ ಜನಾರೋಗ್ಯ ಚಳುವಳಿ’ಯು ಪತ್ರವನ್ನು ತಜ್ಞರ ಹಾಗೂ ತಳಮಟ್ಟದಲ್ಲಿ ಕೆಲಸ ಮಾಡುತ್ತಿರುವವರ ಜೊತೆಗಿನ ಸಮಾಲೋಚನೆಯಿಂದ ಸಿದ್ಧಪಡಿಸಿದೆ. ಪತ್ರದಲ್ಲಿ ಹೇಳಿರುವ ಕ್ರಮಗಳನ್ನು ರಾಜ್ಯ ಸರ್ಕಾರವು ಜಾರಿಗೆ ತರಲೇಬೇಕು ಮತ್ತು ಪ್ರತಿದಿನ ಈ ಕುರಿತು ಕೋವಿಡ್ ಪಾಸಿಟಿವ್ ಹಾಗೂ ಸಾವುಗಳ ಸಂಖ್ಯೆ ಪ್ರಕಟಿಸಿದ ರೀತಿಯಲ್ಲೇ ವರದಿ ನೀಡಬೇಕೆಂದು ಒತ್ತಾಯಿಸಿದೆ.

ಮಾನ್ಯ ಮುಖ್ಯಮಂತ್ರಿಗಳೇ ಹಾಗೂ ಆರೋಗ್ಯ ಸಚಿವರೇ..

ಪ್ರತಿದಿನ ಕೋವಿಡ್ ರೋಗಿಗಳ ಸಂಖ್ಯೆ ತೀವ್ರ ಪ್ರಮಾಣದಲ್ಲಿ ಹೆಚ್ಚಾಗುತ್ತಿದ್ದು, ಆಕ್ಸಿಜನ್ ಇರುವ ಹಾಸಿಗೆಗಳ ಮತ್ತು ವೆಂಟಿಲೇಟರ್ ಇರುವ ಐಸಿಯು ಹಾಸಿಗೆಗಳ ಕೊರತೆಯಿಂದ ಸಾವಿನ ಪ್ರಮಾಣವೂ ಹೆಚ್ಚಾಗುತ್ತಿದೆ.

ಇದನ್ನೂ ಓದಿ: ಏರ್‌ಪೋರ್ಟ್-ಸಿಲ್ಕ್‌ಬೋರ್ಡ್ ಮೆಟ್ರೋ ಕಾಮಗಾರಿ ವಿಳಂಬಕ್ಕೆ ಮೋದಿಯವರೆ ಹೊಣೆಯೇ?: ಜಾಹೀರಾತಿಗೆ ಕೋಟಿ ರೂ ಖರ್ಚು ಏಕೆ?

ಮೇ ಮೊದಲ ವಾರದ ಹೊತ್ತಿಗೆ ಸ್ಫೋಟಕ ಪರಿಸ್ಥಿತಿ ಉಂಟಾಗಲಿದೆ ಎಂದು ತಜ್ಞರು ಹೇಳಿರುವುದು ಈಗಾಗಲೇ ವರದಿಯಾಗಿದೆ. ಜೊತೆಗೆ ರೋಗಿಗಳಲ್ಲಿ ಹಾಗೂ ಜನಸಾಮಾನ್ಯರಲ್ಲಿ ಭಾರೀ ದೊಡ್ಡ ಭೀತಿ ಉಂಟಾಗಿದೆ. ಇದನ್ನು ನಿಭಾಯಿಸುವುದು ಸರ್ಕಾರದ ಕರ್ತವ್ಯವಾಗಿದೆ.

ಈ ಹಿನ್ನೆಲೆಯಲ್ಲಿ ಕೆಳಗಿನ ಕ್ರಮಗಳನ್ನು ಸರ್ಕಾರ ಈ ತಕ್ಷಣ ಕೈಗೊಳ್ಳಲೇಬೇಕೆಂದು ಆಗ್ರಹಿಸುತ್ತೇವೆ ಮತ್ತು ಪ್ರತಿದಿನ ಈ ಸಂಬಂಧ ವರದಿಯನ್ನು ರಾಜ್ಯದ ಜನರ ಮುಂದೆ ಇಡಬೇಕೆಂದು ಒತ್ತಾಯಿಸುತ್ತೇವೆ

  1. ಈಗಿಂದೀಗಲೇ ಸರ್ಕಾರವು ಬೆಂಗಳೂರು ಮತ್ತು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಆಕ್ಸಿಜೆನ್ ಇರುವ ಹಾಸಿಗೆಗಳ ಸಂಖ್ಯೆಯನ್ನು ಹೆಚ್ಚಿಸಬೇಕು. ಬೆಂಗಳೂರಿನಲ್ಲಿ ದಿನಕ್ಕೆ ಕನಿಷ್ಠ 200 ಮತ್ತು ಜಿಲ್ಲಾ ಕೇಂದ್ರಗಳಲ್ಲಿ ದಿನಕ್ಕೆ 25 ಸಂಖ್ಯೆಯನ್ನು ಹೆಚ್ಚಿಸಬೇಕು.
  2. ಪ್ರತಿದಿನ ಸರ್ಕಾರವು ಎಷ್ಟು ಆಕ್ಸಿಜನ್ ಬೆಡ್ʼಗಳನ್ನು ಹೊಸದಾಗಿ ಎಲ್ಲಿ ಹೆಚ್ಚು ಮಾಡಿದ್ದೇವೆ ಎಂಬುದನ್ನು ಪ್ರಕಟಿಸಬೇಕು.
  3. ಬೆಂಗಳೂರಿನಲ್ಲಿ ಪ್ರತಿ ದಿನ ಕನಿಷ್ಠ 500 ಮತ್ತು ಪ್ರತಿ ಜಿಲ್ಲಾ ಕೇಂದ್ರಗಳಲ್ಲಿ ತಲಾ 50 ರಷ್ಟು ವೆಂಟಿಲೇಟರ್‌‌ಗಳನ್ನು ಇನ್ನೊಂದು ವಾರ ಕಾಲ ಹೆಚ್ಚಿಸಲು ಸಮರೋಪಾದಿ ಕ್ರಮಗಳನ್ನು ತೆಗೆದುಕೊಳ್ಳಬೇಕು.
  4. ಆಕ್ಸಿಜನ್ ಕೊರತೆ ಇಲ್ಲವೆಂದು ಸರ್ಕಾರವು ಹೇಳಿರುವುದು ವರದಿಯಾಗಿದೆ. ಅದರ ಮೇಲೆ ವಿಶ್ವಾಸವಿಟ್ಟು, ಸರಬರಾಜಿನಲ್ಲಿ ಸಮಸ್ಯೆ ಆಗದಂತೆ ಮತ್ತು ಮುಂದಿನ ದಿನಗಳಲ್ಲಿ ಹೆಚ್ಚಿನ ಸೋಂಕು ಆದಾಗಲೂ ಪರಿಸ್ಥಿತಿ ಗಂಭೀರವಾಗದಂತೆ ನೋಡಿಕೊಳ್ಳಲು ಬೇಕಾದ ವ್ಯವಸ್ಥೆ ಮಾಡಬೇಕು. ಇದಕ್ಕೆ ಸಂಬಂಧಿಸಿದ ವಿವರಗಳನ್ನು ಸಾರ್ವಜನಿಕವಾಗಿ ಪ್ರಕಟಿಸಬೇಕು.
  5. ಆಸ್ಪತ್ರೆಗಳಲ್ಲಿ ಸಿಬ್ಬಂದಿಯ ಕೊರತೆ ಮೊದಲೇ ಇತ್ತು; ಅದರ ಜೊತೆಗೆ ಈಗ ಕೆಲಸದ ಒತ್ತಡ ಹೆಚ್ಚಾಗಿದೆ; ಸ್ವತಃ ಕೋವಿಡ್ ಸೋಂಕಿನಿಂದ ಬಳಲಿ ವಿಶ್ರಾಂತಿಗೆ ತೆರಳುವವರೂ ಇರಬಹುದು. ಹಾಗಾಗಿ ಹೆಚ್ಚಿನ ಜನರನ್ನು ನೇಮಕಾತಿ ಮಾಡಿಕೊಳ್ಳಬೇಕು. ಇದು ವಿಶೇಷ ಪರಿಸ್ಥಿತಿಯಾಗಿದ್ದು, ಮೂವತ್ತು ಸಾವಿರದಷ್ಟು ಇರುವ ಗುತ್ತಿಗೆ ನೌಕರರನ್ನು ಈಗಲಾದರೂ ಗೌರವಯುತವಾಗಿ ನಡೆಸಿಕೊಳ್ಳಬೇಕು.
  6. ರಾಜ್ಯದ ಪ್ರತಿಯೊಂದು ಪಾಲಿಕೆ, ನಗರಸಭೆ, ಪುರಸಭೆ, ಪಂಚಾಯ್ತಿ ಸೇರಿದಂತೆ ಜನಪ್ರತಿನಿಧಿಗಳು ತುರ್ತು ಸಂದರ್ಭದಲ್ಲಿ ಯಾರನ್ನು ಸಂಪರ್ಕಿಸಬೇಕು ಎಂಬ ವಿವರಗಳನ್ನು ನೀಡಿ ಅತ್ಯಂತ ಸಮರ್ಥವಾಗಿ ಕಾರ್ಯನಿರ್ವಹಿಸಬೇಕು.
  7. ಚಿಕಿತ್ಸೆಗೆ ಸಂಬಂಧಿಸಿದಂತೆ ಐಸಿಎಂಆರ್( ICMR) ಅಥವಾ ವಿಶ್ವ ಆರೋಗ್ಯ ಸಂಸ್ಥೆಗಳೂ ಅನುಮೋದಿಸಿರದ ರೆಮೆಡಿಸಿವಿರ್ ಥರದ ಸಂಗತಿಗಳಿಗೆ ಒತ್ತು ನೀಡದಂತೆ ಕ್ರಮ ಕೃಗೊಳ್ಳಬೇಕು.
  8. ಯಾರಿಗೆ ಆಕ್ಸಿಜನ್ ಬೆಡ್ ಅಥವಾ ಐಸಿಯು ಬೆಡ್ ಅಗತ್ಯವಿದೆಯೋ ಅವರಿಗೇ ಆದ್ಯತೆಯ ಮೇರೆಗೆ ಸಿಗುವಂತೆ ಮತ್ತು ಈ ವಿಚಾರದಲ್ಲಿ ವಿಐಪಿ ಶಿಫಾರಸ್ಸುಗಳಿಗೆ ಮಣಿಯದಂತೆ ನಿಯಮಾವಳಿಗಳನ್ನು ರೂಪಿಸಿ ಅದರ ಉಸ್ತುವಾರಿಯನ್ನು ಕಟ್ಟುನಿಟ್ಟಾಗಿ ಮಾಡಬೇಕು.

ಇದನ್ನೂ ಓದಿ: ಆಡಳಿತದಲ್ಲಿ ರಾಜ್ಯಪಾಲರ ಹಸ್ತಕ್ಷೇಪ: ಬಿಎಸ್‌ವೈ ವಿರುದ್ಧ ಬಿಜೆಪಿ ಹೈಕಮಾಂಡ್ ತಂತ್ರವೇ?

ಬೆಂಗಳೂರು ಬಹಳ ಮುಖ್ಯವೇ. ಆದರೆ ಯಾವ ಕಾರಣಕ್ಕೂ ಉಳಿದ ಜಿಲ್ಲಾ ಕೇಂದ್ರಗಳನ್ನು ನಿರ್ಲಕ್ಷ್ಯ ಮಾಡಬಾರದು. ಏಕೆಂದರೆ ಮಹಾರಾಷ್ಟ್ರದಲ್ಲಿ ಮುಂಬಯಿಯ ಆಚೆ ಇತರ ನಗರ ಪಟ್ಟಣಗಳಲ್ಲೂ ದೊಡ್ಡ ಸಮಸ್ಯೆ ಉಂಟಾಗಿದ್ದನ್ನು ಕಾಣುತ್ತಿದ್ದೇವೆ. ಆಕ್ಸಿಜನ್ ಹಾಗೂ ಆಕ್ಸಿಜನ್ ಇರುವ ಹಾಸಿಗೆಗಳು ಎಲ್ಲಾ ಕಡೆ (ತಾಲೂಕು ಮಟ್ಟದವರೆಗೆ) ಇರುವಂತೆ ನೋಡಿಕೊಳ್ಳುವುದು ಇಂದಿನ ಅಗತ್ಯ.

ಅತ್ಯಂತ ಅಗತ್ಯವಿರುವ ಮತ್ತು ಸಾಧ್ಯವೂ ಇರುವ ಈ ಕೆಲಸವನ್ನು ಮಾಡದ ಸರ್ಕಾರವು ನಾಗರಿಕ ಸರ್ಕಾರ ಅಲ್ಲ ಎಂದಾಗಿಬಿಡುತ್ತದೆ. ನಮ್ಮ ರಾಜ್ಯದ ಸರ್ಕಾರವು ಅಂತಹ ಅಪಕೀರ್ತಿಯನ್ನು ತಂದುಕೊಳ್ಳಲಾರದು ಎಂಬ ವಿಶ್ವಾಸವಿದ್ದರೂ, ಇದನ್ನು ಆಗ ಮಾಡಲೇಬೇಕೆಂದು ಒತ್ತಡ ತರುವುದು ನಮ್ಮ ಕರ್ತವ್ಯವೆಂದು ಭಾವಿಸಿ ಸಾಧ್ಯವಿರುವ ಎಲ್ಲಾ ಪ್ರಯತ್ನವನ್ನು ನಮ್ಮ ಕಡೆಯಿಂದ ಮಾಡುತ್ತೇವೆ. ನಾಡಿನ ಎಲ್ಲಾ ಸಂಘಟನೆಗಳು/ವಿರೋಧ ಪಕ್ಷಗಳು/ಮಾಧ್ಯಮ ಸಂಸ್ಥೆಗಳು ಇದು ಎಲ್ಲರ ಬೇಡಿಕೆಗಳ ಪಟ್ಟಿ ಎಂದು ಭಾವಿಸಿ ಕಾರ್ಯಪ್ರವೃತ್ತ ಆಗಬೇಕೆಂದು ಕೋರುತ್ತೇವೆ.

ಇದನ್ನೂ ಓದಿ: ಬೆಡ್‌ಗಾಗಿ ಸೋಂಕಿತರ ಪರದಾಟ: ಬೆಂಗಳೂರಿನ 10,100 ಬೆಡ್‌ಗಳ ದೇಶದ ಅತಿದೊಡ್ಡ ಕೋವಿಡ್ ಕೇರ್ ಸೆಂಟರ್ ಏನಾಯಿತು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...