Homeಕರೋನಾ ತಲ್ಲಣಕರ್ನಾಟಕದ ಜನರ ತುರ್ತು ಒತ್ತಾಯ ಪತ್ರ: ಪ್ರತಿದಿನ ವರದಿ ಪ್ರಕಟಿಸಲು ಸಿಎಂ & ಆರೋಗ್ಯ ಸಚಿವರ...

ಕರ್ನಾಟಕದ ಜನರ ತುರ್ತು ಒತ್ತಾಯ ಪತ್ರ: ಪ್ರತಿದಿನ ವರದಿ ಪ್ರಕಟಿಸಲು ಸಿಎಂ & ಆರೋಗ್ಯ ಸಚಿವರ ಮೇಲೆ ಒತ್ತಡ

- Advertisement -
- Advertisement -

ಕೋವಿಡ್‌ ಮರಣಗಳನ್ನು ತಡೆಗಟ್ಟಲು ನಿಗದಿತವಾಗಿ ನಿರ್ದಿಷ್ಟ ಕ್ರಮಗಳಿಗೆ ಆಗ್ರಹಿಸಿ ‘ಕರ್ನಾಟಕ ಜನಾರೋಗ್ಯ ಚಳುವಳಿ’ಯು ಮುಖ್ಯಮಂತ್ರಿ ಮತ್ತು ಆರೋಗ್ಯ ಸಚಿವರಿಗೆ ಒತ್ತಾಯ ಪತ್ರವನ್ನು ಗುರುವಾರ ಕಳುಹಿಸಿದೆ.

‘ಕರ್ನಾಟಕ ಜನಾರೋಗ್ಯ ಚಳುವಳಿ’ಯು ಪತ್ರವನ್ನು ತಜ್ಞರ ಹಾಗೂ ತಳಮಟ್ಟದಲ್ಲಿ ಕೆಲಸ ಮಾಡುತ್ತಿರುವವರ ಜೊತೆಗಿನ ಸಮಾಲೋಚನೆಯಿಂದ ಸಿದ್ಧಪಡಿಸಿದೆ. ಪತ್ರದಲ್ಲಿ ಹೇಳಿರುವ ಕ್ರಮಗಳನ್ನು ರಾಜ್ಯ ಸರ್ಕಾರವು ಜಾರಿಗೆ ತರಲೇಬೇಕು ಮತ್ತು ಪ್ರತಿದಿನ ಈ ಕುರಿತು ಕೋವಿಡ್ ಪಾಸಿಟಿವ್ ಹಾಗೂ ಸಾವುಗಳ ಸಂಖ್ಯೆ ಪ್ರಕಟಿಸಿದ ರೀತಿಯಲ್ಲೇ ವರದಿ ನೀಡಬೇಕೆಂದು ಒತ್ತಾಯಿಸಿದೆ.

ಮಾನ್ಯ ಮುಖ್ಯಮಂತ್ರಿಗಳೇ ಹಾಗೂ ಆರೋಗ್ಯ ಸಚಿವರೇ..

ಪ್ರತಿದಿನ ಕೋವಿಡ್ ರೋಗಿಗಳ ಸಂಖ್ಯೆ ತೀವ್ರ ಪ್ರಮಾಣದಲ್ಲಿ ಹೆಚ್ಚಾಗುತ್ತಿದ್ದು, ಆಕ್ಸಿಜನ್ ಇರುವ ಹಾಸಿಗೆಗಳ ಮತ್ತು ವೆಂಟಿಲೇಟರ್ ಇರುವ ಐಸಿಯು ಹಾಸಿಗೆಗಳ ಕೊರತೆಯಿಂದ ಸಾವಿನ ಪ್ರಮಾಣವೂ ಹೆಚ್ಚಾಗುತ್ತಿದೆ.

ಇದನ್ನೂ ಓದಿ: ಏರ್‌ಪೋರ್ಟ್-ಸಿಲ್ಕ್‌ಬೋರ್ಡ್ ಮೆಟ್ರೋ ಕಾಮಗಾರಿ ವಿಳಂಬಕ್ಕೆ ಮೋದಿಯವರೆ ಹೊಣೆಯೇ?: ಜಾಹೀರಾತಿಗೆ ಕೋಟಿ ರೂ ಖರ್ಚು ಏಕೆ?

ಮೇ ಮೊದಲ ವಾರದ ಹೊತ್ತಿಗೆ ಸ್ಫೋಟಕ ಪರಿಸ್ಥಿತಿ ಉಂಟಾಗಲಿದೆ ಎಂದು ತಜ್ಞರು ಹೇಳಿರುವುದು ಈಗಾಗಲೇ ವರದಿಯಾಗಿದೆ. ಜೊತೆಗೆ ರೋಗಿಗಳಲ್ಲಿ ಹಾಗೂ ಜನಸಾಮಾನ್ಯರಲ್ಲಿ ಭಾರೀ ದೊಡ್ಡ ಭೀತಿ ಉಂಟಾಗಿದೆ. ಇದನ್ನು ನಿಭಾಯಿಸುವುದು ಸರ್ಕಾರದ ಕರ್ತವ್ಯವಾಗಿದೆ.

ಈ ಹಿನ್ನೆಲೆಯಲ್ಲಿ ಕೆಳಗಿನ ಕ್ರಮಗಳನ್ನು ಸರ್ಕಾರ ಈ ತಕ್ಷಣ ಕೈಗೊಳ್ಳಲೇಬೇಕೆಂದು ಆಗ್ರಹಿಸುತ್ತೇವೆ ಮತ್ತು ಪ್ರತಿದಿನ ಈ ಸಂಬಂಧ ವರದಿಯನ್ನು ರಾಜ್ಯದ ಜನರ ಮುಂದೆ ಇಡಬೇಕೆಂದು ಒತ್ತಾಯಿಸುತ್ತೇವೆ

  1. ಈಗಿಂದೀಗಲೇ ಸರ್ಕಾರವು ಬೆಂಗಳೂರು ಮತ್ತು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಆಕ್ಸಿಜೆನ್ ಇರುವ ಹಾಸಿಗೆಗಳ ಸಂಖ್ಯೆಯನ್ನು ಹೆಚ್ಚಿಸಬೇಕು. ಬೆಂಗಳೂರಿನಲ್ಲಿ ದಿನಕ್ಕೆ ಕನಿಷ್ಠ 200 ಮತ್ತು ಜಿಲ್ಲಾ ಕೇಂದ್ರಗಳಲ್ಲಿ ದಿನಕ್ಕೆ 25 ಸಂಖ್ಯೆಯನ್ನು ಹೆಚ್ಚಿಸಬೇಕು.
  2. ಪ್ರತಿದಿನ ಸರ್ಕಾರವು ಎಷ್ಟು ಆಕ್ಸಿಜನ್ ಬೆಡ್ʼಗಳನ್ನು ಹೊಸದಾಗಿ ಎಲ್ಲಿ ಹೆಚ್ಚು ಮಾಡಿದ್ದೇವೆ ಎಂಬುದನ್ನು ಪ್ರಕಟಿಸಬೇಕು.
  3. ಬೆಂಗಳೂರಿನಲ್ಲಿ ಪ್ರತಿ ದಿನ ಕನಿಷ್ಠ 500 ಮತ್ತು ಪ್ರತಿ ಜಿಲ್ಲಾ ಕೇಂದ್ರಗಳಲ್ಲಿ ತಲಾ 50 ರಷ್ಟು ವೆಂಟಿಲೇಟರ್‌‌ಗಳನ್ನು ಇನ್ನೊಂದು ವಾರ ಕಾಲ ಹೆಚ್ಚಿಸಲು ಸಮರೋಪಾದಿ ಕ್ರಮಗಳನ್ನು ತೆಗೆದುಕೊಳ್ಳಬೇಕು.
  4. ಆಕ್ಸಿಜನ್ ಕೊರತೆ ಇಲ್ಲವೆಂದು ಸರ್ಕಾರವು ಹೇಳಿರುವುದು ವರದಿಯಾಗಿದೆ. ಅದರ ಮೇಲೆ ವಿಶ್ವಾಸವಿಟ್ಟು, ಸರಬರಾಜಿನಲ್ಲಿ ಸಮಸ್ಯೆ ಆಗದಂತೆ ಮತ್ತು ಮುಂದಿನ ದಿನಗಳಲ್ಲಿ ಹೆಚ್ಚಿನ ಸೋಂಕು ಆದಾಗಲೂ ಪರಿಸ್ಥಿತಿ ಗಂಭೀರವಾಗದಂತೆ ನೋಡಿಕೊಳ್ಳಲು ಬೇಕಾದ ವ್ಯವಸ್ಥೆ ಮಾಡಬೇಕು. ಇದಕ್ಕೆ ಸಂಬಂಧಿಸಿದ ವಿವರಗಳನ್ನು ಸಾರ್ವಜನಿಕವಾಗಿ ಪ್ರಕಟಿಸಬೇಕು.
  5. ಆಸ್ಪತ್ರೆಗಳಲ್ಲಿ ಸಿಬ್ಬಂದಿಯ ಕೊರತೆ ಮೊದಲೇ ಇತ್ತು; ಅದರ ಜೊತೆಗೆ ಈಗ ಕೆಲಸದ ಒತ್ತಡ ಹೆಚ್ಚಾಗಿದೆ; ಸ್ವತಃ ಕೋವಿಡ್ ಸೋಂಕಿನಿಂದ ಬಳಲಿ ವಿಶ್ರಾಂತಿಗೆ ತೆರಳುವವರೂ ಇರಬಹುದು. ಹಾಗಾಗಿ ಹೆಚ್ಚಿನ ಜನರನ್ನು ನೇಮಕಾತಿ ಮಾಡಿಕೊಳ್ಳಬೇಕು. ಇದು ವಿಶೇಷ ಪರಿಸ್ಥಿತಿಯಾಗಿದ್ದು, ಮೂವತ್ತು ಸಾವಿರದಷ್ಟು ಇರುವ ಗುತ್ತಿಗೆ ನೌಕರರನ್ನು ಈಗಲಾದರೂ ಗೌರವಯುತವಾಗಿ ನಡೆಸಿಕೊಳ್ಳಬೇಕು.
  6. ರಾಜ್ಯದ ಪ್ರತಿಯೊಂದು ಪಾಲಿಕೆ, ನಗರಸಭೆ, ಪುರಸಭೆ, ಪಂಚಾಯ್ತಿ ಸೇರಿದಂತೆ ಜನಪ್ರತಿನಿಧಿಗಳು ತುರ್ತು ಸಂದರ್ಭದಲ್ಲಿ ಯಾರನ್ನು ಸಂಪರ್ಕಿಸಬೇಕು ಎಂಬ ವಿವರಗಳನ್ನು ನೀಡಿ ಅತ್ಯಂತ ಸಮರ್ಥವಾಗಿ ಕಾರ್ಯನಿರ್ವಹಿಸಬೇಕು.
  7. ಚಿಕಿತ್ಸೆಗೆ ಸಂಬಂಧಿಸಿದಂತೆ ಐಸಿಎಂಆರ್( ICMR) ಅಥವಾ ವಿಶ್ವ ಆರೋಗ್ಯ ಸಂಸ್ಥೆಗಳೂ ಅನುಮೋದಿಸಿರದ ರೆಮೆಡಿಸಿವಿರ್ ಥರದ ಸಂಗತಿಗಳಿಗೆ ಒತ್ತು ನೀಡದಂತೆ ಕ್ರಮ ಕೃಗೊಳ್ಳಬೇಕು.
  8. ಯಾರಿಗೆ ಆಕ್ಸಿಜನ್ ಬೆಡ್ ಅಥವಾ ಐಸಿಯು ಬೆಡ್ ಅಗತ್ಯವಿದೆಯೋ ಅವರಿಗೇ ಆದ್ಯತೆಯ ಮೇರೆಗೆ ಸಿಗುವಂತೆ ಮತ್ತು ಈ ವಿಚಾರದಲ್ಲಿ ವಿಐಪಿ ಶಿಫಾರಸ್ಸುಗಳಿಗೆ ಮಣಿಯದಂತೆ ನಿಯಮಾವಳಿಗಳನ್ನು ರೂಪಿಸಿ ಅದರ ಉಸ್ತುವಾರಿಯನ್ನು ಕಟ್ಟುನಿಟ್ಟಾಗಿ ಮಾಡಬೇಕು.

ಇದನ್ನೂ ಓದಿ: ಆಡಳಿತದಲ್ಲಿ ರಾಜ್ಯಪಾಲರ ಹಸ್ತಕ್ಷೇಪ: ಬಿಎಸ್‌ವೈ ವಿರುದ್ಧ ಬಿಜೆಪಿ ಹೈಕಮಾಂಡ್ ತಂತ್ರವೇ?

ಬೆಂಗಳೂರು ಬಹಳ ಮುಖ್ಯವೇ. ಆದರೆ ಯಾವ ಕಾರಣಕ್ಕೂ ಉಳಿದ ಜಿಲ್ಲಾ ಕೇಂದ್ರಗಳನ್ನು ನಿರ್ಲಕ್ಷ್ಯ ಮಾಡಬಾರದು. ಏಕೆಂದರೆ ಮಹಾರಾಷ್ಟ್ರದಲ್ಲಿ ಮುಂಬಯಿಯ ಆಚೆ ಇತರ ನಗರ ಪಟ್ಟಣಗಳಲ್ಲೂ ದೊಡ್ಡ ಸಮಸ್ಯೆ ಉಂಟಾಗಿದ್ದನ್ನು ಕಾಣುತ್ತಿದ್ದೇವೆ. ಆಕ್ಸಿಜನ್ ಹಾಗೂ ಆಕ್ಸಿಜನ್ ಇರುವ ಹಾಸಿಗೆಗಳು ಎಲ್ಲಾ ಕಡೆ (ತಾಲೂಕು ಮಟ್ಟದವರೆಗೆ) ಇರುವಂತೆ ನೋಡಿಕೊಳ್ಳುವುದು ಇಂದಿನ ಅಗತ್ಯ.

ಅತ್ಯಂತ ಅಗತ್ಯವಿರುವ ಮತ್ತು ಸಾಧ್ಯವೂ ಇರುವ ಈ ಕೆಲಸವನ್ನು ಮಾಡದ ಸರ್ಕಾರವು ನಾಗರಿಕ ಸರ್ಕಾರ ಅಲ್ಲ ಎಂದಾಗಿಬಿಡುತ್ತದೆ. ನಮ್ಮ ರಾಜ್ಯದ ಸರ್ಕಾರವು ಅಂತಹ ಅಪಕೀರ್ತಿಯನ್ನು ತಂದುಕೊಳ್ಳಲಾರದು ಎಂಬ ವಿಶ್ವಾಸವಿದ್ದರೂ, ಇದನ್ನು ಆಗ ಮಾಡಲೇಬೇಕೆಂದು ಒತ್ತಡ ತರುವುದು ನಮ್ಮ ಕರ್ತವ್ಯವೆಂದು ಭಾವಿಸಿ ಸಾಧ್ಯವಿರುವ ಎಲ್ಲಾ ಪ್ರಯತ್ನವನ್ನು ನಮ್ಮ ಕಡೆಯಿಂದ ಮಾಡುತ್ತೇವೆ. ನಾಡಿನ ಎಲ್ಲಾ ಸಂಘಟನೆಗಳು/ವಿರೋಧ ಪಕ್ಷಗಳು/ಮಾಧ್ಯಮ ಸಂಸ್ಥೆಗಳು ಇದು ಎಲ್ಲರ ಬೇಡಿಕೆಗಳ ಪಟ್ಟಿ ಎಂದು ಭಾವಿಸಿ ಕಾರ್ಯಪ್ರವೃತ್ತ ಆಗಬೇಕೆಂದು ಕೋರುತ್ತೇವೆ.

ಇದನ್ನೂ ಓದಿ: ಬೆಡ್‌ಗಾಗಿ ಸೋಂಕಿತರ ಪರದಾಟ: ಬೆಂಗಳೂರಿನ 10,100 ಬೆಡ್‌ಗಳ ದೇಶದ ಅತಿದೊಡ್ಡ ಕೋವಿಡ್ ಕೇರ್ ಸೆಂಟರ್ ಏನಾಯಿತು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...