HomeUncategorizedದೇಶಪಾಂಡೆಯ ದ್ರೋಹ ಕೈಗೆ ಅರ್ಥವಾಗುತ್ತಿಲ್ಲ ಯಾಕೆ?

ದೇಶಪಾಂಡೆಯ ದ್ರೋಹ ಕೈಗೆ ಅರ್ಥವಾಗುತ್ತಿಲ್ಲ ಯಾಕೆ?

- Advertisement -
- Advertisement -

ನಹುಷ |

ದೇಶಪಾಂಡೆಗೆ ವಯಸ್ಸಾಗಿದೆ… ದೀರ್ಘಕಾಲ ಅಧಿಕಾರ ಅನುಭವಿಸಿಯೂ ಆಗಿದೆ….. ಅವ್ರು ಶಿವರಾಮ ಹೆಬ್ಬಾರ್‍ಗೆ ಮಂತ್ರಿಗಿರಿ ಬಿಟ್ಟುಕೊಡೋದು ಚಲೋ… ಕಿರಿಯರಿಗೆ ಪ್ರೋತ್ಸಾಹಿಸುಬೇಕವ್ರು….” ಎಂದು ಮೂರ್ನಾಲ್ಕು ತಿಂಗಳ ಹಿಂದೊಂದು ದೇಶಾವರಿ ಹೇಳಿಕೆ ಒಗಾಯಿಸಿದ್ದರು ಆನಂದ ಅಸ್ನೋಟಿಕರ್. ಆಪರೇಷನ್ ಕಮಲದ ಸೆಳೆತಕ್ಕೆ ಸಿಲುಕಿ ಹೆಬ್ಬಾರ್ ತಕಧಿಮಿ ಕುಣಿಯುತ್ತಿದ್ದ ಕಾಲವದು.
ಈ ಪ್ರಹಸನದ ಬೆನ್ನಿಗೇ- ಅಂದರೆ ಲೋಕಸಭೆ ಇಲೆಕ್ಷನ್ ಘೋಷಣೆ ಒಂದೂವರೆ ವಾರವಷ್ಟೇ ಇದ್ದ ಹೊತ್ತಲ್ಲಿ ಬಿಜೆಪಿಯ ಅನಂತ್ಮಾಣಿ, ದೇಶಪಾಂಡೆಯೇ ತನ್ನ ಎದುರಾಳಿ ಆಗಬಹುದೆಂಬ ಆತಂಕದಲ್ಲಿ “ಮಂತ್ರಿ ದೇಶಪಾಂಡೆ ಅಂದ್ರೆ ಪರ್ಸೆಂಟೇಜ್ ಪಾಂಡೆ ಕಣ್ರೀ… ಹಳ್ಳೀಲಿ ಸರ್ಕಾರಿ ಬಾವಿ ತೆಗೆದ್ರೂ ಅದರ ಪರ್ಸೆಂಜೇಜು ದೇಶಪಾಂಡೆಗೆ ಹೋಗ್ತದೆ….!” ಎಂದು ಗಂಭೀರ ಆರೋಪ ಮಾಡಿದ್ದ.
ಈ ಇಬ್ಬರ ಟೀಕೆಯಲ್ಲಿ ದೇಶಪಾಂಡೆಯನ್ನು ಅಪಮಾನಕ್ಕೀಡು ಮಾಡುವಂಥದ್ದು ಯಾವುದು? ಸಾಕ್ಷಾತ್ ದೇಶಪಾಂಡೆ ಸಾಹೇಬರ ಪ್ರಕಾರ ಅಸ್ನೋಟಿಕರ್‍ನದೇ ಅಕ್ಷಮ್ಯ ಅಪರಾಧ. ಮುಗಿದ ಪಾರ್ಲಿಮೆಂಟ್ ಇಲೆಕ್ಷನ್‍ನಲ್ಲಿ ಅಸ್ನೋಟಿಕರ್‍ನ ಈ ಮಾತುಗಳನ್ನೇ ನೆಪಮಾಡಿಕೊಂಡು ಮೈತ್ರಿಕೂಟದ ಸೋಲಿಗೆ ಏನೆಲ್ಲಾ ಮಾಡಬಹುದೋ ಅದೆಲ್ಲಾ ದೇಶಪಾಂಡೆ ಮಾಡಿದ್ದಾರೆ. ಅಲ್ಲಿಗೆ ಸಮಯ ಸಾಧಕತನವನ್ನೇ ಸಿದ್ಧಾಂತ ಮಾಡಿಕೊಂಡಿರುವ ದೇಶಪಾಂಡೆಯ ದ್ರೋಹ-ದೋಖಾ ಬುದ್ಧಿ ಜಿಲ್ಲೆಯ ರಾಜಕೀಯ ಇತಿಹಾಸದಲ್ಲಿ ದಾಖಲಾಗಿ ಹೋಗಿದೆ!!
ಈ ಬಾರಿ ಕೈ ಸಿಂಬಾಲ್‍ನಲ್ಲಿ ಹರಿಪ್ರಸಾದ್, ಮ್ಯಾಗಿ, ಕೆ.ಎಚ್.ಗೌಡ, ಭೀಮಣ್ಣನಾಯ್ಕ… ಹೀಗೆ ಯಾರೇ ನಿಂತರೂ ಗೆಲ್ಲುವ ಅವಕಾಶ ಹೆಚ್ಚಿತ್ತು. ದೇಶಪಾಂಡೆ ಮತ್ತವನ ಮಗನ ಬಿಟ್ಟು ಕಾಂಗ್ರೆಸ್‍ನ ಎರಡನೇ ಸಾಲಿನ ಲೀಡರ್ ಯಾರಿಗಾದರೂ ಅಭ್ಯರ್ಥಿ ಮಾಡಿ, ದೇಶಪಾಂಡೆಯನ್ನು ಕಿತಾಪತಿ ಮಾಡದಂತೆ ಮೂಗುದಾರ ಹಾಕಿ ಕೂಡ್ರಿಸಿದ್ದರೆ ಅನಂತ್ಮಾಣಿಯನ್ನ ಸುಲಭವಾಗಿ ಮಾಜಿ ಮಾಡಬಹುದಿತ್ತು. ಅಷ್ಟೂ ದೊಡ್ಡಮಟ್ಟದಲ್ಲಿ ಮಾಣಿ ಬಗ್ಗೆ ಬೇಸರ-ಹೇಸಿಗೆ ಕ್ಷೇತ್ರದಲ್ಲಿ ಹೆಪ್ಪುಗಟ್ಟಿತ್ತು! ಆದರೆ ಹಾವು ಮುಂಗುಸಿಯಂತೆ ಕಿತ್ತಾಡುವ ಮ್ಯಾಗಿ-ದೇಶಪಾಂಡೆ ಒಂದಾಗಿ ನೆಲೆ-ಬೆಲೆಯೇ ಜಿಲ್ಲೆಯಲ್ಲಿ ಇಲ್ಲದ ಜೆಡಿಎಸ್‍ಗೆ ಕ್ಷೇತ್ರವನ್ನು ತಟ್ಟೆಯಲ್ಲಿಟ್ಟು ಕೊಟ್ಟಿದ್ದರು.
ಮ್ಯಾಗಿ ಮೈತ್ರಿಕೂಟದ ಪ್ರಚಾರಕ್ಕೆಂದು ಜಿಲ್ಲೆಗೆ ಒಂದು ಸಲವೂ ಬರಲಿಲ್ಲ. ದೇಶಪಾಂಡೆ ಮತದಾನಕ್ಕೆ ವಾರವಿರುವಾಗ ಕಾಟಾಚಾರಕ್ಕೆ ಬಂದವರು, ನಾಲ್ಕುದಿನ ಮೊದಲೇ ನಾಪತ್ತೆಯಾಗಿ ಹೋದರು. ಹೋದಲ್ಲೆಲ್ಲ ತನ್ನ ಶಿಷ್ಯರನ್ನು ರಹಸ್ಯವಾಗಿ ಕರೆದು ಅಸ್ನೋಟಿಕರ್ ಸೋಲಿಸಲು ‘ಆದೇಶ’ ಕೊಟ್ಟರು.
ಏಐಸಿಸಿ ಮಟ್ಟದಲ್ಲಿ ಪ್ರಭಾವವಿರುವ ಬಿ.ಕೆ.ಹರಿಪ್ರಸಾದ್, ಮಾರ್ಗರೆಟ್ ಆಳ್ವ, ಸಿದ್ದರಾಮಯ್ಯನಂಥವರೇ ಅದ್ಯಾಕೋ ದೇಶಪಾಂಡೆಯ ಈ ಸ್ವಭಾವ ಕಂಡೂ ಕಾಣದಂತಿದ್ದಾರೆ. ಬಸವರಾಜ ಹೊರಟ್ಟಿ ಹತ್ತಿರವೇ “ನಂಗೆ ರಾಜಕೀಯ ಸಾಕಾಗಿದೆ… ಪಕ್ಷ, ಸರ್ಕಾರ ನನ್ನ ಮೇಲೆ ಕ್ರಮ ಕೈಗೊಂಡರೂ ಬೇಜಾರಿಲ್ಲ… ನಾನು ರೀಟೈರ್ ಆಗ್ತೀನೋ ಹೊರತು ಆ ಅಧಿಕ ಪ್ರಸಂಗಿ ಅಸ್ನೋಟಿಕರ್ ಪರ ಕೆಲಸ ಮಾಡೋದಿಲ್ಲ…” ಎಂದು ಖಡಾಖಂಡಿತವಾಗೇ ಹೇಳಿದ್ದರು ಎನ್ನಲಾಗುತ್ತಿದೆ.
ಖಾನಾಪುರದ ಕಾಂಗ್ರೆಸ್ ಶಾಸಕಿ ಅಂಜಲಿ ನಿಂಬಾಳ್ಕರ್ ಪ್ರಾಮಾಣಿಕವಾಗಿ ಪ್ರಬಲವಾಗಿ ಆಸ್ನೋಟಿಕರ್ ಪರ ಕೆಲಸ ಮಾಡುತ್ತಿದ್ದರು. ಇದನ್ನು ಕಂಡು ಸಿಡಿಮಿಡಿಗೊಂಡ ದೇಶಪಾಂಡೆ ಆಕೆಯನ್ನು ಕರೆದು “ನೋಡಮ್ಮಾ… ನೀನು ಈಗ ಜೆಡಿಎಸ್ ಪರ ಹೀಗೆಲ್ಲ ಕೆಲ್ಸ ಮಾಡಿದ್ರೆ ಮುಂದಿನ ಅಸೆಂಬ್ಲಿ ಇಲೆಕ್ಷನ್‍ದಾಗೆ ತೊಂದ್ರೆ ಅಕ್ಕೇತಿ… ನಿಂಗ ಕಳ್ದಬಾರಿ ಠಕ್ಕರ್ ಕೊಟ್ಟಿದ್ದ ಜೆಡಿಎಸ್‍ನ ನಾಸೀರ್ ಭಾಗವನ್‍ಗೆ ಹೆಲ್ಪ್ ಆಕ್ಕೇತಿ… ನೋಡ್ ಸ್ವಲ್ಪ ವಿಚಾರ ಮಾಡ್…” ಎಂದು ಹೆದರಿಸಿ ಆಕೆಯ ವೇಗಕ್ಕೆ ಕಡಿವಾಣ ಹಾಕಿದ್ದಾರೆ.
ಅಸ್ನೋಟಿಕರ್ ಮಾಣಿ ಮೇಲೆ ದಾಳಿ ಮಾಡುತ್ತಿದ್ದ ಪರಿ ನೋಡಿದರೆ ಬಿಜೆಪಿಗೆ ಡ್ಯಾಮೇಜು ಆಗುತ್ತದೆ, ಮೈತ್ರಿ ಕೂಟ ಬಲಗೊಳಿಸುತ್ತದೆಂದು ದೇಶಪಾಂಡೆ ಜೆಡಿಎಸ್‍ನ ಬಸವರಾಜ ಹೊರಟ್ಟಿಯನ್ನು ಬಳಸಿಕೊಂಡರು. ಅಸ್ನೋಟಿಕರ್‍ಗೆ ಆಕ್ರಮಣಶೀಲತೆ ಕಮ್ಮಿ ಮಾಡುವಂತೆ ಹೊರಟ್ಟಿಯಿಂದ “ಬುದ್ಧಿ” ಹೇಳಿಸಿದರು. ಹೊರಟ್ಟಿ ಸಂಚು ಅರಿಯದ ಅಸ್ನೋಟಿಕರ್ ಕೊನೆಕೊನೆಯಲ್ಲಿ ಜೋಶ್ ಕಳಕೊಂಡರು. ಇದು ಆತನಿಗೆ ದೊಡ್ಡ ಹೊಡೆತವನ್ನೇ ಕೊಟ್ಟಿದೆ!!
ಇಷ್ಟೆಲ್ಲಾ ಎಡರುತೊಡರು ಎದುರಾದರೂ ಅಸ್ನೋಟಿಕರ್ ತೀರಾ ದುರ್ಬಲವಾಗಿಲ್ಲ. ದೇಶಪಾಂಡೆ ತಲೆಕಂಡರಾಗದ ಕಾಂಗ್ರೆಸ್‍ನ ಹಳಿಯಾಳದ ಎಮ್ಮೆಲ್ಸಿ ಘೋಟನೇಕರ್, ಶಾಸಕ ಹೆಬ್ಬಾರ್, ಮಾಜಿ ಶಾಸಕರಾದ ಸತೀಶ್ ಸೈಲ್, ಮಂಕಾಳ ವೈದ್ಯ, ಆರ್.ಎನ್.ನಾಯ್ಕ, ಜೆ.ಡಿ.ನಾಯ್ಕ ಒಂದು ಹಂತದವರೆಗೆ ಮೈತ್ರಿಕೂಟದ ಗೆಲುವಿಗೆ ಪ್ರಯತ್ನ ಪಟ್ಟಿದ್ದಾರೆ. ಕಿತ್ತೂರು, ಖಾನಾಪುರದಲ್ಲಿ ಮಾಣಿಗೆ ಹಿನ್ನಡೆಯಾಗಿದೆ. ಕರಾವಳಿಯಲ್ಲಿ ಮೈತ್ರಿಕೂಟ ಏದುಸಿರುಬಿಡುತ್ತಿದೆ. ಘಟ್ಟದ ಮೇಲೆ ಸಮಬಲ ಇರುವಂತಿದೆ. ಎತ್ತಿಂದೆತ್ತ ಲೆಕ್ಕಹಾಕಿ ತಾಳೆ ಹಾಕಿದರೂ ಎದುರು ಹಿಂದುತ್ವ, ಬ್ರಾಹ್ಮಣಿಕೆ ಮಸಲತ್ತುಗಳು ಮೇಲುಗೈ ಸಾಧಿಸಿರುವುದು ಕಾಣಿಸುತ್ತದೆ.
ಕೇಸರಿ-ಭಜರಂಗಿ ಪಡೆಯ ಲೆಕ್ಕಾಚಾರದಂತೆ ಮಾಣಿ ಎರಡು ಲಕ್ಷ ಅಂತರದಲ್ಲಿ ಗೆಲ್ಲುತ್ತಾನೆ. ಅಷ್ಟು ಸರಳ ಸಮೀಕರಣ ಕ್ಷೇತ್ರದಲ್ಲಿಲ್ಲ. ಮಾಣಿ ವಿರುದ್ಧ ಅಂಡರ್ ಕರಂಟ್ ಕ್ಷೇತ್ರಾದಾದ್ಯಂತ ಹರಿದಾಡಿರುವುದಂತೂ ಖರೆ. ಹೀಗಾಗಿ ಅಸ್ನೋಟಿಕರ್ ಹೋರಾಟ ಕೊಟ್ಟಿದ್ದಾನೆ. ಹೀಗಾಗಿ ಅಸ್ನೋಟಿಕರ್ ಸೋತರೂ ಸಣ್ಣ ಅಂತರದಲ್ಲಷ್ಟೇ ಎಂಬ ವಿಶ್ಲೇಷಣೆಯೂ ನಡೆದಿದೆ.
ಅನಂತ್ಮಾಣಿ ಗೆದ್ದರೂ ಅದು ಅಪಮಾನದ ಗೆಲುವು; ದೇಶಪಾಂಡೆಯ ಪಕ್ಷ ದ್ರೋಹದ ಫಲ. ಕಾಂಗ್ರೆಸ್ ಹೈಕಮಾಂಡ್ ದೇಶಪಾಂಡೆ ವಿರುದ್ಧ ಕ್ರಮಕ್ಕೆ ಯೋಚಿಸಬೇಕಾದ ಕಾಲವಿದು. ಆತನನ್ನು ಪಕ್ಷದಿಂದ ಹೊರಹಾಕಿದರೆ ಹಿಂದುಳಿದ ವರ್ಗ, ಅಲ್ಪಸಂಖ್ಯಾತರು, ದಲಿತರು ಒಂದಾಗಿ ಕಾಂಗ್ರೆಸ್ ಬೆಂಬಲಿಸುವುದು ನಿಸ್ಸಂಶಯ. ಅಂದಹಾಗೆ, ಆಪರೇಷನ್ ಕಮಲದ ಹುಮ್ಮಸ್ಸಿನಲ್ಲಿರುವ ಬಿಜೆಪಿಯ ಟಾರ್ಗೆಟ್ ಪಟ್ಟಿಯಲ್ಲೂ ದೇಶಪಾಂಡೆಯ ಹೆಸರಿಲ್ಲ. ಯಾಕೆಂದರೆ ಆತ ಬಿಜೆಪಿ ಸೇರಿದರೆ ಆ ಪಾರ್ಟಿಗೆ ಲಾಭಕ್ಕಿಂತ ಲುಕ್ಸಾನೇ ಜಾಸ್ತಿ ಎಂಬುದು ಅವರಿಗೂ ಗೊತ್ತು. ಆತ ಕಾಂಗ್ರೆಸಲ್ಲೇ ಇದ್ದರೆ ಬಿಜೆಪಿಗೆ ಲಾಭ ಜಾಸ್ತಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...