Homeಮುಖಪುಟಕೊರೊನಾ ನಿರ್ವಹಣೆಯಲ್ಲಿ ’ಸೋಂಕಿತ ಸರ್ಕಾರ’ ಸೋತಿದೆ: ಕಾಂಗ್ರೆಸ್ ಆರೋಪ

ಕೊರೊನಾ ನಿರ್ವಹಣೆಯಲ್ಲಿ ’ಸೋಂಕಿತ ಸರ್ಕಾರ’ ಸೋತಿದೆ: ಕಾಂಗ್ರೆಸ್ ಆರೋಪ

ರಾಜ್ಯ ಸರ್ಕಾರ ರೋಗಿಗಳಿಗೆ ಔಷಧಿ, ಹಾಸಿಗೆ, ಐಸಿಯು, ಆಕ್ಸಿಜನ್, ವೆಂಟಿಲೇಟರ್ ಕೊಡಲಿಲ್ಲ. ಕನಿಷ್ಟ ಪಕ್ಷ ಮೃತರಿಗೆ ಗೌರವಯುತ ಅಂತ್ಯ ಸಂಸ್ಕಾರಕ್ಕೂ ಅವಕಾಶ ನೀಡಲಿಲ್ಲ- ಕಾಂಗ್ರೆಸ್

- Advertisement -
- Advertisement -

ಕೊರೊನಾ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ಸಂಪೂರ್ಣವಾಗಿ ಸೋತಿದೆ ಎಂದಿರುವ ಕರ್ನಾಟಕ ಕಾಂಗ್ರೆಸ್ ನಾಯಕರು ಸೋಂಕಿತ ಸರ್ಕಾರ ಹ್ಯಾಶ್‌ಟ್ಯಾಗ್ ಅಡಿಯಲ್ಲಿ ಸರಣಿ ಟ್ವೀಟ್‌ಗಳನ್ನು ಮಾಡಿದ್ದಾರೆ. ವಿಡಿಯೋಗಳನ್ನು ಮಾಡಿ ಸಾಮಾಜಿಕ ಮಾಧ್ಯಮಗಳಲ್ಲಿ ರಾಜ್ಯ ಸರ್ಕಾರವನ್ನು ಟೀಕಿಸುತ್ತಾ, ಸರ್ಕಾರಕ್ಕೆ ಕೊರೊನಾ ನಿರ್ವಹಣೆಯ ಸಲಹೆಗಳನ್ನು ನೀಡುತ್ತಿದ್ದಾರೆ.

ರಾಜ್ಯದಲ್ಲಿ ಕೊರೊನಾ ಪ್ರಕಣಗಳು ಹೆಚ್ಚಾಗುತ್ತಿದ್ದರೂ, ನಿರ್ವಹಣೆ ಮಾಡುವಲ್ಲಿ ರಾಜ್ಯ ಸರ್ಕಾರ ಸೋತಿದೆ ಎಂದು ಕಿಡಿಕಾರಿರುವ ರಾಜ್ಯ ಕಾಂಗ್ರೆಸ್ ನಾಯಕರು #ಸೋಂಕಿತ ಸರ್ಕಾರ ಎಂಬ ಹ್ಯಾಶ್‌ಟ್ಯಾಗ್ ಬಳಸಿ ಸರಣಿ ಟ್ವೀಟ್‌ಗಳನ್ನು ಮಾಡಿದ್ದಾರೆ.

ರಾಜ್ಯ ಬಿಜೆಪಿ ಸರ್ಕಾರವನ್ನು ಟೀಕಿಸುವ ಜೊತೆಗೆ ಹಲವು ಸಲಹೆಗಳನ್ನು ನೀಡಿದ್ದಾರೆ.

’ಬೆಡ್, ಆಕ್ಸಿಜನ್, ರೆಮ್‌ಡಿಸಿವಿರ್, ಅಂತ್ಯಕ್ರಿಯೆ ಹೀಗೆ ಹಲವು ಬಿಕ್ಕಟ್ಟುಗಳನ್ನು ನಿರ್ವಹಿಸಲು ಮಂತ್ರಿಗಳನ್ನು ನೇಮಿಸಿ ಅವರಿಗೆ ಜವಾಬ್ದಾರಿಯನ್ನು ನೀಡಿ. ಇಡೀ ರಾಜ್ಯವನ್ನು 6 ವಿಭಾಗವನ್ನಾಗಿಸಿ ಪ್ರತ್ಯೇಕ ಸಮಿತಿಗಳನ್ನು ರಚಿಸಿ, ಮಂತ್ರಿಗಳಿಗೆ ಉಸ್ತುವಾರಿ ನೀಡಿ’ ಎಂದು ಸಲಹೆ ನೀಡಿದ್ದಾರೆ.

ಇದನ್ನೂ ಓದಿ: ಸರ್ಕಾರದ ಪ್ರಚಾರದ ಹುಚ್ಚು ನಾಚಿಕೆಗೇಡಿನದ್ದು: ಕುಮಾರಸ್ವಾಮಿ ಆಕ್ರೋಶ

“ಕೊರೊನಾ ನಿಗ್ರಹಿಸುವಿಕೆಯ ಭಾಗವಾದ ಟ್ರೀಟಿಂಗ್‌ನಲ್ಲಿ ಅಧೋಗತಿಗೆ ಇಳಿದಿದ್ದು ನಿತ್ಯ ಕಾಣುತ್ತಿದೆ
ಟ್ರಾಕಿಂಗ್‌ನಲ್ಲಿಯೂ ಸರ್ಕಾರ ವಿಫಲವಾಗಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ, ಮಂತ್ರಿಗಳು, ಶಾಸಕರಿಗೆ ಸೋಂಕು ತಗುಲಿತ್ತು, ಅವರ ಸಂಪರ್ಕಕ್ಕೆ ಬಂದವರು ಯಾವುದೇ ಕಟ್ಟುನಿಟ್ಟಿನ ಐಸೋಲೇಶನ್ ನಿಯಮ ಪಾಲಿಸಲಿಲ್ಲ. ಇದೇ ಸೋಂಕಿತ ಸರ್ಕಾರದ ವೈಫಲ್ಯಕ್ಕೆ ಸಾಕ್ಷಿ” ಎಂದಿದ್ದಾರೆ.

“ಫೇಕ್ ನ್ಯೂಸ್ ಫ್ಯಾಕ್ಟರಿ ಎಂದೇ ಕುಖ್ಯಾತಿ ಪಡೆದಿರುವ ಬಿಜೆಪಿ ಕರ್ನಾಟಕ ಐಟಿ ಸೆಲ್ ಉತ್ತರಿಸಲಿದೆಯೇ? ಗುಜರಾತ್, ಯುಪಿಯ ಬಿಜೆಪಿ ಸರ್ಕಾರಗಳಿಗೆ ಅಲ್ಲಿನ ಹೈಕೋರ್ಟ್‌ಗಳು ಮುಖಕ್ಕೆ ಉಗಿದಿವೆ. ಆಕ್ಸಿಜನ್ ಪೂರೈಸದ ಕೇಂದ್ರ ಸರ್ಕಾರಕ್ಕೆ ದೆಹಲಿ ಹೈಕೋರ್ಟ್ ಛಿಮಾರಿ ಹಾಕಿದೆ. ಇದೆಲ್ಲವೂ ನಿಮ್ಮ ಆಯೋಗ್ಯತನದ ಪ್ರತೀಕವಲ್ಲವೇ?” ಎಂದು ಚಾಟಿ ಬೀಸಿದ್ದಾರೆ.

ಇದನ್ನೂ ಓದಿ: ಅಗತ್ಯ ಸೇವೆ ಬಿಟ್ಟು ಎಲ್ಲಾ ಬಂದ್: ಹೊಸ ಮಾರ್ಗಸೂಚಿ ಹೊರಡಿಸಿದ ರಾಜ್ಯ ಸರ್ಕಾರ

“ಒಂದು ವರ್ಷ ಸಮಯವಿದ್ದರೂ ರಾಜ್ಯದ ಬಿಜೆಪಿ ಸರ್ಕಾರ ಕೋವಿಡ್ 2ನೇ ಅಲೆ ಎದುರಿಸಲು ಯಾವುದೇ ಸಿದ್ಧತೆ ಮಾಡಿಕೊಳ್ಳಲಿಲ್ಲ. ಕೇಂದ್ರ – ರಾಜ್ಯ ಬಿಜೆಪಿ ಸರ್ಕಾರಗಳ ನಿರ್ಲಕ್ಷ್ಯ ಜನಸಾಮಾನ್ಯರನ್ನು ಬಲಿಪಡೆಯುತ್ತಿದೆ. ಜನರ ಜೀವ ಉಳಿಸಲು ಈ ಸರ್ಕಾರಗಳು ಇದ್ದ ಯಾವ ಅವಕಾಶಗಳನ್ನೂ ಉಪಯೋಗಿಸಿಕೊಳ್ಳಲಿಲ್ಲ” ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಆರೋಪಿಸಿದ್ದಾರೆ.

“ರಾಜ್ಯ ಸರ್ಕಾರದಿಂದ ರೋಗಿಗಳಿಗೆ ಔಷಧಿ, ಹಾಸಿಗೆ, ಐಸಿಯು, ಆಕ್ಸಿಜನ್, ವೆಂಟಿಲೇಟರ್ ಕೊಡಲು ಆಗಲಿಲ್ಲ. ಕನಿಷ್ಟ ಪಕ್ಷ ಮೃತರಿಗೆ ಗೌರವಯುತ ಅಂತ್ಯ ಸಂಸ್ಕಾರಕ್ಕೂ ಅವಕಾಶ ನೀಡಲಿಲ್ಲ. ಕಳೆದೊಂದು ವರ್ಷದಿಂದ ಜನರ ಯಾವ ಸಂಕಷ್ಟಗಳಿಗೂ ಈ ಸೋಂಕಿತ ಸರ್ಕಾರ ಸ್ಪಂದಿಸಲಿಲ್ಲ” ಎಂದು ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಇದನ್ನೂ ಓದಿ: ಓಟುಗಳ ನಡುವೆ ನುಸುಳಿದ ಎರಡನೇ ಅಲೆಯ ದುರಂತಕ್ಕೆ ಮೋದಿ ಆಡಳಿತವೇ ಕಾರಣ!

ಸರ್ಕಾರದ ವಿರುದ್ಧ ಕಿಡಿಕಾರಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ಕನಕಪುರ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ರೋಗಿಗಳಿಗೆ ಸಿಗುತ್ತಿರುವ ಸೌಲಭ್ಯಗಳ ಬಗ್ಗೆ ಪರಿಶೀಲನೆ ನಡೆಸಿದ್ದಾರೆ. ಕೊರೋನಾ ಸೋಂಕಿತರೊಂದಿಗೆ ಮಾತನಾಡಿ, ಅಗತ್ಯ ಔಷಧೋಪಚಾರಗಳ ಕೊರತೆ ಆಗದಂತೆ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

Image
PC: Twitter@INCKarnataka

ಕೊರೊನಾ ಸಾವುಗಳೆಲ್ಲವೂ “ಬಿಜೆಪಿ ಪ್ರಾಯೋಜಿತ ಮಾರಣಹೋಮ” ಎಂದು ಕಾಂಗ್ರೆಸ್ ಆರೋಪಿಸಿದೆ. ಕೊರೊನಾ ಬಂದು ಒಂದು ವರ್ಷವಾದರೂ ಸೂಕ್ತ ವೈದ್ಯಕೀಯ ವ್ಯವಸ್ಥೆಗಳನ್ನು ರೂಪಿಸದೆ, ಆಂತರಿಕ ಕಚ್ಚಾಟ, ಖಾತೆ ಕಿತ್ತಾಟ, ಸಿಡಿ ಚೆಲ್ಲಾಟ, ವರ್ಗಾವಣೆ ದಂಧೆ, ಭ್ರಷ್ಟಾಚಾರದಲ್ಲಿ ಮುಳುಗಿದ  ಸೋಂಕಿತ ಸರ್ಕಾರದ ನಿರ್ಲಕ್ಷ್ಯ, ಬೇಜವಾಬ್ದಾರಿತನ, ಭ್ರಷ್ಟಾಚಾರಗಳೇ ಇಂದಿನ ಭೀಕರ ಸ್ಥಿತಿಗೆ ಕಾರಣ ಎಂದು ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.


ಇದನ್ನೂ ಓದಿ: ಏರ್‌ಪೋರ್ಟ್-ಸಿಲ್ಕ್‌ಬೋರ್ಡ್ ಮೆಟ್ರೋ ಕಾಮಗಾರಿ ವಿಳಂಬಕ್ಕೆ ಮೋದಿಯವರೆ ಹೊಣೆಯೇ?: ಜಾಹೀರಾತಿಗೆ ಕೋಟಿ ರೂ ಖರ್ಚು ಏಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...