Homeಮುಖಪುಟಕೊರೊನಾ ನಿರ್ವಹಣೆಯಲ್ಲಿ ’ಸೋಂಕಿತ ಸರ್ಕಾರ’ ಸೋತಿದೆ: ಕಾಂಗ್ರೆಸ್ ಆರೋಪ

ಕೊರೊನಾ ನಿರ್ವಹಣೆಯಲ್ಲಿ ’ಸೋಂಕಿತ ಸರ್ಕಾರ’ ಸೋತಿದೆ: ಕಾಂಗ್ರೆಸ್ ಆರೋಪ

ರಾಜ್ಯ ಸರ್ಕಾರ ರೋಗಿಗಳಿಗೆ ಔಷಧಿ, ಹಾಸಿಗೆ, ಐಸಿಯು, ಆಕ್ಸಿಜನ್, ವೆಂಟಿಲೇಟರ್ ಕೊಡಲಿಲ್ಲ. ಕನಿಷ್ಟ ಪಕ್ಷ ಮೃತರಿಗೆ ಗೌರವಯುತ ಅಂತ್ಯ ಸಂಸ್ಕಾರಕ್ಕೂ ಅವಕಾಶ ನೀಡಲಿಲ್ಲ- ಕಾಂಗ್ರೆಸ್

- Advertisement -
- Advertisement -

ಕೊರೊನಾ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ಸಂಪೂರ್ಣವಾಗಿ ಸೋತಿದೆ ಎಂದಿರುವ ಕರ್ನಾಟಕ ಕಾಂಗ್ರೆಸ್ ನಾಯಕರು ಸೋಂಕಿತ ಸರ್ಕಾರ ಹ್ಯಾಶ್‌ಟ್ಯಾಗ್ ಅಡಿಯಲ್ಲಿ ಸರಣಿ ಟ್ವೀಟ್‌ಗಳನ್ನು ಮಾಡಿದ್ದಾರೆ. ವಿಡಿಯೋಗಳನ್ನು ಮಾಡಿ ಸಾಮಾಜಿಕ ಮಾಧ್ಯಮಗಳಲ್ಲಿ ರಾಜ್ಯ ಸರ್ಕಾರವನ್ನು ಟೀಕಿಸುತ್ತಾ, ಸರ್ಕಾರಕ್ಕೆ ಕೊರೊನಾ ನಿರ್ವಹಣೆಯ ಸಲಹೆಗಳನ್ನು ನೀಡುತ್ತಿದ್ದಾರೆ.

ರಾಜ್ಯದಲ್ಲಿ ಕೊರೊನಾ ಪ್ರಕಣಗಳು ಹೆಚ್ಚಾಗುತ್ತಿದ್ದರೂ, ನಿರ್ವಹಣೆ ಮಾಡುವಲ್ಲಿ ರಾಜ್ಯ ಸರ್ಕಾರ ಸೋತಿದೆ ಎಂದು ಕಿಡಿಕಾರಿರುವ ರಾಜ್ಯ ಕಾಂಗ್ರೆಸ್ ನಾಯಕರು #ಸೋಂಕಿತ ಸರ್ಕಾರ ಎಂಬ ಹ್ಯಾಶ್‌ಟ್ಯಾಗ್ ಬಳಸಿ ಸರಣಿ ಟ್ವೀಟ್‌ಗಳನ್ನು ಮಾಡಿದ್ದಾರೆ.

ರಾಜ್ಯ ಬಿಜೆಪಿ ಸರ್ಕಾರವನ್ನು ಟೀಕಿಸುವ ಜೊತೆಗೆ ಹಲವು ಸಲಹೆಗಳನ್ನು ನೀಡಿದ್ದಾರೆ.

’ಬೆಡ್, ಆಕ್ಸಿಜನ್, ರೆಮ್‌ಡಿಸಿವಿರ್, ಅಂತ್ಯಕ್ರಿಯೆ ಹೀಗೆ ಹಲವು ಬಿಕ್ಕಟ್ಟುಗಳನ್ನು ನಿರ್ವಹಿಸಲು ಮಂತ್ರಿಗಳನ್ನು ನೇಮಿಸಿ ಅವರಿಗೆ ಜವಾಬ್ದಾರಿಯನ್ನು ನೀಡಿ. ಇಡೀ ರಾಜ್ಯವನ್ನು 6 ವಿಭಾಗವನ್ನಾಗಿಸಿ ಪ್ರತ್ಯೇಕ ಸಮಿತಿಗಳನ್ನು ರಚಿಸಿ, ಮಂತ್ರಿಗಳಿಗೆ ಉಸ್ತುವಾರಿ ನೀಡಿ’ ಎಂದು ಸಲಹೆ ನೀಡಿದ್ದಾರೆ.

ಇದನ್ನೂ ಓದಿ: ಸರ್ಕಾರದ ಪ್ರಚಾರದ ಹುಚ್ಚು ನಾಚಿಕೆಗೇಡಿನದ್ದು: ಕುಮಾರಸ್ವಾಮಿ ಆಕ್ರೋಶ

“ಕೊರೊನಾ ನಿಗ್ರಹಿಸುವಿಕೆಯ ಭಾಗವಾದ ಟ್ರೀಟಿಂಗ್‌ನಲ್ಲಿ ಅಧೋಗತಿಗೆ ಇಳಿದಿದ್ದು ನಿತ್ಯ ಕಾಣುತ್ತಿದೆ
ಟ್ರಾಕಿಂಗ್‌ನಲ್ಲಿಯೂ ಸರ್ಕಾರ ವಿಫಲವಾಗಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ, ಮಂತ್ರಿಗಳು, ಶಾಸಕರಿಗೆ ಸೋಂಕು ತಗುಲಿತ್ತು, ಅವರ ಸಂಪರ್ಕಕ್ಕೆ ಬಂದವರು ಯಾವುದೇ ಕಟ್ಟುನಿಟ್ಟಿನ ಐಸೋಲೇಶನ್ ನಿಯಮ ಪಾಲಿಸಲಿಲ್ಲ. ಇದೇ ಸೋಂಕಿತ ಸರ್ಕಾರದ ವೈಫಲ್ಯಕ್ಕೆ ಸಾಕ್ಷಿ” ಎಂದಿದ್ದಾರೆ.

“ಫೇಕ್ ನ್ಯೂಸ್ ಫ್ಯಾಕ್ಟರಿ ಎಂದೇ ಕುಖ್ಯಾತಿ ಪಡೆದಿರುವ ಬಿಜೆಪಿ ಕರ್ನಾಟಕ ಐಟಿ ಸೆಲ್ ಉತ್ತರಿಸಲಿದೆಯೇ? ಗುಜರಾತ್, ಯುಪಿಯ ಬಿಜೆಪಿ ಸರ್ಕಾರಗಳಿಗೆ ಅಲ್ಲಿನ ಹೈಕೋರ್ಟ್‌ಗಳು ಮುಖಕ್ಕೆ ಉಗಿದಿವೆ. ಆಕ್ಸಿಜನ್ ಪೂರೈಸದ ಕೇಂದ್ರ ಸರ್ಕಾರಕ್ಕೆ ದೆಹಲಿ ಹೈಕೋರ್ಟ್ ಛಿಮಾರಿ ಹಾಕಿದೆ. ಇದೆಲ್ಲವೂ ನಿಮ್ಮ ಆಯೋಗ್ಯತನದ ಪ್ರತೀಕವಲ್ಲವೇ?” ಎಂದು ಚಾಟಿ ಬೀಸಿದ್ದಾರೆ.

ಇದನ್ನೂ ಓದಿ: ಅಗತ್ಯ ಸೇವೆ ಬಿಟ್ಟು ಎಲ್ಲಾ ಬಂದ್: ಹೊಸ ಮಾರ್ಗಸೂಚಿ ಹೊರಡಿಸಿದ ರಾಜ್ಯ ಸರ್ಕಾರ

“ಒಂದು ವರ್ಷ ಸಮಯವಿದ್ದರೂ ರಾಜ್ಯದ ಬಿಜೆಪಿ ಸರ್ಕಾರ ಕೋವಿಡ್ 2ನೇ ಅಲೆ ಎದುರಿಸಲು ಯಾವುದೇ ಸಿದ್ಧತೆ ಮಾಡಿಕೊಳ್ಳಲಿಲ್ಲ. ಕೇಂದ್ರ – ರಾಜ್ಯ ಬಿಜೆಪಿ ಸರ್ಕಾರಗಳ ನಿರ್ಲಕ್ಷ್ಯ ಜನಸಾಮಾನ್ಯರನ್ನು ಬಲಿಪಡೆಯುತ್ತಿದೆ. ಜನರ ಜೀವ ಉಳಿಸಲು ಈ ಸರ್ಕಾರಗಳು ಇದ್ದ ಯಾವ ಅವಕಾಶಗಳನ್ನೂ ಉಪಯೋಗಿಸಿಕೊಳ್ಳಲಿಲ್ಲ” ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಆರೋಪಿಸಿದ್ದಾರೆ.

“ರಾಜ್ಯ ಸರ್ಕಾರದಿಂದ ರೋಗಿಗಳಿಗೆ ಔಷಧಿ, ಹಾಸಿಗೆ, ಐಸಿಯು, ಆಕ್ಸಿಜನ್, ವೆಂಟಿಲೇಟರ್ ಕೊಡಲು ಆಗಲಿಲ್ಲ. ಕನಿಷ್ಟ ಪಕ್ಷ ಮೃತರಿಗೆ ಗೌರವಯುತ ಅಂತ್ಯ ಸಂಸ್ಕಾರಕ್ಕೂ ಅವಕಾಶ ನೀಡಲಿಲ್ಲ. ಕಳೆದೊಂದು ವರ್ಷದಿಂದ ಜನರ ಯಾವ ಸಂಕಷ್ಟಗಳಿಗೂ ಈ ಸೋಂಕಿತ ಸರ್ಕಾರ ಸ್ಪಂದಿಸಲಿಲ್ಲ” ಎಂದು ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಇದನ್ನೂ ಓದಿ: ಓಟುಗಳ ನಡುವೆ ನುಸುಳಿದ ಎರಡನೇ ಅಲೆಯ ದುರಂತಕ್ಕೆ ಮೋದಿ ಆಡಳಿತವೇ ಕಾರಣ!

ಸರ್ಕಾರದ ವಿರುದ್ಧ ಕಿಡಿಕಾರಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ಕನಕಪುರ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ರೋಗಿಗಳಿಗೆ ಸಿಗುತ್ತಿರುವ ಸೌಲಭ್ಯಗಳ ಬಗ್ಗೆ ಪರಿಶೀಲನೆ ನಡೆಸಿದ್ದಾರೆ. ಕೊರೋನಾ ಸೋಂಕಿತರೊಂದಿಗೆ ಮಾತನಾಡಿ, ಅಗತ್ಯ ಔಷಧೋಪಚಾರಗಳ ಕೊರತೆ ಆಗದಂತೆ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

Image
PC: Twitter@INCKarnataka

ಕೊರೊನಾ ಸಾವುಗಳೆಲ್ಲವೂ “ಬಿಜೆಪಿ ಪ್ರಾಯೋಜಿತ ಮಾರಣಹೋಮ” ಎಂದು ಕಾಂಗ್ರೆಸ್ ಆರೋಪಿಸಿದೆ. ಕೊರೊನಾ ಬಂದು ಒಂದು ವರ್ಷವಾದರೂ ಸೂಕ್ತ ವೈದ್ಯಕೀಯ ವ್ಯವಸ್ಥೆಗಳನ್ನು ರೂಪಿಸದೆ, ಆಂತರಿಕ ಕಚ್ಚಾಟ, ಖಾತೆ ಕಿತ್ತಾಟ, ಸಿಡಿ ಚೆಲ್ಲಾಟ, ವರ್ಗಾವಣೆ ದಂಧೆ, ಭ್ರಷ್ಟಾಚಾರದಲ್ಲಿ ಮುಳುಗಿದ  ಸೋಂಕಿತ ಸರ್ಕಾರದ ನಿರ್ಲಕ್ಷ್ಯ, ಬೇಜವಾಬ್ದಾರಿತನ, ಭ್ರಷ್ಟಾಚಾರಗಳೇ ಇಂದಿನ ಭೀಕರ ಸ್ಥಿತಿಗೆ ಕಾರಣ ಎಂದು ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.


ಇದನ್ನೂ ಓದಿ: ಏರ್‌ಪೋರ್ಟ್-ಸಿಲ್ಕ್‌ಬೋರ್ಡ್ ಮೆಟ್ರೋ ಕಾಮಗಾರಿ ವಿಳಂಬಕ್ಕೆ ಮೋದಿಯವರೆ ಹೊಣೆಯೇ?: ಜಾಹೀರಾತಿಗೆ ಕೋಟಿ ರೂ ಖರ್ಚು ಏಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...