Homeಚಳವಳಿಸಿಂಘು ಬಾರ್ಡರ್‌ನಲ್ಲಿ ಒಂದು ಬದಿಯ ಬ್ಯಾರಿಕೇಡ್ ತೆಗೆಯಲು ರೈತರ ನಿರ್ಧಾರ

ಸಿಂಘು ಬಾರ್ಡರ್‌ನಲ್ಲಿ ಒಂದು ಬದಿಯ ಬ್ಯಾರಿಕೇಡ್ ತೆಗೆಯಲು ರೈತರ ನಿರ್ಧಾರ

- Advertisement -
- Advertisement -

ಹರಿಯಾಣ ಸರ್ಕಾರದ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿರುವ ರೈತರು ಆಮ್ಲಜನಕ, ಆಂಬ್ಯುಲೆನ್ಸ್ ಮತ್ತು  ಇತರ ತುರ್ತು ಸೇವೆಗಳಿಗೆ ಉಚಿತ ಮಾರ್ಗವನ್ನು ನೀಡಲು ಸಿಂಘು ಗಡಿಯ ಒಂದು ಬದಿಯಲ್ಲಿನ ಬ್ಯಾರಿಕೇಡ್‌ಗಳನ್ನು ತೆಗೆಯಲು ನಿರ್ಧರಿಸಿದ್ದಾರೆ.

ಕೊರೊನಾ ಸಾಂಕ್ರಾಮಿಕ ರೋಗದ ವಿರುದ್ಧದ ಹೋರಾಟವನ್ನು ರೈತರು ಸಾಧ್ಯವಿರುವ ಎಲ್ಲ ರೀತಿಯಲ್ಲಿ ಬೆಂಬಲಿಸುತ್ತಾರೆ ಎಂದು ಸಂಯುಕ್ತ ಕಿಸಾನ್ ಮೋರ್ಚಾ ಹೇಳಿದೆ. ಸಭೆಯಲ್ಲಿ ಸೋನಿಪತ್ ಎಸ್ಪಿ, ಸಿಎಮ್ಒ , ಇತರ ಅಧಿಕಾರಿಗಳು ಮತ್ತು ಹಲವಾರು ಎಸ್‌ಕೆಎಂ ನಾಯಕರು ಭಾಗವಹಿಸಿದ್ದರು.

ದೆಹಲಿ ನಗರಕ್ಕೆ ಆಮ್ಲಜನಕ ಪೂರೈಕೆಯಾಗುವುದಕ್ಕೆ ಪ್ರತಿಭಟನಾ ನಿರತ ರೈತರು ಅಡ್ಡಿಪಡಿಸುತ್ತಿದೆ ಎಂದು ಬಿಜೆಪಿ ಮತ್ತು ಕೇಂದ್ರ ಸರ್ಕಾರ ಆಧಾರರಹಿತವಾಗಿ ಆರೋಪಿಸುತ್ತಿದ್ದಾರೆ. ಪೊಲೀಸರು ವಾಹನಗಳಿಗೆ ಸರಿಯಾದ ಮಾರ್ಗ ಸೂಚಿಸುವ ಬದಲು ಪ್ರತಿಭಟನಾ ಸ್ಥಳಗಳ ಕಡೆಗೆ ಆಮ್ಲಜನಕ ಪೂರೈಕೆ ಟ್ರಕ್‌ಗಳನ್ನು ತಪ್ಪಾಗಿ ಮಾರ್ಗ ಸೂಚಿಸಿದ್ದಾರೆ ಎಂದು ಎಸ್‌ಕೆಎಂ ಆರೋಪಿಸಿದೆ.

ಇದನ್ನೂ ಓದಿ: ಪಿಎಂ-ಸಿಎಂ ಸಭೆ ಟಿವಿಯಲ್ಲಿ ಪ್ರಸಾರ: ಆಕ್ಷೇಪಿಸಿದ ಮೋದಿ, ವಿಷಾದಿಸಿದ ಕೇಜ್ರಿವಾಲ್!

ಈಗಾಗಲೇ ಸೂಚಿಸಿದಂತೆ, ರಸ್ತೆಗಳಿಗೆ ಬ್ಯಾರಿಕೇಡ್ ಹಾಕುವುದು ಮತ್ತು ವಾಹನ ಸಾಗಣೆಗೆ ಅಡ್ಡಿಯುಂಟುಮಾಡುವುದಕ್ಕೆ ಸರ್ಕಾರವನ್ನು ದೂಷಿಸಬೇಕಾಗಿದೆ. ಆದರೆ ಎಲ್ಲಾ ಪ್ರತಿಭಟನಾ ಸ್ಥಳಗಳಲ್ಲಿ, ರೈತರು ಈಗಾಗಲೇ ವಾಹನ ಸಂಚಾರಕ್ಕಾಗಿ ತುರ್ತು ಮಾರ್ಗವನ್ನು ಬಿಟ್ಟಿದ್ದಾರೆ ಎಂದು ತಿಳಿಸಿದ್ದಾರೆ.

ಇನ್ನು ಕೊರೊನಾ ಹಿನ್ನೆಲೆ ತಮ್ಮ ತಮ್ಮ ಊರುಗಳಿಗೆ ವಾಪಸ್ ಹೊರಟಿರುವ ವಲಸೆ ಕಾರ್ಮಿಕರಿಗೆ ಸಂಯುಕಗತ ಕಿಸಾನ್ ಮೋರ್ಚಾ ಆಹ್ವಾನ ನೀಡಿದೆ. ಇದು ದೆಹಲಿ ಗಡಿಯಲ್ಲಿ ಪ್ರತಿಭಟನಾಕಾರರ ಸಂಖ್ಯೆಯನ್ನು ಹೆಚ್ಚಿಸುವ ಪ್ರಯತ್ನವಲ್ಲ. ಆದರೆ ದೇಶಾದ್ಯಂತದ ಸರ್ಕಾರಗಳು ನಾಗರಿಕರನ್ನು ಶೋಚನೀಯ ಸ್ಥಿತಿಗೆ ತಳ್ಳುತ್ತಿರುವ ಸಮಯದಲ್ಲಿ ವಲಸೆ ಕಾರ್ಮಿಕರಿಗೆ ಸಹಾಯ ಮಾಡುವುದು ಎಂದು ರೈತ ಸಂಘಟನೆ ಸ್ಪಷ್ಟ ಪಡಿಸಿದೆ.

ಗೋಧಿ ಕೊಯ್ಲಿಗೆ ಹೋದ ರೈತರು ಸಾವಿರಾರು ಸಂಖ್ಯೆಯಲ್ಲಿ ಪ್ರತಿಭಟನಾ ಸ್ಥಳಗಳಿಗೆ ಉತ್ಸಾಹದಿಂದ ಹಿಂತಿರುಗುತ್ತಿದ್ದಾರೆ. ರೈತರ ಆಂದೋಲನಕ್ಕೆ ವಲಸೆ ಕಾರ್ಮಿಕರ ಅಗತ್ಯವಿಲ್ಲ. ಆದರೆ, ನಾವು ಅವರಿಗೆ ಆಹ್ವಾನ ನೀಡುತ್ತಿರುವುದು ಏಕೆಂದರೆ, ದೇಶಕ್ಕೆ ಅನ್ನ ನಿಡುವ ಅನ್ನದಾತರು ಈ ಕಾರ್ಮಿಕರ ಸಂಕಟವನ್ನು ಅರ್ಥಮಾಡಿಕೊಳ್ಳುತ್ತಾರೆ ಎಂದು ಸಂಯುಕ್ತ ಕಿಸಾನ್ ಮೋರ್ಚಾ ತಿಳಿಸಿದೆ.


ಇದನ್ನೂ ಓದಿ: ಗೌರವಯುತ ಅಂತ್ಯ ಸಂಸ್ಕಾರಕ್ಕಾದರೂ ಕನಿಷ್ಠ ವ್ಯವಸ್ಥೆ ಮಾಡಿ-ಸರ್ಕಾರಕ್ಕೆ ಕುಮಾರಸ್ವಾಮಿ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...