Homeಕರೋನಾ ತಲ್ಲಣಆದಿತ್ಯನಾಥ್ ಕುರಿತ ಪೋಸ್ಟ್ ಕಾರ್ಡ್‌ ಸುಳ್ಳು ಬಯಲು; ವಾಸ್ತವದಲ್ಲಿ ಇದು ಉಲ್ಟಾ ಕೇಸು | ನವೀನ್...

ಆದಿತ್ಯನಾಥ್ ಕುರಿತ ಪೋಸ್ಟ್ ಕಾರ್ಡ್‌ ಸುಳ್ಳು ಬಯಲು; ವಾಸ್ತವದಲ್ಲಿ ಇದು ಉಲ್ಟಾ ಕೇಸು | ನವೀನ್ ಸೂರಿಂಜೆ

- Advertisement -
- Advertisement -

“ಮಹಾರಾಷ್ಟ್ರದ ಮುಖ್ಯಮಂತ್ರಿ ಆಕ್ಸಿಜನ್ ಪೂರೈಸುವಂತೆ ಪ್ರಧಾನಿಗೆ ಕೇಳಿಕೊಂಡರು. ದೆಹಲಿ ಮುಖ್ಯಮಂತ್ರಿ ಪ್ರಧಾನಿಯನ್ನು ಕೈಮುಗಿದು ಕೇಳಿಕೊಂಡರು. ಪಂಜಾಬ್ ಮುಖ್ಯಮಂತ್ರಿ ಅಮರೀಂದರ್ ಸಿಂಗರೂ ಕೇಳಿಕೊಂಡರು. ಅದರೆ ಉತ್ತರ ಪ್ರದೇಶ ಸಂತ ಕಾವಿಧಾರಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮಾತ್ರ ಎಂಟರಿಂದ ಹತ್ತು ಆಕ್ಸಿಜನ್ ಘಟಕಗಳನ್ನೇ ಸ್ಥಾಪಿಸಿದರು” ಎಂದು ಪೋಸ್ಟ್ ಕಾರ್ಡ್ ಮಹೇಂದ್ರ ಹೆಗಡೆ ಪೋಸ್ಟರ್ ಮಾಡಿದ್ದಾರೆ. ಅನಕ್ಷರಸ್ಥ ಹಿಂದುತ್ವ ಸಂಘಟನೆಯ ಕಾರ್ಯಕರ್ತರು ಅದನ್ನು ವ್ಯಾಪಕವಾಗಿ ಹಂಚುತ್ತಿದ್ದಾರೆ. ಆದರೆ ವಾಸ್ತವ ಬೇರೆಯೇ ಇದೆ.

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆಕ್ಸಿಜನ್ ಕೊಡಿ ಎಂದು ಕೇಂದ್ರವನ್ನು ಕೇಳದೇ ಇದ್ದರೆ ಅವರಂತಹ ಬೇಜವಾಬ್ದಾರಿ, ಅಮಾನವೀಯ, ಕ್ರೂರಿ ಮುಖ್ಯಮಂತ್ರಿ ಇನ್ನೊಬ್ಬರು ಇರಲು ಸಾಧ್ಯವಿಲ್ಲ. ಯಾಕೆಂದರೆ ದೇಶದ ಉಳಿದ ಭಾಗಗಳಿಗಿಂತ ಉತ್ತರ ಪ್ರದೇಶದ ಆಸ್ಪತ್ರೆಗಳ ಸ್ಥಿತಿ ಚಿಂತಾಜನಕವಾಗಿದೆ. ಎರಡು ಆಸ್ಪತ್ರೆಗಳಂತೂ ಉತ್ತರ ಪ್ರದೇಶದ ಸಿಎಂ ಕಾರ್ಯಕ್ಕೆ ಆಕ್ಷೇಪ ವ್ಯಕ್ತಪಡಿಸಿ ನೋಟಿಸ್ ಬೋರ್ಡಿನಲ್ಲಿ ನೋಟಿಸ್ ಅಂಟಿಸಿದೆ ಎಂದರೆ ವೈದ್ಯರ ಸಮೂಹ ಯಾವ ಪರಿ ಯೋಗಿ ಆದಿತ್ಯನಾಥ್ ಕಾರ್ಯನಿರ್ವಹಣೆಯ ಬಗ್ಗೆ ಅಸಮಾದಾನ ಹೊಂದಿದೆ ಎಂಬುದನ್ನು ಊಹಿಸಬಹುದು.

ಇದನ್ನೂ ಓದಿ: ಪಿಎಂ-ಸಿಎಂ ಸಭೆ ಟಿವಿಯಲ್ಲಿ ಪ್ರಸಾರ: ಆಕ್ಷೇಪಿಸಿದ ಮೋದಿ, ವಿಷಾದಿಸಿದ ಕೇಜ್ರಿವಾಲ್!

ಲಕ್ನೋದ ಮಯೋ ಆಸ್ಪತ್ರೆ ಮತ್ತು ಮೇಕ್ ವೆಲ್ ಆಸ್ಪತ್ರೆ ಒಂದೋ ಅಕ್ಸಿಜನ್ ಸಿಲಿಂಡರ್ ನೀಡಿ, ಇಲ್ಲಾಂದ್ರೆ ಕೊರೊನಾ ರೋಗಿಗಳನ್ನು ನಮ್ಮ ಆಸ್ಪತ್ರೆಯಿಂದ ಸ್ಥಳಾಂತರಿಸಿ ಎಂದು ನೋಟಿಸ್ ನೀಡಿದೆ.

ಮಾಯೊ ವೈದ್ಯಕೀಯ ಕೇಂದ್ರ ಮತ್ತು ಮೇಕ್‌ವೆಲ್ ಆಸ್ಪತ್ರೆಯಲ್ಲಿನ 160 ಕೊರೊದನಾ ರೋಗಿಗಳು ಆಮ್ಲಜನಕದ ಬೆಂಬಲದಿಂದ ಬದುಕಿದ್ದಾರೆ. ಆದರೆ ಆಮ್ಲಜನಕದ ಪೂರೈಕೆಯ ಕೊರತೆಯಿಂದಾಗಿ ರೋಗಿಗಳನ್ನು ಕರೆದೊಯ್ಯುವಂತೆ ಆಸ್ಪತ್ರೆಯ ಆಡಳಿತ ಮಂಡಳಿ ರೋಗಿಗಳ ಮನೆಯವರಿಗೆ ಸೂಚಿಸಿದೆ.

ಆಸ್ಪತ್ರೆಯ ಗೋಡೆಯಲ್ಲಿ ಅಂಟಿಸಲಾಗಿರುವ ಅಧಿಕೃತ ನೋಟಿಸಿನಲ್ಲಿ “ಉತ್ತರ ಪ್ರದೇಶ ಸಿಎಂ ಮತ್ತು ಕೇಂದ್ರ ಸರ್ಕಾರಕ್ಕೆ ಪದೇ ಪದೇ ವಿನಂತಿಸಿದ ನಂತರವೂ ನಮಗೆ ಸಾಕಷ್ಟು ಆಮ್ಲಜನಕ ಪೂರೈಕೆ ಪಡೆಯಲು ಸಾಧ್ಯವಾಗುವುದಿಲ್ಲ. ಆದ್ದರಿಂದ ದಯವಿಟ್ಟು ರೋಗಿಗಳನ್ನು ಇಲ್ಲಿಂದ ವಾಪಸ್ ಕರೆದೊಯ್ಯಿರಿ ಎಂದು ನಾವು ಆಮ್ಲಜನಕ ಬೆಂಬಲದಲ್ಲಿರುವ ರೋಗಿಗಳ ಕುಟುಂಬ ಸದಸ್ಯರನ್ನು ವಿನಂತಿಸುತ್ತಿದ್ದೇವೆ. ಅನಾನುಕೂಲತೆಗಾಗಿ ನಾವು ತುಂಬಾ ವಿಷಾದಿಸುತ್ತೇವೆ” ಎಂದು ಬರೆಯಲಾಗಿದೆ.

ಇದನ್ನೂ ಓದಿ: ವೀಕೆಂಡ್ ಕರ್ಫ್ಯೂ: ಶನಿವಾರ ಮತ್ತು ಭಾನುವಾರ ಏನಿರುತ್ತೆ, ಏನಿರಲ್ಲ? ಇಲ್ಲಿದೆ ಮಾಹಿತಿ

ಲಖನೌ ಮುಖ್ಯ ವೈದ್ಯಕೀಯ ಅಧಿಕಾರಿಗಳು ಮುಖ್ಯಮಂತ್ರಿ ಆದಿತ್ಯನಾಥ್ ಕಚೇರಿಗೆ ಬರೆದ ಪತ್ರದಲ್ಲಿ, “ಲಕ್ನೋದ ಗೋಯೋ ನಗರದ, ಮೇಯೊ ಕೇಂದ್ರವು ಆಮ್ಲಜನಕದ ಪೂರೈಕೆಯ ತೀವ್ರ ಕೊರತೆಯನ್ನು ಎದುರಿಸುತ್ತಿದೆ. ಇದು ಕೊರೊನಾ ರೋಗಿಯ ಚಿಕಿತ್ಸೆಗೆ ತೀವ್ರವಾಗಿ ಅಡ್ಡಿಪಡಿಸುತ್ತಿದೆ ಎಂದು ನಿಮ್ಮ ಗಮನಕ್ಕೆ ತರಲಾಗಿದೆ. ನಮ್ಮ ಪ್ರಯತ್ನಗಳ ಹೊರತಾಗಿಯೂ, ಲಕ್ನೋದಲ್ಲಿ ಎಲ್ಲಿಯೂ ಆಮ್ಲಜನಕ ಲಭ್ಯವಿಲ್ಲದ ಕಾರಣ ಅಸಹಾಯಕರಾಗಿದ್ದೇವೆ. ಸರ್ಕಾರಿ ಆರೋಗ್ಯ ಕೇಂದ್ರದ ನಮ್ಮ ಆಸ್ಪತ್ರೆಗಳಲ್ಲಿ ದಾಖಲಾದ ರೋಗಿಗಳನ್ನು ತುರ್ತು ಸ್ಥಳಾಂತರಿಸಲು / ವರ್ಗಾಯಿಸಲು ವ್ಯವಸ್ಥೆ ಮಾಡುವಂತೆ CMO ಗೆ ವಿನಂತಿಸಿದೆ” ಎಂದು ಬರೆಯಲಾಗಿದೆ. ಅದರ ಅರ್ಥ ಲಕ್ನೋದ ಯಾವ ಸರಕಾರಿ ಆಸ್ಪತ್ರೆಯಲ್ಲೂ ಆಕ್ಸಿಜನ್ ಇಲ್ಲದಾಗಿದೆ.

“ಕಳೆದ ಒಂದು ವಾರದಿಂದ ನಾವು ಆಮ್ಲಜನಕದ ಪೂರೈಕೆಯ ಸಮಸ್ಯೆಗಳನ್ನು ಎದುರಿಸುತ್ತಿದ್ದೇವೆ. ಇಂದು, ನಮ್ಮ ವಾಹನಗಳು ಏಳು ಗಂಟೆಗಳ ಕಾಲ ಸರಬರಾಜುದಾರರ ಬಳಿ ನಿಂತಿದ್ದಾವೆ. ಆದರೂ ಒಂದೇ ಒಂದು ಸಿಲಿಂಡರ್ ನಮಗೆ ಸಿಕ್ಕಿಲ್ಲ. ಕೊನೆಗೆ ದಾರಿಯಿಲ್ಲದೆ, ನಾವು ಈ ನೋಟಿಸ್ ಅನ್ನು ಅಂಟಿಸಬೇಕಾಯಿತು” ಎಂದು ಗೋಮತಿ ನಗರದ ಮೇಕ್‌ವೆಲ್ ಆಸ್ಪತ್ರೆಯ ಮಾಲೀಕ ವಿನಯ್ ಪ್ರತಾಪ್ ಸಿಂಗ್ ಹೇಳುತ್ತಾರೆ.

ಲಕ್ನೋದ ಎಲ್ಲಾ ಆಸ್ಪತ್ರೆಯ ವಾಹನಗಳನ್ನು ವಿವಿಧ ಆಮ್ಲಜನಕ ಪೂರೈಕೆದಾರರು ಮತ್ತು ಏಜೆನ್ಸಿಗಳ ಎದುರು ನಿಲ್ಲಿಸಲಾಗಿದೆ. ಈ ಮಧ್ಯೆ ವಜೀರ್‌ಗಂಜ್‌ನ ಆಲ್ಮೈಟಿ ಆಸ್ಪತ್ರೆಗೆ ದಾಖಲಾದ 50 ವರ್ಷದ ಮಹಿಳೆ ಆಮ್ಲಜನಕದ ಕೊರತೆಯಿಂದಾಗಿ ಬುಧವಾರ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ಆಕ್ಸಿಜನ್, ಐಸಿಯು ಕೊರತೆಯಿಂದ ಉಂಟಾಗುವ ಸಾವುಗಳಿಗೆ ಕೇಂದ್ರವೇ ಹೊಣೆ- ರಾಹುಲ್ ಗಾಂಧಿ

“ಕಳೆದ ಕೆಲವು ದಿನಗಳಲ್ಲಿ ಆಮ್ಲಜನಕದ ಕೊರತೆಯಿಂದಾಗಿ ಆಸ್ಪತ್ರೆಯಲ್ಲಿ ಕನಿಷ್ಠ 10-15 ಜನರು ಸಾವನ್ನಪ್ಪಿದ್ದಾರೆ. ಕಳೆದ 10 ದಿನಗಳಿಂದ, ನನ್ನ ಚಿಕ್ಕಮ್ಮ ವೆಂಟಿಲೇಟರ್ ಬೆಂಬಲದಲ್ಲಿದ್ದರು. ನಾನು ವೈದ್ಯನಾಗಿರುವುದರಿಂದ ನಾನು ಸ್ವಂತವಾಗಿ ಆಮ್ಲಜನಕವನ್ನು ವ್ಯವಸ್ಥೆ ಮಾಡುತ್ತಿದ್ದೆ. ಆದರೆ ಇಂದು ಅದೂ ಸಾಧ್ಯವಾಗದೇ ನನ್ನ ಚಿಕ್ಕಮ್ಮ ಬಲಿಯಾದರು. ನನ್ನ ಚಿಕ್ಕಮ್ಮನನ್ನು ಬೇರೆ ಆಸ್ಪತ್ರೆಗೆ ಸ್ಥಳಾಂತರಿಸುವಂತೆ ಕಳೆದ ರಾತ್ರಿ ನಮಗೆ ತಿಳಿಸಲಾಯಿತು” ಎಂದು ರೋಗಿಯ ಸಂಬಂಧಿಕರೇ ಆಗಿರುವ ವೈದ್ಯರೇ ಅಳುತ್ತಾರೆ.

ಉತ್ತರ ಪ್ರದೇಶದ ಎಲ್ಲಾ ಆಕ್ಸಿಜನ್ ಪೂರೈಕೆದಾರ ಏಜೆನ್ಸಿಗಳ ಎದುರು ಆಕ್ಸಿಜನ್ ಗಾಗಿ ವಾಹನಗಳು ಸಾಲುಗಟ್ಟಿ ನಿಂತಿದೆ. ಆಕ್ಸಿಜನ್ ಇಲ್ಲದೇ ಇರುವುದರಿಂದ ಐಸಿಯುನಲ್ಲಿರುವ ರೋಗಿಗಳನ್ನು ಹೊರ ಹಾಕುವ ನೋಟಿಸನ್ನು ಬಹಿರಂಗವಾಗಿ ಪ್ರದರ್ಶನ ಮಾಡಲಾಗಿದೆ. ಸರ್ಕಾರಿ ಆಸ್ಪತ್ರೆಯಲ್ಲೂ ಆಕ್ಸಿಜನ್ ಕೊರತೆ ಇದ್ದು ಎಲ್ಲಾ ರೋಗಿಗಳ ಸ್ಥಳಾಂತರಕ್ಕೆ ಸರ್ಕಾರಿ ಮುಖ್ಯ ವೈದ್ಯಾಧಿಕಾರಿಗಳು ಮುಖ್ಯಮಂತ್ರಿ ಕಚೇರಿಗೆ ಪತ್ರ ಬರೆದಿದ್ದಾರೆ.

ಮುಖ್ಯವೈದ್ಯಾಧಿಕಾರಿ ಪತ್ರ ಮತ್ತು ಖಾಸಗಿ ಆಸ್ಪತ್ರೆಯ ನೋಟಿಸ್ ನೋಡಿದ ಯಾವ ಮನುಷ್ಯನೂ ಮುಖ್ಯಮಂತ್ರಿ ಹುದ್ದೆಯಲ್ಲಿ ಒಂದು ಕ್ಷಣವೂ ಮುಂದುವರೆಯಲಾರ. ಆದರೆ ಸಂತ, ಕಾವಿಧಾರಿ ಯೋಗಿ ಆದಿತ್ಯನಾಥ್ ಮಾತ್ರ ಮಹೇಶ್ ವಿಕ್ರಂ ಹೆಗಡೆ ಹೇಳಿದಂತೆ ಕೇಂದ್ರ ಸರ್ಕಾರದ ಬಳಿಯೂ ಆಕ್ಸಿಜನ್ ಕೇಳದೇ ತಾನು ಮನುಷ್ಯನಲ್ಲ ಎಂಬುದನ್ನು ಸಾಭೀತು ಮಾಡಿದ್ದಾರೆ.

(ಆಧಾರ : ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆಯ ಯುಪಿ ಎಡಿಶನ್)

ಇದನ್ನೂ ಓದಿ: ಮೋದಿ ಸರ್ಕಾರದ ಹೊಸ ಸಂಸತ್ ಕಟ್ಟಡ ಸೆಂಟ್ರಲ್ ವಿಸ್ತಾ – ಒಂದು ಧ್ವಂಸ ಕಾರ್ಯಾಚರಣೆಯಷ್ಟೇ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...