Homeಕರೋನಾ ತಲ್ಲಣಆದಿತ್ಯನಾಥ್ ಕುರಿತ ಪೋಸ್ಟ್ ಕಾರ್ಡ್‌ ಸುಳ್ಳು ಬಯಲು; ವಾಸ್ತವದಲ್ಲಿ ಇದು ಉಲ್ಟಾ ಕೇಸು | ನವೀನ್...

ಆದಿತ್ಯನಾಥ್ ಕುರಿತ ಪೋಸ್ಟ್ ಕಾರ್ಡ್‌ ಸುಳ್ಳು ಬಯಲು; ವಾಸ್ತವದಲ್ಲಿ ಇದು ಉಲ್ಟಾ ಕೇಸು | ನವೀನ್ ಸೂರಿಂಜೆ

- Advertisement -
- Advertisement -

“ಮಹಾರಾಷ್ಟ್ರದ ಮುಖ್ಯಮಂತ್ರಿ ಆಕ್ಸಿಜನ್ ಪೂರೈಸುವಂತೆ ಪ್ರಧಾನಿಗೆ ಕೇಳಿಕೊಂಡರು. ದೆಹಲಿ ಮುಖ್ಯಮಂತ್ರಿ ಪ್ರಧಾನಿಯನ್ನು ಕೈಮುಗಿದು ಕೇಳಿಕೊಂಡರು. ಪಂಜಾಬ್ ಮುಖ್ಯಮಂತ್ರಿ ಅಮರೀಂದರ್ ಸಿಂಗರೂ ಕೇಳಿಕೊಂಡರು. ಅದರೆ ಉತ್ತರ ಪ್ರದೇಶ ಸಂತ ಕಾವಿಧಾರಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮಾತ್ರ ಎಂಟರಿಂದ ಹತ್ತು ಆಕ್ಸಿಜನ್ ಘಟಕಗಳನ್ನೇ ಸ್ಥಾಪಿಸಿದರು” ಎಂದು ಪೋಸ್ಟ್ ಕಾರ್ಡ್ ಮಹೇಂದ್ರ ಹೆಗಡೆ ಪೋಸ್ಟರ್ ಮಾಡಿದ್ದಾರೆ. ಅನಕ್ಷರಸ್ಥ ಹಿಂದುತ್ವ ಸಂಘಟನೆಯ ಕಾರ್ಯಕರ್ತರು ಅದನ್ನು ವ್ಯಾಪಕವಾಗಿ ಹಂಚುತ್ತಿದ್ದಾರೆ. ಆದರೆ ವಾಸ್ತವ ಬೇರೆಯೇ ಇದೆ.

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆಕ್ಸಿಜನ್ ಕೊಡಿ ಎಂದು ಕೇಂದ್ರವನ್ನು ಕೇಳದೇ ಇದ್ದರೆ ಅವರಂತಹ ಬೇಜವಾಬ್ದಾರಿ, ಅಮಾನವೀಯ, ಕ್ರೂರಿ ಮುಖ್ಯಮಂತ್ರಿ ಇನ್ನೊಬ್ಬರು ಇರಲು ಸಾಧ್ಯವಿಲ್ಲ. ಯಾಕೆಂದರೆ ದೇಶದ ಉಳಿದ ಭಾಗಗಳಿಗಿಂತ ಉತ್ತರ ಪ್ರದೇಶದ ಆಸ್ಪತ್ರೆಗಳ ಸ್ಥಿತಿ ಚಿಂತಾಜನಕವಾಗಿದೆ. ಎರಡು ಆಸ್ಪತ್ರೆಗಳಂತೂ ಉತ್ತರ ಪ್ರದೇಶದ ಸಿಎಂ ಕಾರ್ಯಕ್ಕೆ ಆಕ್ಷೇಪ ವ್ಯಕ್ತಪಡಿಸಿ ನೋಟಿಸ್ ಬೋರ್ಡಿನಲ್ಲಿ ನೋಟಿಸ್ ಅಂಟಿಸಿದೆ ಎಂದರೆ ವೈದ್ಯರ ಸಮೂಹ ಯಾವ ಪರಿ ಯೋಗಿ ಆದಿತ್ಯನಾಥ್ ಕಾರ್ಯನಿರ್ವಹಣೆಯ ಬಗ್ಗೆ ಅಸಮಾದಾನ ಹೊಂದಿದೆ ಎಂಬುದನ್ನು ಊಹಿಸಬಹುದು.

ಇದನ್ನೂ ಓದಿ: ಪಿಎಂ-ಸಿಎಂ ಸಭೆ ಟಿವಿಯಲ್ಲಿ ಪ್ರಸಾರ: ಆಕ್ಷೇಪಿಸಿದ ಮೋದಿ, ವಿಷಾದಿಸಿದ ಕೇಜ್ರಿವಾಲ್!

ಲಕ್ನೋದ ಮಯೋ ಆಸ್ಪತ್ರೆ ಮತ್ತು ಮೇಕ್ ವೆಲ್ ಆಸ್ಪತ್ರೆ ಒಂದೋ ಅಕ್ಸಿಜನ್ ಸಿಲಿಂಡರ್ ನೀಡಿ, ಇಲ್ಲಾಂದ್ರೆ ಕೊರೊನಾ ರೋಗಿಗಳನ್ನು ನಮ್ಮ ಆಸ್ಪತ್ರೆಯಿಂದ ಸ್ಥಳಾಂತರಿಸಿ ಎಂದು ನೋಟಿಸ್ ನೀಡಿದೆ.

ಮಾಯೊ ವೈದ್ಯಕೀಯ ಕೇಂದ್ರ ಮತ್ತು ಮೇಕ್‌ವೆಲ್ ಆಸ್ಪತ್ರೆಯಲ್ಲಿನ 160 ಕೊರೊದನಾ ರೋಗಿಗಳು ಆಮ್ಲಜನಕದ ಬೆಂಬಲದಿಂದ ಬದುಕಿದ್ದಾರೆ. ಆದರೆ ಆಮ್ಲಜನಕದ ಪೂರೈಕೆಯ ಕೊರತೆಯಿಂದಾಗಿ ರೋಗಿಗಳನ್ನು ಕರೆದೊಯ್ಯುವಂತೆ ಆಸ್ಪತ್ರೆಯ ಆಡಳಿತ ಮಂಡಳಿ ರೋಗಿಗಳ ಮನೆಯವರಿಗೆ ಸೂಚಿಸಿದೆ.

ಆಸ್ಪತ್ರೆಯ ಗೋಡೆಯಲ್ಲಿ ಅಂಟಿಸಲಾಗಿರುವ ಅಧಿಕೃತ ನೋಟಿಸಿನಲ್ಲಿ “ಉತ್ತರ ಪ್ರದೇಶ ಸಿಎಂ ಮತ್ತು ಕೇಂದ್ರ ಸರ್ಕಾರಕ್ಕೆ ಪದೇ ಪದೇ ವಿನಂತಿಸಿದ ನಂತರವೂ ನಮಗೆ ಸಾಕಷ್ಟು ಆಮ್ಲಜನಕ ಪೂರೈಕೆ ಪಡೆಯಲು ಸಾಧ್ಯವಾಗುವುದಿಲ್ಲ. ಆದ್ದರಿಂದ ದಯವಿಟ್ಟು ರೋಗಿಗಳನ್ನು ಇಲ್ಲಿಂದ ವಾಪಸ್ ಕರೆದೊಯ್ಯಿರಿ ಎಂದು ನಾವು ಆಮ್ಲಜನಕ ಬೆಂಬಲದಲ್ಲಿರುವ ರೋಗಿಗಳ ಕುಟುಂಬ ಸದಸ್ಯರನ್ನು ವಿನಂತಿಸುತ್ತಿದ್ದೇವೆ. ಅನಾನುಕೂಲತೆಗಾಗಿ ನಾವು ತುಂಬಾ ವಿಷಾದಿಸುತ್ತೇವೆ” ಎಂದು ಬರೆಯಲಾಗಿದೆ.

ಇದನ್ನೂ ಓದಿ: ವೀಕೆಂಡ್ ಕರ್ಫ್ಯೂ: ಶನಿವಾರ ಮತ್ತು ಭಾನುವಾರ ಏನಿರುತ್ತೆ, ಏನಿರಲ್ಲ? ಇಲ್ಲಿದೆ ಮಾಹಿತಿ

ಲಖನೌ ಮುಖ್ಯ ವೈದ್ಯಕೀಯ ಅಧಿಕಾರಿಗಳು ಮುಖ್ಯಮಂತ್ರಿ ಆದಿತ್ಯನಾಥ್ ಕಚೇರಿಗೆ ಬರೆದ ಪತ್ರದಲ್ಲಿ, “ಲಕ್ನೋದ ಗೋಯೋ ನಗರದ, ಮೇಯೊ ಕೇಂದ್ರವು ಆಮ್ಲಜನಕದ ಪೂರೈಕೆಯ ತೀವ್ರ ಕೊರತೆಯನ್ನು ಎದುರಿಸುತ್ತಿದೆ. ಇದು ಕೊರೊನಾ ರೋಗಿಯ ಚಿಕಿತ್ಸೆಗೆ ತೀವ್ರವಾಗಿ ಅಡ್ಡಿಪಡಿಸುತ್ತಿದೆ ಎಂದು ನಿಮ್ಮ ಗಮನಕ್ಕೆ ತರಲಾಗಿದೆ. ನಮ್ಮ ಪ್ರಯತ್ನಗಳ ಹೊರತಾಗಿಯೂ, ಲಕ್ನೋದಲ್ಲಿ ಎಲ್ಲಿಯೂ ಆಮ್ಲಜನಕ ಲಭ್ಯವಿಲ್ಲದ ಕಾರಣ ಅಸಹಾಯಕರಾಗಿದ್ದೇವೆ. ಸರ್ಕಾರಿ ಆರೋಗ್ಯ ಕೇಂದ್ರದ ನಮ್ಮ ಆಸ್ಪತ್ರೆಗಳಲ್ಲಿ ದಾಖಲಾದ ರೋಗಿಗಳನ್ನು ತುರ್ತು ಸ್ಥಳಾಂತರಿಸಲು / ವರ್ಗಾಯಿಸಲು ವ್ಯವಸ್ಥೆ ಮಾಡುವಂತೆ CMO ಗೆ ವಿನಂತಿಸಿದೆ” ಎಂದು ಬರೆಯಲಾಗಿದೆ. ಅದರ ಅರ್ಥ ಲಕ್ನೋದ ಯಾವ ಸರಕಾರಿ ಆಸ್ಪತ್ರೆಯಲ್ಲೂ ಆಕ್ಸಿಜನ್ ಇಲ್ಲದಾಗಿದೆ.

“ಕಳೆದ ಒಂದು ವಾರದಿಂದ ನಾವು ಆಮ್ಲಜನಕದ ಪೂರೈಕೆಯ ಸಮಸ್ಯೆಗಳನ್ನು ಎದುರಿಸುತ್ತಿದ್ದೇವೆ. ಇಂದು, ನಮ್ಮ ವಾಹನಗಳು ಏಳು ಗಂಟೆಗಳ ಕಾಲ ಸರಬರಾಜುದಾರರ ಬಳಿ ನಿಂತಿದ್ದಾವೆ. ಆದರೂ ಒಂದೇ ಒಂದು ಸಿಲಿಂಡರ್ ನಮಗೆ ಸಿಕ್ಕಿಲ್ಲ. ಕೊನೆಗೆ ದಾರಿಯಿಲ್ಲದೆ, ನಾವು ಈ ನೋಟಿಸ್ ಅನ್ನು ಅಂಟಿಸಬೇಕಾಯಿತು” ಎಂದು ಗೋಮತಿ ನಗರದ ಮೇಕ್‌ವೆಲ್ ಆಸ್ಪತ್ರೆಯ ಮಾಲೀಕ ವಿನಯ್ ಪ್ರತಾಪ್ ಸಿಂಗ್ ಹೇಳುತ್ತಾರೆ.

ಲಕ್ನೋದ ಎಲ್ಲಾ ಆಸ್ಪತ್ರೆಯ ವಾಹನಗಳನ್ನು ವಿವಿಧ ಆಮ್ಲಜನಕ ಪೂರೈಕೆದಾರರು ಮತ್ತು ಏಜೆನ್ಸಿಗಳ ಎದುರು ನಿಲ್ಲಿಸಲಾಗಿದೆ. ಈ ಮಧ್ಯೆ ವಜೀರ್‌ಗಂಜ್‌ನ ಆಲ್ಮೈಟಿ ಆಸ್ಪತ್ರೆಗೆ ದಾಖಲಾದ 50 ವರ್ಷದ ಮಹಿಳೆ ಆಮ್ಲಜನಕದ ಕೊರತೆಯಿಂದಾಗಿ ಬುಧವಾರ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ಆಕ್ಸಿಜನ್, ಐಸಿಯು ಕೊರತೆಯಿಂದ ಉಂಟಾಗುವ ಸಾವುಗಳಿಗೆ ಕೇಂದ್ರವೇ ಹೊಣೆ- ರಾಹುಲ್ ಗಾಂಧಿ

“ಕಳೆದ ಕೆಲವು ದಿನಗಳಲ್ಲಿ ಆಮ್ಲಜನಕದ ಕೊರತೆಯಿಂದಾಗಿ ಆಸ್ಪತ್ರೆಯಲ್ಲಿ ಕನಿಷ್ಠ 10-15 ಜನರು ಸಾವನ್ನಪ್ಪಿದ್ದಾರೆ. ಕಳೆದ 10 ದಿನಗಳಿಂದ, ನನ್ನ ಚಿಕ್ಕಮ್ಮ ವೆಂಟಿಲೇಟರ್ ಬೆಂಬಲದಲ್ಲಿದ್ದರು. ನಾನು ವೈದ್ಯನಾಗಿರುವುದರಿಂದ ನಾನು ಸ್ವಂತವಾಗಿ ಆಮ್ಲಜನಕವನ್ನು ವ್ಯವಸ್ಥೆ ಮಾಡುತ್ತಿದ್ದೆ. ಆದರೆ ಇಂದು ಅದೂ ಸಾಧ್ಯವಾಗದೇ ನನ್ನ ಚಿಕ್ಕಮ್ಮ ಬಲಿಯಾದರು. ನನ್ನ ಚಿಕ್ಕಮ್ಮನನ್ನು ಬೇರೆ ಆಸ್ಪತ್ರೆಗೆ ಸ್ಥಳಾಂತರಿಸುವಂತೆ ಕಳೆದ ರಾತ್ರಿ ನಮಗೆ ತಿಳಿಸಲಾಯಿತು” ಎಂದು ರೋಗಿಯ ಸಂಬಂಧಿಕರೇ ಆಗಿರುವ ವೈದ್ಯರೇ ಅಳುತ್ತಾರೆ.

ಉತ್ತರ ಪ್ರದೇಶದ ಎಲ್ಲಾ ಆಕ್ಸಿಜನ್ ಪೂರೈಕೆದಾರ ಏಜೆನ್ಸಿಗಳ ಎದುರು ಆಕ್ಸಿಜನ್ ಗಾಗಿ ವಾಹನಗಳು ಸಾಲುಗಟ್ಟಿ ನಿಂತಿದೆ. ಆಕ್ಸಿಜನ್ ಇಲ್ಲದೇ ಇರುವುದರಿಂದ ಐಸಿಯುನಲ್ಲಿರುವ ರೋಗಿಗಳನ್ನು ಹೊರ ಹಾಕುವ ನೋಟಿಸನ್ನು ಬಹಿರಂಗವಾಗಿ ಪ್ರದರ್ಶನ ಮಾಡಲಾಗಿದೆ. ಸರ್ಕಾರಿ ಆಸ್ಪತ್ರೆಯಲ್ಲೂ ಆಕ್ಸಿಜನ್ ಕೊರತೆ ಇದ್ದು ಎಲ್ಲಾ ರೋಗಿಗಳ ಸ್ಥಳಾಂತರಕ್ಕೆ ಸರ್ಕಾರಿ ಮುಖ್ಯ ವೈದ್ಯಾಧಿಕಾರಿಗಳು ಮುಖ್ಯಮಂತ್ರಿ ಕಚೇರಿಗೆ ಪತ್ರ ಬರೆದಿದ್ದಾರೆ.

ಮುಖ್ಯವೈದ್ಯಾಧಿಕಾರಿ ಪತ್ರ ಮತ್ತು ಖಾಸಗಿ ಆಸ್ಪತ್ರೆಯ ನೋಟಿಸ್ ನೋಡಿದ ಯಾವ ಮನುಷ್ಯನೂ ಮುಖ್ಯಮಂತ್ರಿ ಹುದ್ದೆಯಲ್ಲಿ ಒಂದು ಕ್ಷಣವೂ ಮುಂದುವರೆಯಲಾರ. ಆದರೆ ಸಂತ, ಕಾವಿಧಾರಿ ಯೋಗಿ ಆದಿತ್ಯನಾಥ್ ಮಾತ್ರ ಮಹೇಶ್ ವಿಕ್ರಂ ಹೆಗಡೆ ಹೇಳಿದಂತೆ ಕೇಂದ್ರ ಸರ್ಕಾರದ ಬಳಿಯೂ ಆಕ್ಸಿಜನ್ ಕೇಳದೇ ತಾನು ಮನುಷ್ಯನಲ್ಲ ಎಂಬುದನ್ನು ಸಾಭೀತು ಮಾಡಿದ್ದಾರೆ.

(ಆಧಾರ : ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆಯ ಯುಪಿ ಎಡಿಶನ್)

ಇದನ್ನೂ ಓದಿ: ಮೋದಿ ಸರ್ಕಾರದ ಹೊಸ ಸಂಸತ್ ಕಟ್ಟಡ ಸೆಂಟ್ರಲ್ ವಿಸ್ತಾ – ಒಂದು ಧ್ವಂಸ ಕಾರ್ಯಾಚರಣೆಯಷ್ಟೇ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...