Homeಮುಖಪುಟಸೋಂಕಿತರಿಗೆ ಉಚಿತ ಊಟ ನೀಡುವ ಮೂಲಕ ಇತರರಿಗೆ ಸ್ಫೂರ್ತಿಯಾದ ಮೂವರು ಬಾಲ್ಯಸ್ನೇಹಿತರು!

ಸೋಂಕಿತರಿಗೆ ಉಚಿತ ಊಟ ನೀಡುವ ಮೂಲಕ ಇತರರಿಗೆ ಸ್ಫೂರ್ತಿಯಾದ ಮೂವರು ಬಾಲ್ಯಸ್ನೇಹಿತರು!

- Advertisement -
- Advertisement -

ಕೋವಿಡ್-19 ಎರಡನೇ ಅಲೆ ಇಡೀ ದೇಶವನ್ನೇ ತಲ್ಲಣಗೊಳಿಸಿದೆ. ದೇಶಾದ್ಯಂತ ದಿನಕ್ಕೆ ಮೂರು ಲಕ್ಷಕ್ಕೂ ಅಧಿಕ ಪ್ರಕರಣಗಳು ವರಿದಿಯಾಗುತ್ತಿದ್ದರೆ, ಬೆಂಗಳೂರಿನಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 30 ಸಾವಿರ ದಾಟಿದೆ. ಆಸ್ಪತ್ರೆಗಳಲ್ಲಿ ಬೆಡ್ ಕೊರತೆ, ಆಮ್ಲಜನಕದ ಕೊರತೆ ಉಂಟಾಗಿದ್ದು, ಕೋವಿಡ್ ಸೋಂಕಿತರು ಬೆಡ್ ಸಿಗದೆ ಮನೆಗೆ ಮರಳಿ ಕ್ವಾರಂಟೈನ್ ಗೆ ಒಳಗಾಗಬೇಕಾದ ಪರಿಸ್ಥಿತಿ ಬಂದಿದೆ. ಹಲವಾರು ಸ್ಥಳಗಳಲ್ಲಿ ಇಡೀ ಕುಟುಂಬವೇ ಕೊರೋನಾದಿಂದ ತತ್ತರಿಸಿದ್ದು, ಆರೈಕೆ ಮಾಡಲು ಯಾರು ಇಲ್ಲದಂತಾಗಿದೆ. ಇಂತಹದ್ದೇ ಸಮಸ್ಯೆಯನ್ನು ಎದುರಿಸಿದ ಯುವಕರಿಬ್ಬರು ಇತರರಿಗೆ ನೆರವಾಗುವ ಉದ್ದೇಶದಿಂದ ಬೆಂಗಳೂರಿನಲ್ಲಿ ಕೋವಿಡ್ ಸೋಂಕಿಗೆ ಒಳಗಾಗಿ ಕ್ವಾರಂಟೈನ್ ಮತ್ತು ಆಸ್ಪತ್ರೆಯಲ್ಲಿರುವ ಜನರಿಗೆ ಉಚಿತವಾಗಿ ಊಟದ ವ್ಯವಸ್ಥೆ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

ಇಂತಹ ಸಾಮಾಜಿಕ ಕೆಲಸದಲ್ಲಿ ತೊಡಗಿಸಿಕೊಂಡಿರುವವರು ಸಿದ್ದಾರ್ಥ್, ಅಂಕಿತ್ ಮತ್ತು ನಿಖಿಲ್. ಮೂಲತಃ ಪಶ್ಚಿಮ ಬಂಗಾಳದವರಾದ ಇವರು 20ಕ್ಕೂ ವರ್ಷಕ್ಕಿಂತ ಹೆಚ್ಚು ಕಾಲ ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ಬಾಲ್ಯ ಸ್ನೇಹಿತರಾದ ಈ ಮೂವರು ವೃತ್ತಿಯಲ್ಲಿ ಉದ್ಯಮಿಗಳಾಗಿದ್ದು ಬೆಂಗಳೂರಿನಲ್ಲಿ ಕ್ವಾರಂಟೈನ್ ಆಗಿರುವ ಜನರಿಗೆ ಮತ್ತು ಆಸ್ಪತ್ರೆಯಲ್ಲಿರುವ ರೋಗಿಗಳಿಗೆ ಉಚಿತವಾಗಿ ಮಧ್ಯಾಹ್ನ ಮತ್ತು ರಾತ್ರಿ ಊಟ ವಿತರಿಸುತ್ತಿದ್ದಾರೆ. ಊಟಕ್ಕೆ 3 ಚಪಾತಿ, ದಾಲ್, ತರಕಾರಿ ಪಲ್ಯ, ಅನ್ನ ಸಾಂಬರ್ ಮತ್ತು ಬಾಳೆಹಣ್ಣು ಇವರ ಮುಖ್ಯ ಮೆನು.

ಕೋವಿಡ್ ಸೋಂಕಿಗೆ ಒಳಗಾಗಿರುವ ಕ್ವಾರಂಟೈನ್‌ನಲ್ಲಿರುವ ಇವರು ಕೋವಿಡ್‌ನಿಂದ ಉಂಟಾಗುವ ಸಮಸ್ಯೆಗಳನ್ನು ಅನುಭವಿಸಿದ್ದಾರೆ. ಸೋಂಕಿತರು ಮೈಕೈ ನೋವು, ಬೇದಿ, ತಲೆನೋವು ಸೇರಿದಂತೆ ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿರುತ್ತಾರೆ. ಈ ಸಮಯದಲ್ಲಿ ಅಡುಗೆ, ಊಟ ಮಾಡಿಕೊಳ್ಳುವುದು ಕಷ್ಟ ಸಾಧ್ಯ ಎನ್ನುವುದನ್ನು ಅರಿತ ಈ ಉದ್ಯಮಿಗಳು ಇದೇ ಸಮಯದಲ್ಲಿ ತಾವೇನಾದರೂ ಮಾಡಬೇಕೆಂಬ ಅಭಿಲಾಷೆಯೊಂದಿಗೆ ಬೆಂಗಳೂರಿನಲ್ಲಿ ವಾಸವಿರುವ ಕೋವಿಡ್ ಸೋಂಕಿಗೆ ಒಳಗಾಗಿರುವವರಿಗೆ ಈಗಾಗಲೇ ನೂರಾರು ಜನರಿಗೆ ಪೌಷ್ಟಿಕಾಂಶಯುಕ್ತ ಅಹಾರವನ್ನು ಉಚಿತವಾಗಿ ಸರಬರಾಜು ಮಾಡಿದ್ದಾರೆ.

ಈ ಯೋಜನೆ ಕುರಿತು ಮಾತನಾಡಿದ ಸಿದ್ದಾರ್ಥ್, “ನಾನು ಕೂಡ ಕೋವಿಡ್ ಸೋಂಕಿಗೆ ಒಳಗಾಗಿದ್ದೇನೆ. ಪ್ರಸ್ತುತ ಕ್ವಾರಂಟೈನ್‌ನಲ್ಲಿದ್ದು, ಇನ್ನೊಂದು ದಿನದಲ್ಲಿ ಹೊರಬರಲಿದ್ದೇನೆ. ಮೊದಲು ನನಗೂ ಮನೆ ಕೆಲಸ ಮಾಡಿಕೊಳ್ಳುವುದು ತೀರ ಕಷ್ಟ ಎನಿಸುತಿತ್ತು. ನನ್ನಂತೆಯೇ ನನ್ನ ಸ್ನೇಹಿತನಿಗೂ ಅನ್ನಿಸಿತು. ಮೂವರು ಮಾತನಾಡಿಕೊಂಡು ಇತರರಿಗೆ ನೆರವು ಮಾಡುತ್ತಿದ್ದೇವೆ. ನಾವಿಬ್ಬರು ಸ್ಟೆಗಿ ಎಂಬ ರೆಸ್ಟೋರೆಂಟ್ ನಡೆಸುತ್ತಿದ್ದೇವೆ. ನಮ್ಮ ರೆಸ್ಟೋರೆಂಟ್‌ನಲ್ಲಿ ಕೆಲಸ ಮಾಡುತ್ತಿರುವ ಹುಡುಗರು ಅಡುಗೆ ತಯಾರಿಸಿ ಪ್ಯಾಕ್ ಮಾಡುತ್ತಾರೆ. ಉಳಿದಂತೆ ಯಾರೆಲ್ಲರಿಗೂ ಊಟ ಬೇಕು ಎಂದು ತಿಳಿಸಿರುತ್ತಾರೋ ಅವರು ಯಾರನ್ನಾದರೂ ಕಳಿಸಿ ಅಥವಾ ಡೆನ್ಸೋ ಮೂಲಕ ಆರ್ಡರ್ ಮಾಡಿ ಊಟ ತರಿಸಿಕೊಳ್ಳುತ್ತಾರೆ” ಎಂದರು.

ಮೊನ್ನೆಯಷ್ಟೆ (ಗುರುವಾರ) ಅರಂಭವಾಗಿರುವ ಊಟ ವಿತರಣೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು ಮಧ್ಯಾಹ್ನ ಸುಮಾರು 165 ಜನರಿಗೆ ಊಟ ವಿತರಿಸಿದ್ದಾರೆ. ಅಲ್ಲಿಂದ ಪ್ರತಿ ವೇಳೆ ಊಟ ಬೇಕು ಎಂದು ಸುಮಾರು 500 ಜನರು ಫೋನ್ ಕರೆಗಳು ಬರುತ್ತಿದ್ದು ಅವರಿಗೆ ಒದಗಿಸುತ್ತಿದ್ಧೇವೆ, ಫೋನ್‌ಗಳನ್ನು ಸ್ವೀಕರಿಸದಷ್ಟು ಕರೆಗಳು ಬರುತ್ತಿವೆ ಎನ್ನುತ್ತಾರೆ. ಆಸ್ಪತ್ರೆಗಳಿಗೂ ಊಟ ತಲುಪಿಸಲು ಮುಂದಾಗಿರುವ ಅವರು, ಕೊರೊನಾಗೆ ಭಯ ಪಡದಿರಿ. ಮನೆಯಲ್ಲೇ ಸೂಕ್ತ ಚಿಕಿತ್ಸೆ ಪಡೆಯಿರಿ, ವಿಶ್ರಾಂತಿ ಪಡೆಯುವುದೇ ಸೂಕ್ತವಾದ ಚಿಕಿತ್ಸೆ ಎನ್ನುತ್ತಾರೆ ಸಿದ್ದಾರ್ಥ್.

ಸೋಂಕಿತರಾಗಿ ಯಾರಿಗಾದರೂ ಆಹಾರದ ಅಗತ್ಯವಿದ್ದರೆ ಈ ವಿಧಾನದ ಮೂಲಕ ಊಟ ತರಿಸಿಕೊಳ್ಳಬಹುದು.

ಮಧ್ಯಾಹ್ನದ ಊಟ ಬೇಕಿದ್ದರೆ ಬೆಳಿಗ್ಗೆ 10 ಗಂಟೆ ಒಳಗೆ ಫೋನ್ ಮೂಲಕ ಅಥವಾ ವಾಟ್ಸಾಪ್ ಮಾಡುವ ಮೂಲಕ ಆರ್ಡರ್ ಮಾಡಬೇಕು. ಮಧ್ಯಾಹ್ನ 12:30 ರಿಂದ 2:00 ಗಂಟೆಯೊಳಗೆ ಊಟ ತೆಗೆದುಕೊಂಡು ಹೋಗಲು ವ್ಯವಸ್ಥೆ ಮಾಡಿಕೊಳ್ಳಬೇಕು. (ಜಯನಗರದ ಸ್ಟೆಗಿ ರೆಸ್ಟೋರೆಂಟ್‌ನಿಂದ ನೇರವಾಗಿ ತೆಗೆದುಕೊಂಡು ಹೋಗಬಹುದು ಅಥವಾ ಡೆಂಜೋ ಅಥವಾ ಸ್ವಿಗ್ಗಿ ಸೇರಿದಂತೆ ಇತರ ಆಹಾರ ಸರಬರಾಜು ಆಪ್ ಗಳ ಮೂಲಕ ಆರ್ಡರ್ ಮಾಡಬಹುದು. ಅದಕ್ಕೆ ಹಣ ಅವರೇ ಭರಸಿಬೇಕು) ಅದೇ ರೀತಿ ರಾತ್ರಿ ಊಟಕ್ಕೆ ಸಂಜೆ 5 ಗಂಟೆಯೊಳಗೆ ಆರ್ಡರ್ ಮಾಡಬೇಕು. ರಾತ್ರಿ 7 ರಿಂದ 8:30ರ ಒಳಗೆ ಊಟ ತರಿಸಿಕೊಳ್ಳಲು ವ್ಯವಸ್ಥೆ ಮಾಡಿಕೊಳ್ಳಬೇಕು. ಅಗತ್ಯವಿದ್ದವರು ಈ ನಂಬರ್‌ಗಳಿಗೆ ಸಂಪರ್ಕಿಸಿ. ಸಿದ್ಧಾರ್ಥ್: 9986694781, ನಿಖಿಲ್: 9663313417 ಅಂಕಿತ್: 8553389893

ಈ ಸಂಕಷ್ಟದ ಸಮಯದಲ್ಲಿ ಇವರ ಈ ಮಾನವೀಯ ಕಾರ್ಯಕ್ಕೆ ಪ್ರಶಂಸೆ ವ್ಯಕ್ತವಾಗಿದೆ. ಕೈಲಾಗದು ಎಂದು ಕುಳಿತುಕೊಳ್ಳುವ ಬದಲು ಮನಸ್ಸು ಮಾಡಿದರೆ ಹೇಗೆಲ್ಲಾ ನೆರವಾಗಬಹುದು ಎಂಬುದಕ್ಕೆ ಈ ಯುವ ಉದ್ಯಮಿಗಳು ಮಾದರಿಯಾಗಿದ್ದಾರೆ. ಈ ಕುರಿತು ನಿಮ್ಮಗಳ ಫೋಟೊ ಕೊಡಿ ನಮ್ಮ ವರದಿಯಲ್ಲಿ ಪ್ರಕಟಿಸುತ್ತೇವೆ ಎಂದಾಗ ಅವರು ಪ್ರೀತಿಯಿಂದಲೇ ಅದನ್ನು ನಿರಾಕರಿಸಿದ್ದಾರೆ. ‘ಇದು ನಮ್ಮ ಜವಾಬ್ದಾರಿ, ಇದರಲ್ಲಿ ನಮ್ಮ ಫೋಟೊ ಹಾಕಿಕೊಳ್ಳುವ ಅಗತ್ಯವಿಲ್ಲ, ನಮ್ಮ ರೆಸ್ಟೋರೆಂಟ್‌ನಲ್ಲಿ ಇದಕ್ಕಾಗಿ ದುಡಿಯುತ್ತಿರುವ ಕಾರ್ಮಿಕರ ಫೋಟೊ ಹಾಕಿ” ಎಂದು ಹೇಳುವ ಮೂಲಕ ತಮ್ಮ ದೊಡ್ಡತನ ಮೆರೆದಿದ್ದಾರೆ. ಇವರಿಗೆ ನಮ್ಮ ಪರವಾಗಿ ಒಂದು ಸಲಾಂ…


ಇದನ್ನೂ ಓದಿ: ರಂಜಾನ್ ಉಪವಾಸ ಮುರಿದು ಪ್ಲಾಸ್ಮಾ ದಾನಮಾಡಿ ಕೊರೊನಾಪೀಡಿತ ಮಹಿಳೆಯರಿಬ್ಬರ ಜೀವ ಉಳಿಸಿದ ಮನ್ಸೂರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...