Homeಮುಖಪುಟಸೋಂಕಿತರಿಗೆ ಉಚಿತ ಊಟ ನೀಡುವ ಮೂಲಕ ಇತರರಿಗೆ ಸ್ಫೂರ್ತಿಯಾದ ಮೂವರು ಬಾಲ್ಯಸ್ನೇಹಿತರು!

ಸೋಂಕಿತರಿಗೆ ಉಚಿತ ಊಟ ನೀಡುವ ಮೂಲಕ ಇತರರಿಗೆ ಸ್ಫೂರ್ತಿಯಾದ ಮೂವರು ಬಾಲ್ಯಸ್ನೇಹಿತರು!

- Advertisement -
- Advertisement -

ಕೋವಿಡ್-19 ಎರಡನೇ ಅಲೆ ಇಡೀ ದೇಶವನ್ನೇ ತಲ್ಲಣಗೊಳಿಸಿದೆ. ದೇಶಾದ್ಯಂತ ದಿನಕ್ಕೆ ಮೂರು ಲಕ್ಷಕ್ಕೂ ಅಧಿಕ ಪ್ರಕರಣಗಳು ವರಿದಿಯಾಗುತ್ತಿದ್ದರೆ, ಬೆಂಗಳೂರಿನಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 30 ಸಾವಿರ ದಾಟಿದೆ. ಆಸ್ಪತ್ರೆಗಳಲ್ಲಿ ಬೆಡ್ ಕೊರತೆ, ಆಮ್ಲಜನಕದ ಕೊರತೆ ಉಂಟಾಗಿದ್ದು, ಕೋವಿಡ್ ಸೋಂಕಿತರು ಬೆಡ್ ಸಿಗದೆ ಮನೆಗೆ ಮರಳಿ ಕ್ವಾರಂಟೈನ್ ಗೆ ಒಳಗಾಗಬೇಕಾದ ಪರಿಸ್ಥಿತಿ ಬಂದಿದೆ. ಹಲವಾರು ಸ್ಥಳಗಳಲ್ಲಿ ಇಡೀ ಕುಟುಂಬವೇ ಕೊರೋನಾದಿಂದ ತತ್ತರಿಸಿದ್ದು, ಆರೈಕೆ ಮಾಡಲು ಯಾರು ಇಲ್ಲದಂತಾಗಿದೆ. ಇಂತಹದ್ದೇ ಸಮಸ್ಯೆಯನ್ನು ಎದುರಿಸಿದ ಯುವಕರಿಬ್ಬರು ಇತರರಿಗೆ ನೆರವಾಗುವ ಉದ್ದೇಶದಿಂದ ಬೆಂಗಳೂರಿನಲ್ಲಿ ಕೋವಿಡ್ ಸೋಂಕಿಗೆ ಒಳಗಾಗಿ ಕ್ವಾರಂಟೈನ್ ಮತ್ತು ಆಸ್ಪತ್ರೆಯಲ್ಲಿರುವ ಜನರಿಗೆ ಉಚಿತವಾಗಿ ಊಟದ ವ್ಯವಸ್ಥೆ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

ಇಂತಹ ಸಾಮಾಜಿಕ ಕೆಲಸದಲ್ಲಿ ತೊಡಗಿಸಿಕೊಂಡಿರುವವರು ಸಿದ್ದಾರ್ಥ್, ಅಂಕಿತ್ ಮತ್ತು ನಿಖಿಲ್. ಮೂಲತಃ ಪಶ್ಚಿಮ ಬಂಗಾಳದವರಾದ ಇವರು 20ಕ್ಕೂ ವರ್ಷಕ್ಕಿಂತ ಹೆಚ್ಚು ಕಾಲ ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ಬಾಲ್ಯ ಸ್ನೇಹಿತರಾದ ಈ ಮೂವರು ವೃತ್ತಿಯಲ್ಲಿ ಉದ್ಯಮಿಗಳಾಗಿದ್ದು ಬೆಂಗಳೂರಿನಲ್ಲಿ ಕ್ವಾರಂಟೈನ್ ಆಗಿರುವ ಜನರಿಗೆ ಮತ್ತು ಆಸ್ಪತ್ರೆಯಲ್ಲಿರುವ ರೋಗಿಗಳಿಗೆ ಉಚಿತವಾಗಿ ಮಧ್ಯಾಹ್ನ ಮತ್ತು ರಾತ್ರಿ ಊಟ ವಿತರಿಸುತ್ತಿದ್ದಾರೆ. ಊಟಕ್ಕೆ 3 ಚಪಾತಿ, ದಾಲ್, ತರಕಾರಿ ಪಲ್ಯ, ಅನ್ನ ಸಾಂಬರ್ ಮತ್ತು ಬಾಳೆಹಣ್ಣು ಇವರ ಮುಖ್ಯ ಮೆನು.

ಕೋವಿಡ್ ಸೋಂಕಿಗೆ ಒಳಗಾಗಿರುವ ಕ್ವಾರಂಟೈನ್‌ನಲ್ಲಿರುವ ಇವರು ಕೋವಿಡ್‌ನಿಂದ ಉಂಟಾಗುವ ಸಮಸ್ಯೆಗಳನ್ನು ಅನುಭವಿಸಿದ್ದಾರೆ. ಸೋಂಕಿತರು ಮೈಕೈ ನೋವು, ಬೇದಿ, ತಲೆನೋವು ಸೇರಿದಂತೆ ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿರುತ್ತಾರೆ. ಈ ಸಮಯದಲ್ಲಿ ಅಡುಗೆ, ಊಟ ಮಾಡಿಕೊಳ್ಳುವುದು ಕಷ್ಟ ಸಾಧ್ಯ ಎನ್ನುವುದನ್ನು ಅರಿತ ಈ ಉದ್ಯಮಿಗಳು ಇದೇ ಸಮಯದಲ್ಲಿ ತಾವೇನಾದರೂ ಮಾಡಬೇಕೆಂಬ ಅಭಿಲಾಷೆಯೊಂದಿಗೆ ಬೆಂಗಳೂರಿನಲ್ಲಿ ವಾಸವಿರುವ ಕೋವಿಡ್ ಸೋಂಕಿಗೆ ಒಳಗಾಗಿರುವವರಿಗೆ ಈಗಾಗಲೇ ನೂರಾರು ಜನರಿಗೆ ಪೌಷ್ಟಿಕಾಂಶಯುಕ್ತ ಅಹಾರವನ್ನು ಉಚಿತವಾಗಿ ಸರಬರಾಜು ಮಾಡಿದ್ದಾರೆ.

ಈ ಯೋಜನೆ ಕುರಿತು ಮಾತನಾಡಿದ ಸಿದ್ದಾರ್ಥ್, “ನಾನು ಕೂಡ ಕೋವಿಡ್ ಸೋಂಕಿಗೆ ಒಳಗಾಗಿದ್ದೇನೆ. ಪ್ರಸ್ತುತ ಕ್ವಾರಂಟೈನ್‌ನಲ್ಲಿದ್ದು, ಇನ್ನೊಂದು ದಿನದಲ್ಲಿ ಹೊರಬರಲಿದ್ದೇನೆ. ಮೊದಲು ನನಗೂ ಮನೆ ಕೆಲಸ ಮಾಡಿಕೊಳ್ಳುವುದು ತೀರ ಕಷ್ಟ ಎನಿಸುತಿತ್ತು. ನನ್ನಂತೆಯೇ ನನ್ನ ಸ್ನೇಹಿತನಿಗೂ ಅನ್ನಿಸಿತು. ಮೂವರು ಮಾತನಾಡಿಕೊಂಡು ಇತರರಿಗೆ ನೆರವು ಮಾಡುತ್ತಿದ್ದೇವೆ. ನಾವಿಬ್ಬರು ಸ್ಟೆಗಿ ಎಂಬ ರೆಸ್ಟೋರೆಂಟ್ ನಡೆಸುತ್ತಿದ್ದೇವೆ. ನಮ್ಮ ರೆಸ್ಟೋರೆಂಟ್‌ನಲ್ಲಿ ಕೆಲಸ ಮಾಡುತ್ತಿರುವ ಹುಡುಗರು ಅಡುಗೆ ತಯಾರಿಸಿ ಪ್ಯಾಕ್ ಮಾಡುತ್ತಾರೆ. ಉಳಿದಂತೆ ಯಾರೆಲ್ಲರಿಗೂ ಊಟ ಬೇಕು ಎಂದು ತಿಳಿಸಿರುತ್ತಾರೋ ಅವರು ಯಾರನ್ನಾದರೂ ಕಳಿಸಿ ಅಥವಾ ಡೆನ್ಸೋ ಮೂಲಕ ಆರ್ಡರ್ ಮಾಡಿ ಊಟ ತರಿಸಿಕೊಳ್ಳುತ್ತಾರೆ” ಎಂದರು.

ಮೊನ್ನೆಯಷ್ಟೆ (ಗುರುವಾರ) ಅರಂಭವಾಗಿರುವ ಊಟ ವಿತರಣೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು ಮಧ್ಯಾಹ್ನ ಸುಮಾರು 165 ಜನರಿಗೆ ಊಟ ವಿತರಿಸಿದ್ದಾರೆ. ಅಲ್ಲಿಂದ ಪ್ರತಿ ವೇಳೆ ಊಟ ಬೇಕು ಎಂದು ಸುಮಾರು 500 ಜನರು ಫೋನ್ ಕರೆಗಳು ಬರುತ್ತಿದ್ದು ಅವರಿಗೆ ಒದಗಿಸುತ್ತಿದ್ಧೇವೆ, ಫೋನ್‌ಗಳನ್ನು ಸ್ವೀಕರಿಸದಷ್ಟು ಕರೆಗಳು ಬರುತ್ತಿವೆ ಎನ್ನುತ್ತಾರೆ. ಆಸ್ಪತ್ರೆಗಳಿಗೂ ಊಟ ತಲುಪಿಸಲು ಮುಂದಾಗಿರುವ ಅವರು, ಕೊರೊನಾಗೆ ಭಯ ಪಡದಿರಿ. ಮನೆಯಲ್ಲೇ ಸೂಕ್ತ ಚಿಕಿತ್ಸೆ ಪಡೆಯಿರಿ, ವಿಶ್ರಾಂತಿ ಪಡೆಯುವುದೇ ಸೂಕ್ತವಾದ ಚಿಕಿತ್ಸೆ ಎನ್ನುತ್ತಾರೆ ಸಿದ್ದಾರ್ಥ್.

ಸೋಂಕಿತರಾಗಿ ಯಾರಿಗಾದರೂ ಆಹಾರದ ಅಗತ್ಯವಿದ್ದರೆ ಈ ವಿಧಾನದ ಮೂಲಕ ಊಟ ತರಿಸಿಕೊಳ್ಳಬಹುದು.

ಮಧ್ಯಾಹ್ನದ ಊಟ ಬೇಕಿದ್ದರೆ ಬೆಳಿಗ್ಗೆ 10 ಗಂಟೆ ಒಳಗೆ ಫೋನ್ ಮೂಲಕ ಅಥವಾ ವಾಟ್ಸಾಪ್ ಮಾಡುವ ಮೂಲಕ ಆರ್ಡರ್ ಮಾಡಬೇಕು. ಮಧ್ಯಾಹ್ನ 12:30 ರಿಂದ 2:00 ಗಂಟೆಯೊಳಗೆ ಊಟ ತೆಗೆದುಕೊಂಡು ಹೋಗಲು ವ್ಯವಸ್ಥೆ ಮಾಡಿಕೊಳ್ಳಬೇಕು. (ಜಯನಗರದ ಸ್ಟೆಗಿ ರೆಸ್ಟೋರೆಂಟ್‌ನಿಂದ ನೇರವಾಗಿ ತೆಗೆದುಕೊಂಡು ಹೋಗಬಹುದು ಅಥವಾ ಡೆಂಜೋ ಅಥವಾ ಸ್ವಿಗ್ಗಿ ಸೇರಿದಂತೆ ಇತರ ಆಹಾರ ಸರಬರಾಜು ಆಪ್ ಗಳ ಮೂಲಕ ಆರ್ಡರ್ ಮಾಡಬಹುದು. ಅದಕ್ಕೆ ಹಣ ಅವರೇ ಭರಸಿಬೇಕು) ಅದೇ ರೀತಿ ರಾತ್ರಿ ಊಟಕ್ಕೆ ಸಂಜೆ 5 ಗಂಟೆಯೊಳಗೆ ಆರ್ಡರ್ ಮಾಡಬೇಕು. ರಾತ್ರಿ 7 ರಿಂದ 8:30ರ ಒಳಗೆ ಊಟ ತರಿಸಿಕೊಳ್ಳಲು ವ್ಯವಸ್ಥೆ ಮಾಡಿಕೊಳ್ಳಬೇಕು. ಅಗತ್ಯವಿದ್ದವರು ಈ ನಂಬರ್‌ಗಳಿಗೆ ಸಂಪರ್ಕಿಸಿ. ಸಿದ್ಧಾರ್ಥ್: 9986694781, ನಿಖಿಲ್: 9663313417 ಅಂಕಿತ್: 8553389893

ಈ ಸಂಕಷ್ಟದ ಸಮಯದಲ್ಲಿ ಇವರ ಈ ಮಾನವೀಯ ಕಾರ್ಯಕ್ಕೆ ಪ್ರಶಂಸೆ ವ್ಯಕ್ತವಾಗಿದೆ. ಕೈಲಾಗದು ಎಂದು ಕುಳಿತುಕೊಳ್ಳುವ ಬದಲು ಮನಸ್ಸು ಮಾಡಿದರೆ ಹೇಗೆಲ್ಲಾ ನೆರವಾಗಬಹುದು ಎಂಬುದಕ್ಕೆ ಈ ಯುವ ಉದ್ಯಮಿಗಳು ಮಾದರಿಯಾಗಿದ್ದಾರೆ. ಈ ಕುರಿತು ನಿಮ್ಮಗಳ ಫೋಟೊ ಕೊಡಿ ನಮ್ಮ ವರದಿಯಲ್ಲಿ ಪ್ರಕಟಿಸುತ್ತೇವೆ ಎಂದಾಗ ಅವರು ಪ್ರೀತಿಯಿಂದಲೇ ಅದನ್ನು ನಿರಾಕರಿಸಿದ್ದಾರೆ. ‘ಇದು ನಮ್ಮ ಜವಾಬ್ದಾರಿ, ಇದರಲ್ಲಿ ನಮ್ಮ ಫೋಟೊ ಹಾಕಿಕೊಳ್ಳುವ ಅಗತ್ಯವಿಲ್ಲ, ನಮ್ಮ ರೆಸ್ಟೋರೆಂಟ್‌ನಲ್ಲಿ ಇದಕ್ಕಾಗಿ ದುಡಿಯುತ್ತಿರುವ ಕಾರ್ಮಿಕರ ಫೋಟೊ ಹಾಕಿ” ಎಂದು ಹೇಳುವ ಮೂಲಕ ತಮ್ಮ ದೊಡ್ಡತನ ಮೆರೆದಿದ್ದಾರೆ. ಇವರಿಗೆ ನಮ್ಮ ಪರವಾಗಿ ಒಂದು ಸಲಾಂ…


ಇದನ್ನೂ ಓದಿ: ರಂಜಾನ್ ಉಪವಾಸ ಮುರಿದು ಪ್ಲಾಸ್ಮಾ ದಾನಮಾಡಿ ಕೊರೊನಾಪೀಡಿತ ಮಹಿಳೆಯರಿಬ್ಬರ ಜೀವ ಉಳಿಸಿದ ಮನ್ಸೂರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...