Homeಮುಖಪುಟಸೋಂಕಿತರಿಗೆ ಉಚಿತ ಊಟ ನೀಡುವ ಮೂಲಕ ಇತರರಿಗೆ ಸ್ಫೂರ್ತಿಯಾದ ಮೂವರು ಬಾಲ್ಯಸ್ನೇಹಿತರು!

ಸೋಂಕಿತರಿಗೆ ಉಚಿತ ಊಟ ನೀಡುವ ಮೂಲಕ ಇತರರಿಗೆ ಸ್ಫೂರ್ತಿಯಾದ ಮೂವರು ಬಾಲ್ಯಸ್ನೇಹಿತರು!

- Advertisement -
- Advertisement -

ಕೋವಿಡ್-19 ಎರಡನೇ ಅಲೆ ಇಡೀ ದೇಶವನ್ನೇ ತಲ್ಲಣಗೊಳಿಸಿದೆ. ದೇಶಾದ್ಯಂತ ದಿನಕ್ಕೆ ಮೂರು ಲಕ್ಷಕ್ಕೂ ಅಧಿಕ ಪ್ರಕರಣಗಳು ವರಿದಿಯಾಗುತ್ತಿದ್ದರೆ, ಬೆಂಗಳೂರಿನಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 30 ಸಾವಿರ ದಾಟಿದೆ. ಆಸ್ಪತ್ರೆಗಳಲ್ಲಿ ಬೆಡ್ ಕೊರತೆ, ಆಮ್ಲಜನಕದ ಕೊರತೆ ಉಂಟಾಗಿದ್ದು, ಕೋವಿಡ್ ಸೋಂಕಿತರು ಬೆಡ್ ಸಿಗದೆ ಮನೆಗೆ ಮರಳಿ ಕ್ವಾರಂಟೈನ್ ಗೆ ಒಳಗಾಗಬೇಕಾದ ಪರಿಸ್ಥಿತಿ ಬಂದಿದೆ. ಹಲವಾರು ಸ್ಥಳಗಳಲ್ಲಿ ಇಡೀ ಕುಟುಂಬವೇ ಕೊರೋನಾದಿಂದ ತತ್ತರಿಸಿದ್ದು, ಆರೈಕೆ ಮಾಡಲು ಯಾರು ಇಲ್ಲದಂತಾಗಿದೆ. ಇಂತಹದ್ದೇ ಸಮಸ್ಯೆಯನ್ನು ಎದುರಿಸಿದ ಯುವಕರಿಬ್ಬರು ಇತರರಿಗೆ ನೆರವಾಗುವ ಉದ್ದೇಶದಿಂದ ಬೆಂಗಳೂರಿನಲ್ಲಿ ಕೋವಿಡ್ ಸೋಂಕಿಗೆ ಒಳಗಾಗಿ ಕ್ವಾರಂಟೈನ್ ಮತ್ತು ಆಸ್ಪತ್ರೆಯಲ್ಲಿರುವ ಜನರಿಗೆ ಉಚಿತವಾಗಿ ಊಟದ ವ್ಯವಸ್ಥೆ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

ಇಂತಹ ಸಾಮಾಜಿಕ ಕೆಲಸದಲ್ಲಿ ತೊಡಗಿಸಿಕೊಂಡಿರುವವರು ಸಿದ್ದಾರ್ಥ್, ಅಂಕಿತ್ ಮತ್ತು ನಿಖಿಲ್. ಮೂಲತಃ ಪಶ್ಚಿಮ ಬಂಗಾಳದವರಾದ ಇವರು 20ಕ್ಕೂ ವರ್ಷಕ್ಕಿಂತ ಹೆಚ್ಚು ಕಾಲ ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ಬಾಲ್ಯ ಸ್ನೇಹಿತರಾದ ಈ ಮೂವರು ವೃತ್ತಿಯಲ್ಲಿ ಉದ್ಯಮಿಗಳಾಗಿದ್ದು ಬೆಂಗಳೂರಿನಲ್ಲಿ ಕ್ವಾರಂಟೈನ್ ಆಗಿರುವ ಜನರಿಗೆ ಮತ್ತು ಆಸ್ಪತ್ರೆಯಲ್ಲಿರುವ ರೋಗಿಗಳಿಗೆ ಉಚಿತವಾಗಿ ಮಧ್ಯಾಹ್ನ ಮತ್ತು ರಾತ್ರಿ ಊಟ ವಿತರಿಸುತ್ತಿದ್ದಾರೆ. ಊಟಕ್ಕೆ 3 ಚಪಾತಿ, ದಾಲ್, ತರಕಾರಿ ಪಲ್ಯ, ಅನ್ನ ಸಾಂಬರ್ ಮತ್ತು ಬಾಳೆಹಣ್ಣು ಇವರ ಮುಖ್ಯ ಮೆನು.

ಕೋವಿಡ್ ಸೋಂಕಿಗೆ ಒಳಗಾಗಿರುವ ಕ್ವಾರಂಟೈನ್‌ನಲ್ಲಿರುವ ಇವರು ಕೋವಿಡ್‌ನಿಂದ ಉಂಟಾಗುವ ಸಮಸ್ಯೆಗಳನ್ನು ಅನುಭವಿಸಿದ್ದಾರೆ. ಸೋಂಕಿತರು ಮೈಕೈ ನೋವು, ಬೇದಿ, ತಲೆನೋವು ಸೇರಿದಂತೆ ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿರುತ್ತಾರೆ. ಈ ಸಮಯದಲ್ಲಿ ಅಡುಗೆ, ಊಟ ಮಾಡಿಕೊಳ್ಳುವುದು ಕಷ್ಟ ಸಾಧ್ಯ ಎನ್ನುವುದನ್ನು ಅರಿತ ಈ ಉದ್ಯಮಿಗಳು ಇದೇ ಸಮಯದಲ್ಲಿ ತಾವೇನಾದರೂ ಮಾಡಬೇಕೆಂಬ ಅಭಿಲಾಷೆಯೊಂದಿಗೆ ಬೆಂಗಳೂರಿನಲ್ಲಿ ವಾಸವಿರುವ ಕೋವಿಡ್ ಸೋಂಕಿಗೆ ಒಳಗಾಗಿರುವವರಿಗೆ ಈಗಾಗಲೇ ನೂರಾರು ಜನರಿಗೆ ಪೌಷ್ಟಿಕಾಂಶಯುಕ್ತ ಅಹಾರವನ್ನು ಉಚಿತವಾಗಿ ಸರಬರಾಜು ಮಾಡಿದ್ದಾರೆ.

ಈ ಯೋಜನೆ ಕುರಿತು ಮಾತನಾಡಿದ ಸಿದ್ದಾರ್ಥ್, “ನಾನು ಕೂಡ ಕೋವಿಡ್ ಸೋಂಕಿಗೆ ಒಳಗಾಗಿದ್ದೇನೆ. ಪ್ರಸ್ತುತ ಕ್ವಾರಂಟೈನ್‌ನಲ್ಲಿದ್ದು, ಇನ್ನೊಂದು ದಿನದಲ್ಲಿ ಹೊರಬರಲಿದ್ದೇನೆ. ಮೊದಲು ನನಗೂ ಮನೆ ಕೆಲಸ ಮಾಡಿಕೊಳ್ಳುವುದು ತೀರ ಕಷ್ಟ ಎನಿಸುತಿತ್ತು. ನನ್ನಂತೆಯೇ ನನ್ನ ಸ್ನೇಹಿತನಿಗೂ ಅನ್ನಿಸಿತು. ಮೂವರು ಮಾತನಾಡಿಕೊಂಡು ಇತರರಿಗೆ ನೆರವು ಮಾಡುತ್ತಿದ್ದೇವೆ. ನಾವಿಬ್ಬರು ಸ್ಟೆಗಿ ಎಂಬ ರೆಸ್ಟೋರೆಂಟ್ ನಡೆಸುತ್ತಿದ್ದೇವೆ. ನಮ್ಮ ರೆಸ್ಟೋರೆಂಟ್‌ನಲ್ಲಿ ಕೆಲಸ ಮಾಡುತ್ತಿರುವ ಹುಡುಗರು ಅಡುಗೆ ತಯಾರಿಸಿ ಪ್ಯಾಕ್ ಮಾಡುತ್ತಾರೆ. ಉಳಿದಂತೆ ಯಾರೆಲ್ಲರಿಗೂ ಊಟ ಬೇಕು ಎಂದು ತಿಳಿಸಿರುತ್ತಾರೋ ಅವರು ಯಾರನ್ನಾದರೂ ಕಳಿಸಿ ಅಥವಾ ಡೆನ್ಸೋ ಮೂಲಕ ಆರ್ಡರ್ ಮಾಡಿ ಊಟ ತರಿಸಿಕೊಳ್ಳುತ್ತಾರೆ” ಎಂದರು.

ಮೊನ್ನೆಯಷ್ಟೆ (ಗುರುವಾರ) ಅರಂಭವಾಗಿರುವ ಊಟ ವಿತರಣೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು ಮಧ್ಯಾಹ್ನ ಸುಮಾರು 165 ಜನರಿಗೆ ಊಟ ವಿತರಿಸಿದ್ದಾರೆ. ಅಲ್ಲಿಂದ ಪ್ರತಿ ವೇಳೆ ಊಟ ಬೇಕು ಎಂದು ಸುಮಾರು 500 ಜನರು ಫೋನ್ ಕರೆಗಳು ಬರುತ್ತಿದ್ದು ಅವರಿಗೆ ಒದಗಿಸುತ್ತಿದ್ಧೇವೆ, ಫೋನ್‌ಗಳನ್ನು ಸ್ವೀಕರಿಸದಷ್ಟು ಕರೆಗಳು ಬರುತ್ತಿವೆ ಎನ್ನುತ್ತಾರೆ. ಆಸ್ಪತ್ರೆಗಳಿಗೂ ಊಟ ತಲುಪಿಸಲು ಮುಂದಾಗಿರುವ ಅವರು, ಕೊರೊನಾಗೆ ಭಯ ಪಡದಿರಿ. ಮನೆಯಲ್ಲೇ ಸೂಕ್ತ ಚಿಕಿತ್ಸೆ ಪಡೆಯಿರಿ, ವಿಶ್ರಾಂತಿ ಪಡೆಯುವುದೇ ಸೂಕ್ತವಾದ ಚಿಕಿತ್ಸೆ ಎನ್ನುತ್ತಾರೆ ಸಿದ್ದಾರ್ಥ್.

ಸೋಂಕಿತರಾಗಿ ಯಾರಿಗಾದರೂ ಆಹಾರದ ಅಗತ್ಯವಿದ್ದರೆ ಈ ವಿಧಾನದ ಮೂಲಕ ಊಟ ತರಿಸಿಕೊಳ್ಳಬಹುದು.

ಮಧ್ಯಾಹ್ನದ ಊಟ ಬೇಕಿದ್ದರೆ ಬೆಳಿಗ್ಗೆ 10 ಗಂಟೆ ಒಳಗೆ ಫೋನ್ ಮೂಲಕ ಅಥವಾ ವಾಟ್ಸಾಪ್ ಮಾಡುವ ಮೂಲಕ ಆರ್ಡರ್ ಮಾಡಬೇಕು. ಮಧ್ಯಾಹ್ನ 12:30 ರಿಂದ 2:00 ಗಂಟೆಯೊಳಗೆ ಊಟ ತೆಗೆದುಕೊಂಡು ಹೋಗಲು ವ್ಯವಸ್ಥೆ ಮಾಡಿಕೊಳ್ಳಬೇಕು. (ಜಯನಗರದ ಸ್ಟೆಗಿ ರೆಸ್ಟೋರೆಂಟ್‌ನಿಂದ ನೇರವಾಗಿ ತೆಗೆದುಕೊಂಡು ಹೋಗಬಹುದು ಅಥವಾ ಡೆಂಜೋ ಅಥವಾ ಸ್ವಿಗ್ಗಿ ಸೇರಿದಂತೆ ಇತರ ಆಹಾರ ಸರಬರಾಜು ಆಪ್ ಗಳ ಮೂಲಕ ಆರ್ಡರ್ ಮಾಡಬಹುದು. ಅದಕ್ಕೆ ಹಣ ಅವರೇ ಭರಸಿಬೇಕು) ಅದೇ ರೀತಿ ರಾತ್ರಿ ಊಟಕ್ಕೆ ಸಂಜೆ 5 ಗಂಟೆಯೊಳಗೆ ಆರ್ಡರ್ ಮಾಡಬೇಕು. ರಾತ್ರಿ 7 ರಿಂದ 8:30ರ ಒಳಗೆ ಊಟ ತರಿಸಿಕೊಳ್ಳಲು ವ್ಯವಸ್ಥೆ ಮಾಡಿಕೊಳ್ಳಬೇಕು. ಅಗತ್ಯವಿದ್ದವರು ಈ ನಂಬರ್‌ಗಳಿಗೆ ಸಂಪರ್ಕಿಸಿ. ಸಿದ್ಧಾರ್ಥ್: 9986694781, ನಿಖಿಲ್: 9663313417 ಅಂಕಿತ್: 8553389893

ಈ ಸಂಕಷ್ಟದ ಸಮಯದಲ್ಲಿ ಇವರ ಈ ಮಾನವೀಯ ಕಾರ್ಯಕ್ಕೆ ಪ್ರಶಂಸೆ ವ್ಯಕ್ತವಾಗಿದೆ. ಕೈಲಾಗದು ಎಂದು ಕುಳಿತುಕೊಳ್ಳುವ ಬದಲು ಮನಸ್ಸು ಮಾಡಿದರೆ ಹೇಗೆಲ್ಲಾ ನೆರವಾಗಬಹುದು ಎಂಬುದಕ್ಕೆ ಈ ಯುವ ಉದ್ಯಮಿಗಳು ಮಾದರಿಯಾಗಿದ್ದಾರೆ. ಈ ಕುರಿತು ನಿಮ್ಮಗಳ ಫೋಟೊ ಕೊಡಿ ನಮ್ಮ ವರದಿಯಲ್ಲಿ ಪ್ರಕಟಿಸುತ್ತೇವೆ ಎಂದಾಗ ಅವರು ಪ್ರೀತಿಯಿಂದಲೇ ಅದನ್ನು ನಿರಾಕರಿಸಿದ್ದಾರೆ. ‘ಇದು ನಮ್ಮ ಜವಾಬ್ದಾರಿ, ಇದರಲ್ಲಿ ನಮ್ಮ ಫೋಟೊ ಹಾಕಿಕೊಳ್ಳುವ ಅಗತ್ಯವಿಲ್ಲ, ನಮ್ಮ ರೆಸ್ಟೋರೆಂಟ್‌ನಲ್ಲಿ ಇದಕ್ಕಾಗಿ ದುಡಿಯುತ್ತಿರುವ ಕಾರ್ಮಿಕರ ಫೋಟೊ ಹಾಕಿ” ಎಂದು ಹೇಳುವ ಮೂಲಕ ತಮ್ಮ ದೊಡ್ಡತನ ಮೆರೆದಿದ್ದಾರೆ. ಇವರಿಗೆ ನಮ್ಮ ಪರವಾಗಿ ಒಂದು ಸಲಾಂ…


ಇದನ್ನೂ ಓದಿ: ರಂಜಾನ್ ಉಪವಾಸ ಮುರಿದು ಪ್ಲಾಸ್ಮಾ ದಾನಮಾಡಿ ಕೊರೊನಾಪೀಡಿತ ಮಹಿಳೆಯರಿಬ್ಬರ ಜೀವ ಉಳಿಸಿದ ಮನ್ಸೂರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...