Homeಕರೋನಾ ತಲ್ಲಣಕೊರೊನಾ ಮಾರ್ಗಸೂಚಿ ಉಲ್ಲಂಘಿಸಿದ ಉಡುಪಿ ಜಿಲ್ಲಾಧಿಕಾರಿ? ಅವರು ಹೇಳಿದ್ದೇನು?

ಕೊರೊನಾ ಮಾರ್ಗಸೂಚಿ ಉಲ್ಲಂಘಿಸಿದ ಉಡುಪಿ ಜಿಲ್ಲಾಧಿಕಾರಿ? ಅವರು ಹೇಳಿದ್ದೇನು?

- Advertisement -
- Advertisement -

ರಾಜ್ಯದಲ್ಲಿ ಕೊರೊನಾ ಎರಡನೆ ಅಲೆ ತೀವ್ರ ರೀತಿಯಲ್ಲಿ ಹರಡುತ್ತಿದೆ. ಕೊರೊನಾ ಹರಡದಂತೆ ರಾಜ್ಯ ಸರ್ಕಾರ ಈಗಾಗಲೆ ವೀಕೆಂಡ್ ಕರ್ಫ್ಯೂ ಹೆಸರಲ್ಲಿ ಅಘೋಷಿತ ಲಾಕ್‌ಡೌನ್‌ ಹೇರಿದೆ. ಶುಕ್ರವಾರದವರೆಗೂ ಕಟ್ಟು ನಿಟ್ಟಿನ ಮಾರ್ಗಸೂಚಿಗಳೊಂದಿಗೆ ನೈಟ್‌ ಕರ್ಫ್ಯೂ ಕೂಡಾ ಹೇರಲಾಗಿತ್ತು. ಆದರೆ ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್‌ ಅವರು ಮಾಸ್ಕ್‌ ಧರಿಸದೆ ರಾತ್ರಿ ಹೊತ್ತಲ್ಲಿ ಮದುವೆ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿರುವ ಘಟನೆ ಶುಕ್ರವಾರ ನಡೆದಿದೆ.

ಶುಕ್ರವಾರ ರಾತ್ರಿ ಉಡುಪಿಯ ಅಮೃತ್‌ ಗಾರ್ಡನ್‌‌ನಲ್ಲಿ ಹೆಚ್ಚುವರಿ ಎಸ್‌.ಪಿ. ಕುಮಾರಚಂದ್ರ ಅವರ ಮಗಳ ಮೆಹಂದಿ ಕಾರ್ಯಕ್ರಮ ನಡೆದಿತ್ತು. ಈ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಜಿ. ಜಗದೀಶ್ ಅವರು ಭಾಗವಹಿಸಿದ್ದರು. ಕಾರ್ಯಕ್ರಮದ ವಿಡಿಯೊ ಹಾಗೂ ಪೋಟೊಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದು ಸಾಮಾಜಿಕ ಜಾಲತಾಣದಲ್ಲಿ ಟೀಕೆಗಳೆದ್ದಿತ್ತು. ಮಾಸ್ಕ್‌, ಕೊರೊನಾ ಮಾರ್ಗಸೂಚಿ, ನೈಟ್‌ಕರ್ಫ್ಯೂ ಎಲ್ಲವೂ ಸಾಮಾನ್ಯರಿಗೆ ಮಾತ್ರವೆ, ಅದು ಜಿಲ್ಲಾಧಿಕಾರಿಗೆ ಅನ್ವಯಿಸುವುದಿಲ್ಲವೆ ಎಂದು ಪ್ರಶ್ನಿಸಿದ್ದರು.

ಇದನ್ನೂ ಓದಿ:  ಮೋದಿ ಸರ್ಕಾರದ ಹೊಸ ಸಂಸತ್ ಕಟ್ಟಡ ಸೆಂಟ್ರಲ್ ವಿಸ್ತಾ – ಒಂದು ಧ್ವಂಸ ಕಾರ್ಯಾಚರಣೆಯಷ್ಟೇ!

ಈ ಬಗ್ಗೆ ಫೇಸ್‌ಬುಕ್‌ನಲ್ಲಿ ಪ್ರಶ್ನಿಸಿದ್ದ ಪತ್ರಕರ್ತ ಶಶಿಧರ್‌ ಹೆಮ್ಮಾಡಿ, “ತಡರಾತ್ರಿ ಮನೆಗೆ ತಲುಪುತ್ತಿದ್ದ ಬಡಮನೆಗಳ ಹೆಣ್ಣು ಮಕ್ಕಳನ್ನು ಅವರು ಬಸ್‌ನಲ್ಲಿ ನಿಂತು ಪಯಣಿಸುತ್ತಾ ಕೋವಿಡ್ ನಿಯಮ ಉಲ್ಲಂಘನೆ ಮಾಡಿದ್ದಾರೆ ಎಂದು ಬೈದು ಬಸ್ಸಿನಿಂದ ಇಳಿಸಿದ್ದರು. ಇಂದು ನಾಳೆ, ನಾಡಿದ್ದು ನಡೆಯಬೇಕಾಗಿದ್ದ ನೂರಾರು ಮೆಹಂದಿ, ಮದುವೆ ಮನೆಗಳ ಸಂಭ್ರಮಕ್ಕೆ ಕಲ್ಲು ಹಾಕಿದ್ದಾರೆ. ಮದುವೆ ಮನೆಗೆ ಬರುವ ಅತಿಥಿಗಳ ಆಧಾರ್ ಕಾರ್ಡ್ ಅನ್ನು ಕೇಳುತ್ತಾರೆ.

ಆದರೆ ಶುಕ್ರವಾರ ಸಂಜೆ ನಡೆದ ಪೊಲೀಸ್ ಅಧಿಕಾರಿಯೋರ್ವರ ಮಗಳ ಮೆಹಂದಿ ಕಾರ್ಯಕ್ರಮದಲ್ಲಿ ಸಾಮಾಜಿಕ ಅಂತರವೂ ಇಲ್ಲದೆ, ಮಾಸ್ಕ್ ಕೂಡ ಹಾಕದೆ ನಗುತ್ತಾ ನಿಂತಿದ್ದಾರೆ. ಕಾನೂನು, ಶಿಕ್ಷೆ, ಬೈಗುಳ, ಒದೆ ಎಲ್ಲ ಸಾಮಾನ್ಯ ಜನರಿಗೆ ಮಾತ್ರ ಅಲ್ಲವೇ ಜಿಲ್ಲಾಧಿಕಾರಿಗಳೇ? ಉಡುಪಿ ಜಿಲ್ಲಾಧಿಕಾರಿ ಜಗದೀಶ್‌ ಅವರೇ ನಿಮಗೆ ನಾಚಿಕೆ ಆಗಬೇಕು. ಅಂದ ಹಾಗೆ ಈ ಮದುವೆಗೆ ಹೋಗುವ ಅತಿಥಿಗಳ ಆಧಾರ್ ಕಾರ್ಡ್ ನೀಡಿದ ಪಾಸ್ ಪಟ್ಟಿಯಲ್ಲಿ ಜಿಲ್ಲಾಧಿಕಾರಿಗಳ ಹೆಸರು ಇತ್ತೆ? ಉತ್ತರಿಸಲೇಬೇಕು ಡಿಸಿ ಸಾಹೇಬರು” ಎಂದು ಹೇಳಿದ್ದರು.

ಇದನ್ನೂ ಓದಿ: ಪಿಎಂ-ಸಿಎಂ ಸಭೆ ಟಿವಿಯಲ್ಲಿ ಪ್ರಸಾರ: ಆಕ್ಷೇಪಿಸಿದ ಮೋದಿ, ವಿಷಾದಿಸಿದ ಕೇಜ್ರಿವಾಲ್!

ಸರ್ಕಾರದ ಕೊರೊನಾ ಮಾರ್ಗಸೂಚಿಯಂತೆ ಮದುವೆ ಕಾರ್ಯಕ್ರಮದಲ್ಲಿ ಕೇವಲ 50 ಜನರಿಗಷ್ಟೇ ಅವಕಾಶ. ಆದರೆ ಈ ಕಾರ್ಯಕ್ರಮದಲ್ಲಿ ಅದು ಪಾಲನೆ ಆಗಿದೆಯೆ ಎಂದು ಕೂಡಾ ಶಶಿಧರ್‌ ಹೆಮ್ಮಾಡಿ ಪ್ರಶ್ನಿಸಿದ್ದಾರೆ. ಈ ಬಗ್ಗೆ ಅವರು ಮಹೆಂದಿ ಕಾರ್ಯಕ್ರಮದ ವಿಡಿಯೊವನ್ನು ಫೇಸ್‌ಬುಕ್‌ಗೆ ಅಪ್ಲೋಡ್ ಮಾಡಿದ್ದಾರೆ.

ಅದರಲ್ಲಿ, “ಇದು ನಿನ್ನೆ ಉಡುಪಿ ಜಿಲ್ಲಾಧಿಕಾರಿಗಳು, ದೈಹಿಕ ಅಂತರ ಕಾಪಾಡದೇ ಮಾಸ್ಕ್ ಧರಿಸದೇ ಹಾಜರಾದ ASP ಅವರ ಮಗಳ ಮದುವೆಯ ಒಂದು ದೃಶ್ಯ. ಈ ಒಂದು ವಿಡಿಯೊದಲ್ಲೇ ನಾನು ಲೆಕ್ಕ ಹಾಕಿದ ಹಾಗೆ 24 ಜನರಿದ್ದಾರೆ. ಮಾಸ್ಕ್ ಧರಿಸಿದ್ದು ಒಬ್ಬ ಪುಣ್ಯಾತ್ಮ ಮಾತ್ರ. ಮತ್ತೆ ಯಾರಿಗೂ ಮಾಸ್ಕ್ ಇಲ್ಲ. ಸಾಮಾಜಿಕ ಅಂತರವಿಲ್ಲ. ಬಾಗಿಲಿಂದ ಒಳ ಬರುವ ಈ ವಿಡಿಯೋದಲ್ಲೇ 24 ಜನರಿದ್ದಾರೆ ಎಂದರೆ ಇನ್ನು ಒಳಗೆ ಎಷ್ಟು ಜನರಿರಬಹುದು ಎಂದು ಊಹಿಸಿ” ಎಂದು ಬರೆದಿದ್ದಾರೆ.

ಇದನ್ನೂ ಓದಿ: ಸೋಂಕಿತರಿಗೆ ಉಚಿತ ಊಟ ನೀಡುವ ಮೂಲಕ ಇತರರಿಗೆ ಸ್ಫೂರ್ತಿಯಾದ ಮೂವರು ಬಾಲ್ಯಸ್ನೇಹಿತರು!

“ನಮಗೆ ASP ಮಗಳ ಮದುವೆಯನ್ನು ಸಂಭ್ರಮದಿಂದ ಮಾಡಿದ್ದಾರೆ ಎಂಬ ಆಕ್ಷೇಪವಿಲ್ಲ. ಅವರ ಮಗಳ ಮದುವೆಯ ಬಗ್ಗೆ ಸಾವಿರಾರು ಕನಸು ಕಂಡಿರುತ್ತಾರೆ. ಅವರ ಮಗಳ ಮದುವೆ ಚೆನ್ನಾಗಿಯೇ ನಡೆಯಲಿ. ಆದರೆ ಕಾನೂನು ಮಾಡುವ, ಪಾಲಿಸದಿದ್ದರೆ ಶಿಕ್ಷೆ ಕೊಡುವ ಇವರುಗಳು ಕನಿಷ್ಟ ಪಕ್ಷ ದೈಹಿಕ ಅಂತರ, ಮಾಸ್ಕ್ ನಿಯಮ ಪಾಲಿಸಲಿ. ಜೊತೆಗೆ ಜನಸಾಮಾನ್ಯರ ಮನೆಯ ಮದುವೆಗಳನ್ನೂ ಒಂದಷ್ಟು ನಿಯಮಗಳೊಂದಿಗೆ, ಶಿಸ್ತುಬದ್ದವಾಗಿ ಸಂಭ್ರಮದಿಂದ ನಡೆಯಲು ಬಿಡಲಿ. ಪಾಸು, ಆಧಾರ್ ಕಾರ್ಡು, ಮಣ್ಣು ಮಸಿ ಎಂಬ ತುಘಲಕ್ ದರ್ಬಾರ್ ಅನ್ನು ಇಲಾಖೆಗಳು ನಿಲ್ಲಿಸಲಿ. ನಮಗೂ ನಮ್ಮನೆ ಮಕ್ಕಳ ಬಗ್ಗೆ ಕನಸುಗಳಿರುತ್ತವೆ ಸ್ವಾಮಿ. ತಿಂಗಳುಗಳಿಂದ ಸಿದ್ಧತೆ ನಡೆಸಿದ್ದೇವೆ. ಮದುವೆ ಮನೆ ಎಂದು ಸಂಭ್ರಮಪಟ್ಟಿದ್ದೇವೆ. ಖರ್ಚು ಮಾಡಿದ್ದೇವೆ. ನೆಮ್ಮದಿಯಿಂದ, ಖುಷಿಯಿಂದ ನಮ್ಮ ಸಮಾರಂಭಗಳು ನಡೆಯಲು ಬಿಡಿ. ಕೋವಿಡ್ ನಿಯಮ ಪಾಲಿಸುವ ಹೊಣೆ ನಿಮಗಿಂತ ಜಾಸ್ತಿ ನಮಗಿದೆ” ಎಂದು ಶಶಿಧರ್‌ ಹೆಮ್ಮಾಡಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಉಡುಪಿ ಜಿಲ್ಲಾಧಿಕಾರಿ ಜಿ ಜಗದೀಶ್‌

ಅವರಷ್ಟೇ ಅಲ್ಲದೆ ಸಾಮಾಜಿಕ ಜಾಲತಾಣದಲ್ಲಿ ಹಲವಾರು ಜನರು ಈ ಬಗ್ಗೆ ಪ್ರಶ್ನಿಸಿದ್ದು, ಜಿಲ್ಲಾಧಿಕಾರಿಯ ನಡೆಯನ್ನು ಟೀಕಿಸಿದ್ದಾರೆ. ಈ ಘಟನೆಯ ಬಗ್ಗೆ ವಾತಾಭಾರತಿಗೆ ಪ್ರತಿಕ್ರಿಯೆ ನೀಡಿರುವ ಜಿಲ್ಲಾಧಿಕಾರಿ ಜಿ. ಜಗದೀಶ್‌, “ಮದುವೆ ಕಾರ್ಯಕ್ರಮವು ಕೇವಲ ನಾಲ್ಕು ಕುಟುಂಬಗಳಿಗೆ ಸೀಮಿತಗೊಳಿಸಿ ವ್ಯವಸ್ಥೆ ಮಾಡಲಾಗಿತ್ತು. ಅಲ್ಲಿ ಅವರ ಕುಟುಂಬದ ಆಪ್ತರಷ್ಟೇ ಸೇರಿದ್ದರು. ಅದು ಸಾರ್ವಜನಿಕ ಸ್ಥಳ ಅಲ್ಲ. ಆದುದರಿಂದ ಅಲ್ಲಿ ಮಾಸ್ಕ್ ಧರಿಸಬೇಕೆಂಬುದು ಕಡ್ಡಾಯ ಅಲ್ಲ. ಮಾಸ್ಕ್ ಕಡ್ಡಾಯವಾಗಿ ಧರಿಸಬೇಕಾಗಿರುವುದು ಸಾರ್ವಜನಿಕ ಸ್ಥಳದಲ್ಲಿ ಮಾತ್ರ. ಅಲ್ಲದೆ ಶುಕ್ರವಾರ ರಾತ್ರಿ 8.40 ಕ್ಕೆ ಆ ಕಾರ್ಯಕ್ರಮಕ್ಕೆ ಹೋಗಿ 8.50ಕ್ಕೆ ಕರ್ಫ್ಯೂಗಿಂತ ಮೊದಲೇ ಮನೆ ಸೇರಿದ್ದೇನೆ. ಮಧುಮಗಳ ಕೋರಿಕೆ ಮೇರೆಗೆ ಫೋಟೋಗಾಗಿ ಒಂದು ನಿಮಿಷ ಮಾತ್ರವೇ ಮಾಸ್ಕ್ ತೆಗೆದಿದ್ದೇನೆ’’ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕೊರೊನಾ ತಲ್ಲಣ: #ModiOxygenDo, भाषणबाज_मोदी, #oxygenbedslekkakodi ಟ್ವಿಟರ್‌ ಟ್ರೆಂಡ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...