Homeಕರೋನಾ ತಲ್ಲಣಜಿಲ್ಲಾ/ತಾಲ್ಲೂಕು ಕೇಂದ್ರಗಳಲ್ಲಿ ಬೆಡ್‌ ಸಮಸ್ಯೆ: ಆಸ್ಪತ್ರೆ ಮುಂದೆ ಕಣ್ಣೀರಿಡುತ್ತಿರುವ ಸೋಂಕಿತರು

ಜಿಲ್ಲಾ/ತಾಲ್ಲೂಕು ಕೇಂದ್ರಗಳಲ್ಲಿ ಬೆಡ್‌ ಸಮಸ್ಯೆ: ಆಸ್ಪತ್ರೆ ಮುಂದೆ ಕಣ್ಣೀರಿಡುತ್ತಿರುವ ಸೋಂಕಿತರು

- Advertisement -
- Advertisement -

ಕೋವಿಡ್ ಎರಡನೆ ಅಲೆ ಉಲ್ಬಣಕ್ಕೆ ರಾಜ್ಯದ ಆರೋಗ್ಯ ಮೂಲಸೌಕರ್ಯಗಳು ತತ್ತರಿಸಿ ಹೋಗುತ್ತಿವೆ. ಬೀದರ್‌ನಲ್ಲಿ ಪಾದಚಾರಿ ಮಾರ್ಗಗಳ ಮೇಲೆ ಹತ್ತಾರು ರೋಗಿಗಳು ಮಲಗಿದ್ದರೆ, ಯಾದಗರಿಯಲ್ಲಿ ವ್ಯಕ್ತಿಯೊಬ್ಬರು ಏಪ್ರಿಲ್ 23 ರಂದು ಆಸ್ಪತ್ರೆಯ ಹಾಸಿಗೆಗಾಗಿ ಅಳುವುದು ಕಂಡುಬಂದಿದೆ ಎಂದು ದಿ ಕ್ವಿಂಟ್ ವರದಿ ಮಾಡಿದೆ. ಇದು ಜಿಲ್ಲಾ/ತಾಲ್ಲೂಕು ಮಟ್ಟದಲ್ಲಿನ ಕಳಪೆ ವೈದ್ಯಕೀಯ ಸೌಲಭ್ಯವನ್ನ ಸೂಚಿಸುತ್ತದೆ.

ಡಿ ಭೀಮೇಶ್ ಎಂಬ ವ್ಯಕ್ತಿ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು, ಅವರನ್ನು ಯಾದಗಿರಿ ಜಿಲ್ಲಾ ಆಸ್ಪತ್ರೆಗೆ ಸಾಗಿಸಲಾಗಿದೆ. ಆದರೆ ಅಲ್ಲಿ ಬೆಡ್ ಇಲ್ಲ ಎಂದು ಪ್ರವೇಶವನ್ನು ನಿರಾಕರಿಸಿದರು ಎಂದು ಮಾಧ್ಯಮ ವರದಿಗಳು ತಿಳಿಸಿವೆ. ನಿಲ್ಲಲು ಸಾಧ್ಯವಾಗದ ಮತ್ತು ಉಸಿರಾಟಕ್ಕಾಗಿ ಹೆಣಗಾಡುತ್ತಿದ್ದ ಭೀಮೇಶ್ ಅಡ್ಮಿಟ್ ಮಾಡಿಕೊಳ್ಳಿ ಪ್ಲೀಸ್ ಎಂದು ಪರಿಪರಿಯಾಗಿ ಕೇಳಿದರೂ ಹಾಸಿಗೆ ಸಿಗಲಿಲ್ಲ ಎನ್ನಲಾಗಿದೆ.

ಏಪ್ರಿಲ್ 20ರಂದು ಅನಾರೋಗ್ಯದಿಂದ ಬಳಲುತ್ತಿದ್ದ ಭೀಮೇಶ್ ಏಪ್ರಿಲ್ 21 ರಂದು ಕೋವಿಡ್ ಪಾಸಿಟಿವ್ ಕೇಸ್ ಎಂದು ವರದಿ ಪಡೆದರು. ಅವರು ಕೋವಿಡ್ ವಾರ್ಡ್‌ನ ಹೊರಗಡೆ ಉಸಿರಾಟಕ್ಕಾಗಿ ಹೆಣಗಾಡುತ್ತಿದ್ದರು ಮತ್ತು ನೆಲದ ಮೇಲೆ ನೋವಿನಿಂದ ಬಳಲುತ್ತ ಒದ್ದಾಡುತ್ತಿದ್ದರು ಎಂದು ವರದಿಯಾಗಿದೆ.

ಆಸ್ಪತ್ರೆಯ ಆರೋಗ್ಯ ಕಾರ್ಯಕರ್ತರು ಅವರಿಗೆ ಸಹಾಯ ಮಾಡಲು ಮುಂದಾಗಲಿಲ್ಲ ಎಂದು ಭೀಮೇಶ್ ಕುಟುಂಬದ ಸದಸ್ಯರೊಬ್ಬರು ಆರೋಪಿಸಿದ್ದಾರೆ. ಭೀಮೇಶರ ಜೊತೆಯಲ್ಲಿರುವ ಮಹಿಳೆ, “ನಾವು ಇಲ್ಲಿಯೇ (ಕಾರಿಡಾರ್‌ನಲ್ಲಿ) ಇರಲು ಸಿದ್ಧರಿದ್ದೇವೆ. ಆದರೆ ವೈದ್ಯರು ನಮ್ಮನ್ನು ಮನೆಗೆ ಹೋಗುವಂತೆ ಒತ್ತಾಯಿಸಿದರು ಮತ್ತು ಹಾಸಿಗೆಗಳು ಲಭ್ಯವಿಲ್ಲ ಎಂದು ಹೇಳಿದರು” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಆದರೂ ಆಸ್ಪತ್ರೆಯ ಅಧಿಕಾರಿಗಳು ಭೀಮೇಶ್ ಸಂಬಂಧಿಕರ ಆರೋಪಗಳನ್ನು ನಿರಾಕರಿಸಿದ್ದಾರೆ. ತನಗೆ ಹಾಸಿಗೆ ಅಗತ್ಯವಿಲ್ಲ ಎಂದು ತಿಳಿಸಿ ಅವರು ಫಾರ್ಮ್‌ಗೆ ಸಹಿ ಹಾಕಿದ್ದರು ಎಂದು ಆಸ್ಪತ್ರೆ ಅಧಿಕಾರಿಗಳು ತಿಳಿಸಿದ್ದಾರೆ.

ರೋಗಿ ಆತಂಕದ ಕ್ಷಣಗಳಲ್ಲಿ ಯಾವ ಫಾರ್ಮ್ ಕೊಟ್ಟರೂ ಸಹಿ ಹಾಕುತ್ತಾನೆ/ಳೆ. ಹಾಸಿಗೆ ನೀಡಬೇಕೋ ಬೇಡವೋ ಎಂಬುದನ್ನು ವೈದ್ಯರು ಪರೀಕ್ಷಿಸಿ ತೀರ್ಮಾನಿಸಬೇಕು ಅಲ್ಲವೇ? ಉಸಿರಾಟದ ತೊಂದರೆಯಲ್ಲಿ ನರಳುತ್ತಿರುವ ಒಬ್ಬ ರೋಗಿಗೆ ಕನಿಷ್ಠ ಪ್ರಾಥಮಿಕ ಚಿಕಿತ್ಸೆಯನ್ನೂ ಕೊಡಲಾಗದ ಪರಿಸ್ಥಿತಿಗೆ ನಮ್ಮ ಜಿಲ್ಲಾ ಆಸ್ಪತ್ರೆಗಳು ತಲುಪಿವೆ. ಇಂತಹ ಸಂದರ್ಭದಲ್ಲೂ ಆರೋಗ್ಯ ಇಲಾಖೆಯ ಗುತ್ತಿಗೆ ನೌಕರರನ್ನು ಹಂತ ಹಂತವಾಗಿ ತೆಗೆಯುವ ಕೆಲಸಕ್ಕೆ ಸರ್ಕಾರ ಮುಂದಾಗಿದೆ ಎನ್ನಲಾಗಿದೆ.

ಏಪ್ರಿಲ್ ಅಂತ್ಯದ ಹೊತ್ತಿಗೆ, ಮೇ ತಿಂಗಳಿನಲ್ಲಿ ಕೋವಿಡ್ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಲಿದ್ದು ಈ ಕುರಿತು ರಾಜ್ಯದಲ್ಲಿ ಆಸ್ಪತ್ರೆ ಮೂಲಭೂತ ಸೌಲಭ್ಯಗಳನ್ನು ಹೆಚ್ಚಿಸಿ. ಪ್ರತಿದಿನ ಆಕ್ಸಿಜನ್ ಬೆಡ್‌ಗಳನ್ನು ಹೆಚ್ಚಿಸಿ ಎಂದು ಜನಾರೋಗ್ಯ ಚಳುವಳಿ ಒತ್ತಾಯಿಸಿದೆ.


ಇದನ್ನೂ ಓದಿ: 1 ವರ್ಷ, 10 ಪತ್ರ, 7 ಪ್ರೆಸ್‌ಮೀಟ್, ಒಂದು ಮುಖಾಮುಖಿ: ಕೋವಿಡ್ ಕುರಿತ ಎಚ್.ಕೆ ಪಾಟೀಲ್ ಎಚ್ಚರವನ್ನು ಸಿಎಂ, ಸುಧಾಕರ್ ಪರಿಗಣಿಸಲೇ ಇಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...