ಕಾಂಗ್ರೆಸ್ ಮಧ್ಯಂತರ ಅಧ್ಯಕ್ಷೆ ಮತ್ತು ಉತ್ತರಪ್ರದೇಶದ ರಾಯ್ಬರೇಲಿ ಕ್ಷೇತ್ರದ ಸಂಸದೆ ಸೋನಿಯಾ ಗಾಂಧಿ ತಮ್ಮ ಪಾಲಿನ ಸಂಸತ್ ಸದಸ್ಯರ ನಿಧಿಯನ್ನು ಕೋವಿಡ್ ಕಾರ್ಯಾಚರಣೆಗಳಿಗೆ ಬಳಿಸಿಕೊಳ್ಳುವಂತೆ ರಾಯ್ಬರೇಲಿ ಜಿಲ್ಲಾಧಿಕಾರಿಗೆ ಸೂಚನೆ ನೀಡಿದ್ದಾರೆ.
ಈ ಕುರಿತು ಪತ್ರ ಬರೆದಿರುವ ಅವರು, ತಮಗಾಗಿ ಮೀಸಲಿಟ್ಟ ಸಂಸತ್ ಸದಸ್ಯರ ಸ್ಥಳೀಯ ಅನುದಾನವನ್ನು ಕೋವಿಡ್ ವಿರುದ್ಧ ಕಾರ್ಯಾಚರಣೆಗಳಿಗೆ ಬಳಸಿಕೊಳ್ಳಿ ಎಂದು ತಿಳಿಸಿದ್ದಾರೆ. “ನನ್ನ ಸಂಸತ್ ಸದಸ್ಯರ ನಿಧಿಯಲ್ಲಿ 1.17 ಕೋಟಿ ಹಣವಿದ್ದು ಅದನ್ನು ಪ್ರಸ್ತುತ ಕೋವಿಡ್ ಬಿಕ್ಕಟ್ಟು ಇರುವುದರಿಂದ ಅದರು ವಿರುದ್ಧದ ಹೋರಾಟಕ್ಕೆ ನಿಯಮಾಣುಸಾರ ಬಳಸಿಕೊಳ್ಳಿ” ಎಂದು ಪತ್ರದಲ್ಲಿ ಹೇಳಿದ್ದಾರೆ.

ಎರಡು ದಿನಗಳ ಹಿಂದೆ ಪ್ರಧಾನಿಗೆ ಪತ್ರ ಬರೆದಿದ್ದ ಅವರು, “ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡುವುದು ರಾಜಕೀಯಕ್ಕಿಂತ ದೊಡ್ಡ ರಾಷ್ಟ್ರೀಯ ಸವಾಲು, ಕೊರೊನಾ ಸೋಂಕಿತರಿಗೆ ಆಮ್ಲಜನಕ, ಆಸ್ಪತ್ರೆಯಲ್ಲಿ ಹಾಸಿಗೆಗಳು ಮತ್ತು ಲಸಿಕೆಗಳ ಕೊರತೆ ಬಗ್ಗೆ ಪದೇ ಪದೇ ರಾಜ್ಯಗಳು ಮನವಿ ಸಲ್ಲಿಸುತ್ತಿದ್ದರು, ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಮೌನ ವಹಿಸಿದ್ದಾರೆ” ಎಂದು ಆರೋಪಿಸಿದ್ದರು.
ಕೊರೊನಾ 2ನೇ ಅಲೆ ದೇಶಕ್ಕೆ ಅಘಾತಕಾರಿಯಾಗಿ ಅಪ್ಪಳಿಸಿದೆ. ಆದರೆ, ನಮಗೆ ಒಂದು ವರ್ಷ ತಯಾರಿ ನಡೆಸಲು ಅವಕಾಶವಿದ್ದರೂ ದೇಶ ಈ ಪರಿಸ್ಥಿತಿ ತಲುಪಿರುವುದು ವಿಷಾದನೀಯ ಎಂದು ಸೋನಿಯಾ ಗಾಂಧಿ ಹೇಳಿದ್ದರು.
ಇದನ್ನೂ ಓದಿ: ಕೊರೊನಾ ನಿರ್ವಹಣೆ: ಕೇಂದ್ರ ಸರ್ಕಾರದ ವಿರುದ್ಧ ಸೋನಿಯಾ ಗಾಂಧಿ ಆಕ್ರೋಶ



Really appreciated even Pak pm also came forward to help in this regard. It is great failure of the administration allowed many types of gathering now it is impossible to control the situation.