Homeಕರೋನಾ ತಲ್ಲಣದಿ ಗಾರ್ಡಿಯನ್ ಸಂಪಾದಕೀಯ: ನಿಯಂತ್ರಣ ತಪ್ಪಿದ ಸಾಂಕ್ರಾಮಿಕ ನಿರ್ವಹಣೆಗೆ ಮೋದಿಯೇ ಕಾರಣ

ದಿ ಗಾರ್ಡಿಯನ್ ಸಂಪಾದಕೀಯ: ನಿಯಂತ್ರಣ ತಪ್ಪಿದ ಸಾಂಕ್ರಾಮಿಕ ನಿರ್ವಹಣೆಗೆ ಮೋದಿಯೇ ಕಾರಣ

ಭಾರತದ ಪ್ರಧಾನ ಮಂತ್ರಿಯ ಅತಿಯಾದ ಆತ್ಮವಿಶ್ವಾಸವು ದೇಶದ ವಿನಾಶಕಾರಿ ಕೋವಿಡ್ ಉಲ್ಬಣಕ್ಕೆ ಕಾರಣವಾಗಿದೆ.

- Advertisement -
- Advertisement -

ಭಾರತದಲ್ಲಿ ಎರಡನೇ ಕೋವಿಡ್ ಸಾಂಕ್ರಾಮಿಕ ಅಲೆ ಅಪ್ಪಳಿಸಿದ್ದು ದೇಶಾದ್ಯಂತ ಸಮರ್ಪಕ ವೈದ್ಯಕೀಯ ವ್ಯವಸ್ಥೆ ಇಲ್ಲದೆ ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿದೆ. ಕೋವಿಡ್ ಬಂದು 15 ತಿಂಗಳಾದರೂ ಸರ್ಕಾರ ಎಚ್ಚೆತ್ತುಕೊಂಡಿಲ್ಲ ಎಂಬುದು ಸ್ಪಷ್ಟವಾಗಿ ಗೋಚರಿಸಿದೆ. ಈ ಕುರಿತು ಪ್ರಸಿದ್ಧ ಪತ್ರಿಕೆ ದಿ ಗಾರ್ಡಿಯನ್‌ನ ಏಪ್ರಿಲ್ 24ರ ಸಂಪಾದಕೀಯವನ್ನು ನಾನುಗೌರಿ ಓದುಗರಿಗಾಗಿ ಅನುವಾದಿಸಿ ಪ್ರಕಟಿಸುತ್ತಿದ್ದೇವೆ.

ಅತಿಯಾದ ರಾಜಕೀಯ ಆತ್ಮವಿಶ್ವಾಸವು ಈ ವಾರ ಭಾರತದಲ್ಲಿ ಸಾಂಕ್ರಾಮಿಕದ ವಾಸ್ತವತೆಗೆ ಮುಖಾಮುಖಿಯಾಗಿದೆ. ಮಾರ್ಚ್ ಆರಂಭದಲ್ಲಿ, ನರೇಂದ್ರ ಮೋದಿಯವರ ಹಿಂದೂ ರಾಷ್ಟ್ರೀಯವಾದಿ ಸರ್ಕಾರವು ದೇಶವು ಕೋವಿಡ್‌ನ ಅಂತಿಮ ಆಟದಲ್ಲಿದೆ (‘ಎಂಡ್‌ಗೇಮ್”ನಲ್ಲಿದೆ ) ಎಂದು ಹೇಳಿಕೊಂಡಿತ್ತು. ಆದರೆ ಭಾರತ ಈಗ ಜೀವಂತ ನರಕದಲ್ಲಿದೆ.

ಬಿ 1.617 ಹೆಸರಿನ ಹೊಸ “ದ್ವಿ ರೂಪಾಂತರಿ” (double mutant) ತಳಿಯ ವಿನಾಶಕಾರಿ ಕೊರೋನಾ ವೈರಸ್ ಎರಡನೇ ಅಲೆಯಲ್ಲಿ ಈಗ ಹೊರಹೊಮ್ಮಿದೆ. ಇದರ ಪರಿಣಾಮವಾಗಿ ಆಸ್ಪತ್ರೆಗಳು ಹಾಸಿಗೆಗಳು ಮತ್ತು ಆಮ್ಲಜನಕದ ಕೊರತೆಯಿಂದ ಬಳಲುತ್ತಿವೆ. ಶವಾಗಾರಗಳು, ಚಿತಾಗಾರಗಳು ಮತ್ತು ಸ್ಮಶಾನಗಳು ತುಂಬಿ ತುಳುಕುತ್ತಿರುವ ಪರಿಣಾಮ ಶವಗಳು ಮನೆಯಲ್ಲಿಯೇ ಕೊಳೆಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಸತ್ತವರನ್ನು ಬೀದಿಗಳಲ್ಲಿ ಬಿಡಲಾಗುವ ಅಪಾಯವನ್ನು ಕಂಡುಬಂದಿದೆ.

ಶುಕ್ರವಾರ ಭಾರತವು 3,32,730 ಹೊಸ ಕೋವಿಡ್‌ಸೋಂಕುಗಳನ್ನು ದಾಖಲಿಸಿದೆ, ಇದು ಸತತ ಎರಡನೇ ದಿನವೂ ವಿಶ್ವದಾದ್ಯಂತದ ಪ್ರಕರಣಗಳಲ್ಲಿ ಅತಿ ಹೆಚ್ಚಾಗಿದೆ. ಹಿಂದಿನ 24 ಗಂಟೆಗಳಲ್ಲಿ 2,200 ಕ್ಕೂ ಹೆಚ್ಚು ಸಾವುಗಳು ದಾಖಲಾಗಿವೆ. ಬಹುಪಾಲು ದೇಶಗಳು ಭಾರತದಿಂದ ವಿಮಾನಗಳನ್ನು ನಿಷೇಧಿಸಿವೆ, ಅಲ್ಲಿಗೆ ಪ್ರಯಾಣಿಸುವುದನ್ನು ತಪ್ಪಿಸಲು ಸೂಚಿಸಿವೆ ಅಥವಾ ಸಂದರ್ಶಕರು ವಾಪಸಾಗುವುದನ್ನು ತಡೆಗಟ್ಟುವಂತೆ ಒತ್ತಾಯಿಸಿವೆ.

ಇನ್ನೂ ಆರು ವಾರಗಳ ಹಿಂದೆ, ಜನಸಂಖ್ಯೆಯ ಶೇ.1 ಜನರಿಗೂ ಸಹ ಲಸಿಕೆ ನೀಡದ ಮೋದಿ, (ಈಗ ಅದು ಶೇ. 8ಕ್ಕೆ ಏರಿದೆ) ದೇಶವು “ವಿಶ್ವದ ಔಷಧಾಲಯ” ಎಂದು ಘೋಷಿಸಿದ್ದರು. ಸಾಂಕ್ರಾಮಿಕ ಪೂರ್ವದ ಜೀವನವು ಪುನರಾರಂಭಗೊಳ್ಳಬಹುದೆಂದು ಸಂಕೇತ ನೀಡಿದ್ದರು. ಸಾವಿರಾರು ಜನರು ಕ್ರಿಕೆಟ್ ಸ್ಟೇಡಿಯಂಗಳಲ್ಲಿ ಹಾಜರಾದ ನಂತರ ಮತ್ತು ಕುಂಭಮೇಳ ಉತ್ಸವದ ಸಂದರ್ಭದಲ್ಲಿ ಲಕ್ಷಾಂತರ ಹಿಂದೂಗಳು ಗಂಗೆಯಲ್ಲಿ ಸ್ನಾನ ಮಾಡಿದಾಗ ಸೂಪರ್‌ ಸ್ಪ್ರೆಡಿಂಗ್ ಸಂಭವಿಸಿತು.

ಸಾಂಕ್ರಾಮಿಕ ಉಲ್ಬಣಗೊಂಡಾಗ ಡೊನಾಲ್ಡ್ ಟ್ರಂಪ್ ಅವರಂತೆ ಶ್ರೀ ಮೋದಿ ಅವರು ಪ್ರಚಾರವನ್ನು ಬಿಡುವುದಿಲ್ಲ. ಭಾರತವು ಏಪ್ರಿಲ್‌ನಲ್ಲಿ ಐದು ರಾಜ್ಯ ಚುನಾವಣೆಗಳೊಂದಿಗೆ ಮುಂದುವರಿಯಿತು, ಮತ್ತು ಮಾಸ್ಕ್ ಇಲ್ಲದೆ ಶ್ರೀ ಡೋನಾಲ್ಡ್ ಟ್ರಂಪ್ ಅವರಂತೆಯೇ ಮೋದಿ ಕೂಡ ಚುನಾವಣಾ ರ‍್ಯಾಲಿಗಳನ್ನು ನಡೆಸಿದರು. ಏಪ್ರಿಲ್‌ನಲ್ಲಿ 4 ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆದ ಚುನಾವಣೆಗಳಲ್ಲಿ ಮಾಸ್ಕ್ ಧರಿಸದ ಮೋದಿ ಬೃಹತ್ ಚುನಾವಣಾ ರ‍್ಯಾಲಿಗಳನ್ನು ನಡೆಸಿದರು. ಮೋದಿಯವರ ಭಾರತೀಯ ಅಸಾಧಾರಣವಾದದ ಬ್ರ‍್ಯಾಂಡ್ ತೃಪ್ತಿಯನ್ನು ಬೆಳೆಸಿದೆ. ರಾಷ್ಟ್ರೀಯ ಶ್ರೇಷ್ಠತೆಯ ಕಲ್ಪನೆ, ಊಹೆಯು ಸನ್ನದ್ಧತೆಯ ಕೊರತೆಗೆ ಕಾರಣವಾಗಿದೆ- ಮುಖ್ಯವಾಗಿ ಲಸಿಕೆ ಉತ್ಪಾದನೆಯಲ್ಲಿ ಇದನ್ನು ಕಾಣಬಹುದಾಗಿದೆ.

ಜಾಗತಿಕ ಔಷಧ ತಯಾರಿಕೆಯಲ್ಲಿ ಭಾರತವು ಮುನ್ನೆಲೆಯಲ್ಲಿ ಇರಲು ಪಶ್ಚಿಮವು ಪ್ರೋತ್ಸಾಹಿಸಿತ್ತು, ಆದರೆ ಈ ವಾರ ಜರ್ಮನಿಯ ಚಾನ್ಸೆಲ್ಲರ್ ಏಂಜೆಲಾ ಮರ್ಕೆಲ್ ಇದು ಒಂದು ತಪ್ಪು ನಿರ್ಧಾರವಾಗಿತ್ತೇನೋ ಎಂದಿದ್ದಾರೆ. ಚೀನಾ ಮತ್ತು ಅಮೆರಿಕ ಈಗ ಭಾರತಕ್ಕಿಂತ ಹೆಚ್ಚು ಕೋವಿಡ್ -19 ಲಸಿಕೆಗಳನ್ನು ತಯಾರಿಸುತ್ತಿವೆ, ರಫ್ತು ನಿಯಂತ್ರಣವನ್ನು ಸರಾಗಗೊಳಿಸುವಂತೆ ವಾಷಿಂಗ್ಟನ್‌ಗೆ ಇನ್ನೂ ಮನವರಿಕೆ ಮಾಡಲಾಗದ ಮೋದಿ ಸರ್ಕಾರವು, ಅನಿವಾರ್ಯದಲ್ಲಿ ರಷ್ಯಾದಿಂದ ಲಸಿಕೆಗಳನ್ನು ಆಮದು ಮಾಡಿಕೊಳ್ಳುವ ಒತ್ತಡಕ್ಕೆ ಸಿಲುಕಬೇಕಾಗಿತು.

ಭಾರತದ ಪ್ರಧಾನ ಮಂತ್ರಿ ತಮ್ಮ ಪ್ರವೃತ್ತಿಯಲ್ಲಿ ಅತಿಯಾದ ಆತ್ಮವಿಶ್ವಾಸದಿಂದ ಬಳಲುತ್ತಿದ್ದಾರೆ ಮತ್ತು ಪೂಹ್-ಪೂಹ್ (ಹೊಗಳುಭಟ್ಟ) ತಜ್ಞರ ಸಲಹೆಗಳನ್ನು ಆಶ್ರಯಿಸಿದ್ದಾರೆ. ಈ ವಾರ ಕೋವಿಡ್ ಕಾರಣಕ್ಕೆ ಆಸ್ಪತ್ರೆಗೆ ದಾಖಲಾಗುವ ಮುನ್ನ ಸರ್ಕಾರಕ್ಕೆ ಸಲಹೆ ನೀಡುವ ‘ಧೈರ್ಯ’ ಮಾಡಿದ ಕಾರಣಕ್ಕೆ ಮೋದಿಯವರ ಸಚಿವರು ಮಾಜಿ ಪ್ರಧಾನಿ ಮನಮೋಹನ ಸಿಂಗ್ ಮೇಲೆ ಮುಗಿಬಿದ್ದಿದ್ದರು.

ಕಳೆದ ವರ್ಷ, ಮೋದಿ ಭಾರತದ ಶತಕೋಟಿ ಜನರ ಮೇಲೆ ಹಠಾತ್ ಲಾಕ್‌ಡೌನ್ ಹೇರಿದರು. ಪೂರ್ವ ಸೂಚನೆಗಳನ್ನೂ ನೀಡದೇ ಹೀಗೆ ದೇಶವನ್ನು ಸ್ಥಗಿತಗೊಳಿಸಿದ್ದು ದೇಶದ ಉನ್ನತ ಸಾಂಕ್ರಾಮಿಕ ರೋಗಶಾಸ್ತ್ರಜ್ಞರ ಸಲಹೆಗೆ ವಿರುದ್ಧವಾಗಿತ್ತು. ಆದರೆ ಮೋದಿಯವರ ನಾಟಕೀಯ ಸನ್ನೆಗಳ ಅಭಿರುಚಿಗೆ ಅದು ಸರಿಹೊಂದಿತ್ತು. ಹೆಚ್ಚಿನ ಪ್ರಮಾಣದ ಯುವ ಜನಸಂಖ್ಯೆಯ ಕಾರಣಕ್ಕೆ ಕೋವಿಡ್ -19 ಕಾರಣಕ್ಕೆ ಮರಣ ಹೊಂದಿದ ಭಾರತೀಯರ ಪ್ರಮಾಣವು ಇತರ ದೇಶಗಳಿಗಿಂತ ಕಡಿಮೆ ಇದೆ.. ಕೋವಿಡ್ ಸಾವುಗಳ ಸಂಖ್ಯೆಯನ್ನು ಕಡಿಮೆ ತೋರಿಸಿದ ಅನುಮಾನಗಳು ಇದ್ದರೂ, ಭಾರತೀಯರು ವೈರಸ್‌ನಿಂದ ಹೆಚ್ಚು ರೋಗನಿರೋಧಕರಾಗಿದ್ದಾರೆ ಎಂಬ ಆಧಾರರಹಿತ ಪ್ರಜ್ಞೆ ಹರಡಿತು. ಮೋದಿಯವರು ಅದನ್ನು ಪ್ರಶ್ನಿಸಲಿಲ್ಲ.

ಮೊದಲ ಅಲೆಯಲ್ಲಿ ಕೋವಿಡ್ ಭಾರತದ ನಗರಗಳ ಮೇಲೆ ದಾಳಿ ನಡೆಸಿತು. ಆದರೆ ಈಗ ಅದು ದೇಶದ ಬಹುಪಾಲು ಜನರು ವಾಸಿಸುವ ಗ್ರಾಮೀಣ ಪ್ರದೇಶಗಳಿಗೆ ಚಲಿಸುತ್ತಿದೆ. ಅನೇಕ ದೇಶಗಳು ಕಠಿಣವಾಗಿ ಅನುಭವಿಸಿದಂತೆ, ಭಾರತದ ಸಾವಿನ ಸಂಖ್ಯೆ ಹೆಚ್ಚಳವನ್ನು ತಪ್ಪಿಸಬಹುದಿತ್ತು. ಆದರೆ ಈಗಿನ ದುರಂತ ಸೊಕ್ಕಿನ ಮತ್ತು ಅಸಮರ್ಥ ಸರ್ಕಾರದ ಫಲಿತಾಂಶವಾಗಿದೆ. ಭಾರತವು ಒಂದು ದೊಡ್ಡ, ಸಂಕೀರ್ಣ ಮತ್ತು ವೈವಿಧ್ಯಮಯ ದೇಶವಾಗಿದ್ದು, ಸಾಮಾನ್ಯ ದಿನಗಳಲ್ಲೇ ಆಡಳಿತ ನಡೆಸುವುದು ಕಷ್ಟಕರ. ಈಗ ರಾಷ್ಟ್ರೀಯ ತುರ್ತು ಪರಿಸ್ಥಿತಿಯ ಸಮಯದಲ್ಲಿ ಅದು ಇನ್ನೂ ಸವಾಲಿನದ್ದು. ಈಗ ಭಾರತವು ಒಂದೇ ಹೊತ್ತಿಗೆ ಕೊರೋನಾ ವೈರಸ್ ಮತ್ತು ಭಯದ ನೆರಳಲ್ಲಿ ಬದುಕುತ್ತಿದೆ. ಜೈವಿಕ ಮತ್ತು ಸಾಮಾಜಿಕ ಸಾಂಕ್ರಾಮಿಕ ರೋಗಗಳನ್ನು ನಿಯಂತ್ರಿಸಲು ಜನರ ಭೀತಿಯನ್ನು ತಗ್ಗಿಸಲು ವಿಶ್ವಾಸಾರ್ಹ ಧೈರ್ಯ ಬೇಕು. ಜನರು ಮಾಸ್ಕ್ ಧರಿಸುವ ಮತ್ತು ದೈಹಿಕ ಅಂತರ ಕಾಪಾಡಿಕೊಳ್ಳುವ ನಿಯಮಗಳನ್ನು ಪಾಲಿಸಬೇಕಾಗುತ್ತದೆ.

ಮೋದಿಯವರು ತಾವು ನಿರ್ಮಿಸಿದ ಅವ್ಯವಸ್ಥೆಯನ್ನು ನಿವಾರಿಸಲು ರಾಜ್ಯ ಸರ್ಕಾರಗಳ ಮೇಲೆ ಹೊಣೆ ಹಾಕಿದ್ದಾರೆ. ಅಗಾಧವಾದ ಆರ್ಥಿಕ ಸಂಕಷ್ಟಗಳಿಗೆ ಕಾರಣವಾದ ತಪ್ಪುಗಳನ್ನು ಮೋದಿ ಒಪ್ಪಿಕೊಳ್ಳಬೇಕು ಮತ್ತು ಈಗ ಆ ತಪ್ಪುಗಳನ್ನು ತಿದ್ದುಪಡಿ ಮಾಡಲು ಯತ್ನಿಸಬೇಕು. ನಿರ್ಬಂಧಗಳನ್ನು ಹೇಗೆ ಎತ್ತಿಹಿಡಿಯುವುದು ಎಂಬುದರ ಕುರಿತು ಅವರು ತಜ್ಞರೊಂದಿಗೆ ಮಾತುಕತೆಯಲ್ಲಿ ತೊಡಗಿಸಿಕೊಳ್ಳಬೇಕು; ಸರ್ಕಾರಿ ವಿತರಣೆ ಜನರನ್ನು ತಲುಪುವಂತೆ ಮಾಡುವ ವಿಧಾನವನ್ನು ಚರ್ಚಿಸಿ ಕಾರ್ಯರೂಪಕ್ಕೆ ತರಬೇಕು. ಏಕತೆ ಅಗತ್ಯವಿರುವ ಈ ಕ್ಲಿಷ್ಟಕರ ಸಂದರ್ಭದಲ್ಲಿ ವಿಭಜಿಸುವ ಪಂಥೀಯ ಸಿದ್ಧಾಂತವನ್ನು ಕೈ ಬಿಡಬೇಕು. ವಿನಾಶಕಾರಿ ಸಾರ್ವಜನಿಕ ಆರೋಗ್ಯ ಫಲಿತಾಂಶಕ್ಕೆ ಕಾರಣವಾದ ಅಸಾಧಾರಣವಾದಿ ದೃಷ್ಟಿಕೋನಗಳೊಂದಿಗೆ ಮುಂದುವರಿದರೆ ಭವಿಷ್ಯದ ಇತಿಹಾಸಕಾರರು ಮೋದಿಯನ್ನು ಕಠಿಣವಾಗಿ ಖಂಡಿಸುತ್ತಾರೆ.


ಇದನ್ನೂ ಓದಿ: ಒಂದು ಬ್ಯಾಕ್ಟೀರಿಯಾ ಭಾರತೀಯರನ್ನು ರಾಜಕೀಯಗೊಳಿಸಿತು, ಒಂದು ವೈರಸ್ ಮೋದಿಯಿಂದ ರಾಜಕೀಯ ಬೆಲೆ ಬೇಡುತ್ತಿದೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಈ ಪೂಹ್-ಪೂಹ್ ರೋಗಿ ಇಡೀ ಭಾರತವನ್ನು ವಿನಾಶದ ಅಂಚಿಗೆ ತಳ್ಳುವ ವರೆಗೆ ನಿಲ್ಲುವುದಿಲ್ಲ.

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...