Homeಮುಖಪುಟಆಕ್ಸಿಜನ್ ಬಿಕ್ಕಟ್ಟಿನಲ್ಲಿ ಹಲವು ರಾಜ್ಯಗಳು, ನಮ್ಮಲ್ಲಿ ಕೊರತೆಯಿಲ್ಲ ಎಂದ ಉತ್ತರಪ್ರದೇಶ ಸಿಎಂ

ಆಕ್ಸಿಜನ್ ಬಿಕ್ಕಟ್ಟಿನಲ್ಲಿ ಹಲವು ರಾಜ್ಯಗಳು, ನಮ್ಮಲ್ಲಿ ಕೊರತೆಯಿಲ್ಲ ಎಂದ ಉತ್ತರಪ್ರದೇಶ ಸಿಎಂ

- Advertisement -
- Advertisement -

ಕೊರೊನಾ ಸೋಂಕಿತ ರೋಗಿಗಳಿಗೆ ಆಮ್ಲಜನಕ ನೀಡಲು ಸಾಧ್ಯವಾಗದೆ ದೇಶದ ಹಲವಾರು ರಾಜ್ಯಗಳ ಮುಖ್ಯಮಂತ್ರಿಗಳು ಆಕ್ಸಿಜನ್‌ಗಾಗಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಮನವಿ ಮಾಡುತ್ತಿದ್ದಾರೆ. ಆದರೆ, ಉತ್ತರ ಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ್ ನಮ್ಮಲ್ಲಿ ಯಾವುದೇ ಕೊರೊನಾ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಕೊರತೆಯಿಲ್ಲ ಎಂದು ಹೇಳಿದ್ದಾರೆ.

ಉತ್ತರ ಪ್ರದೇಶದ ಯಾವುದೇ ಖಾಸಗಿ ಅಥವಾ ಸಾರ್ವಜನಿಕ ಕೊರೊನಾ ಆಸ್ಪತ್ರೆಯಲ್ಲಿ ಆಮ್ಲಜನಕದ ಕೊರತೆಯಿಲ್ಲ. ರಾಜ್ಯ ಸರ್ಕಾರವು ವಿವಿಧ ಸಂಸ್ಥೆಗಳ ಸಹಯೋಗದೊಂದಿಗೆ ಆಕ್ಸಿಜನ್ ಬಗ್ಗೆ ಚರ್ಚೆ ನಡೆಸಲಿದೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

ಕೊರೊನಾ ವೈರಸ್ ಸೋಂಕನ್ನು ಸಾಮಾನ್ಯ ವೈರಲ್ ಜ್ವರ ಎಂದು ತೆಗೆದುಕೊಳ್ಳುವುದು ದೊಡ್ಡ ತಪ್ಪು, ಕೊರೊನಾ ನಿಯಮಾವಳಿಗಳನ್ನು ನಿರ್ಲಕ್ಷಿಸಬೇಡಿ ಎಂದು ಜನರನ್ನು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಕೊರೊನಾ ತಲ್ಲಣ: #ModiOxygenDo, भाषणबाज_मोदी, #oxygenbedslekkakodi ಟ್ವಿಟರ್‌ ಟ್ರೆಂಡ್

“ರಾಜ್ಯದಲ್ಲಿ ಯಾವುದೇ ಕೊರೊನಾ ಆಸ್ಪತ್ರೆಯಲ್ಲಿ ಆಮ್ಲಜನಕದ ಕೊರತೆಯಿಲ್ಲ, ಅದು ಖಾಸಗಿಯಾಗಿರಲಿ ಅಥವಾ ಸರ್ಕಾರವಾಗಿರಲಿ. ಸಮಸ್ಯೆ ಇರುವುದು ಬ್ಲ್ಯಾಕ್ ಮಾರ್ಕೆಟಿಂಗ್‌ನದ್ದು, ಇದನ್ನು ಸರ್ಕಾರ ಸರಿಯಾದ ಕ್ರಮದಲ್ಲಿ ನಿಭಾಯಿಸಲಿದೆ” ಎಂದಿದ್ದಾರೆ.

’ಐಐಟಿ ಕಾನ್ಪುರ್, ಐಐಎಂ ಲಕ್ನೋ ಮತ್ತು ಐಐಟಿ ಬಿಎಚ್‌ಯು ಸಹಯೋಗದೊಂದಿಗೆ ಆಮ್ಲಜನಕದ ಸರಿಯಾದ ಮೇಲ್ವಿಚಾರಣೆಗಾಗಿ ನಾವು ಆಮ್ಲಜನಕ ಲೆಕ್ಕಪರಿಶೋಧನೆಯನ್ನು ನಡೆಸಲಿದ್ದೇವೆ. ಆಮ್ಲಜನಕದ ಬೇಡಿಕೆ, ಪೂರೈಕೆ ಮತ್ತು ವಿತರಣೆಯ ನೇರ ಟ್ರ್ಯಾಕಿಂಗ್ ವ್ಯವಸ್ಥೆಯನ್ನು ಜಾರಿಗೆ ತರಲಾಗುವುದು ”ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

“ಪ್ರತಿ ಕೊರೊನಾ ಸೋಂಕಿತ ರೋಗಿಗೆ ಆಮ್ಲಜನಕದ ಅಗತ್ಯವಿಲ್ಲ, ಈ ಬಗ್ಗೆ ಜಾಗೃತಿ ಮೂಡಿಸುವಲ್ಲಿ ಮಾಧ್ಯಮಗಳಿಂದ ಸಹಕಾರವನ್ನು ನೀರಿಕ್ಷಿಸುತ್ತೇವೆ. ರಾಜ್ಯದಲ್ಲಿ ಆಸ್ಪತ್ರೆ ಹಾಸಿಗೆಗಳ ಸಂಖ್ಯೆಯನ್ನು ಹೆಚ್ಚಿಸುವಲ್ಲಿ ಕೆಲವು ಆರಂಭಿಕ ಸಮಸ್ಯೆಗಳಿವೆ. ಆದರೆ ಅವುಗಳನ್ನು ಶೀಘ್ರವಾಗಿ ನಿವಾರಿಸಲಾಗುವುದು” ಎಂದಿದ್ದಾರೆ.

ಇದನ್ನೂ ಓದಿ: ಗೌರವಯುತ ಅಂತ್ಯ ಸಂಸ್ಕಾರಕ್ಕಾದರೂ ಕನಿಷ್ಠ ವ್ಯವಸ್ಥೆ ಮಾಡಿ-ಸರ್ಕಾರಕ್ಕೆ ಕುಮಾರಸ್ವಾಮಿ ಆಗ್ರಹ

“ಕೊರೊನಾವನ್ನು ಸಾಮಾನ್ಯ ವೈರಲ್ ಜ್ವರವಾಗಿ ತೆಗೆದುಕೊಳ್ಳುವುದು ದೊಡ್ಡ ತಪ್ಪು. ನಾನು ಕೂಡ ಅದರ ಸೋಂಕಿಗೆ ಒಳಗಾಗಿದ್ದೇನೆ. ಏಪ್ರಿಲ್ 13 ರಿಂದ ನಾನು ಕ್ವಾರಂಟೈನ್‌ನಲ್ಲಿದ್ದು ಎಲ್ಲಾ ಕೊರೊನಾ ನಿಯಮಗಳನ್ನು ಅನುಸರಿಸುತ್ತಿದ್ದೇನೆ. ಉತ್ತರ ಪ್ರದೇಶದ ಪರಿಸ್ಥಿತಿಯನ್ನು ಪರಿಶೀಲಿಸುವಾಗ, ಅದರ ಜನಸಂಖ್ಯೆ ಪ್ರಮಾಣ ಮತ್ತು ಜನಸಂಖ್ಯಾ ವೈವಿಧ್ಯತೆಯನ್ನು ಗಮನದಲ್ಲಿರಿಸಿಕೊಳ್ಳಬೇಕು” ಎಂದಿದ್ದಾರೆ.

ಕೊರೊನಾ ಎರಡನೇ ಅಲೆಯಲ್ಲಿ ಈ ಬಾರಿ ಸೋಂಕುಗಳ ಸಂಖ್ಯೆ ಕಳೆದ ಬಾರಿಗಿಂತ 30 ಪಟ್ಟು ಹೆಚ್ಚಾಗಿದೆ. ನಾವು ಸರ್ಕಾರಿ ಸಂಸ್ಥೆಗಳಲ್ಲಿ ಆಮ್ಲಜನಕ ಸ್ಥಾವರಗಳಿಗೆ ವ್ಯವಸ್ಥೆ ಮಾಡಿದ್ದೇವೆ. ಖಾಸಗಿ ಸಂಸ್ಥೆಗಳಲ್ಲಿ ಈ ವ್ಯವಸ್ಥೆಯ ಕೊರತೆ ಇತ್ತು. ಡಿಆರ್‌ಡಿಒನ ಇತ್ತೀಚಿನ ತಂತ್ರಜ್ಞಾನದ ಆಧಾರದ ಮೇಲೆ 18 ಸ್ಥಾವರಗಳು ಸೇರಿದಂತೆ 31 ಹೊಸ ಆಮ್ಲಜನಕ ಸ್ಥಾವರಗಳನ್ನು ಸ್ಥಾಪಿಸುವ ಕೆಲಸ ನಡೆಯುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

ಇನ್ನು, ಉತ್ತರಪ್ರದೇಶದಲ್ಲಿ ರೆಮ್‌ಡೆಸಿವಿರ್ ನಂತಹ ಔಷಧಿಗಳ ಕೊರತೆಯಿಲ್ಲ. ಎಲ್ಲರಿಗೂ ಉಚಿತ ವ್ಯಾಕ್ಸಿನೇಷನ್ ನೀಡಲಾಗುತ್ತದೆ. ಇದಕ್ಕಾಗಿ ಸುಮಾರು 8,000 ಕೇಂದ್ರಗಳನ್ನು ಸ್ಥಾಪಿಸಲಾಗಿದೆ, ಅಲ್ಲಿ ಮೇ 1 ರಿಂದ 18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ ಉಚಿತವಾಗಿ ಲಸಿಕೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಆದಿತ್ಯನಾಥ್ ಹೇಳಿದ್ದಾರೆ.


ಇದನ್ನೂ ಓದಿ: ಪಿಎಂ-ಸಿಎಂ ಸಭೆ ಟಿವಿಯಲ್ಲಿ ಪ್ರಸಾರ: ಆಕ್ಷೇಪಿಸಿದ ಮೋದಿ, ವಿಷಾದಿಸಿದ ಕೇಜ್ರಿವಾಲ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...