Homeಮುಖಪುಟಆಕ್ಸಿಜನ್ ಬಿಕ್ಕಟ್ಟಿನಲ್ಲಿ ಹಲವು ರಾಜ್ಯಗಳು, ನಮ್ಮಲ್ಲಿ ಕೊರತೆಯಿಲ್ಲ ಎಂದ ಉತ್ತರಪ್ರದೇಶ ಸಿಎಂ

ಆಕ್ಸಿಜನ್ ಬಿಕ್ಕಟ್ಟಿನಲ್ಲಿ ಹಲವು ರಾಜ್ಯಗಳು, ನಮ್ಮಲ್ಲಿ ಕೊರತೆಯಿಲ್ಲ ಎಂದ ಉತ್ತರಪ್ರದೇಶ ಸಿಎಂ

- Advertisement -
- Advertisement -

ಕೊರೊನಾ ಸೋಂಕಿತ ರೋಗಿಗಳಿಗೆ ಆಮ್ಲಜನಕ ನೀಡಲು ಸಾಧ್ಯವಾಗದೆ ದೇಶದ ಹಲವಾರು ರಾಜ್ಯಗಳ ಮುಖ್ಯಮಂತ್ರಿಗಳು ಆಕ್ಸಿಜನ್‌ಗಾಗಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಮನವಿ ಮಾಡುತ್ತಿದ್ದಾರೆ. ಆದರೆ, ಉತ್ತರ ಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ್ ನಮ್ಮಲ್ಲಿ ಯಾವುದೇ ಕೊರೊನಾ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಕೊರತೆಯಿಲ್ಲ ಎಂದು ಹೇಳಿದ್ದಾರೆ.

ಉತ್ತರ ಪ್ರದೇಶದ ಯಾವುದೇ ಖಾಸಗಿ ಅಥವಾ ಸಾರ್ವಜನಿಕ ಕೊರೊನಾ ಆಸ್ಪತ್ರೆಯಲ್ಲಿ ಆಮ್ಲಜನಕದ ಕೊರತೆಯಿಲ್ಲ. ರಾಜ್ಯ ಸರ್ಕಾರವು ವಿವಿಧ ಸಂಸ್ಥೆಗಳ ಸಹಯೋಗದೊಂದಿಗೆ ಆಕ್ಸಿಜನ್ ಬಗ್ಗೆ ಚರ್ಚೆ ನಡೆಸಲಿದೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

ಕೊರೊನಾ ವೈರಸ್ ಸೋಂಕನ್ನು ಸಾಮಾನ್ಯ ವೈರಲ್ ಜ್ವರ ಎಂದು ತೆಗೆದುಕೊಳ್ಳುವುದು ದೊಡ್ಡ ತಪ್ಪು, ಕೊರೊನಾ ನಿಯಮಾವಳಿಗಳನ್ನು ನಿರ್ಲಕ್ಷಿಸಬೇಡಿ ಎಂದು ಜನರನ್ನು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಕೊರೊನಾ ತಲ್ಲಣ: #ModiOxygenDo, भाषणबाज_मोदी, #oxygenbedslekkakodi ಟ್ವಿಟರ್‌ ಟ್ರೆಂಡ್

“ರಾಜ್ಯದಲ್ಲಿ ಯಾವುದೇ ಕೊರೊನಾ ಆಸ್ಪತ್ರೆಯಲ್ಲಿ ಆಮ್ಲಜನಕದ ಕೊರತೆಯಿಲ್ಲ, ಅದು ಖಾಸಗಿಯಾಗಿರಲಿ ಅಥವಾ ಸರ್ಕಾರವಾಗಿರಲಿ. ಸಮಸ್ಯೆ ಇರುವುದು ಬ್ಲ್ಯಾಕ್ ಮಾರ್ಕೆಟಿಂಗ್‌ನದ್ದು, ಇದನ್ನು ಸರ್ಕಾರ ಸರಿಯಾದ ಕ್ರಮದಲ್ಲಿ ನಿಭಾಯಿಸಲಿದೆ” ಎಂದಿದ್ದಾರೆ.

’ಐಐಟಿ ಕಾನ್ಪುರ್, ಐಐಎಂ ಲಕ್ನೋ ಮತ್ತು ಐಐಟಿ ಬಿಎಚ್‌ಯು ಸಹಯೋಗದೊಂದಿಗೆ ಆಮ್ಲಜನಕದ ಸರಿಯಾದ ಮೇಲ್ವಿಚಾರಣೆಗಾಗಿ ನಾವು ಆಮ್ಲಜನಕ ಲೆಕ್ಕಪರಿಶೋಧನೆಯನ್ನು ನಡೆಸಲಿದ್ದೇವೆ. ಆಮ್ಲಜನಕದ ಬೇಡಿಕೆ, ಪೂರೈಕೆ ಮತ್ತು ವಿತರಣೆಯ ನೇರ ಟ್ರ್ಯಾಕಿಂಗ್ ವ್ಯವಸ್ಥೆಯನ್ನು ಜಾರಿಗೆ ತರಲಾಗುವುದು ”ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

“ಪ್ರತಿ ಕೊರೊನಾ ಸೋಂಕಿತ ರೋಗಿಗೆ ಆಮ್ಲಜನಕದ ಅಗತ್ಯವಿಲ್ಲ, ಈ ಬಗ್ಗೆ ಜಾಗೃತಿ ಮೂಡಿಸುವಲ್ಲಿ ಮಾಧ್ಯಮಗಳಿಂದ ಸಹಕಾರವನ್ನು ನೀರಿಕ್ಷಿಸುತ್ತೇವೆ. ರಾಜ್ಯದಲ್ಲಿ ಆಸ್ಪತ್ರೆ ಹಾಸಿಗೆಗಳ ಸಂಖ್ಯೆಯನ್ನು ಹೆಚ್ಚಿಸುವಲ್ಲಿ ಕೆಲವು ಆರಂಭಿಕ ಸಮಸ್ಯೆಗಳಿವೆ. ಆದರೆ ಅವುಗಳನ್ನು ಶೀಘ್ರವಾಗಿ ನಿವಾರಿಸಲಾಗುವುದು” ಎಂದಿದ್ದಾರೆ.

ಇದನ್ನೂ ಓದಿ: ಗೌರವಯುತ ಅಂತ್ಯ ಸಂಸ್ಕಾರಕ್ಕಾದರೂ ಕನಿಷ್ಠ ವ್ಯವಸ್ಥೆ ಮಾಡಿ-ಸರ್ಕಾರಕ್ಕೆ ಕುಮಾರಸ್ವಾಮಿ ಆಗ್ರಹ

“ಕೊರೊನಾವನ್ನು ಸಾಮಾನ್ಯ ವೈರಲ್ ಜ್ವರವಾಗಿ ತೆಗೆದುಕೊಳ್ಳುವುದು ದೊಡ್ಡ ತಪ್ಪು. ನಾನು ಕೂಡ ಅದರ ಸೋಂಕಿಗೆ ಒಳಗಾಗಿದ್ದೇನೆ. ಏಪ್ರಿಲ್ 13 ರಿಂದ ನಾನು ಕ್ವಾರಂಟೈನ್‌ನಲ್ಲಿದ್ದು ಎಲ್ಲಾ ಕೊರೊನಾ ನಿಯಮಗಳನ್ನು ಅನುಸರಿಸುತ್ತಿದ್ದೇನೆ. ಉತ್ತರ ಪ್ರದೇಶದ ಪರಿಸ್ಥಿತಿಯನ್ನು ಪರಿಶೀಲಿಸುವಾಗ, ಅದರ ಜನಸಂಖ್ಯೆ ಪ್ರಮಾಣ ಮತ್ತು ಜನಸಂಖ್ಯಾ ವೈವಿಧ್ಯತೆಯನ್ನು ಗಮನದಲ್ಲಿರಿಸಿಕೊಳ್ಳಬೇಕು” ಎಂದಿದ್ದಾರೆ.

ಕೊರೊನಾ ಎರಡನೇ ಅಲೆಯಲ್ಲಿ ಈ ಬಾರಿ ಸೋಂಕುಗಳ ಸಂಖ್ಯೆ ಕಳೆದ ಬಾರಿಗಿಂತ 30 ಪಟ್ಟು ಹೆಚ್ಚಾಗಿದೆ. ನಾವು ಸರ್ಕಾರಿ ಸಂಸ್ಥೆಗಳಲ್ಲಿ ಆಮ್ಲಜನಕ ಸ್ಥಾವರಗಳಿಗೆ ವ್ಯವಸ್ಥೆ ಮಾಡಿದ್ದೇವೆ. ಖಾಸಗಿ ಸಂಸ್ಥೆಗಳಲ್ಲಿ ಈ ವ್ಯವಸ್ಥೆಯ ಕೊರತೆ ಇತ್ತು. ಡಿಆರ್‌ಡಿಒನ ಇತ್ತೀಚಿನ ತಂತ್ರಜ್ಞಾನದ ಆಧಾರದ ಮೇಲೆ 18 ಸ್ಥಾವರಗಳು ಸೇರಿದಂತೆ 31 ಹೊಸ ಆಮ್ಲಜನಕ ಸ್ಥಾವರಗಳನ್ನು ಸ್ಥಾಪಿಸುವ ಕೆಲಸ ನಡೆಯುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

ಇನ್ನು, ಉತ್ತರಪ್ರದೇಶದಲ್ಲಿ ರೆಮ್‌ಡೆಸಿವಿರ್ ನಂತಹ ಔಷಧಿಗಳ ಕೊರತೆಯಿಲ್ಲ. ಎಲ್ಲರಿಗೂ ಉಚಿತ ವ್ಯಾಕ್ಸಿನೇಷನ್ ನೀಡಲಾಗುತ್ತದೆ. ಇದಕ್ಕಾಗಿ ಸುಮಾರು 8,000 ಕೇಂದ್ರಗಳನ್ನು ಸ್ಥಾಪಿಸಲಾಗಿದೆ, ಅಲ್ಲಿ ಮೇ 1 ರಿಂದ 18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ ಉಚಿತವಾಗಿ ಲಸಿಕೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಆದಿತ್ಯನಾಥ್ ಹೇಳಿದ್ದಾರೆ.


ಇದನ್ನೂ ಓದಿ: ಪಿಎಂ-ಸಿಎಂ ಸಭೆ ಟಿವಿಯಲ್ಲಿ ಪ್ರಸಾರ: ಆಕ್ಷೇಪಿಸಿದ ಮೋದಿ, ವಿಷಾದಿಸಿದ ಕೇಜ್ರಿವಾಲ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...