Homeಕರೋನಾ ತಲ್ಲಣಸಾಂಕ್ರಾಮಿಕ ದುರಂತದ ಸಮಯದಲ್ಲಿ ಐಪಿಎಲ್ ಕವರೇಜ್ ಮಾಡುವುದಿಲ್ಲವೆಂದ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್!

ಸಾಂಕ್ರಾಮಿಕ ದುರಂತದ ಸಮಯದಲ್ಲಿ ಐಪಿಎಲ್ ಕವರೇಜ್ ಮಾಡುವುದಿಲ್ಲವೆಂದ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್!

ಬಯೋ ಬಬಲ್‌ನಲ್ಲಿ ಆಟಗಾರರು ಎಲ್ಲ ಸುರಕ್ಷತೆಗಳೊಂದಿಗೆ ಆಡುವ ಹೊತ್ತಿನಲ್ಲಿ ಜನ ಆರೋಗ್ಯ ಸೌಲಭ್ಯ ಸಿಗದೇ ಒದ್ದಾಡುತ್ತಿದ್ದಾರೆ. ಈ ದುರಂತದ ಸಂದರ್ಭದಲ್ಲಿ ಐಪಿಎಲ್ ನಡೆಯುತ್ತಿರುವುದು ಸಮಂಜಸವಲ್ಲ ಎಂದು ಪತ್ರಿಕೆ ಭಾವಿಸಿದೆ.

- Advertisement -
- Advertisement -

‘ದೇಶವು ಕೋವಿಡ್ ಎರಡನೆ ಅಲೆ ಉಲ್ಬಣದಿಂದ ತತ್ತರಿಸಿರುವ ಈ ಸಮಯದಲ್ಲಿ ಐಪಿಎಲ್ ಎಂಬ ಕ್ರಿಕೆಟ್ ಹಬ್ಬ ನಡೆಯುತ್ತಿರುವುದು ವಿಷಾದಕರ. ದೇಶದ ಸಂಕಷ್ಟದ ಜೊತೆ ನಿಂತು ಜನರಲ್ಲಿ ನೈತಿಕ ಶಕ್ತಿ ತುಂಬುವುದರ ಸಂಕೇತವಾಗಿ ನಾವು ಈಗಿನಿಂದಲೇ ಕ್ರಿಕೆಟ್ ಹಬ್ಬದ ಕವರೇಜ್ ನಿಲ್ಲಿಸಿದ್ದೇವೆ ಮತ್ತು ಅದಕ್ಕೆ ಸಂಬಂಧಿಸಿದ ಯಾವ ಸುದ್ದಿಯನ್ನೂ ಪ್ರಕಟಿಸದಿರಲು ನಿರ್ಧರಿಸಿದ್ದೇವೆ’ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ಸಂಪಾದಕೀಯ ಮಂಡಳಿ ಇಂದು ರವಿವಾರ ಮುಖಪುಟದಲ್ಲೇ ಪ್ರಕಟಣೆ ನೀಡಿದ್ದು, ಇದೊಂದು ಜರೂರಾದ ನೈತಿಕ ನಡೆ ಎಂದು ಓದುಗರಿಂದ ಪ್ರಶಂಸೆ ವ್ಯಕ್ತವಾಗಿದೆ.

‘ಭಾರತವು ಈಗ ಕೋವಿಡ್ ಸಾಂಕ್ರಾಮಿಕದ ತೀವ್ರ ದುರಂತದಲ್ಲಿ ನರಳುತ್ತಿದೆ. ಸಾವಿರಾರು ಜನ ಆಸ್ಪತ್ರೆಗಳಲ್ಲಿ ಹಾಸಿಗೆ ಸಿಗದೇ ಒದ್ದಾಡುತ್ತಿದ್ದಾರೆ. ಎರಡನೇ ಅಲೆಯಲ್ಲಿ ಉಸಿರಾಟದ ಸಮಸ್ಯೆ ಅಧಿಕಗೊಂಡಿದ್ದು, ಆಸ್ಪತ್ರೆಗಳು ಆಮ್ಲಜನಕ ಮತ್ತು ಅಗತ್ಯ ಜೀವರಕ್ಷಕ ಔಷಧಿಗಳನ್ನು ಒದಗಿಸಿ ಎಂದು ಅಸಹಾಯಕ ಸ್ಥಿತಿಯಲ್ಲಿ ಸರ್ಕಾರಗಳಿಗೆ ಮನವಿ ಮಾಡುತ್ತಿವೆ. ಸ್ಮಶಾನಗಳಲ್ಲಿ ಶವ ಸಂಸ್ಕಾರಕ್ಕೆ ಪಾಳೆ ಹಚ್ಚುವ ಪರಿಸ್ಥಿತಿ ಬಂದಿದೆ…….

‘ಕುಸಿದು ಹೋಗಿರುವ ದೇಶದ ಆರೋಗ್ಯ ವ್ಯವಸ್ಥೆಯ ಕುರಿತಾಗಿ ಸರ್ಕಾರದ ಬಳಿ ಯಾವುದೇ ಸಮರ್ಪಕ ಉತ್ತರವಿಲ್ಲ. ಅದು ಈ ಸವಾಲನ್ನು ಮೆಟ್ಟಿ ನಿಲ್ಲುವ ಸಿದ್ಧತೆ ಮಾಡಿಕೊಂಡಂತೆ ಜನರಿಗೆ ಅನಿಸುತ್ತಿಲ್ಲ. ಇಂತಹ ಒಂದು ಸಂದರ್ಭದಲ್ಲಿ ಕ್ರಿಕೆಟ್ ಹಬ್ಬ ಎಂದು ಕರೆಯಲ್ಪಡುವ ಐಪಿಎಲ್ ನಡೆಯುತ್ತಿರುವುದು ಸಮಂಜಸವಲ್ಲ ಎಂದು ಪತ್ರಿಕೆ ಭಾವಿಸಿದೆ. ಇದು ಕ್ರಿಕೆಟ್ ಕುರಿತಾದ ಪ್ರಶ್ನೆಯಲ್ಲ. ಆದರೆ ಈ ದುರಂತದ ಸಂದರ್ಭದ ಪ್ರಶ್ನೆಯಾಗಿದೆ. ಬಯೋ ಬಬಲ್‌ನಲ್ಲಿ ಆಟಗಾರರು ಎಲ್ಲ ಸುರಕ್ಷತೆಗಳೊಂದಿಗೆ ಆಡುವ ಹೊತ್ತಿನಲ್ಲಿ ಜನ ಆರೋಗ್ಯ ಸೌಲಭ್ಯ ಸಿಗದೇ ಒದ್ದಾಡುತ್ತಿದ್ದಾರೆ. ಒಂದು ಸಣ್ಣ ಹೆಜ್ಜೆಯಾಗಿ, ನಮ್ಮ ನೈತಿಕ ಜವಾಬ್ದಾರಿ ಎಂದು ಅಂದುಕೊಂಡು ಈಗಿನಿಂದಲೇ ಕ್ರಿಕೆಟ್ ಕವರೇಜ್ ಮಾಡದಿರಲು ಪತ್ರಿಕೆ ನಿರ್ಧರಿಸಿದೆ…. ಪರಿಸ್ಥಿತಿ ಸಹಜ ಸ್ಥಿಗೆ ಬರುವವರೆಗೂ ಕವರೇಜ್ ಮಾಡದಿರಲು ನಿರ್ಧರಿಸಿದ್ದೇವೆ…’ ಎಂದು ಹೇಳಿರುವ ಸಂಪಾದಕೀಯ ಮಂಡಳಿ, ‘ಓದುಗರು ಈ ಅಂಶವನ್ನು ಅರ್ಥ ಮಾಡಿಕೊಳ್ಳುತ್ತಾರೆ ಎಂಬ ವಿಶ್ವಾಸವಿದೆ. ಈ ಸಂಕಷ್ಟ ಸಂದರ್ಬದಲ್ಲಿ ನಾವೆಲ್ಲ ಒಂದು ದೃಢ ಸಂಕಲ್ಪದೊಂದಿಗೆ ಒಂದು ದೇಶವಾಗಿ ಒಟ್ಟಾಗಿ ನಿಲ್ಲಬೇಕಿದೆ’ ಎಂದು ತಿಳಿಸಿದೆ,

ಇದೊಂದು ಭಿನ್ನ ನೈತಿಕ ನಡೆಯಾಗಿದ್ದು ಅನಕರಣೀಯ ಕ್ರಮ ಎಂಬ ಮೆಚ್ಚುಗೆ ವ್ಯಕ್ತವಾಗುತ್ತಿದೆ.


ಇದನ್ನೂ ಓದಿ: ದಿ ಗಾರ್ಡಿಯನ್ ಸಂಪಾದಕೀಯ: ನಿಯಂತ್ರಣ ತಪ್ಪಿದ ಸಾಂಕ್ರಾಮಿಕ ನಿರ್ವಹಣೆಗೆ ಮೋದಿಯೇ ಕಾರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...