Homeಕರೋನಾ ತಲ್ಲಣಸಾಂಕ್ರಾಮಿಕ ದುರಂತದ ಸಮಯದಲ್ಲಿ ಐಪಿಎಲ್ ಕವರೇಜ್ ಮಾಡುವುದಿಲ್ಲವೆಂದ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್!

ಸಾಂಕ್ರಾಮಿಕ ದುರಂತದ ಸಮಯದಲ್ಲಿ ಐಪಿಎಲ್ ಕವರೇಜ್ ಮಾಡುವುದಿಲ್ಲವೆಂದ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್!

ಬಯೋ ಬಬಲ್‌ನಲ್ಲಿ ಆಟಗಾರರು ಎಲ್ಲ ಸುರಕ್ಷತೆಗಳೊಂದಿಗೆ ಆಡುವ ಹೊತ್ತಿನಲ್ಲಿ ಜನ ಆರೋಗ್ಯ ಸೌಲಭ್ಯ ಸಿಗದೇ ಒದ್ದಾಡುತ್ತಿದ್ದಾರೆ. ಈ ದುರಂತದ ಸಂದರ್ಭದಲ್ಲಿ ಐಪಿಎಲ್ ನಡೆಯುತ್ತಿರುವುದು ಸಮಂಜಸವಲ್ಲ ಎಂದು ಪತ್ರಿಕೆ ಭಾವಿಸಿದೆ.

- Advertisement -
- Advertisement -

‘ದೇಶವು ಕೋವಿಡ್ ಎರಡನೆ ಅಲೆ ಉಲ್ಬಣದಿಂದ ತತ್ತರಿಸಿರುವ ಈ ಸಮಯದಲ್ಲಿ ಐಪಿಎಲ್ ಎಂಬ ಕ್ರಿಕೆಟ್ ಹಬ್ಬ ನಡೆಯುತ್ತಿರುವುದು ವಿಷಾದಕರ. ದೇಶದ ಸಂಕಷ್ಟದ ಜೊತೆ ನಿಂತು ಜನರಲ್ಲಿ ನೈತಿಕ ಶಕ್ತಿ ತುಂಬುವುದರ ಸಂಕೇತವಾಗಿ ನಾವು ಈಗಿನಿಂದಲೇ ಕ್ರಿಕೆಟ್ ಹಬ್ಬದ ಕವರೇಜ್ ನಿಲ್ಲಿಸಿದ್ದೇವೆ ಮತ್ತು ಅದಕ್ಕೆ ಸಂಬಂಧಿಸಿದ ಯಾವ ಸುದ್ದಿಯನ್ನೂ ಪ್ರಕಟಿಸದಿರಲು ನಿರ್ಧರಿಸಿದ್ದೇವೆ’ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ಸಂಪಾದಕೀಯ ಮಂಡಳಿ ಇಂದು ರವಿವಾರ ಮುಖಪುಟದಲ್ಲೇ ಪ್ರಕಟಣೆ ನೀಡಿದ್ದು, ಇದೊಂದು ಜರೂರಾದ ನೈತಿಕ ನಡೆ ಎಂದು ಓದುಗರಿಂದ ಪ್ರಶಂಸೆ ವ್ಯಕ್ತವಾಗಿದೆ.

‘ಭಾರತವು ಈಗ ಕೋವಿಡ್ ಸಾಂಕ್ರಾಮಿಕದ ತೀವ್ರ ದುರಂತದಲ್ಲಿ ನರಳುತ್ತಿದೆ. ಸಾವಿರಾರು ಜನ ಆಸ್ಪತ್ರೆಗಳಲ್ಲಿ ಹಾಸಿಗೆ ಸಿಗದೇ ಒದ್ದಾಡುತ್ತಿದ್ದಾರೆ. ಎರಡನೇ ಅಲೆಯಲ್ಲಿ ಉಸಿರಾಟದ ಸಮಸ್ಯೆ ಅಧಿಕಗೊಂಡಿದ್ದು, ಆಸ್ಪತ್ರೆಗಳು ಆಮ್ಲಜನಕ ಮತ್ತು ಅಗತ್ಯ ಜೀವರಕ್ಷಕ ಔಷಧಿಗಳನ್ನು ಒದಗಿಸಿ ಎಂದು ಅಸಹಾಯಕ ಸ್ಥಿತಿಯಲ್ಲಿ ಸರ್ಕಾರಗಳಿಗೆ ಮನವಿ ಮಾಡುತ್ತಿವೆ. ಸ್ಮಶಾನಗಳಲ್ಲಿ ಶವ ಸಂಸ್ಕಾರಕ್ಕೆ ಪಾಳೆ ಹಚ್ಚುವ ಪರಿಸ್ಥಿತಿ ಬಂದಿದೆ…….

‘ಕುಸಿದು ಹೋಗಿರುವ ದೇಶದ ಆರೋಗ್ಯ ವ್ಯವಸ್ಥೆಯ ಕುರಿತಾಗಿ ಸರ್ಕಾರದ ಬಳಿ ಯಾವುದೇ ಸಮರ್ಪಕ ಉತ್ತರವಿಲ್ಲ. ಅದು ಈ ಸವಾಲನ್ನು ಮೆಟ್ಟಿ ನಿಲ್ಲುವ ಸಿದ್ಧತೆ ಮಾಡಿಕೊಂಡಂತೆ ಜನರಿಗೆ ಅನಿಸುತ್ತಿಲ್ಲ. ಇಂತಹ ಒಂದು ಸಂದರ್ಭದಲ್ಲಿ ಕ್ರಿಕೆಟ್ ಹಬ್ಬ ಎಂದು ಕರೆಯಲ್ಪಡುವ ಐಪಿಎಲ್ ನಡೆಯುತ್ತಿರುವುದು ಸಮಂಜಸವಲ್ಲ ಎಂದು ಪತ್ರಿಕೆ ಭಾವಿಸಿದೆ. ಇದು ಕ್ರಿಕೆಟ್ ಕುರಿತಾದ ಪ್ರಶ್ನೆಯಲ್ಲ. ಆದರೆ ಈ ದುರಂತದ ಸಂದರ್ಭದ ಪ್ರಶ್ನೆಯಾಗಿದೆ. ಬಯೋ ಬಬಲ್‌ನಲ್ಲಿ ಆಟಗಾರರು ಎಲ್ಲ ಸುರಕ್ಷತೆಗಳೊಂದಿಗೆ ಆಡುವ ಹೊತ್ತಿನಲ್ಲಿ ಜನ ಆರೋಗ್ಯ ಸೌಲಭ್ಯ ಸಿಗದೇ ಒದ್ದಾಡುತ್ತಿದ್ದಾರೆ. ಒಂದು ಸಣ್ಣ ಹೆಜ್ಜೆಯಾಗಿ, ನಮ್ಮ ನೈತಿಕ ಜವಾಬ್ದಾರಿ ಎಂದು ಅಂದುಕೊಂಡು ಈಗಿನಿಂದಲೇ ಕ್ರಿಕೆಟ್ ಕವರೇಜ್ ಮಾಡದಿರಲು ಪತ್ರಿಕೆ ನಿರ್ಧರಿಸಿದೆ…. ಪರಿಸ್ಥಿತಿ ಸಹಜ ಸ್ಥಿಗೆ ಬರುವವರೆಗೂ ಕವರೇಜ್ ಮಾಡದಿರಲು ನಿರ್ಧರಿಸಿದ್ದೇವೆ…’ ಎಂದು ಹೇಳಿರುವ ಸಂಪಾದಕೀಯ ಮಂಡಳಿ, ‘ಓದುಗರು ಈ ಅಂಶವನ್ನು ಅರ್ಥ ಮಾಡಿಕೊಳ್ಳುತ್ತಾರೆ ಎಂಬ ವಿಶ್ವಾಸವಿದೆ. ಈ ಸಂಕಷ್ಟ ಸಂದರ್ಬದಲ್ಲಿ ನಾವೆಲ್ಲ ಒಂದು ದೃಢ ಸಂಕಲ್ಪದೊಂದಿಗೆ ಒಂದು ದೇಶವಾಗಿ ಒಟ್ಟಾಗಿ ನಿಲ್ಲಬೇಕಿದೆ’ ಎಂದು ತಿಳಿಸಿದೆ,

ಇದೊಂದು ಭಿನ್ನ ನೈತಿಕ ನಡೆಯಾಗಿದ್ದು ಅನಕರಣೀಯ ಕ್ರಮ ಎಂಬ ಮೆಚ್ಚುಗೆ ವ್ಯಕ್ತವಾಗುತ್ತಿದೆ.


ಇದನ್ನೂ ಓದಿ: ದಿ ಗಾರ್ಡಿಯನ್ ಸಂಪಾದಕೀಯ: ನಿಯಂತ್ರಣ ತಪ್ಪಿದ ಸಾಂಕ್ರಾಮಿಕ ನಿರ್ವಹಣೆಗೆ ಮೋದಿಯೇ ಕಾರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...