Homeಕರೋನಾ ತಲ್ಲಣಈ ಆರೋಗ್ಯ ಬಿಕ್ಕಟ್ಟಿಗೆ ಮೋದಿ ಸರ್ಕಾರದ ಅಸಮರ್ಥತೆಯೇ ಕಾರಣ: ಡಾ. ಪರಕಾಲ ಪ್ರಭಾಕರ್

ಈ ಆರೋಗ್ಯ ಬಿಕ್ಕಟ್ಟಿಗೆ ಮೋದಿ ಸರ್ಕಾರದ ಅಸಮರ್ಥತೆಯೇ ಕಾರಣ: ಡಾ. ಪರಕಾಲ ಪ್ರಭಾಕರ್

ಕೋವಿಡ್ ಬಿಕ್ಕಟ್ಟು ನಿರ್ವಹಣೆಯಲ್ಲಿ ಮೋದಿ ಸರ್ಕಾರವನ್ನು ಕಟುವಾಗಿ ಟೀಕಿಸಿದ ಪರಕಾಲ ಪ್ರಭಾಕರ್ (ದೇಶದ ಅರ್ಥ ಸಚಿವರ ಪತಿ): ವಿಡಿಯೋ ನೋಡಿ..

- Advertisement -
- Advertisement -

ದೇಶದಲ್ಲಿ ಉದ್ಭವಿಸಿರುವ ಕೋವಿಡ್ ಬಿಕ್ಕಟ್ಟಿಗೆ ಮೋದಿ ಸರ್ಕಾರದ ಅಸಮರ್ಥತೆ ಮತ್ತು ನಿರ್ಲಕ್ಷ್ಯವೇ ಕಾರಣ ಎಂದು ಅರ್ಥ ಸಚಿವೆ ನಿರ್ಮಲಾ ಸೀತಾರಾಮನ್‌ರವರ ಪತಿ ಡಾ. ಪರಕಾಲ ಪ್ರಭಾಕರ್ ಆರೋಪಿಸಿದ್ದಾರೆ. ‘ಮಿಡ್‌ವೀಕ್‌ ಮ್ಯಾಟರ್ಸ್‌’ ಎಂಬ ತಮ್ಮ ಯೂಟ್ಯೂಬ್‌ ವಿಡಿಯೋದಲ್ಲಿ ಮಾತನಾಡಿರುವ ಅವರು ಕೇಂದ್ರ ಸರ್ಕಾರದ ಕೋವಿಡ್ ನಿರ್ವಹಣೆಯನ್ನು ಟೀಕಿಸಿದ್ದಾರೆ.

ಈ ಸರ್ಕಾರದ ಅಸಮರ್ಥತೆ, ಅನುಚಿತತೆ, ಹೃದಯಹೀನತೆ ಮತ್ತು ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳಲು ಪ್ರಧಾನ ಮಂತ್ರಿ ಮೋದಿಯ ಜನಪ್ರಿಯತೆ, ರಾಜಕೀಯ ಬಂಡವಾಳ ಮತ್ತು ಸಂವಹನ ಕೌಶಲ್ಯಗಳು ಕಾರಣವಾಗಿವೆ. ಆಡಳಿತ ಪಕ್ಷವು ಈಗ ಕೋವಿಡ್ ಕಾರಣಕ್ಕೆ ಎದ್ದಿರುವ ಆಕ್ರೋಶ ನಿರ್ವಹಣೆಯಲ್ಲಿ ಪ್ರವೀಣವಾಗಿದೆ. ಪಾರದರ್ಶಕ ಆಡಳಿತ ನೀಡುವಲ್ಲಿ ನರೇಂದ್ರ ಮೋದಿ ವಿಫಲರಾಗಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಕೋವಿಡ್ ಮೊದಲ ಅಲೆಗೆ ದೇಶದ ಬಹಳಷ್ಟು ಜನ ತಮ್ಮ ಜೀವನೋಪಾಯ ಮತ್ತು ಆದಾಯವನ್ನು ಕಳೆದುಕೊಂಡಿದ್ದಾರೆ. ಬಹಳಷ್ಟು ಜನ ಭಯಭೀತರಾಗಿದ್ದಾರೆ. ಹೆಚ್ಚಿನವರು ತಮ್ಮ ಆರ್ಥಿಕ ನಷ್ಟದಿಂದ ಇನ್ನೂ ಚೇತರಿಸಿಕೊಂಡಿಲ್ಲ. ಏಕೆಂದರೆ, ಅನೇಕರಿಗೆ ತಮ್ಮ ಉದ್ಯೋಗಗಳು ಮರಳಿ ಸಿಕ್ಕಿಲ್ಲ. ಸರ್ಕಾರದ ಯಾವುದೇ ಯೋಜನೆಗಳು ಅವರ ಸಹಾಯಕ್ಕೆ ಬಂದಿಲ್ಲ. ಇಂತಹ ಸಂದರ್ಭದಲ್ಲಿ ಎರಡನೇ ಅಲೆ ಬಂದಿದೆ. ಇದು ತಿವ್ರ ಬಿಕ್ಕಟ್ಟು. ಆರೋಗ್ಯ ತುರ್ತು ಮತ್ತು ಯಾವುದಕ್ಕೂ ಕಡಿಮೆ ಇಲ್ಲ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ದೇಶದಲ್ಲಿ ಪ್ರಕರಣಗಳ ತೀವ್ರ ಏರುವಿಕೆಯನ್ನು ನೀವೆಲ್ಲ ಗಮನಿಸಿದ್ದೀರಿ. ಆದರೆ ನೈಜ ಪ್ರಕರಣಗಳಿಗಿಂತ ಕಡಿಮೆ ವರದಿ ಮಾಡಲಾಗುತ್ತಿದೆ, ಸಾವುಗಳನ್ನು ಸಹ ಕಡಿಮೆ ತೋರಿಸಲಾಗುತ್ತಿದೆ. ಆಸ್ಪತ್ರೆಗಳ ಉಸ್ತುವಾರಿ ವೈದ್ಯರು ಪರಿಸ್ಥಿತಿ ಹೆಚ್ಚು ಗಂಭೀರವಾಗಿದೆ ಎಂದು ಖಾಸಗಿಯಾಗಿ ಹೇಳುತ್ತಾರೆ. ಸಮರ್ಪಕ ಪರೀಕ್ಷೆ ಮಾಡುವ ಸಾಮರ್ಥ್ಯವೂ ನಮಗಿಲ್ಲ. ಆಸ್ಪತ್ರೆಗಳಲ್ಲಿ ಬೆಡ್‌ ಸಿಗದೆ, ಆಕ್ಸಿಜನ ಮತ್ತು ಔಷಧ ಸಿಗದೆ ಒದ್ದಾಡುತ್ತಿರುವ ದೃಶ್ಯಗಳು ನಮ್ಮನ್ನು ಉಸಿರುಗಟ್ಟಿಸುತ್ತಿವೆ. ಆದರೆ ನಮ್ಮ ರಾಜಕೀಯ ಮತ್ತು ಧಾರ್ಮಿಕ ಮುಖಂಡರು ಈ ಸಂಕಟವನ್ನು ಗಮನಿಸುವುದಿಲ್ಲ ಎಂದು ವಿಷಾಧ ವ್ಯಕ್ತಪಡಿಸಿದ್ದಾರೆ.

ನಮ್ಮ ರಾಜಕೀಯ ನಾಯಕರಿಗೆ ಚುನಾವಣೆ ಮುಖ್ಯ. ಧಾರ್ಮಿಕ ಮುಖಂಡರಿಗೆ ಅವರ ಆಚರಣೆಗಳು ಮುಖ್ಯವಾಗಿದೆ. ಅವರ್ಯಾರಿಗೂ ಸಾರ್ವಜನಿಕ ಆರೋಗ್ಯ, ಜನರ ಜೀವನ ಅಷ್ಟೇನೂ ಮುಖ್ಯವಲ್ಲ. ಪ್ರಧಾನಿ, ಕೇಂದ್ರ ಸಚಿವರು, ಮುಖ್ಯಮಂತ್ರಿಗಳು, ವಿರೋಧ ಪಕ್ಷದ ನಾಯಕರು ಯಾವುದೇ ಮಾರ್ಗಸೂಚಿಗಳನ್ನು ಪಾಲಿಸದೇ ಬೃಹತ್ ಚುನಾವಣಾ ರ್ಯಾಲಿಗಳನ್ನು ನಡೆಸುತ್ತಾರೆ. ಕುಂಭಮೇಳದಲ್ಲಿ ಲಕ್ಷಾಂತರ ಜನ ಸೇರಿ ಶಾಹಿ ಸ್ನಾನ ಮಾಡುತ್ತಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾತ್ರ ತಮ್ಮ ರ್ಯಾಲಿಗಳನ್ನು ರದ್ದುಗೊಳಿಸುವುದಾಗಿ ಘೋಷಿಸಿದರೆ, ಉಳಿದವರು ಚುನಾವಣಾ ರ್ಯಾಲಿ ನಡೆಸಿದರು. ಬಿಕ್ಕಟ್ಟಿನ ಸಮಯದಲ್ಲಿಯೂ ಚುನಾವಣಾ ರ್ಯಾಲಿಗಳು ಮತ್ತು ಕುಂಭಮೇಳವನ್ನು ಸಮರ್ಥಿಸುವ ತಜ್ಞರು, ವಿಶ್ಲೇಷಕರು ಮತ್ತು ರಾಜಕೀಯ ನಾಯಕರು ಇದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದೆಲ್ಲಾ ನೋಡುತ್ತಿರುವಾಗ ಕೋಪ, ಬೇಸರ, ಅಸಹ್ಯ ಎನಿಸುತ್ತದೆ. ಬೇರೆ ದೇಶಗಳಿಗೆ ಹೋಲಿಸಿಕೊಂಡರೆ ನಮ್ಮಲ್ಲಿ ಒಟ್ಟು ಜನಸಂಖ್ಯೆಗನುಗುಣವಾಗಿ ಸೋಂಕು ಕಡಿಮೆ, ಪ್ರತಿ ಮಿಲಿಯನ್‌ಗೆ ಸಾವು ಕಡಿಮೆ ಎಂದು ಸಮರ್ಥಿಸಿಕೊಳ್ಳುವವರು ಇದ್ದಾರೆ. ಅವರು ಹೃದಯಹೀನ, ಅರ್ಥಹೀನ, ಆಯ್ದ ಹೋಲಿಕೆಗಳಲ್ಲಿ ಮುಳುಗಿದ್ದಾರೆ ಎಂದು ಕಿಡಿಕಾರಿದ್ದಾರೆ. ನಿಮ್ಮ ಈ ಹೋಲಿಕೆಯು ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ಮತ್ತು ಅಪಾಯದಲ್ಲಿರುವವರಿಗೆ ಏನೂ ಅಲ್ಲ ಎಂಬುದನ್ನು ಮರೆಯಬೇಡಿ ಎಂದಿದ್ದಾರೆ.

ನಮ್ಮ ದೇಶದಲ್ಲಿ ಮಕ್ಕಳು ಮತ್ತು ಗರ್ಭಿಣಿಯರನ್ನು ಹೊರತುಪಡಿಸಿ ಸುಮಾರು 70 ಕೋಟಿ ಜನರಿಗೆ ಲಸಿಕೆ ಹಾಕಬೇಕಿದೆ. ಅಂದರೆ 140 ಕೋಟಿ ಲಸಿಕೆಗಳು ಬೇಕಾಗಿವೆ. ಇದೆಲ್ಲದಕ್ಕೂ ನಾವು ಸಿದ್ದರಾಗಿದ್ದೇವೆಯೇ? ಸಿದ್ಧತೆಯ ಬಗ್ಗೆ ಏನೇ ಕೇಳಿದರೂ ಉತ್ತರಿಸುವ ಮನಸ್ಥಿತಿಯಲ್ಲಿ ಕೇಂದ್ರ ಸರ್ಕಾರ ಇಲ್ಲ. ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ಜವಾಬ್ದಾರಿಯುತ ಮತ್ತು ರಚನಾತ್ಮಕ ಸಲಹೆಗಳಿಗೆ ಕೇಂದ್ರ ಆರೋಗ್ಯ ಸಚಿವರು ನೀಡಿದ ಅನೈತಿಕ ಮತ್ತು ಬೆರಗುಗೊಳಿಸುವ ಪ್ರತಿಕ್ರಿಯೆ ಸರ್ಕಾರವು ತಾನು ಜನರಿಂದ ಎಷ್ಟು ದೂರವಿದ್ದೇವೆ ಎಂಬುದನ್ನು ತಿಳಿಸುತ್ತದೆ ಎಂದು ಕಿಡಿಕಾರಿದ್ದಾರೆ.

ಕಳೆದ ವರ್ಷ ಲಾಕ್‌ಡೌನ್ ಹೇರಿದಾಗ ದೇಶಾದ್ಯಂತ ವಲಸೆ ಕಾರ್ಮಿಕರ ಸುದೀರ್ಘ ಮೆರವಣಿಗೆಗಳು ಆಡಳಿತದ ಹೃದಯಹೀನತೆಯನ್ನು ಬಹಿರಂಗಪಡಿಸಿದವು. ಲಾಕ್‌ಡೌನ್‌ ಕೊರೊನಾ ತಡೆಯುವುದಲ್ಲ. ಅದು ಹರಡುವಿಕೆಯನ್ನು ಕಡಿಮೆ ಮಾಡುತ್ತದೆ. ಆದರೆ ಈ ಅವಧಿಯಲ್ಲಿ ಭಾರತ ಸರ್ಕಾರ ಎಷ್ಟು ಆರೋಗ್ಯ ವ್ಯವಸ್ಥೆಯನ್ನು ಸುಧಾರಿಸಿತು? ಎಷ್ಟು ಆಸ್ಪತ್ರೆಗಳನ್ನು, ವೆಂಟಿಲೇಟರ್ ಬೆಡ್‌ಗಳನ್ನು ನಿರ್ಮಿಸಿತು? ಅದರ ಬದಲು ನಮ್ಮ ಸರ್ಕಾರ ಚಪ್ಪಾಳೆ ಮತ್ತು ದೀಪ ಹಚ್ಚುವಲ್ಲಿ ನಿರತವಾಗಿತ್ತು ಎಂದು ಕಿಡಿಕಾರಿದ್ದಾರೆ.

ಸರ್ಕಾರದ ಆರ್ಥಿಕ ಪ್ಯಾಕೇಜ್‌ನಿಂದ ದುರ್ಬಲ ವರ್ಗಗಳಿಗೆ ಯಾವುದೇ ಗಣನೀಯ ಸಹಾಯವಾಗಿಲ್ಲ. ಸರ್ಕಾರವು ಆಕರ್ಷಕ ಹೆಡ್ಡಿಂಗ್ ಕೊಡುವುದರಲ್ಲಿ ಹೆಚ್ಚು ಆಸಕ್ತಿ ಹೊಂದಿತ್ತು. ಇದು ಅಸಹಾಯಕ ರಾಷ್ಟ್ರದ ಮೇಲೆ ನಕಲಿ ಪ್ರಚೋದನೆಯನ್ನು ಉಂಟುಮಾಡಿತು. ಬೇಡಿಕೆಯ ಭಾಗವನ್ನು ಬಿಡಿ, ಸರಬರಾಜು ಭಾಗವನ್ನು ಸಹ ಪರಿಹರಿಸಲು ಇದು ಅಸಮರ್ಪಕವಾಗಿದೆ ಎಂದು ಅವರು ಮೋದಿಯವರ 20 ಲಕ್ಷಗಳ ಪ್ಯಾಕೇಜ್ ಅನ್ನು ಟೀಕಿಸಿದ್ದಾರೆ.

ಪ್ರಧಾನಿಯವರು ಮಾತಿನ ವೈಖರಿ, ಚಾಣಾಕ್ಷತನಗಳ ಮೂಲಕ ಜವಾಬ್ದಾರಿಯಿಂದ ನುಣುಸಿಕೊಳ್ಳುವ ಪ್ರಾವಿಣ್ಯತೆ ಪಡೆದುಕೊಂಡಿದ್ದಾರೆ. ಆದರೆ ಮಾನವೀಯ ಮತ್ತು ಸಹಾನುಭೂತಿಯ ಆಡಳಿತ, ಪಾರದರ್ಶಕತೆ, ಹೊಣೆಗಾರಿಕೆ, ಅನುಭೂತಿ ಮಾತ್ರವೇ ಉಳಿಯುತ್ತವೆ. ಇವು ಮಾತ್ರ ರಾಷ್ಟ್ರದ ಇತಿಹಾಸದಲ್ಲಿ ನಾಯಕರಿಗೆ ಸುರಕ್ಷಿತ ಮತ್ತು ಗೌರವಾನ್ವಿತ ಸ್ಥಾನವನ್ನು ಗಳಿಸಬಹುದು. ಪ್ರಧಾನಮಂತ್ರಿಯವರು ಈಗಲಾದರೂ ಸೂಕ್ತ ಮಾರ್ಗದಲ್ಲಿ ಆಡಳಿತ ನಡೆಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಅವರ ವಿಡಿಯೋ ನೋಡಿ


ಇದನ್ನೂ ಓದಿ: ದಿ ಗಾರ್ಡಿಯನ್ ಸಂಪಾದಕೀಯ: ನಿಯಂತ್ರಣ ತಪ್ಪಿದ ಸಾಂಕ್ರಾಮಿಕ ನಿರ್ವಹಣೆಗೆ ಮೋದಿಯೇ ಕಾರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಭಾರತ್ ಪ್ರಯಾಣಿಕನಿಗೆ ಕೊಟ್ಟ ಮೊಸರಿನಲ್ಲಿ ಜೀವಂತ ಹುಳುಗಳು ಪತ್ತೆ; ಮಾರಾಟಗಾರನಿಗೆ ದಂಡ

ಪಾಟ್ನಾ-ಟಾಟಾನಗರ ನಡುವಿನ ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಕನೊಬ್ಬನಿಗೆ ನೀಡಿದ ಪ್ಯಾಕ್ ಮಾಡಿದ ಮೊಸರಿನಲ್ಲಿ ಹುಳುಗಳು ಕಂಡುಬಂದ ನಂತರ ರೈಲ್ವೆ ಇಲಾಖೆ ಮಾರಾಟಗಾರನ ನಡುವಿನ ಒಪ್ಪಂದವನ್ನು ರದ್ದುಗೊಳಿಸಿದ್ದಿ, ಕಂಪನಿಗೆ 50 ಲಕ್ಷ ರೂ. ದಂಡ...

ಮಹಾರಾಷ್ಟ್ರ: ಪ್ರತಿಷ್ಠಿತ ಶಾಲೆಯಲ್ಲಿ ಶಿಕ್ಷಕಿಗೆ ಲೈಂಗಿಕ ಕಿರುಕುಳ ಆರೋಪ: ಶಾಲಾ ಟ್ರಸ್ಟಿಯ ಮಗ ಬಂಧನ

ಮಹಾರಾಷ್ಟ್ರದ ಡೊಂಬಿವ್ಲಿಯ ಸಾಗವ್ ಪ್ರದೇಶದ ಪ್ರಸಿದ್ಧ ಶಾಲೆಯಲ್ಲಿ ಶಾಲಾ ಟ್ರಸ್ಟಿಯ ಮಗ ಶಿಕ್ಷಕಿಯೊಬ್ಬರಿಗೆ ಅಶ್ಲೀಲ ಸಂದೇಶಗಳು ಮತ್ತು ವಿಡಿಯೋಗಳನ್ನು ಕಳುಹಿಸಿದ್ದಾನೆ ಎಂದು ಆರೋಪಿಸಲಾಗಿದೆ. ಅದಲ್ಲದೇ ಶಿಕ್ಷಕಿಯನ್ನು ದೈಹಿಕ ಸಂಬಂಧಕ್ಕಾಗಿ ಪೀಡಿಸಿರುವ ಆರೋಪದ ಮೇಲೆ...

ಒಂದೂವರೆ ವರ್ಷದ ಪ್ಯಾಲೆಸ್ತೀನಿಯನ್ ಮಗುವಿಗೆ ಸಿಗರೇಟ್‌ನಿಂದ ಸುಟ್ಟು, ಮೊಳೆ ಚುಚ್ಚಿ ಚಿತ್ರಹಿಂಸೆ ಕೊಟ್ಟ ಇಸ್ರೇಲಿ ಸೈನಿಕರು

ಗಾಝಾದ ಪ್ಯಾಲೆಸ್ತೀನಿಯನ್ ವ್ಯಕ್ತಿಯೊಬ್ಬರಿಂದ ಬಲವಂತವಾಗಿ ತಪ್ಪೊಪ್ಪಿಗೆ ಪಡೆಯಲು, ಅವರ 18 ತಿಂಗಳ ಮಗುವಿಗೆ ಇಸ್ರೇಲಿ ಸೈನಿಕರು ತೀವ್ರ ಚಿತ್ರಹಿಂಸೆ ಕೊಟ್ಟಿರುವ ಬಗ್ಗೆ ಅಂತಾರಾಷ್ಟ್ರೀಯ ಮಾಧ್ಯಮಗಳು ಸೋಮವಾರ (ಮಾ.23) ವರದಿ ಮಾಡಿವೆ. ಮಾರ್ಚ್ 21ರಂದು...

ಇಂಧನ ಕೊರತೆ ವದಂತಿ; ಕಾಶ್ಮೀರದ ಪೆಟ್ರೋಲ್‌ ಬಂಕ್‌ಗಳಲ್ಲಿ ಖರೀದಿಗೆ ಮುಗಿಬಿದ್ದ ಜನ

ಪಶ್ಚಿಮ ಏಷ್ಯಾ ಸಂಘರ್ಷಕ್ಕೆ ಸಂಬಂಧಿಸಿದ ಇಂಧನ ಕೊರತೆಯ ವದಂತಿಗಳು ಹರಡುತ್ತಿದ್ದಂತೆ ಗುರುವಾರ ಕಾಶ್ಮೀರದಾದ್ಯಂತ ಪೆಟ್ರೋಲ್ ಪಂಪ್‌ಗಳು ಭಾರಿ ಜನದಟ್ಟಣೆಯಾಯಿತು; ಭೀತಿಯಿಂದ ಜನ ಖರೀದಿಗೆ ಮುಗಿಬಿದ್ದರು. ಇಂಧನ ಸರಬರಾಜು ಸಾಕಷ್ಟು ಲಭ್ಯವಿದೆ ಎಂದು ಅಧಿಕಾರಿಗಳು...

ರಾಮ ಮಂದಿರವನ್ನು ಎಂದಿಗೂ ವಿರೋಧಿಸಿಲ್ಲ; ಅದಕ್ಕಾಗಿ ದೇಣಿಗೆ ನೀಡಿದ್ದೇನೆ: ದಿಗ್ವಿಜಯ ಸಿಂಗ್

ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ, ಹಿರಿಯ ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ ಗುರುವಾರ ಅಯೋಧ್ಯೆಗೆ ತೆರಳಿ ರಾಮ ಜನ್ಮಭೂಮಿ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದರು. "ನಾನು ರಾಮಮಂದಿರ ನಿರ್ಮಾಣವನ್ನು ಎಂದಿಗೂ ವಿರೋಧಿಸಿಲ್ಲ, ದೇವಾಲಯ ಟ್ರಸ್ಟ್‌ಗೆ ದೇಣಿಗೆ...

ಮೀಸಲಾತಿ ವಿರೋಧಿ ಹೇಳಿಕೆ: ಖಾಸಗಿ ಆಸ್ಪತ್ರೆಯಲ್ಲಿ ಸೋನಿಯಾ ಗಾಂಧಿ ಚಿಕಿತ್ಸೆ ಬಗ್ಗೆ ಪ್ರಶ್ನಿಸಿದ ಬಿಜೆಪಿ ಸಂಸದನಿಗೆ ಕಾಂಗ್ರೆಸ್ ತಿರುಗೇಟು

ಗುರುವಾರ ಬಿಜೆಪಿ ಸಂಸದ ನಿಶಿಕಾಂತ್ ದುಬೆ ಅವರು ಹಿರಿಯ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರಿಗೆ ಖಾಸಗಿ ಆಸ್ಪತ್ರೆಯಲ್ಲಿ ನೀಡಲಾಗುತ್ತಿರುವ ಚಿಕಿತ್ಸೆಯನ್ನು ಪ್ರಶ್ನಿಸುವ ಮೂಲಕ ತಮ್ಮ ಮೀಸಲಾತಿ ವಿರೋಧಿ ಮನಸ್ಥಿತಿಯನ್ನು ಅನಾವರಣಗೊಳಿಸಿದ್ದಾರೆ. ಅವರ...

ಪಶ್ಚಿಮ ಬಂಗಾಳ ಎಸ್‌ಐಆರ್ : ಬಿಎಲ್‌ಒ ಸೇರಿದಂತೆ ಒಂದೇ ಬೂತ್‌ನ 340 ಮುಸ್ಲಿಂ ಮತದಾರರ ಹೆಸರು ಡಿಲೀಟ್!

ಪಶ್ಚಿಮ ಬಂಗಾಳದಲ್ಲಿ ಎಸ್‌ಐಆರ್ ಬಳಿಕ ಪ್ರಕಟಗೊಂಡ ಮತದಾರರ ಪೂರಕ ಪಟ್ಟಿಯಲ್ಲಿ, ಒಂದೇ ಬೂತ್‌ನ 340 ಜನರ ಹೆಸರುಗಳನ್ನು ತೆಗೆದು ಹಾಕಿರುವುದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಬಸಿರ್ಹತ್ ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ಈ ಬೆಳವಣಿಗೆ...

ಹಾರ್ಮುಜ್ ಮಾರ್ಗದ ಅನುಮತಿ: ಭಾರತ ನಮ್ಮ ‘ಸ್ನೇಹಪರ ರಾಷ್ಟ್ರ’ಗಳ ಸಾಲಿನಲ್ಲಿ ಸೇರಿದೆ: ಇರಾನ್ ವಿದೇಶಾಂಗ ಸಚಿವ 

ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಇತರರಿಗೆ ನಿರ್ಬಂಧಗಳು ಮುಂದುವರಿದಿದ್ದರೂ, ಭಾರತ ಸೇರಿದಂತೆ ಆಯ್ದ "ಸ್ನೇಹಪರ ರಾಷ್ಟ್ರಗಳ" ಹಡಗುಗಳಿಗೆ ಆಯಕಟ್ಟಿನ ನಿರ್ಣಾಯಕ ಹಾರ್ಮುಜ್ ಜಲಸಂಧಿಯ ಮೂಲಕ ಸಾಗಲು ಅನುಮತಿ ನೀಡುತ್ತಿರುವುದಾಗಿ ಇರಾನ್ ಹೇಳಿದೆ. ಚೀನಾ, ರಷ್ಯಾ,...

ʼಜಾತಿ ಗೋಡೆʼ ವಿರುದ್ಧ ಕ್ರಮ ಕೈಗೊಳ್ಳದ ಆಡಳಿತ : ಚುನಾವಣೆ ಬಹಿಷ್ಕರಿಸಿದ ತಮಿಳುನಾಡಿನ ಶಂಕರಲಿಂಗಪುರಂನ ದಲಿತರು

ಗೋಡೆ ನಿರ್ಮಿಸಿ ಚರ್ಚ್‌ಗೆ ಹೋಗುವ ದಾರಿಯನ್ನು ತಡೆದಿರುವ ಭೂ ವಿವಾದದ ಬಗ್ಗೆ ಜಿಲ್ಲಾಡಳಿತ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿರುವ ತಮಿಳುನಾಡಿನ ಶಂಕರಲಿಂಗಪುರಂ ಗ್ರಾಮದ ಪರಿಶಿಷ್ಟ ಜಾತಿಯ ನಿವಾಸಿಗಳು, ಮುಂಬರುವ ವಿಧಾನಸಭಾ ಚುನಾವಣೆಯನ್ನು...

ಬಂಗಾಳ ಚುನಾವಣೆ : ಆರ್‌ಜಿ ಕರ್ ಸಂತ್ರಸ್ತೆಯ ತಾಯಿಯನ್ನು ಕಣಕ್ಕಿಳಿಸಿದ ಬಿಜೆಪಿ

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಕೋಲ್ಕತ್ತಾದ ಆರ್‌ಜಿ ಕರ್‌ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಡೆದ ಅತ್ಯಾಚಾರ, ಕೊಲೆ ಪ್ರಕರಣದ ಸಂತ್ರಸ್ತೆಯ ತಾಯಿಯನ್ನು ಅಭ್ಯರ್ಥಿಯಾಗಿ ಬಿಜೆಪಿ ಕಣಕ್ಕಿಳಿಸಿದೆ. ಬುಧವಾರ (ಮಾ.25) ಬಿಜೆಪಿ...