Homeಮುಖಪುಟಪಿಎಂ ಕೇರ್ಸ್ ಫಂಡ್‌ನಿಂದ 551 ಆಮ್ಲಜನಕ ಉತ್ಪಾದನಾ ಘಟಕ ಸ್ಥಾಪನೆ

ಪಿಎಂ ಕೇರ್ಸ್ ಫಂಡ್‌ನಿಂದ 551 ಆಮ್ಲಜನಕ ಉತ್ಪಾದನಾ ಘಟಕ ಸ್ಥಾಪನೆ

- Advertisement -
- Advertisement -

ದೇಶದ ಕೊರೊನಾ ಸೋಂಕಿತರಲ್ಲಿ ಹೆಚ್ಚು ಸಾವಿರಾರು ಮಂದಿ ಆಕ್ಸಿಜನ್ ಪೂರೈಕೆ ಇಲ್ಲದೆ ಸಾವನ್ನಪ್ಪುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಪಿಎಂ ಕೇರ್ಸ್‌ನ ನೆರವಿನಲ್ಲಿ 551 ಆಮ್ಲಜನಕ ಉತ್ಪಾದನಾ ಘಟಕಗಳನ್ನು ಸ್ಥಾಪಿಸಲಾಗುವುದು ಎಂದು ಪ್ರಧಾನ ಮಂತ್ರಿ ಕಚೇರಿ ತಿಳಿಸಿದೆ.

ದೇಶದ ಹಲವು ಸ್ಥಳಗಳಲ್ಲಿ ಆಕ್ಸಿಜನ್ ಕೊರತೆಯ ವರದಿಗಳು ಹೆಚ್ಚಾಗುತ್ತಿರುವ ಕಾರಣ, ಜೀವ ಉಳಿಸುವ ಅನಿಲದ ಲಭ್ಯತೆಯನ್ನು ಹೆಚ್ಚಿಸಲು ದೇಶಾದ್ಯಂತ ಸಾರ್ವಜನಿಕ ಆರೋಗ್ಯ ಸೌಲಭ್ಯ ಘಟಕಗಳಲ್ಲಿ 500 ಕ್ಕೂ ಹೆಚ್ಚು ವೈದ್ಯಕೀಯ ಆಮ್ಲಜನಕ ಉತ್ಪಾದನಾ ಘಟಕಗಳನ್ನು ಸ್ಥಾಪಿಸಲಾಗುವುದು ಎಂದಿದೆ.

551 ಸ್ಥಾವರಗಳ ಸ್ಥಾಪನೆಗೆ ಹಣ ಹಂಚಿಕೆ ಮಾಡಲು ಪಿಎಂ ಕೇರ್ಸ್ ಫಂಡ್ ತಾತ್ವಿಕವಾಗಿ ಅನುಮೋದನೆ ನೀಡಿದೆ ಎಂದು ಪ್ರಧಾನಿ ಕಚೇರಿ (ಪಿಎಂಒ) ಭಾನುವಾರ ತಿಳಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಈ ಘಟಕಗಳನ್ನು ಆದಷ್ಟು ಬೇಗ ಕಾರ್ಯರೂಪಕ್ಕೆ ತರಬೇಕು ಎಂದು ನಿರ್ದೇಶಿಸಿದ್ದಾರೆ ಎಂದು ತಿಳಿಸಿದೆ.

ಇದನ್ನೂ ಓದಿ: ಕೊರೊನಾ ತಲ್ಲಣ: #ModiOxygenDo, भाषणबाज_मोदी, #oxygenbedslekkakodi ಟ್ವಿಟರ್‌ ಟ್ರೆಂಡ್

ಈ ಆಮ್ಲಜನಕ ಉತ್ಪಾದನಾ ಘಟಕಗಳು ಜಿಲ್ಲಾ ಮಟ್ಟದಲ್ಲಿ ಆಮ್ಲಜನಕದ ಲಭ್ಯತೆಗೆ ಪ್ರಮುಖ ಉತ್ತೇಜನ ನೀಡುತ್ತವೆ ಎನ್ನಲಾಗಿದೆ.

ಈ ಮೀಸಲಾದ ಸ್ಥಾವರಗಳನ್ನು ವಿವಿಧ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿನ ಜಿಲ್ಲಾ ಕೇಂದ್ರಗಳಲ್ಲಿ ಆಯ್ದ ಸರ್ಕಾರಿ ಆಸ್ಪತ್ರೆಗಳಲ್ಲಿ ಸ್ಥಾಪಿಸಲಾಗುವುದು. ಅವುಗಳ ಹೊಣೆಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಮೂಲಕ  ಮಾಡಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.

ಜಿಲ್ಲಾ ಕೇಂದ್ರದಲ್ಲಿರುವ ಸರ್ಕಾರಿ ಆಸ್ಪತ್ರೆಗಳಲ್ಲಿ ಪಿಎಸ್‌ಎ (Pressure Swing Adsorption) ಆಮ್ಲಜನಕ ಸ್ಥಾವರಗಳನ್ನು ಸ್ಥಾಪಿಸುವ ಹಿಂದಿನ ಮೂಲ ಉದ್ದೇಶವೆಂದರೆ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವುದಾಗಿದೆ. ಆಮ್ಲಜನಕ ಉತ್ಪಾದನಾ ಸೌಲಭ್ಯವು ಈ ಆಸ್ಪತ್ರೆಗಳು ಮತ್ತು ಜಿಲ್ಲೆಯ ದಿನನಿತ್ಯದ ವೈದ್ಯಕೀಯ ಆಮ್ಲಜನಕದ ಅಗತ್ಯಗಳನ್ನು ಪೂರೈಸುತ್ತದೆ.

ಇದರಿಂದ ಜಿಲ್ಲೆಗಳಲ್ಲಿನ ಸರ್ಕಾರಿ ಆಸ್ಪತ್ರೆಗಳು ಆಮ್ಲಜನಕದ ಪೂರೈಕೆಯಲ್ಲಿ ಹಠಾತ್ ಅಡೆತಡೆಗಳನ್ನು ಎದುರಿಸುವುದಿಲ್ಲ. ಜೊತೆಗೆ ಕೊರೊನಾ ಸೋಂಕಿತ ರೋಗಿಗಳು ಮತ್ತು ಆಮ್ಲಜನಕ ಅಗತ್ಯವಿರುವ ಇತರ ರೋಗಿಗಳಿಗೆ ಸಹಾಯವಾಗುತ್ತದೆ ಎಂದು ತಿಳಿಸಿದೆ.

ರಾಷ್ಟ್ರ ರಾಜಧಾನಿಯ ಹಲವಾರು ಆಸ್ಪತ್ರೆಗಳು ವೈದ್ಯಕೀಯ ಆಮ್ಲಜನಕದ ತೀವ್ರ ಕೊರತೆಯಿಂದ ಬಳಲುತ್ತಿವೆ. ಕೆಲವು ಆಸ್ಪತ್ರೆಗಳು ಅಲ್ಪಾವಧಿಯ ವ್ಯವಸ್ಥೆಗಳನ್ನು ಮಾಡುವಲ್ಲಿ ಯಶಸ್ವಿಯಾಗಿದ್ದರೂ, ಸೋಂಕಿತರ ತೀವ್ರ ಏರಿಕೆ ನೊಡುತ್ತಿದ್ದರೆ ಈ ಸಮಸ್ಯೆ ಇಲ್ಲಿಗೆ ಮುಗಿಯುವಂತಿಲ್ಲ ಎನ್ನಲಾಗಿದೆ.


ಇದನ್ನೂ ಓದಿ: ಸಾಂಕ್ರಾಮಿಕ ದುರಂತದ ಸಮಯದಲ್ಲಿ ಐಪಿಎಲ್ ಕವರೇಜ್ ಮಾಡುವುದಿಲ್ಲವೆಂದ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಗಿಲು ಬಡಾವಣೆ ಮನೆಗಳ ನೆಲಸಮ : ವರದಿ ಸಲ್ಲಿಸಲು ಹೈಕೋರ್ಟ್ ಸೂಚನೆ

ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ಎಷ್ಟು ಮನೆಗಳನ್ನು ನೆಲಸಮ ಮಾಡಲಾಗಿದೆ. ಇದರಿಂದಾಗಿ ಎಷ್ಟು ಕುಟುಂಬಗಳು ನಿರಾಶ್ರಿತರಾಗಿದ್ದಾರೆ ಮತ್ತು ಪುನರ್ವವಸತಿಗೆ ಏನೆಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂಬ ಮಾಹಿತಿಯನ್ನು ಒಳಗೊಂಡ ವರದಿ ಸಲ್ಲಿಸುವಂತೆ ಪ್ರಕರಣದಲ್ಲಿ ನ್ಯಾಯಾಲಯದ ನೆರವುಗಾರರಾಗಿರುವ...

ಫೈಝಾನ್ ಸಾವು ಪ್ರಕರಣ : ಆರು ವರ್ಷಗಳ ಬಳಿಕ ಇಬ್ಬರು ಪೊಲೀಸರಿಗೆ ಕೋರ್ಟ್ ಸಮನ್ಸ್

ಈಶಾನ್ಯ ದೆಹಲಿಯ 2020ರ ಗಲಭೆ ವೇಳೆ ಮುಸ್ಲಿಂ ಯುವಕ ಫೈಝಾನ್ ಸಾವಿಗೀಡಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪೊಲೀಸ್ ಸಿಬ್ಬಂದಿಗೆ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ ಎಂದು ವರದಿಯಾಗಿದೆ. ಸಾವನ್ನಪ್ಪುವ ಮುನ್ನ ಇತರ ನಾಲ್ಕೈದು ಯುವಕರೊಂದಿಗೆ...

ಗಂಗಾವತಿ : ವಿದೇಶಿ ಮಹಿಳೆ ಸೇರಿ ಇಬ್ಬರ ಅತ್ಯಾಚಾರ, ಓರ್ವನ ಕೊಲೆ ಪ್ರಕರಣ : ಮೂವರು ದೋಷಿಗಳು ಎಂದ ಕೋರ್ಟ್

ಕೊಪ್ಪಳದ ಗಂಗಾವತಿ ತಾಲೂಕಿನ ಸಾಣಾಪುರ ಕೆರೆ ಬಳಿ ಸ್ಥಳೀಯ ಹೋಮ್‌ ಸ್ಟೇ ಮಾಲಕಿ ಮತ್ತು ಇಸ್ರೇಲಿ ಯುವತಿ ಮೇಲೆ ಅತ್ಯಾಚಾರವೆಸಗಿ, ಅವರ ಜೊತೆಗಿದ್ದ ಯುವಕನನ್ನು ಕೊಲೆಗೈದ ಪ್ರಕರಣದ ಮೂವರು ಆರೋಪಿಗಳನ್ನು ಒಂದನೇ ಹೆಚ್ಚುವರಿ...

ರಾಜಸ್ಥಾನದ ಬುಂಡಿಯಲ್ಲಿ ಎರಡು ಬಾಲ್ಯ ವಿವಾಹಗಳು ಸ್ಥಗಿತ; ಬಾಲಕಿಯರ ದೂರಿನ ಮೇರೆಗೆ ಅಧಿಕಾರಿಗಳ ಮಧ್ಯಪ್ರವೇಶ

ಕೋಟಾ: ಫೆಬ್ರವರಿ 10ರಂದು ನಿಗದಿಯಾಗಿದ್ದ ತಮ್ಮ ವಿವಾಹಗಳನ್ನು ನಿಲ್ಲಿಸುವಂತೆ ರಾಜಸ್ಥಾನದ ಬುಂಡಿ ಜಿಲ್ಲೆಯ 12ನೇ ತರಗತಿಯಲ್ಲಿ ಓದುತ್ತಿರುವ ಇಬ್ಬರು ಹುಡುಗಿಯರು ಅಧಿಕಾರಿಗಳನ್ನು ಸಂಪರ್ಕಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. 17 ವರ್ಷದ ಬಾಲಕಿಯೊಬ್ಬಳು ತನ್ನ...

ಮುಂಬೈ ಮೇಯರ್ ಅಭ್ಯರ್ಥಿಯಾಗಿ ಬಿಜೆಪಿಯ ರಿತು ತಾವ್ಡೆ, ಉಪಮೇಯರ್ ಹುದ್ದೆಗೆ ಶಿವಸೇನೆಯ ಸಂಜಯ್ ಶಂಕರ್ ಘಾಡಿ ಹೆಸರು ಘೋಷಣೆ

ಮುಂಬೈ: ಭಾರತೀಯ ಜನತಾ ಪಕ್ಷ (ಬಿಜೆಪಿ) ಶನಿವಾರ ಮುಂಬೈ ಮೇಯರ್ ಚುನಾವಣೆಗೆ ಕಾರ್ಪೊರೇಟರ್ ರಿತು ತವಾಡೆ ಅವರನ್ನು ನಾಮನಿರ್ದೇಶನ ಮಾಡಿದ್ದರೆ, ಅದರ ಮಿತ್ರ ಪಕ್ಷ ಶಿವಸೇನೆ ಸಂಜಯ್ ಘಾಡಿ ಅವರನ್ನು ಉಪ ಮೇಯರ್...

ಪಾಕಿಸ್ತಾನದ ಶಿಯಾ ಮಸೀದಿಯಲ್ಲಿ ನಡೆದ ಆತ್ಮಾಹುತಿ ಬಾಂಬ್ ದಾಳಿ ಹೊಣೆ ಹೊತ್ತ ಐಸಿಸ್ 

ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ನ ಮಸೀದಿಯಲ್ಲಿ ನಡೆದ ಆತ್ಮಾಹುತಿ ಬಾಂಬ್ ಸ್ಫೋಟದ ಹೊಣೆಯನ್ನು ಇಸ್ಲಾಮಿಕ್ ಸ್ಟೇಟ್ ಎಂದು ಕರೆಯಲ್ಪಡುವ ಗುಂಪು ಹೊತ್ತುಕೊಂಡಿದೆ, ಈ ಬಾಂಬ್ ಸ್ಫೋಟದಲ್ಲಿ ಕನಿಷ್ಠ 31 ಜನರು ಸಾವನ್ನಪ್ಪಿದ್ದಾರೆ ಮತ್ತು 169...

ಸಮನ್ಸ್ ಚರ್ಚೆ ನಡುವೆ ‘ಸಹಯೋಗ್’ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಕುನಾಲ್ ಕಾಮ್ರಾ

ಮಹಾರಾಷ್ಟ್ರದ ಮಾಜಿ ಉಪಮುಖ್ಯಮಂತ್ರಿ ಹಾಗೂ ಹಾಲಿ ಉಪ ಮುಖ್ಯಮಂತ್ರಿ ಏಕನಾಥ್ ಶಿಂದೆ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಮಹಾರಾಷ್ಟ್ರ ವಿಧಾನಪರಿಷತ್ತಿನ ಹಕ್ಕುಚ್ಯುತಿ ಸಮಿತಿ ಹಾಸ್ಯ ಕಲಾವಿದ ಕುನಾಲ್ ಕಾಮ್ರಾ ಅವರಿಗೆ...

ದ್ವೇಷ ಭಾಷಣ-ನಕಲಿ ಸುದ್ದಿಗಳಿಗೆ ಕಡಿವಾಣ ಹಾಕಲು AI ತಂತ್ರಜ್ಞಾನ ಬಳಕೆಗೆ ಮುಂದಾದ ರಾಜ್ಯ ಸರ್ಕಾರ: 67.26 ಕೋಟಿ ರೂ ವೆಚ್ಚದಲ್ಲಿ ಸಾಫ್ಟ್‌ವೇರ್ ಅಭಿವೃದ್ಧಿ..!

ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳು (ತಡೆಗಟ್ಟುವಿಕೆ) ಮಸೂದೆ, 2025 ಬಾಕಿ ಉಳಿದಿರುವುದರಿಂದ, ದ್ವೇಷ ಭಾಷಣ, ನಕಲಿ ಸುದ್ದಿ ಮತ್ತು ಸಂಘಟಿತ ಆನ್‌ಲೈನ್ ತಪ್ಪು ಮಾಹಿತಿಯ ಹೆಚ್ಚಳವನ್ನು ನಿಭಾಯಿಸಲು ರಾಜ್ಯ ಸರ್ಕಾರ...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ : ಭಾರತದ ಮೇಲಿನ ಸುಂಕ ಶೇ.18ಕ್ಕೆ ಇಳಿಕೆ

ವ್ಯಾಪಾರ ಒಪ್ಪಂದಕ್ಕೆ ಸಂಬಂಧಪಟ್ಟಂತೆ ಭಾರತ ಮತ್ತು ಅಮೆರಿಕ ಶನಿವಾರ (ಫೆ.7) ಜಂಟಿ ಹೇಳಿಕೆ ಬಿಡುಗಡೆ ಮಾಡಿದ್ದು, ಮಧ್ಯಂತರ ವ್ಯಾಪಾರ ಒಪ್ಪಂದದ ಚೌಕಟ್ಟನ್ನು (Interim Trade Agreement Framework) ಅಂತಿಮಗೊಳಿಸಿರುವುದಾಗಿ ತಿಳಿಸಿವೆ. ಈ ಒಪ್ಪಂದದ ಅಡಿಯಲ್ಲಿ,...

‘ಮಹಿಳೆಯನ್ನು ಗರ್ಭಧಾರಣೆ ಪೂರ್ಣಗೊಳಿಸುವಂತೆ ಒತ್ತಾಯಿಸಲು ಸಾಧ್ಯವಿಲ್ಲ’: ಅಪ್ರಾಪ್ತೆಗೆ 30 ವಾರಗಳ ಗರ್ಭಧಾರಣೆ ಅಂತ್ಯಗೊಳಿಸಲು ಸುಪ್ರೀಂ ಅನುಮತಿ

ನವದೆಹಲಿ: 17 ವರ್ಷದ ಬಾಲಕಿಯ 30 ವಾರಗಳ ಗರ್ಭಧಾರಣೆಯನ್ನು ವೈದ್ಯಕೀಯವಾಗಿ ಮುಕ್ತಾಯಗೊಳಿಸುವಂತೆ ನಿರ್ದೇಶಿಸಿದ ಸುಪ್ರೀಂ ಕೋರ್ಟ್, ನ್ಯಾಯಾಲಯಗಳು ಮಹಿಳೆಯನ್ನು, ಅಪ್ರಾಪ್ತ ವಯಸ್ಕಳನ್ನು ಹೊರತುಪಡಿಸಿ, ಗರ್ಭಧಾರಣೆಯನ್ನು ಮುಂದುವರಿಸಲು ಒತ್ತಾಯಿಸಲು ಸಾಧ್ಯವಿಲ್ಲ ಎಂದು ಶುಕ್ರವಾರ ಹೇಳಿದೆ. ನ್ಯಾಯಮೂರ್ತಿಗಳಾದ...