Homeಕರ್ನಾಟಕಸಂಕೇಶ್ವರರ Some-ಶೋಧನೆಗಳು: ಉಚಿತ ರೇಷನ್ ಕೊಟ್ಟರೆ ಜನ ಕೆಲಸಕ್ಕೆ ಬರಲ್ಲ! ಆಮ್ಲಜನಕ ಸಮಸ್ಯೆ ಬಗೆಹರಿಸಲು ನಿಂಬೆರಸ!

ಸಂಕೇಶ್ವರರ Some-ಶೋಧನೆಗಳು: ಉಚಿತ ರೇಷನ್ ಕೊಟ್ಟರೆ ಜನ ಕೆಲಸಕ್ಕೆ ಬರಲ್ಲ! ಆಮ್ಲಜನಕ ಸಮಸ್ಯೆ ಬಗೆಹರಿಸಲು ನಿಂಬೆರಸ!

ಕೊರೋನಾ ತಡೆಗೆ ಕೊಬ್ಬರಿ ಎಣ್ಣೆ ಸಿದ್ಧಾಂತವನ್ನು ಅವರು ಪ್ರತಿಪಾದಿಸಿದ್ದಾರೆ.

- Advertisement -
- Advertisement -

‘ಹಂಗೆಲ್ಲ ಫ್ರೀಯಾಗಿ ರೇಷನ್ ಕೊಟ್ರೆ ಜನರು ಕೆಲಸಕ್ಕೆ ಬರಲ್ಲ. ಇದರಿಂದ ಕೈಗಾರಿಗೆ ಹೊಡೆತ ಬೀಳುತ್ತೆ’ ಎಂದು ಬಿಜೆಪಿ ನಾಯಕ, ವಿಆರ್‌ಎಲ್ ಮಾಲೀಕ ವಿಜಯ ಸಂಕೇಶ್ವರ ಇಂದು ಹುಬ್ಬಳ್ಳಿಯಲ್ಲಿ ಹೇಳಿದ್ದಾರೆ ಎಂದು ಪ್ರಜಾವಾಣಿ ವರದಿ ಮಾಡಿದೆ.

ಇದನ್ನು ಹೇಳಲೆಂದೇ ಸುದ್ದಿಗೋಷ್ಠಿ ಕರೆದಿದ್ದ ಅವರು, ‘ಕೇಂದ್ರ ಸರ್ಕಾರ ಮತ್ತೆ ಉಚಿತ ಪಡಿತರ ಕೊಡಲು ಹೊರಟಿದೆ. ಇದು ಸರಿಯಲ್ಲ. ಇದು ದೇಶಕ್ಕೇ ಗಂಡಾಂತರದ ವಿಷಯವಾಗಿದ್ದು, ಕೈಗಾರಿಕಾ ಉತ್ಪಾದನೆ ಕುಂಠಿತಗೊಳ್ಳುತ್ತದೆ, ಸರ್ಕಾರದ ಈ ನಡೆ ಸರಿಯಲ್ಲ; ಎಂದು ಹೇಳಿದ್ದಾರೆ.

‘ಹೋದ ವರ್ಷ ಲಾಕ್‌ಡೌನ್ ನಂತರವೂ ಮೂರು ತಿಂಗಳು ಕೇಂದ್ರ ಸರ್ಕಾರ ಉಚಿತ ಪಡಿತರ ನೀಡಿತ್ತು. ಇದರಿಂದ ಜನ ತಮ್ಮ ಕೆಲಸದ ಸ್ಥಳ ತೊರೆದು ಊರು ಸೇರುತ್ತಾರೆ. ಕೆಲಸಕ್ಕೆ ಬರುವುದಿಲ್ಲ. ಇದು ಕಾರ್ಖಾನೆ-ಕೈಗಾರಿಕೆ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ. ಈಗಲೂ ಎರಡನೆ ಅಲೆ ಸಂದರ್ಭದಲ್ಲಿ ಮತ್ತೆ ಉಚಿತ ಪಡಿತರ ಕೊಡಲು ಹೊರಟಿದ್ದಾರೆ. ಇದರಿಂದ ಜನರು ಮನೆಯಲ್ಲೇ ಉಳಿದು ದುಡಿಯಲು ಬರುವುದಿಲ್ಲ. ಹೀಗಾಗಿ ಇದು ಕೈಗಾರಿಕೆಗಳ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಕೇಂದ್ರ ಸರ್ಕಾರ ಪದೇ ಪದೇ ತಪ್ಪು ಮಾಡುತ್ತಿದೆ ’ ಎಂದು ಸಂಕೇಶ್ವರ್ ಅಭಿಪ್ರಾಯಪಟ್ಟರು.

‘ನಮ್ಮಂತಹ ವಿಚಿತ್ರ ದೇಶದಲ್ಲಿ ಹೀಗೆ ಉಚಿತ ಪಡಿತರ ನೀಡುವುದು ಸರಿಯಲ್ಲ. ಜನ ಕೆಲಸಕ್ಕೇ ಬರದಂತಾಗುತ್ತದೆ’ ಎಂದು ಅವರು ಹೇಳಿದರು.

ಆಮ್ಲಜನಕಕ್ಕೆ ನಿಂಬೆರಸ ಪರ್ಯಾಯ?

ಇದೇ ಸಂದರ್ಭದಲ್ಲಿ ಅವರು ಸದ್ಯ ತಲೆದೋರಿರುವ ಆಮ್ಲಜನಕ ಬಿಕ್ಕಟ್ಟಿಗೆ ತಮ್ಮದೇ ಆದ ಪರಿಹಾರವನ್ನೂ ಸೂಚಿಸಿದರು. ‘ಉಸಿರಾಟ ಸಮಸ್ಯೆ ಇರುವವರು, ಆಮ್ಲಜನಕ ಮಟ್ಟ ಕಡಿಮೆಯಾದವರು ಮೂಗಿನೊಳಗೆ ನಿಂಬೆರಸ ಹಾಕಿಕೊಂಡರೆ ಅರ್ಧ ಗಂಟೆಯಲ್ಲಿ ಸರಳವಾಗುತ್ತದೆ. ಇದರಿಂದ ರಕ್ತದಲ್ಲಿನ ಆಮ್ಲಜನಕ ವೃದ್ಧಿಯಾಗುತ್ತದೆ’ ಎಂದು ತಿಳಿಸಿದರು.
‘ಈ ವಿಧಾನ ಅನುಸರಿಸಿದರೆ ಶೇ. 80ರಷ್ಟು ಆಮ್ಲಜನಕ ಹಾಸಿಗೆಗಳು ಖಾಲಿಯಾಗುತ್ತವೆ’ ಎಂದು ಹೇಳಿದರು.

ಕೊರೋನಾ ತಡೆಗೆ ಕೊಬ್ಬರಿ ಎಣ್ಣೆ

‘ಡಾ.ಬಿ.ಎಂ ಹೆಗಡೆ ಅವರು ಹೇಳಿರುವಂತೆ, ಮುಖ ಮತ್ತು ಮೂಗಿನ ಹೊಳ್ಳೆಗಳಿಗೆ ಕೊಬ್ಬರಿ ಎಣ್ಣೆ ಸವರಿಕೊಂಡರೆ ವೈರಸ್ ದೇಹ ಪ್ರವೇಶಿಸದಂತೆ ತಡೆಯಬಹುದು. ಬಿಸಿ ಅವಿ ಉಸಿರಾಡಿದರೆ ಕೋವಿಡ್‌ನಿಂದ ದೂರ ಉಳಿಯಬಹುದು. ನಾನು ಇದನ್ನು ಕಟ್ಟುನಿಟ್ಟಾಗಿ ಪಾಲಿಸುತ್ತಿದ್ದೇನೆ. ಮೊದಲಿಗಿಂತ ಹೆಚ್ಚು ಪ್ರಯಾಣ ಮಾಡಿದರೂ ಯಾವುದೇ ಸೋಂಕು ತಗುಲಿಲ್ಲ’ ಎಂದು ಸಂಕೇಶ್ವರ್ ತಿಳಿಸಿದರು.

ಸರ್ಕಾರ ಎರಡು ದಿನ ವಿಳಂಬವಾದರೂ ಕೊವಿಡ್ ನಿಯಂತ್ರಣಕ್ಕೆ ಉತ್ತಮ ನಿರ್ಧಾರಗಳನ್ನು ತೆಗೆದುಕೊಂಡಿದೆ. ಇಂತಹ ಬೃಹತ್ ದೇಶದಲ್ಲಿ ಇಷ್ಟು ಮಾಡಿರುವುದೇ ದೊಡ್ಡ ಸಾಧನೆ ಎಂದು ಕೇಂದ್ರ ಸರ್ಕಾರವನ್ನು ಪ್ರಶಂಸಿದರು.


ಇದನ್ನೂ ಓದಿ: ಈ ಆರೋಗ್ಯ ಬಿಕ್ಕಟ್ಟಿಗೆ ಮೋದಿ ಸರ್ಕಾರದ ಅಸಮರ್ಥತೆಯೇ ಕಾರಣ: ಡಾ. ಪರಕಾಲ ಪ್ರಭಾಕರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಮ ಮಂದಿರವನ್ನು ಎಂದಿಗೂ ವಿರೋಧಿಸಿಲ್ಲ; ಅದಕ್ಕಾಗಿ ದೇಣಿಗೆ ನೀಡಿದ್ದೇನೆ: ದಿಗ್ವಿಜಯ ಸಿಂಗ್

ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ, ಹಿರಿಯ ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ ಗುರುವಾರ ಅಯೋಧ್ಯೆಗೆ ತೆರಳಿ ರಾಮ ಜನ್ಮಭೂಮಿ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದರು. "ನಾನು ರಾಮಮಂದಿರ ನಿರ್ಮಾಣವನ್ನು ಎಂದಿಗೂ ವಿರೋಧಿಸಿಲ್ಲ, ದೇವಾಲಯ ಟ್ರಸ್ಟ್‌ಗೆ ದೇಣಿಗೆ...

ಮೀಸಲಾತಿ ವಿರೋಧಿ ಹೇಳಿಕೆ: ಖಾಸಗಿ ಆಸ್ಪತ್ರೆಯಲ್ಲಿ ಸೋನಿಯಾ ಗಾಂಧಿ ಚಿಕಿತ್ಸೆ ಬಗ್ಗೆ ಪ್ರಶ್ನಿಸಿದ ಬಿಜೆಪಿ ಸಂಸದನಿಗೆ ಕಾಂಗ್ರೆಸ್ ತಿರುಗೇಟು

ಗುರುವಾರ ಬಿಜೆಪಿ ಸಂಸದ ನಿಶಿಕಾಂತ್ ದುಬೆ ಅವರು ಹಿರಿಯ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರಿಗೆ ಖಾಸಗಿ ಆಸ್ಪತ್ರೆಯಲ್ಲಿ ನೀಡಲಾಗುತ್ತಿರುವ ಚಿಕಿತ್ಸೆಯನ್ನು ಪ್ರಶ್ನಿಸುವ ಮೂಲಕ ತಮ್ಮ ಮೀಸಲಾತಿ ವಿರೋಧಿ ಮನಸ್ಥಿತಿಯನ್ನು ಅನಾವರಣಗೊಳಿಸಿದ್ದಾರೆ. ಅವರ...

ಪಶ್ಚಿಮ ಬಂಗಾಳ ಎಸ್‌ಐಆರ್ : ಬಿಎಲ್‌ಒ ಸೇರಿದಂತೆ ಒಂದೇ ಬೂತ್‌ನ 340 ಮುಸ್ಲಿಂ ಮತದಾರರ ಹೆಸರು ಡಿಲೀಟ್!

ಪಶ್ಚಿಮ ಬಂಗಾಳದಲ್ಲಿ ಎಸ್‌ಐಆರ್ ಬಳಿಕ ಪ್ರಕಟಗೊಂಡ ಮತದಾರರ ಪೂರಕ ಪಟ್ಟಿಯಲ್ಲಿ, ಒಂದೇ ಬೂತ್‌ನ 340 ಜನರ ಹೆಸರುಗಳನ್ನು ತೆಗೆದು ಹಾಕಿರುವುದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಬಸಿರ್ಹತ್ ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ಈ ಬೆಳವಣಿಗೆ...

ಹಾರ್ಮುಜ್ ಮಾರ್ಗದ ಅನುಮತಿ: ಭಾರತ ನಮ್ಮ ‘ಸ್ನೇಹಪರ ರಾಷ್ಟ್ರ’ಗಳ ಸಾಲಿನಲ್ಲಿ ಸೇರಿದೆ: ಇರಾನ್ ವಿದೇಶಾಂಗ ಸಚಿವ 

ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಇತರರಿಗೆ ನಿರ್ಬಂಧಗಳು ಮುಂದುವರಿದಿದ್ದರೂ, ಭಾರತ ಸೇರಿದಂತೆ ಆಯ್ದ "ಸ್ನೇಹಪರ ರಾಷ್ಟ್ರಗಳ" ಹಡಗುಗಳಿಗೆ ಆಯಕಟ್ಟಿನ ನಿರ್ಣಾಯಕ ಹಾರ್ಮುಜ್ ಜಲಸಂಧಿಯ ಮೂಲಕ ಸಾಗಲು ಅನುಮತಿ ನೀಡುತ್ತಿರುವುದಾಗಿ ಇರಾನ್ ಹೇಳಿದೆ. ಚೀನಾ, ರಷ್ಯಾ,...

ʼಜಾತಿ ಗೋಡೆʼ ವಿರುದ್ಧ ಕ್ರಮ ಕೈಗೊಳ್ಳದ ಆಡಳಿತ : ಚುನಾವಣೆ ಬಹಿಷ್ಕರಿಸಿದ ತಮಿಳುನಾಡಿನ ಶಂಕರಲಿಂಗಪುರಂನ ದಲಿತರು

ಗೋಡೆ ನಿರ್ಮಿಸಿ ಚರ್ಚ್‌ಗೆ ಹೋಗುವ ದಾರಿಯನ್ನು ತಡೆದಿರುವ ಭೂ ವಿವಾದದ ಬಗ್ಗೆ ಜಿಲ್ಲಾಡಳಿತ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿರುವ ತಮಿಳುನಾಡಿನ ಶಂಕರಲಿಂಗಪುರಂ ಗ್ರಾಮದ ಪರಿಶಿಷ್ಟ ಜಾತಿಯ ನಿವಾಸಿಗಳು, ಮುಂಬರುವ ವಿಧಾನಸಭಾ ಚುನಾವಣೆಯನ್ನು...

ಬಂಗಾಳ ಚುನಾವಣೆ : ಆರ್‌ಜಿ ಕರ್ ಸಂತ್ರಸ್ತೆಯ ತಾಯಿಯನ್ನು ಕಣಕ್ಕಿಳಿಸಿದ ಬಿಜೆಪಿ

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಕೋಲ್ಕತ್ತಾದ ಆರ್‌ಜಿ ಕರ್‌ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಡೆದ ಅತ್ಯಾಚಾರ, ಕೊಲೆ ಪ್ರಕರಣದ ಸಂತ್ರಸ್ತೆಯ ತಾಯಿಯನ್ನು ಅಭ್ಯರ್ಥಿಯಾಗಿ ಬಿಜೆಪಿ ಕಣಕ್ಕಿಳಿಸಿದೆ. ಬುಧವಾರ (ಮಾ.25) ಬಿಜೆಪಿ...

ಆಂಧ್ರ ಪ್ರದೇಶ | ಟಿಪ್ಪರ್‌ಗೆ ಡಿಕ್ಕಿಯಾಗಿ ಹೊತ್ತಿ ಉರಿದ ಬಸ್ : 14 ಮಂದಿ ಸಜೀವ ದಹನ

ಖಾಸಗಿ ಬಸ್ ಮತ್ತು ಟಿಪ್ಪರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬೆಂಕಿ ಹೊತ್ತಿಕೊಂಡ ಪರಿಣಾಮ 14 ಜನರು ಸಜೀವ ದಹನವಾದ ಘಟನೆ ಆಂಧ್ರ ಪ್ರದೇಶದ ಮಾರ್ಕಪುರಂ ಜಿಲ್ಲೆಯಲ್ಲಿ ಗುರುವಾರ (ಮಾ.26) ಸಂಭವಿಸಿದೆ ಎಂದು...

ಒಳಮೀಸಲಾತಿ ಜಾರಿ ಮಾಡದಿದ್ದರೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ವಿರುದ್ಧ ಮತ: ಮಾದಿಗ ಸಮುದಾಯದ ನಿರ್ಣಯ

ಮಾ.27 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯಲಿರುವ ವಿಶೇಷ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಾದಿಗ ಸಮುದಾಯಕ್ಕೆ ಸರ್ಕಾರಿ ನೇಮಕಾತಿಯಲ್ಲಿ ಶೇ.6 ಒಳಮೀಸಲಾತಿಯನ್ನು ಹಂಚಿಕೆ ಮಾಡದಿದ್ದರೆ ದಾವಣಗೆರೆ ಹಾಗೂ ಬಾಗಲಕೋಟೆ ಉಪ ಚುನಾವಣೆಯಲ್ಲಿ...

ಗುರುಗ್ರಾಮ ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣ: ಮೂವರು ಮಹಿಳಾ ಐಪಿಎಸ್ ಒಳಗೊಂಡ ವಿಶೇಷ ತನಿಖಾ ತಂಡ ರಚಿಸಿದ ಸುಪ್ರೀಂ

ಗುರುಗ್ರಾಮ ಅಪ್ರಾಪ್ತ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣದ ತನಿಖೆಗಾಗಿ ಸುಪ್ರೀಂ ಕೋರ್ಟ್ ಬುಧವಾರ ಮೂವರು ಮಹಿಳಾ ಐಪಿಎಸ್ ಅಧಿಕಾರಿಗಳನ್ನು ಒಳಗೊಂಡ ವಿಶೇಷ ತನಿಖಾ ತಂಡವನ್ನು ರಚಿಸಿದೆ.  ಸಿಜೆಐ ಸೂರ್ಯ ಕಾಂತ್ ನೇತೃತ್ವದ ಮೂವರು ನ್ಯಾಯಾಧೀಶರ...

ಗೋವಾ | 25 ರಿಂದ 30 ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ : ಬಿಜೆಪಿ ಕೌನ್ಸಿಲರ್ ಮಗನ ಬಂಧನ

ಗೋವಾದ ಕುರ್ಚೋರೆಮ್ ಪುರಸಭೆಯ ಬಿಜೆಪಿ ಕೌನ್ಸಿಲರ್ ಸುಶಾಂತ್ ನಾಯ್ಕ್ ಅವರ ಮಗ ಸೋಹಮ್ ನಾಯ್ಕ್ (20) ಎಂಬಾತನನ್ನು ಸುಮಾರು 25ರಿಂದ 30 ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ದಕ್ಷಿಣ ಗೋವಾ ಪೊಲೀಸರು ಬಂಧಿಸಿದ್ದಾರೆ.  ಆರೋಪಿ...