Homeಕರ್ನಾಟಕಸಂಕೇಶ್ವರರ Some-ಶೋಧನೆಗಳು: ಉಚಿತ ರೇಷನ್ ಕೊಟ್ಟರೆ ಜನ ಕೆಲಸಕ್ಕೆ ಬರಲ್ಲ! ಆಮ್ಲಜನಕ ಸಮಸ್ಯೆ ಬಗೆಹರಿಸಲು ನಿಂಬೆರಸ!

ಸಂಕೇಶ್ವರರ Some-ಶೋಧನೆಗಳು: ಉಚಿತ ರೇಷನ್ ಕೊಟ್ಟರೆ ಜನ ಕೆಲಸಕ್ಕೆ ಬರಲ್ಲ! ಆಮ್ಲಜನಕ ಸಮಸ್ಯೆ ಬಗೆಹರಿಸಲು ನಿಂಬೆರಸ!

ಕೊರೋನಾ ತಡೆಗೆ ಕೊಬ್ಬರಿ ಎಣ್ಣೆ ಸಿದ್ಧಾಂತವನ್ನು ಅವರು ಪ್ರತಿಪಾದಿಸಿದ್ದಾರೆ.

- Advertisement -
- Advertisement -

‘ಹಂಗೆಲ್ಲ ಫ್ರೀಯಾಗಿ ರೇಷನ್ ಕೊಟ್ರೆ ಜನರು ಕೆಲಸಕ್ಕೆ ಬರಲ್ಲ. ಇದರಿಂದ ಕೈಗಾರಿಗೆ ಹೊಡೆತ ಬೀಳುತ್ತೆ’ ಎಂದು ಬಿಜೆಪಿ ನಾಯಕ, ವಿಆರ್‌ಎಲ್ ಮಾಲೀಕ ವಿಜಯ ಸಂಕೇಶ್ವರ ಇಂದು ಹುಬ್ಬಳ್ಳಿಯಲ್ಲಿ ಹೇಳಿದ್ದಾರೆ ಎಂದು ಪ್ರಜಾವಾಣಿ ವರದಿ ಮಾಡಿದೆ.

ಇದನ್ನು ಹೇಳಲೆಂದೇ ಸುದ್ದಿಗೋಷ್ಠಿ ಕರೆದಿದ್ದ ಅವರು, ‘ಕೇಂದ್ರ ಸರ್ಕಾರ ಮತ್ತೆ ಉಚಿತ ಪಡಿತರ ಕೊಡಲು ಹೊರಟಿದೆ. ಇದು ಸರಿಯಲ್ಲ. ಇದು ದೇಶಕ್ಕೇ ಗಂಡಾಂತರದ ವಿಷಯವಾಗಿದ್ದು, ಕೈಗಾರಿಕಾ ಉತ್ಪಾದನೆ ಕುಂಠಿತಗೊಳ್ಳುತ್ತದೆ, ಸರ್ಕಾರದ ಈ ನಡೆ ಸರಿಯಲ್ಲ; ಎಂದು ಹೇಳಿದ್ದಾರೆ.

‘ಹೋದ ವರ್ಷ ಲಾಕ್‌ಡೌನ್ ನಂತರವೂ ಮೂರು ತಿಂಗಳು ಕೇಂದ್ರ ಸರ್ಕಾರ ಉಚಿತ ಪಡಿತರ ನೀಡಿತ್ತು. ಇದರಿಂದ ಜನ ತಮ್ಮ ಕೆಲಸದ ಸ್ಥಳ ತೊರೆದು ಊರು ಸೇರುತ್ತಾರೆ. ಕೆಲಸಕ್ಕೆ ಬರುವುದಿಲ್ಲ. ಇದು ಕಾರ್ಖಾನೆ-ಕೈಗಾರಿಕೆ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ. ಈಗಲೂ ಎರಡನೆ ಅಲೆ ಸಂದರ್ಭದಲ್ಲಿ ಮತ್ತೆ ಉಚಿತ ಪಡಿತರ ಕೊಡಲು ಹೊರಟಿದ್ದಾರೆ. ಇದರಿಂದ ಜನರು ಮನೆಯಲ್ಲೇ ಉಳಿದು ದುಡಿಯಲು ಬರುವುದಿಲ್ಲ. ಹೀಗಾಗಿ ಇದು ಕೈಗಾರಿಕೆಗಳ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಕೇಂದ್ರ ಸರ್ಕಾರ ಪದೇ ಪದೇ ತಪ್ಪು ಮಾಡುತ್ತಿದೆ ’ ಎಂದು ಸಂಕೇಶ್ವರ್ ಅಭಿಪ್ರಾಯಪಟ್ಟರು.

‘ನಮ್ಮಂತಹ ವಿಚಿತ್ರ ದೇಶದಲ್ಲಿ ಹೀಗೆ ಉಚಿತ ಪಡಿತರ ನೀಡುವುದು ಸರಿಯಲ್ಲ. ಜನ ಕೆಲಸಕ್ಕೇ ಬರದಂತಾಗುತ್ತದೆ’ ಎಂದು ಅವರು ಹೇಳಿದರು.

ಆಮ್ಲಜನಕಕ್ಕೆ ನಿಂಬೆರಸ ಪರ್ಯಾಯ?

ಇದೇ ಸಂದರ್ಭದಲ್ಲಿ ಅವರು ಸದ್ಯ ತಲೆದೋರಿರುವ ಆಮ್ಲಜನಕ ಬಿಕ್ಕಟ್ಟಿಗೆ ತಮ್ಮದೇ ಆದ ಪರಿಹಾರವನ್ನೂ ಸೂಚಿಸಿದರು. ‘ಉಸಿರಾಟ ಸಮಸ್ಯೆ ಇರುವವರು, ಆಮ್ಲಜನಕ ಮಟ್ಟ ಕಡಿಮೆಯಾದವರು ಮೂಗಿನೊಳಗೆ ನಿಂಬೆರಸ ಹಾಕಿಕೊಂಡರೆ ಅರ್ಧ ಗಂಟೆಯಲ್ಲಿ ಸರಳವಾಗುತ್ತದೆ. ಇದರಿಂದ ರಕ್ತದಲ್ಲಿನ ಆಮ್ಲಜನಕ ವೃದ್ಧಿಯಾಗುತ್ತದೆ’ ಎಂದು ತಿಳಿಸಿದರು.
‘ಈ ವಿಧಾನ ಅನುಸರಿಸಿದರೆ ಶೇ. 80ರಷ್ಟು ಆಮ್ಲಜನಕ ಹಾಸಿಗೆಗಳು ಖಾಲಿಯಾಗುತ್ತವೆ’ ಎಂದು ಹೇಳಿದರು.

ಕೊರೋನಾ ತಡೆಗೆ ಕೊಬ್ಬರಿ ಎಣ್ಣೆ

‘ಡಾ.ಬಿ.ಎಂ ಹೆಗಡೆ ಅವರು ಹೇಳಿರುವಂತೆ, ಮುಖ ಮತ್ತು ಮೂಗಿನ ಹೊಳ್ಳೆಗಳಿಗೆ ಕೊಬ್ಬರಿ ಎಣ್ಣೆ ಸವರಿಕೊಂಡರೆ ವೈರಸ್ ದೇಹ ಪ್ರವೇಶಿಸದಂತೆ ತಡೆಯಬಹುದು. ಬಿಸಿ ಅವಿ ಉಸಿರಾಡಿದರೆ ಕೋವಿಡ್‌ನಿಂದ ದೂರ ಉಳಿಯಬಹುದು. ನಾನು ಇದನ್ನು ಕಟ್ಟುನಿಟ್ಟಾಗಿ ಪಾಲಿಸುತ್ತಿದ್ದೇನೆ. ಮೊದಲಿಗಿಂತ ಹೆಚ್ಚು ಪ್ರಯಾಣ ಮಾಡಿದರೂ ಯಾವುದೇ ಸೋಂಕು ತಗುಲಿಲ್ಲ’ ಎಂದು ಸಂಕೇಶ್ವರ್ ತಿಳಿಸಿದರು.

ಸರ್ಕಾರ ಎರಡು ದಿನ ವಿಳಂಬವಾದರೂ ಕೊವಿಡ್ ನಿಯಂತ್ರಣಕ್ಕೆ ಉತ್ತಮ ನಿರ್ಧಾರಗಳನ್ನು ತೆಗೆದುಕೊಂಡಿದೆ. ಇಂತಹ ಬೃಹತ್ ದೇಶದಲ್ಲಿ ಇಷ್ಟು ಮಾಡಿರುವುದೇ ದೊಡ್ಡ ಸಾಧನೆ ಎಂದು ಕೇಂದ್ರ ಸರ್ಕಾರವನ್ನು ಪ್ರಶಂಸಿದರು.


ಇದನ್ನೂ ಓದಿ: ಈ ಆರೋಗ್ಯ ಬಿಕ್ಕಟ್ಟಿಗೆ ಮೋದಿ ಸರ್ಕಾರದ ಅಸಮರ್ಥತೆಯೇ ಕಾರಣ: ಡಾ. ಪರಕಾಲ ಪ್ರಭಾಕರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...