Homeಕರ್ನಾಟಕಸಂಕೇಶ್ವರರ Some-ಶೋಧನೆಗಳು: ಉಚಿತ ರೇಷನ್ ಕೊಟ್ಟರೆ ಜನ ಕೆಲಸಕ್ಕೆ ಬರಲ್ಲ! ಆಮ್ಲಜನಕ ಸಮಸ್ಯೆ ಬಗೆಹರಿಸಲು ನಿಂಬೆರಸ!

ಸಂಕೇಶ್ವರರ Some-ಶೋಧನೆಗಳು: ಉಚಿತ ರೇಷನ್ ಕೊಟ್ಟರೆ ಜನ ಕೆಲಸಕ್ಕೆ ಬರಲ್ಲ! ಆಮ್ಲಜನಕ ಸಮಸ್ಯೆ ಬಗೆಹರಿಸಲು ನಿಂಬೆರಸ!

ಕೊರೋನಾ ತಡೆಗೆ ಕೊಬ್ಬರಿ ಎಣ್ಣೆ ಸಿದ್ಧಾಂತವನ್ನು ಅವರು ಪ್ರತಿಪಾದಿಸಿದ್ದಾರೆ.

- Advertisement -
- Advertisement -

‘ಹಂಗೆಲ್ಲ ಫ್ರೀಯಾಗಿ ರೇಷನ್ ಕೊಟ್ರೆ ಜನರು ಕೆಲಸಕ್ಕೆ ಬರಲ್ಲ. ಇದರಿಂದ ಕೈಗಾರಿಗೆ ಹೊಡೆತ ಬೀಳುತ್ತೆ’ ಎಂದು ಬಿಜೆಪಿ ನಾಯಕ, ವಿಆರ್‌ಎಲ್ ಮಾಲೀಕ ವಿಜಯ ಸಂಕೇಶ್ವರ ಇಂದು ಹುಬ್ಬಳ್ಳಿಯಲ್ಲಿ ಹೇಳಿದ್ದಾರೆ ಎಂದು ಪ್ರಜಾವಾಣಿ ವರದಿ ಮಾಡಿದೆ.

ಇದನ್ನು ಹೇಳಲೆಂದೇ ಸುದ್ದಿಗೋಷ್ಠಿ ಕರೆದಿದ್ದ ಅವರು, ‘ಕೇಂದ್ರ ಸರ್ಕಾರ ಮತ್ತೆ ಉಚಿತ ಪಡಿತರ ಕೊಡಲು ಹೊರಟಿದೆ. ಇದು ಸರಿಯಲ್ಲ. ಇದು ದೇಶಕ್ಕೇ ಗಂಡಾಂತರದ ವಿಷಯವಾಗಿದ್ದು, ಕೈಗಾರಿಕಾ ಉತ್ಪಾದನೆ ಕುಂಠಿತಗೊಳ್ಳುತ್ತದೆ, ಸರ್ಕಾರದ ಈ ನಡೆ ಸರಿಯಲ್ಲ; ಎಂದು ಹೇಳಿದ್ದಾರೆ.

‘ಹೋದ ವರ್ಷ ಲಾಕ್‌ಡೌನ್ ನಂತರವೂ ಮೂರು ತಿಂಗಳು ಕೇಂದ್ರ ಸರ್ಕಾರ ಉಚಿತ ಪಡಿತರ ನೀಡಿತ್ತು. ಇದರಿಂದ ಜನ ತಮ್ಮ ಕೆಲಸದ ಸ್ಥಳ ತೊರೆದು ಊರು ಸೇರುತ್ತಾರೆ. ಕೆಲಸಕ್ಕೆ ಬರುವುದಿಲ್ಲ. ಇದು ಕಾರ್ಖಾನೆ-ಕೈಗಾರಿಕೆ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ. ಈಗಲೂ ಎರಡನೆ ಅಲೆ ಸಂದರ್ಭದಲ್ಲಿ ಮತ್ತೆ ಉಚಿತ ಪಡಿತರ ಕೊಡಲು ಹೊರಟಿದ್ದಾರೆ. ಇದರಿಂದ ಜನರು ಮನೆಯಲ್ಲೇ ಉಳಿದು ದುಡಿಯಲು ಬರುವುದಿಲ್ಲ. ಹೀಗಾಗಿ ಇದು ಕೈಗಾರಿಕೆಗಳ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಕೇಂದ್ರ ಸರ್ಕಾರ ಪದೇ ಪದೇ ತಪ್ಪು ಮಾಡುತ್ತಿದೆ ’ ಎಂದು ಸಂಕೇಶ್ವರ್ ಅಭಿಪ್ರಾಯಪಟ್ಟರು.

‘ನಮ್ಮಂತಹ ವಿಚಿತ್ರ ದೇಶದಲ್ಲಿ ಹೀಗೆ ಉಚಿತ ಪಡಿತರ ನೀಡುವುದು ಸರಿಯಲ್ಲ. ಜನ ಕೆಲಸಕ್ಕೇ ಬರದಂತಾಗುತ್ತದೆ’ ಎಂದು ಅವರು ಹೇಳಿದರು.

ಆಮ್ಲಜನಕಕ್ಕೆ ನಿಂಬೆರಸ ಪರ್ಯಾಯ?

ಇದೇ ಸಂದರ್ಭದಲ್ಲಿ ಅವರು ಸದ್ಯ ತಲೆದೋರಿರುವ ಆಮ್ಲಜನಕ ಬಿಕ್ಕಟ್ಟಿಗೆ ತಮ್ಮದೇ ಆದ ಪರಿಹಾರವನ್ನೂ ಸೂಚಿಸಿದರು. ‘ಉಸಿರಾಟ ಸಮಸ್ಯೆ ಇರುವವರು, ಆಮ್ಲಜನಕ ಮಟ್ಟ ಕಡಿಮೆಯಾದವರು ಮೂಗಿನೊಳಗೆ ನಿಂಬೆರಸ ಹಾಕಿಕೊಂಡರೆ ಅರ್ಧ ಗಂಟೆಯಲ್ಲಿ ಸರಳವಾಗುತ್ತದೆ. ಇದರಿಂದ ರಕ್ತದಲ್ಲಿನ ಆಮ್ಲಜನಕ ವೃದ್ಧಿಯಾಗುತ್ತದೆ’ ಎಂದು ತಿಳಿಸಿದರು.
‘ಈ ವಿಧಾನ ಅನುಸರಿಸಿದರೆ ಶೇ. 80ರಷ್ಟು ಆಮ್ಲಜನಕ ಹಾಸಿಗೆಗಳು ಖಾಲಿಯಾಗುತ್ತವೆ’ ಎಂದು ಹೇಳಿದರು.

ಕೊರೋನಾ ತಡೆಗೆ ಕೊಬ್ಬರಿ ಎಣ್ಣೆ

‘ಡಾ.ಬಿ.ಎಂ ಹೆಗಡೆ ಅವರು ಹೇಳಿರುವಂತೆ, ಮುಖ ಮತ್ತು ಮೂಗಿನ ಹೊಳ್ಳೆಗಳಿಗೆ ಕೊಬ್ಬರಿ ಎಣ್ಣೆ ಸವರಿಕೊಂಡರೆ ವೈರಸ್ ದೇಹ ಪ್ರವೇಶಿಸದಂತೆ ತಡೆಯಬಹುದು. ಬಿಸಿ ಅವಿ ಉಸಿರಾಡಿದರೆ ಕೋವಿಡ್‌ನಿಂದ ದೂರ ಉಳಿಯಬಹುದು. ನಾನು ಇದನ್ನು ಕಟ್ಟುನಿಟ್ಟಾಗಿ ಪಾಲಿಸುತ್ತಿದ್ದೇನೆ. ಮೊದಲಿಗಿಂತ ಹೆಚ್ಚು ಪ್ರಯಾಣ ಮಾಡಿದರೂ ಯಾವುದೇ ಸೋಂಕು ತಗುಲಿಲ್ಲ’ ಎಂದು ಸಂಕೇಶ್ವರ್ ತಿಳಿಸಿದರು.

ಸರ್ಕಾರ ಎರಡು ದಿನ ವಿಳಂಬವಾದರೂ ಕೊವಿಡ್ ನಿಯಂತ್ರಣಕ್ಕೆ ಉತ್ತಮ ನಿರ್ಧಾರಗಳನ್ನು ತೆಗೆದುಕೊಂಡಿದೆ. ಇಂತಹ ಬೃಹತ್ ದೇಶದಲ್ಲಿ ಇಷ್ಟು ಮಾಡಿರುವುದೇ ದೊಡ್ಡ ಸಾಧನೆ ಎಂದು ಕೇಂದ್ರ ಸರ್ಕಾರವನ್ನು ಪ್ರಶಂಸಿದರು.


ಇದನ್ನೂ ಓದಿ: ಈ ಆರೋಗ್ಯ ಬಿಕ್ಕಟ್ಟಿಗೆ ಮೋದಿ ಸರ್ಕಾರದ ಅಸಮರ್ಥತೆಯೇ ಕಾರಣ: ಡಾ. ಪರಕಾಲ ಪ್ರಭಾಕರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...