Homeಕರ್ನಾಟಕಸಂಕೇಶ್ವರರ Some-ಶೋಧನೆಗಳು: ಉಚಿತ ರೇಷನ್ ಕೊಟ್ಟರೆ ಜನ ಕೆಲಸಕ್ಕೆ ಬರಲ್ಲ! ಆಮ್ಲಜನಕ ಸಮಸ್ಯೆ ಬಗೆಹರಿಸಲು ನಿಂಬೆರಸ!

ಸಂಕೇಶ್ವರರ Some-ಶೋಧನೆಗಳು: ಉಚಿತ ರೇಷನ್ ಕೊಟ್ಟರೆ ಜನ ಕೆಲಸಕ್ಕೆ ಬರಲ್ಲ! ಆಮ್ಲಜನಕ ಸಮಸ್ಯೆ ಬಗೆಹರಿಸಲು ನಿಂಬೆರಸ!

ಕೊರೋನಾ ತಡೆಗೆ ಕೊಬ್ಬರಿ ಎಣ್ಣೆ ಸಿದ್ಧಾಂತವನ್ನು ಅವರು ಪ್ರತಿಪಾದಿಸಿದ್ದಾರೆ.

- Advertisement -
- Advertisement -

‘ಹಂಗೆಲ್ಲ ಫ್ರೀಯಾಗಿ ರೇಷನ್ ಕೊಟ್ರೆ ಜನರು ಕೆಲಸಕ್ಕೆ ಬರಲ್ಲ. ಇದರಿಂದ ಕೈಗಾರಿಗೆ ಹೊಡೆತ ಬೀಳುತ್ತೆ’ ಎಂದು ಬಿಜೆಪಿ ನಾಯಕ, ವಿಆರ್‌ಎಲ್ ಮಾಲೀಕ ವಿಜಯ ಸಂಕೇಶ್ವರ ಇಂದು ಹುಬ್ಬಳ್ಳಿಯಲ್ಲಿ ಹೇಳಿದ್ದಾರೆ ಎಂದು ಪ್ರಜಾವಾಣಿ ವರದಿ ಮಾಡಿದೆ.

ಇದನ್ನು ಹೇಳಲೆಂದೇ ಸುದ್ದಿಗೋಷ್ಠಿ ಕರೆದಿದ್ದ ಅವರು, ‘ಕೇಂದ್ರ ಸರ್ಕಾರ ಮತ್ತೆ ಉಚಿತ ಪಡಿತರ ಕೊಡಲು ಹೊರಟಿದೆ. ಇದು ಸರಿಯಲ್ಲ. ಇದು ದೇಶಕ್ಕೇ ಗಂಡಾಂತರದ ವಿಷಯವಾಗಿದ್ದು, ಕೈಗಾರಿಕಾ ಉತ್ಪಾದನೆ ಕುಂಠಿತಗೊಳ್ಳುತ್ತದೆ, ಸರ್ಕಾರದ ಈ ನಡೆ ಸರಿಯಲ್ಲ; ಎಂದು ಹೇಳಿದ್ದಾರೆ.

‘ಹೋದ ವರ್ಷ ಲಾಕ್‌ಡೌನ್ ನಂತರವೂ ಮೂರು ತಿಂಗಳು ಕೇಂದ್ರ ಸರ್ಕಾರ ಉಚಿತ ಪಡಿತರ ನೀಡಿತ್ತು. ಇದರಿಂದ ಜನ ತಮ್ಮ ಕೆಲಸದ ಸ್ಥಳ ತೊರೆದು ಊರು ಸೇರುತ್ತಾರೆ. ಕೆಲಸಕ್ಕೆ ಬರುವುದಿಲ್ಲ. ಇದು ಕಾರ್ಖಾನೆ-ಕೈಗಾರಿಕೆ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ. ಈಗಲೂ ಎರಡನೆ ಅಲೆ ಸಂದರ್ಭದಲ್ಲಿ ಮತ್ತೆ ಉಚಿತ ಪಡಿತರ ಕೊಡಲು ಹೊರಟಿದ್ದಾರೆ. ಇದರಿಂದ ಜನರು ಮನೆಯಲ್ಲೇ ಉಳಿದು ದುಡಿಯಲು ಬರುವುದಿಲ್ಲ. ಹೀಗಾಗಿ ಇದು ಕೈಗಾರಿಕೆಗಳ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಕೇಂದ್ರ ಸರ್ಕಾರ ಪದೇ ಪದೇ ತಪ್ಪು ಮಾಡುತ್ತಿದೆ ’ ಎಂದು ಸಂಕೇಶ್ವರ್ ಅಭಿಪ್ರಾಯಪಟ್ಟರು.

‘ನಮ್ಮಂತಹ ವಿಚಿತ್ರ ದೇಶದಲ್ಲಿ ಹೀಗೆ ಉಚಿತ ಪಡಿತರ ನೀಡುವುದು ಸರಿಯಲ್ಲ. ಜನ ಕೆಲಸಕ್ಕೇ ಬರದಂತಾಗುತ್ತದೆ’ ಎಂದು ಅವರು ಹೇಳಿದರು.

ಆಮ್ಲಜನಕಕ್ಕೆ ನಿಂಬೆರಸ ಪರ್ಯಾಯ?

ಇದೇ ಸಂದರ್ಭದಲ್ಲಿ ಅವರು ಸದ್ಯ ತಲೆದೋರಿರುವ ಆಮ್ಲಜನಕ ಬಿಕ್ಕಟ್ಟಿಗೆ ತಮ್ಮದೇ ಆದ ಪರಿಹಾರವನ್ನೂ ಸೂಚಿಸಿದರು. ‘ಉಸಿರಾಟ ಸಮಸ್ಯೆ ಇರುವವರು, ಆಮ್ಲಜನಕ ಮಟ್ಟ ಕಡಿಮೆಯಾದವರು ಮೂಗಿನೊಳಗೆ ನಿಂಬೆರಸ ಹಾಕಿಕೊಂಡರೆ ಅರ್ಧ ಗಂಟೆಯಲ್ಲಿ ಸರಳವಾಗುತ್ತದೆ. ಇದರಿಂದ ರಕ್ತದಲ್ಲಿನ ಆಮ್ಲಜನಕ ವೃದ್ಧಿಯಾಗುತ್ತದೆ’ ಎಂದು ತಿಳಿಸಿದರು.
‘ಈ ವಿಧಾನ ಅನುಸರಿಸಿದರೆ ಶೇ. 80ರಷ್ಟು ಆಮ್ಲಜನಕ ಹಾಸಿಗೆಗಳು ಖಾಲಿಯಾಗುತ್ತವೆ’ ಎಂದು ಹೇಳಿದರು.

ಕೊರೋನಾ ತಡೆಗೆ ಕೊಬ್ಬರಿ ಎಣ್ಣೆ

‘ಡಾ.ಬಿ.ಎಂ ಹೆಗಡೆ ಅವರು ಹೇಳಿರುವಂತೆ, ಮುಖ ಮತ್ತು ಮೂಗಿನ ಹೊಳ್ಳೆಗಳಿಗೆ ಕೊಬ್ಬರಿ ಎಣ್ಣೆ ಸವರಿಕೊಂಡರೆ ವೈರಸ್ ದೇಹ ಪ್ರವೇಶಿಸದಂತೆ ತಡೆಯಬಹುದು. ಬಿಸಿ ಅವಿ ಉಸಿರಾಡಿದರೆ ಕೋವಿಡ್‌ನಿಂದ ದೂರ ಉಳಿಯಬಹುದು. ನಾನು ಇದನ್ನು ಕಟ್ಟುನಿಟ್ಟಾಗಿ ಪಾಲಿಸುತ್ತಿದ್ದೇನೆ. ಮೊದಲಿಗಿಂತ ಹೆಚ್ಚು ಪ್ರಯಾಣ ಮಾಡಿದರೂ ಯಾವುದೇ ಸೋಂಕು ತಗುಲಿಲ್ಲ’ ಎಂದು ಸಂಕೇಶ್ವರ್ ತಿಳಿಸಿದರು.

ಸರ್ಕಾರ ಎರಡು ದಿನ ವಿಳಂಬವಾದರೂ ಕೊವಿಡ್ ನಿಯಂತ್ರಣಕ್ಕೆ ಉತ್ತಮ ನಿರ್ಧಾರಗಳನ್ನು ತೆಗೆದುಕೊಂಡಿದೆ. ಇಂತಹ ಬೃಹತ್ ದೇಶದಲ್ಲಿ ಇಷ್ಟು ಮಾಡಿರುವುದೇ ದೊಡ್ಡ ಸಾಧನೆ ಎಂದು ಕೇಂದ್ರ ಸರ್ಕಾರವನ್ನು ಪ್ರಶಂಸಿದರು.


ಇದನ್ನೂ ಓದಿ: ಈ ಆರೋಗ್ಯ ಬಿಕ್ಕಟ್ಟಿಗೆ ಮೋದಿ ಸರ್ಕಾರದ ಅಸಮರ್ಥತೆಯೇ ಕಾರಣ: ಡಾ. ಪರಕಾಲ ಪ್ರಭಾಕರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...