Homeಮುಖಪುಟದೆಹಲಿ: ಕೊರೊನಾ ಸೋಂಕಿತರಿಗಾಗಿ ಆಕ್ಸಿಜನ್ ಲಂಗರ್‌ ಆರಂಭಿಸಿದ ಗುರುದ್ವಾರ

ದೆಹಲಿ: ಕೊರೊನಾ ಸೋಂಕಿತರಿಗಾಗಿ ಆಕ್ಸಿಜನ್ ಲಂಗರ್‌ ಆರಂಭಿಸಿದ ಗುರುದ್ವಾರ

- Advertisement -
- Advertisement -

ಕೊರೊನಾ ಸೋಂಕಿತರಿಗಾಗಿ ಮಸೀದಿಗಳು, ಮಠಗಳು ಆಸ್ಪತ್ರೆಗಳಾಗಿ ಬದಲಾಗಿವೆ. ಈಗ ಒಂದು ಹೆಜ್ಜೆ ಮುಂದೆ ಹೋಗಿರುವ ಗುರುದ್ವಾರಗಳು ಆಮ್ಲಜನಕ ಬಿಕ್ಕಟಿನ ಹಿನ್ನೆಲೆಯಲ್ಲಿ ಆಕ್ಸಿಜನ್ ಒದಗಿಸಲು ದೆಹಲಿಯ ಗಾಜಿಯಾಬಾದ್ ಬಳಿ ಆಕ್ಸಿಜನ್ ಲಂಗರ್ ಆರಂಭಿಸಿವೆ.

ಕೊರೊನಾ ವೈರಸ್ ಸೋಂಕಿತರು ನವದೆಹಲಿ ಆಸ್ಪತ್ರೆಯಲ್ಲಿ ತುರ್ತು ಆರೈಕೆಯಲ್ಲಿರಬೇಕಾದವರೂ ಈಗ ಸಿಖ್ ಗುರುದ್ವಾರದ ಹೊರಗೆ ಕಾರಿನ ಹಿಂಬದಿಯ ಸೀಟಿನಲ್ಲಿ, ಬೆಂಚಿನ ಮೇಲೆ, ಮರದ ನೆರಳಿನಲ್ಲಿ ಆಕ್ಸಿಜನ್ ಮಾಸ್ಕ್ ತೊಟ್ಟು ಕುಳಿತಿದ್ದಾರೆ.

ನವದೆಹಲಿಯ ಹೊರವಲಯದಲ್ಲಿರುವ ಗಾಜಿಯಾಬಾದ್ ನಗರದ ಸಿಖ್ ಗುರುದ್ವಾರ (ದೇವಸ್ಥಾನ) ದಲ್ಲಿ, ಸಿಖ್ ನೆರವು ಗುಂಪು ಖಾಲ್ಸಾ ಹೆಲ್ಪ್ ಇಂಟರ್ನ್ಯಾಷನಲ್ ಸಂಸ್ಥೆ, ತುರ್ತು ಅಗತ್ಯವಿರುವವರಿಗೆ ಸಹಾಯ ಮಾಡಲು  ಕಡಿಮೆ ಪ್ರಮಾಣದಲ್ಲಿ ಆಮ್ಲಜನಕವನ್ನು ಖರೀದಿಸಿ, ನೀಡುತ್ತಿದೆ.

ಇದನ್ನೂ ಓದಿ: ಕೊರೊನಾ ಮಾರ್ಗಸೂಚಿ ಉಲ್ಲಂಘಿಸಿದ ಉಡುಪಿ ಜಿಲ್ಲಾಧಿಕಾರಿ? ಅವರು ಹೇಳಿದ್ದೇನು?

ಕೊರೊನಾ ರೋಗಿಗಳು ಗುರುದ್ವಾರದ ಹೊರಗೆ ಕಾರುಗಳು, ವ್ಯಾನ್‌ಗಳು ಮತ್ತು ರಿಕ್ಷಾಗಳಲ್ಲಿ ಬೀದಿಯಲ್ಲಿಯೇ ನಿಲ್ಲಿಸಿಕೊಂಡು ಆಮ್ಲಜನಕದ ಮಾಸ್ಕ್ ಹಾಕಿಕೊಂಡು ಉಸಿರಾಡಲು ಹೋರಾಟ ನಡೆಸುತ್ತಿದ್ದಾರೆ. ಇತ್ತ ಸ್ವಯಂಸೇವಕರು ಆಮ್ಲಜನಕದ ಸಿಲಿಂಡರ್‌ಗಳನ್ನು ಹಿಡಿದಿದುಕೊಂಡು ಓಡಾಡುತ್ತಿದ್ದ ದೃಶ್ಯಗಳು ಸಾಮಾನ್ಯವಾಗಿದ್ದವು.

“ನನಗೆ ಬೇರೆಲ್ಲಿಯೂ ಸಹಾಯ ಸಿಗಲಿಲ್ಲ ಅದಕ್ಕೆ ನಾನು ಇಲ್ಲಿಗೆ ಬಂದಿದ್ದೇನೆ” ಎಂದು ಕಾರಿನಲ್ಲಿ ತನ್ನ ತಾಯಿ ದೇವಿಯವರ ಪಕ್ಕದಲ್ಲಿ ಕುಳಿತಿದ್ದ ಮನೋಜ್ ಕುಮಾರ್ ಹೇಳುತ್ತಾರೆ. ನಾನು ಆಕ್ಸಿಜನ್‌ಗಾಗಿ ಎಲ್ಲಾ ಕಡೆ ವಿಚಾರಿಸಿದೆ. ಆದರ ಎಲ್ಲೂ ಸಿಗಲಿಲ್ಲ. ತಕ್ಷಣ ನಾನು ಗುರುದ್ವಾರಗೆ ಕರೆ ಮಾಡಿದೆ. ಅವರು ತಕ್ಷಣ ಇಲ್ಲಿಗೆ ಬೇಗ  ತಲುಪಲು ತಿಳಿಸಿದರು” ಎಂದು ಕುಮಾರ್ ಹೇಳಿದ್ದಾರೆ.

ಗುರುದ್ವಾರದ ಅಧ್ಯಕ್ಷ ಮತ್ತು ಖಲ್ಸಾ ಹೆಲ್ಪ್ ಇಂಟರ್‌ನ್ಯಾಷನಲ್‌ನ ಸಂಸ್ಥಾಪಕ ರಮ್ಮಿ, ನವದೆಹಲಿಯಲ್ಲಿ ಪ್ರಕರಣಗಳು ಹೆಚ್ಚಾಗುತ್ತಿದ್ದಂತೆ ಮೂರು ದಿನಗಳ ಹಿಂದೆ ಆಕ್ಸಿಜನ್ ಲಂಗರ್‌ ಸೇವೆಯನ್ನು ನೀಡಲು ಪ್ರಾರಂಭಿಸಿದೆ. ಜನರು ಕೊರೊನಾದಿಂದ ಬೀದಿಗಳಲ್ಲಿ ಸಾಯುತ್ತಿದ್ದಾರೆ. ಅದಕ್ಕಾಗಿಯೇ ನಾವು ಇದನ್ನು ಪ್ರಾರಂಭಿಸಿದ್ದೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ರಾಜಕೀಯ ಕೆಲಸ ಬಿಟ್ಟು, ಜನರ ಸಹಾಯಕ್ಕೆ ನಿಲ್ಲುವಂತೆ ಕಾರ್ಯಕರ್ತರಲ್ಲಿ ರಾಹುಲ್ ಗಾಂಧಿ ಮನವಿ

ಖಲ್ಸಾ ಹೆಲ್ಪ್ ಇಂಟರ್ನ್ಯಾಷನಲ್ ಗ್ರೂಪ್ ಇಲ್ಲಿಯವರೆಗೆ ಸುಮಾರು 700 ರೋಗಿಗಳನ್ನು ಉಳಿಸಿದೆ ಎಂದು ರಮ್ಮಿ ಅಂದಾಜು ಮಾಡಿದ್ದಾರೆ.


ಇದನ್ನೂ ಓದಿ: ಆಕ್ಸಿಜನ್ ಬಿಕ್ಕಟ್ಟಿನಲ್ಲಿ ಹಲವು ರಾಜ್ಯಗಳು, ನಮ್ಮಲ್ಲಿ ಕೊರತೆಯಿಲ್ಲ ಎಂದ ಉತ್ತರಪ್ರದೇಶ ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...