Homeಮುಖಪುಟ9 ವರ್ಷದಿಂದ ಯಾವುದೆ ಲಸಿಕೆ ಉತ್ಪಾದಿಸದ ಅತ್ಯಾಧುನಿಕ ಸರ್ಕಾರಿ ವ್ಯಾಕ್ಸಿನ್‌ ಕಾಂಪ್ಲೆಕ್ಸ್!

9 ವರ್ಷದಿಂದ ಯಾವುದೆ ಲಸಿಕೆ ಉತ್ಪಾದಿಸದ ಅತ್ಯಾಧುನಿಕ ಸರ್ಕಾರಿ ವ್ಯಾಕ್ಸಿನ್‌ ಕಾಂಪ್ಲೆಕ್ಸ್!

- Advertisement -
- Advertisement -

ತಮಿಳುನಾಡಿನ ಚೆಂಗಲ್‌ಪಟ್ಟುವಿನಲ್ಲಿರುವ ಕೇಂದ್ರ ಸರ್ಕಾರದ ಅತ್ಯಾಧುನಿಕ ಇಂಟಿಗ್ರೇಟೆಡ್ ವ್ಯಾಕ್ಸಿನ್‌ ಕಾಂಪ್ಲೆಕ್ಸ್‌ (ಐವಿಸಿ) ನಲ್ಲಿ ಕಳೆದ ಒಂಬತ್ತು ವರ್ಷಗಳಲ್ಲಿ ಒಂದೇ ಒಂದು ಲಸಿಕೆ ತಯಾರಾಗಿಲ್ಲ ಎಂದು ಕಳೆದ ವರ್ಷ ಏಪ್ರಿಲ್‌ನಲ್ಲಿ ಪಡೆದ ಆರ್‌ಟಿಐ ಉತ್ತರದ ಮೂಲಕ ತಿಳಿದು ಬಂದಿದೆ.

2020 ರ ಮಾರ್ಚ್ 28 ರಂದು ಮಧುರೈನ ಆನಂದ್ ರಾಜ್ ಅವರು ಆರ್‌ಟಿಐ ಮೂಲಕ ಕೇಳಿದ್ದ ಪ್ರಶ್ನೆಗೆ ಉತ್ತರ ನೀಡಿರುವ ಎಚ್‌ಎಲ್‌ಎಲ್ ಬಯೋಟೆಕ್ ಲಿಮಿಟೆಡ್ (ಎಚ್‌ಬಿಎಲ್), ಕಾಂಪ್ಲೆಕ್ಸ್‌ನಲ್ಲಿ ಇಲ್ಲಿಯವರೆಗೆ ಉತ್ಪಾದನಾ ಚಟುವಟಿಕೆಗಳನ್ನು ಪ್ರಾರಂಭಿಸಿಲ್ಲ ಎಂದು ಒಪ್ಪಿಕೊಂಡಿದೆ.

ಇದನ್ನೂ ಓದಿ: ’ಕೊರೊನಾ ಸಾವುಗಳೆಲ್ಲವೂ ಬಿಜೆಪಿ ನಡೆಸುತ್ತಿರುವ ಕಗ್ಗೊಲೆಗಳು’- ಕಾಂಗ್ರೆಸ್

ಆರ್‌ಟಿಐಗೆ ನೀಡಿರುವ ಉತ್ತರದಲ್ಲಿ, “ವ್ಯಾಕ್ಸಿನ್‌ ಕಾಂಪ್ಲೆಕ್ಸ್, ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಅಧೀನದಲ್ಲಿರುವ ಭಾರತ ಸರ್ಕಾರದ ಉದ್ಯಮವಾದ ಎಚ್‌ಎಲ್‌ಎಲ್ ಲೈಫ್‌ಕೇರ್ ಲಿಮಿಟೆಡ್‌ನ ಅಂಗಸಂಸ್ಥೆಯಾಗಿದೆ. ಇದನ್ನು 2012 ರಲ್ಲಿ ಮಂಜೂರಾಗಿದ್ದ 594 ಕೋಟಿ ರೂ.ಗಳ ವೆಚ್ಚದಲ್ಲಿ ಸ್ಥಾಪಿಸಲಾಯಿತು. ಇದರ ಸಿಬ್ಬಂದಿ ಸಾಮರ್ಥ್ಯ 408 ಆಗಿದ್ದು, ಆದರೆ ಇನ್ನೂ ಸುಮಾರು 251 ಹುದ್ದೆಗಳು ಖಾಲಿ ಇವೆ. ಸ್ಥಾಪನೆಯಾದಾಗಿನಿಂದ ಇದುವರೆಗೂ ಉತ್ಪಾದನಾ ಚಟುವಟಿಕೆಗಳನ್ನು ಪ್ರಾರಂಭಿಸಿಲ್ಲ” ಎಂದು ಉತ್ತರಿಸಿದೆ.

ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ (ಪಿಐಎಲ್) ಸಲ್ಲಿಸಲು ಮಾಹಿತಿ ಸಂಗ್ರಹಿಸುವಾಗ ಕಳೆದ ಏಪ್ರಿಲ್‌ನಲ್ಲಿ ವರದಿಯನ್ನು ಪಡೆದುಕೊಂಡಿದ್ದೇನೆ. ಆದರೆ ಲಾಕ್‌ಡೌನ್ ಕಾರಣ ಅದನ್ನು ಸಲ್ಲಿಸಲು ಸಾಧ್ಯವಾಗಲಿಲ್ಲ ಎಂದು ಆರ್‌ಟಿಐ ಸಲ್ಲಿಸಿದ್ದ ಆನಂದ್ ರಾಜ್ ಹೇಳಿದ್ದಾರೆ.

ಇದನ್ನೂ ಓದಿ: ಸಂಪಾದಕರ ವಿರುದ್ಧ ಪತ್ರ: ಟೈಮ್ಸ್ ನೌ ಚಾನೆಲ್‌ನ ಹಾಲಿ, ಮಾಜಿ ಪತ್ರಕರ್ತರ ಜೊತೆ ನಿಲ್ಲೋಣ

ಲಸಿಕೆಗಳನ್ನು ತಯಾರಿಸಲು ವ್ಯಾಕ್ಸಿನ್‌ ಕಾಂಪ್ಲೆಕ್ಸ್‌ ಅನ್ನು ಬಳಸಿಕೊಳ್ಳಬೇಕೆಂದು ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ. ಖಾಸಗಿ ಕಂಪೆನಿಗಳ ಹಿತಕ್ಕಾಗಿ ಈ ವ್ಯಾಕ್ಸಿನ್ ಕಾಂಪ್ಲೆಕ್ಸ್‌ ಅನ್ನು ನಿಷ್ಕ್ರಿಯವಾಗಿ ಇರಿಸಲಾಗಿದೆ ಎಂದು ಆರೋಪಿಸಿರುವ ಆನಂದ್‌ ರಾಜ್‌, “ರಾಜ್ಯ ಮಾನವ ಹಕ್ಕುಗಳ ಆಯೋಗ ತಮಿಳುನಾಡು ಮತ್ತು ಮದ್ರಾಸ್ ಹೈಕೋರ್ಟ್‌ಗೆ ಸ್ವಯಂ ಪ್ರೇರಿತ ವಿಚಾರಣೆ ನಡೆಸಬೇಕು” ಎಂದು ಮನವಿ ಮಾಡಿದ್ದಾರೆ.

ತಿರುಪ್ಪೂರು ಸಿಪಿಐ ಸಂಸದ ಕೆ. ಸುಬ್ಬರಾಯಣ್ ಸೇರಿದಂತೆ ಹಲವಾರು ರಾಜಕೀಯ ಪಕ್ಷದ ನಾಯಕರು ಕೂಡ ಇತ್ತೀಚೆಗೆ ಇದೇ ರೀತಿಯ ಬೇಡಿಕೆಗಳನ್ನು ಸಲ್ಲಿಸಿದ್ದಾರೆ.

ಎಚ್‌ಬಿಎಲ್‌ನ ಅಧಿಕೃತ ವೆಬ್‌ಸೈಟ್‌ನ ಪ್ರಕಾರ, ಇಂಟಿಗ್ರೇಟೆಡ್ ವ್ಯಾಕ್ಸಿನ್‌ ಕಾಂಪ್ಲೆಕ್ಸ್ ‘ರಾಷ್ಟ್ರೀಯ ಪ್ರಾಮುಖ್ಯತೆಯ ಯೋಜನೆಯಾಗಿದೆ’. ಇದು ದೇಶಕ್ಕೆ ಪರಿಣಾಮಕಾರಿ ವೆಚ್ಚದಲ್ಲಿ ಯುಐಪಿ (ಯುನಿವರ್ಸಲ್ ಇಮ್ಯುನೈಸೇಶನ್ ಪ್ರೋಗ್ರಾಂ) ಲಸಿಕೆಗಳನ್ನು ತಯಾರಿಸಲು ಮತ್ತು ಪೂರೈಸಲು ಹಾಗೂ ಯುನಿಸೆಫ್ ಸೇರಿದಂತೆ ಏಜೆನ್ಸಿಗಳಿಗೆ ರಫ್ತು ಮಾಡುವ ಉದ್ದೇಶವನ್ನು ಹೊಂದಿದೆ.

ಇದನ್ನೂ ಓದಿ: ದೆಹಲಿ: ಕೊರೊನಾ ಸೋಂಕಿತರಿಗಾಗಿ ಆಕ್ಸಿಜನ್ ಲಂಗರ್‌ ಆರಂಭಿಸಿದ ಗುರುದ್ವಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...