Homeಮುಖಪುಟ9 ವರ್ಷದಿಂದ ಯಾವುದೆ ಲಸಿಕೆ ಉತ್ಪಾದಿಸದ ಅತ್ಯಾಧುನಿಕ ಸರ್ಕಾರಿ ವ್ಯಾಕ್ಸಿನ್‌ ಕಾಂಪ್ಲೆಕ್ಸ್!

9 ವರ್ಷದಿಂದ ಯಾವುದೆ ಲಸಿಕೆ ಉತ್ಪಾದಿಸದ ಅತ್ಯಾಧುನಿಕ ಸರ್ಕಾರಿ ವ್ಯಾಕ್ಸಿನ್‌ ಕಾಂಪ್ಲೆಕ್ಸ್!

- Advertisement -
- Advertisement -

ತಮಿಳುನಾಡಿನ ಚೆಂಗಲ್‌ಪಟ್ಟುವಿನಲ್ಲಿರುವ ಕೇಂದ್ರ ಸರ್ಕಾರದ ಅತ್ಯಾಧುನಿಕ ಇಂಟಿಗ್ರೇಟೆಡ್ ವ್ಯಾಕ್ಸಿನ್‌ ಕಾಂಪ್ಲೆಕ್ಸ್‌ (ಐವಿಸಿ) ನಲ್ಲಿ ಕಳೆದ ಒಂಬತ್ತು ವರ್ಷಗಳಲ್ಲಿ ಒಂದೇ ಒಂದು ಲಸಿಕೆ ತಯಾರಾಗಿಲ್ಲ ಎಂದು ಕಳೆದ ವರ್ಷ ಏಪ್ರಿಲ್‌ನಲ್ಲಿ ಪಡೆದ ಆರ್‌ಟಿಐ ಉತ್ತರದ ಮೂಲಕ ತಿಳಿದು ಬಂದಿದೆ.

2020 ರ ಮಾರ್ಚ್ 28 ರಂದು ಮಧುರೈನ ಆನಂದ್ ರಾಜ್ ಅವರು ಆರ್‌ಟಿಐ ಮೂಲಕ ಕೇಳಿದ್ದ ಪ್ರಶ್ನೆಗೆ ಉತ್ತರ ನೀಡಿರುವ ಎಚ್‌ಎಲ್‌ಎಲ್ ಬಯೋಟೆಕ್ ಲಿಮಿಟೆಡ್ (ಎಚ್‌ಬಿಎಲ್), ಕಾಂಪ್ಲೆಕ್ಸ್‌ನಲ್ಲಿ ಇಲ್ಲಿಯವರೆಗೆ ಉತ್ಪಾದನಾ ಚಟುವಟಿಕೆಗಳನ್ನು ಪ್ರಾರಂಭಿಸಿಲ್ಲ ಎಂದು ಒಪ್ಪಿಕೊಂಡಿದೆ.

ಇದನ್ನೂ ಓದಿ: ’ಕೊರೊನಾ ಸಾವುಗಳೆಲ್ಲವೂ ಬಿಜೆಪಿ ನಡೆಸುತ್ತಿರುವ ಕಗ್ಗೊಲೆಗಳು’- ಕಾಂಗ್ರೆಸ್

ಆರ್‌ಟಿಐಗೆ ನೀಡಿರುವ ಉತ್ತರದಲ್ಲಿ, “ವ್ಯಾಕ್ಸಿನ್‌ ಕಾಂಪ್ಲೆಕ್ಸ್, ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಅಧೀನದಲ್ಲಿರುವ ಭಾರತ ಸರ್ಕಾರದ ಉದ್ಯಮವಾದ ಎಚ್‌ಎಲ್‌ಎಲ್ ಲೈಫ್‌ಕೇರ್ ಲಿಮಿಟೆಡ್‌ನ ಅಂಗಸಂಸ್ಥೆಯಾಗಿದೆ. ಇದನ್ನು 2012 ರಲ್ಲಿ ಮಂಜೂರಾಗಿದ್ದ 594 ಕೋಟಿ ರೂ.ಗಳ ವೆಚ್ಚದಲ್ಲಿ ಸ್ಥಾಪಿಸಲಾಯಿತು. ಇದರ ಸಿಬ್ಬಂದಿ ಸಾಮರ್ಥ್ಯ 408 ಆಗಿದ್ದು, ಆದರೆ ಇನ್ನೂ ಸುಮಾರು 251 ಹುದ್ದೆಗಳು ಖಾಲಿ ಇವೆ. ಸ್ಥಾಪನೆಯಾದಾಗಿನಿಂದ ಇದುವರೆಗೂ ಉತ್ಪಾದನಾ ಚಟುವಟಿಕೆಗಳನ್ನು ಪ್ರಾರಂಭಿಸಿಲ್ಲ” ಎಂದು ಉತ್ತರಿಸಿದೆ.

ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ (ಪಿಐಎಲ್) ಸಲ್ಲಿಸಲು ಮಾಹಿತಿ ಸಂಗ್ರಹಿಸುವಾಗ ಕಳೆದ ಏಪ್ರಿಲ್‌ನಲ್ಲಿ ವರದಿಯನ್ನು ಪಡೆದುಕೊಂಡಿದ್ದೇನೆ. ಆದರೆ ಲಾಕ್‌ಡೌನ್ ಕಾರಣ ಅದನ್ನು ಸಲ್ಲಿಸಲು ಸಾಧ್ಯವಾಗಲಿಲ್ಲ ಎಂದು ಆರ್‌ಟಿಐ ಸಲ್ಲಿಸಿದ್ದ ಆನಂದ್ ರಾಜ್ ಹೇಳಿದ್ದಾರೆ.

ಇದನ್ನೂ ಓದಿ: ಸಂಪಾದಕರ ವಿರುದ್ಧ ಪತ್ರ: ಟೈಮ್ಸ್ ನೌ ಚಾನೆಲ್‌ನ ಹಾಲಿ, ಮಾಜಿ ಪತ್ರಕರ್ತರ ಜೊತೆ ನಿಲ್ಲೋಣ

ಲಸಿಕೆಗಳನ್ನು ತಯಾರಿಸಲು ವ್ಯಾಕ್ಸಿನ್‌ ಕಾಂಪ್ಲೆಕ್ಸ್‌ ಅನ್ನು ಬಳಸಿಕೊಳ್ಳಬೇಕೆಂದು ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ. ಖಾಸಗಿ ಕಂಪೆನಿಗಳ ಹಿತಕ್ಕಾಗಿ ಈ ವ್ಯಾಕ್ಸಿನ್ ಕಾಂಪ್ಲೆಕ್ಸ್‌ ಅನ್ನು ನಿಷ್ಕ್ರಿಯವಾಗಿ ಇರಿಸಲಾಗಿದೆ ಎಂದು ಆರೋಪಿಸಿರುವ ಆನಂದ್‌ ರಾಜ್‌, “ರಾಜ್ಯ ಮಾನವ ಹಕ್ಕುಗಳ ಆಯೋಗ ತಮಿಳುನಾಡು ಮತ್ತು ಮದ್ರಾಸ್ ಹೈಕೋರ್ಟ್‌ಗೆ ಸ್ವಯಂ ಪ್ರೇರಿತ ವಿಚಾರಣೆ ನಡೆಸಬೇಕು” ಎಂದು ಮನವಿ ಮಾಡಿದ್ದಾರೆ.

ತಿರುಪ್ಪೂರು ಸಿಪಿಐ ಸಂಸದ ಕೆ. ಸುಬ್ಬರಾಯಣ್ ಸೇರಿದಂತೆ ಹಲವಾರು ರಾಜಕೀಯ ಪಕ್ಷದ ನಾಯಕರು ಕೂಡ ಇತ್ತೀಚೆಗೆ ಇದೇ ರೀತಿಯ ಬೇಡಿಕೆಗಳನ್ನು ಸಲ್ಲಿಸಿದ್ದಾರೆ.

ಎಚ್‌ಬಿಎಲ್‌ನ ಅಧಿಕೃತ ವೆಬ್‌ಸೈಟ್‌ನ ಪ್ರಕಾರ, ಇಂಟಿಗ್ರೇಟೆಡ್ ವ್ಯಾಕ್ಸಿನ್‌ ಕಾಂಪ್ಲೆಕ್ಸ್ ‘ರಾಷ್ಟ್ರೀಯ ಪ್ರಾಮುಖ್ಯತೆಯ ಯೋಜನೆಯಾಗಿದೆ’. ಇದು ದೇಶಕ್ಕೆ ಪರಿಣಾಮಕಾರಿ ವೆಚ್ಚದಲ್ಲಿ ಯುಐಪಿ (ಯುನಿವರ್ಸಲ್ ಇಮ್ಯುನೈಸೇಶನ್ ಪ್ರೋಗ್ರಾಂ) ಲಸಿಕೆಗಳನ್ನು ತಯಾರಿಸಲು ಮತ್ತು ಪೂರೈಸಲು ಹಾಗೂ ಯುನಿಸೆಫ್ ಸೇರಿದಂತೆ ಏಜೆನ್ಸಿಗಳಿಗೆ ರಫ್ತು ಮಾಡುವ ಉದ್ದೇಶವನ್ನು ಹೊಂದಿದೆ.

ಇದನ್ನೂ ಓದಿ: ದೆಹಲಿ: ಕೊರೊನಾ ಸೋಂಕಿತರಿಗಾಗಿ ಆಕ್ಸಿಜನ್ ಲಂಗರ್‌ ಆರಂಭಿಸಿದ ಗುರುದ್ವಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...