Homeಮುಖಪುಟ9 ವರ್ಷದಿಂದ ಯಾವುದೆ ಲಸಿಕೆ ಉತ್ಪಾದಿಸದ ಅತ್ಯಾಧುನಿಕ ಸರ್ಕಾರಿ ವ್ಯಾಕ್ಸಿನ್‌ ಕಾಂಪ್ಲೆಕ್ಸ್!

9 ವರ್ಷದಿಂದ ಯಾವುದೆ ಲಸಿಕೆ ಉತ್ಪಾದಿಸದ ಅತ್ಯಾಧುನಿಕ ಸರ್ಕಾರಿ ವ್ಯಾಕ್ಸಿನ್‌ ಕಾಂಪ್ಲೆಕ್ಸ್!

- Advertisement -
- Advertisement -

ತಮಿಳುನಾಡಿನ ಚೆಂಗಲ್‌ಪಟ್ಟುವಿನಲ್ಲಿರುವ ಕೇಂದ್ರ ಸರ್ಕಾರದ ಅತ್ಯಾಧುನಿಕ ಇಂಟಿಗ್ರೇಟೆಡ್ ವ್ಯಾಕ್ಸಿನ್‌ ಕಾಂಪ್ಲೆಕ್ಸ್‌ (ಐವಿಸಿ) ನಲ್ಲಿ ಕಳೆದ ಒಂಬತ್ತು ವರ್ಷಗಳಲ್ಲಿ ಒಂದೇ ಒಂದು ಲಸಿಕೆ ತಯಾರಾಗಿಲ್ಲ ಎಂದು ಕಳೆದ ವರ್ಷ ಏಪ್ರಿಲ್‌ನಲ್ಲಿ ಪಡೆದ ಆರ್‌ಟಿಐ ಉತ್ತರದ ಮೂಲಕ ತಿಳಿದು ಬಂದಿದೆ.

2020 ರ ಮಾರ್ಚ್ 28 ರಂದು ಮಧುರೈನ ಆನಂದ್ ರಾಜ್ ಅವರು ಆರ್‌ಟಿಐ ಮೂಲಕ ಕೇಳಿದ್ದ ಪ್ರಶ್ನೆಗೆ ಉತ್ತರ ನೀಡಿರುವ ಎಚ್‌ಎಲ್‌ಎಲ್ ಬಯೋಟೆಕ್ ಲಿಮಿಟೆಡ್ (ಎಚ್‌ಬಿಎಲ್), ಕಾಂಪ್ಲೆಕ್ಸ್‌ನಲ್ಲಿ ಇಲ್ಲಿಯವರೆಗೆ ಉತ್ಪಾದನಾ ಚಟುವಟಿಕೆಗಳನ್ನು ಪ್ರಾರಂಭಿಸಿಲ್ಲ ಎಂದು ಒಪ್ಪಿಕೊಂಡಿದೆ.

ಇದನ್ನೂ ಓದಿ: ’ಕೊರೊನಾ ಸಾವುಗಳೆಲ್ಲವೂ ಬಿಜೆಪಿ ನಡೆಸುತ್ತಿರುವ ಕಗ್ಗೊಲೆಗಳು’- ಕಾಂಗ್ರೆಸ್

ಆರ್‌ಟಿಐಗೆ ನೀಡಿರುವ ಉತ್ತರದಲ್ಲಿ, “ವ್ಯಾಕ್ಸಿನ್‌ ಕಾಂಪ್ಲೆಕ್ಸ್, ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಅಧೀನದಲ್ಲಿರುವ ಭಾರತ ಸರ್ಕಾರದ ಉದ್ಯಮವಾದ ಎಚ್‌ಎಲ್‌ಎಲ್ ಲೈಫ್‌ಕೇರ್ ಲಿಮಿಟೆಡ್‌ನ ಅಂಗಸಂಸ್ಥೆಯಾಗಿದೆ. ಇದನ್ನು 2012 ರಲ್ಲಿ ಮಂಜೂರಾಗಿದ್ದ 594 ಕೋಟಿ ರೂ.ಗಳ ವೆಚ್ಚದಲ್ಲಿ ಸ್ಥಾಪಿಸಲಾಯಿತು. ಇದರ ಸಿಬ್ಬಂದಿ ಸಾಮರ್ಥ್ಯ 408 ಆಗಿದ್ದು, ಆದರೆ ಇನ್ನೂ ಸುಮಾರು 251 ಹುದ್ದೆಗಳು ಖಾಲಿ ಇವೆ. ಸ್ಥಾಪನೆಯಾದಾಗಿನಿಂದ ಇದುವರೆಗೂ ಉತ್ಪಾದನಾ ಚಟುವಟಿಕೆಗಳನ್ನು ಪ್ರಾರಂಭಿಸಿಲ್ಲ” ಎಂದು ಉತ್ತರಿಸಿದೆ.

ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ (ಪಿಐಎಲ್) ಸಲ್ಲಿಸಲು ಮಾಹಿತಿ ಸಂಗ್ರಹಿಸುವಾಗ ಕಳೆದ ಏಪ್ರಿಲ್‌ನಲ್ಲಿ ವರದಿಯನ್ನು ಪಡೆದುಕೊಂಡಿದ್ದೇನೆ. ಆದರೆ ಲಾಕ್‌ಡೌನ್ ಕಾರಣ ಅದನ್ನು ಸಲ್ಲಿಸಲು ಸಾಧ್ಯವಾಗಲಿಲ್ಲ ಎಂದು ಆರ್‌ಟಿಐ ಸಲ್ಲಿಸಿದ್ದ ಆನಂದ್ ರಾಜ್ ಹೇಳಿದ್ದಾರೆ.

ಇದನ್ನೂ ಓದಿ: ಸಂಪಾದಕರ ವಿರುದ್ಧ ಪತ್ರ: ಟೈಮ್ಸ್ ನೌ ಚಾನೆಲ್‌ನ ಹಾಲಿ, ಮಾಜಿ ಪತ್ರಕರ್ತರ ಜೊತೆ ನಿಲ್ಲೋಣ

ಲಸಿಕೆಗಳನ್ನು ತಯಾರಿಸಲು ವ್ಯಾಕ್ಸಿನ್‌ ಕಾಂಪ್ಲೆಕ್ಸ್‌ ಅನ್ನು ಬಳಸಿಕೊಳ್ಳಬೇಕೆಂದು ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ. ಖಾಸಗಿ ಕಂಪೆನಿಗಳ ಹಿತಕ್ಕಾಗಿ ಈ ವ್ಯಾಕ್ಸಿನ್ ಕಾಂಪ್ಲೆಕ್ಸ್‌ ಅನ್ನು ನಿಷ್ಕ್ರಿಯವಾಗಿ ಇರಿಸಲಾಗಿದೆ ಎಂದು ಆರೋಪಿಸಿರುವ ಆನಂದ್‌ ರಾಜ್‌, “ರಾಜ್ಯ ಮಾನವ ಹಕ್ಕುಗಳ ಆಯೋಗ ತಮಿಳುನಾಡು ಮತ್ತು ಮದ್ರಾಸ್ ಹೈಕೋರ್ಟ್‌ಗೆ ಸ್ವಯಂ ಪ್ರೇರಿತ ವಿಚಾರಣೆ ನಡೆಸಬೇಕು” ಎಂದು ಮನವಿ ಮಾಡಿದ್ದಾರೆ.

ತಿರುಪ್ಪೂರು ಸಿಪಿಐ ಸಂಸದ ಕೆ. ಸುಬ್ಬರಾಯಣ್ ಸೇರಿದಂತೆ ಹಲವಾರು ರಾಜಕೀಯ ಪಕ್ಷದ ನಾಯಕರು ಕೂಡ ಇತ್ತೀಚೆಗೆ ಇದೇ ರೀತಿಯ ಬೇಡಿಕೆಗಳನ್ನು ಸಲ್ಲಿಸಿದ್ದಾರೆ.

ಎಚ್‌ಬಿಎಲ್‌ನ ಅಧಿಕೃತ ವೆಬ್‌ಸೈಟ್‌ನ ಪ್ರಕಾರ, ಇಂಟಿಗ್ರೇಟೆಡ್ ವ್ಯಾಕ್ಸಿನ್‌ ಕಾಂಪ್ಲೆಕ್ಸ್ ‘ರಾಷ್ಟ್ರೀಯ ಪ್ರಾಮುಖ್ಯತೆಯ ಯೋಜನೆಯಾಗಿದೆ’. ಇದು ದೇಶಕ್ಕೆ ಪರಿಣಾಮಕಾರಿ ವೆಚ್ಚದಲ್ಲಿ ಯುಐಪಿ (ಯುನಿವರ್ಸಲ್ ಇಮ್ಯುನೈಸೇಶನ್ ಪ್ರೋಗ್ರಾಂ) ಲಸಿಕೆಗಳನ್ನು ತಯಾರಿಸಲು ಮತ್ತು ಪೂರೈಸಲು ಹಾಗೂ ಯುನಿಸೆಫ್ ಸೇರಿದಂತೆ ಏಜೆನ್ಸಿಗಳಿಗೆ ರಫ್ತು ಮಾಡುವ ಉದ್ದೇಶವನ್ನು ಹೊಂದಿದೆ.

ಇದನ್ನೂ ಓದಿ: ದೆಹಲಿ: ಕೊರೊನಾ ಸೋಂಕಿತರಿಗಾಗಿ ಆಕ್ಸಿಜನ್ ಲಂಗರ್‌ ಆರಂಭಿಸಿದ ಗುರುದ್ವಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...