Homeಕರೋನಾ ತಲ್ಲಣಲಸಿಕೆ ಸ್ಟಾಕ್ ಇಲ್ಲ: ಮೇ 1ರಿಂದ ‘ಎಲ್ಲರಿಗೂ ಲಸಿಕೆ’ ಅಭಿಯಾನ ಅಸಾಧ್ಯವೆಂದ 4 ರಾಜ್ಯಗಳು

ಲಸಿಕೆ ಸ್ಟಾಕ್ ಇಲ್ಲ: ಮೇ 1ರಿಂದ ‘ಎಲ್ಲರಿಗೂ ಲಸಿಕೆ’ ಅಭಿಯಾನ ಅಸಾಧ್ಯವೆಂದ 4 ರಾಜ್ಯಗಳು

- Advertisement -
- Advertisement -

ಬಿಜೆಪಿಯೇತರ ಪಕ್ಷಗಳು ಅಧಿಕಾರದಲ್ಲಿರುವ ರಾಜ್ಯಗಳ ಪೈಕಿ ರಾಜಸ್ಥಾನ, ಛತ್ತೀಸಘಡ್, ಪಂಜಾಬ್ ಮತ್ತು ಜಾರ್ಖಂಡ್ ತಮ್ಮ ಬಳಿ ಅಗತ್ಯ ಪ್ರಮಾಣದಷ್ಟು ಲಸಿಕೆಗಳ ಸಂಗ್ರಹವಿಲ್ಲ, ಪೂರೈಕೆ ವಿಳಂಬವಾಗುತ್ತಿದೆ, ಹೀಗಾಗಿ ಮೇ 1ರಿಂದ ‘ಎಲ್ಲರಿಗೂ ಲಸಿಕೆ ಅಭಿಯಾನ (18 ವರ್ಷ ಮೇಲ್ಪಟ್ಟವರಿಗೆ) ಆರಂಭಿಸುವುದು ಅಸಾಧ್ಯ ಎಂದು ಅಸಮಾಧಾನ ವ್ಯಕ್ತಪಡಿಸಿವೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

18 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನವರಿಗೆ ಲಸಿಕೆ ನೀಡುವ ಅಭಿಯಾನಕ್ಕೆ ಕೇವಲ ಐದು ದಿನಗಳ ಮೊದಲು, ಪ್ರತಿಪಕ್ಷ ಆಡಳಿತದ ನಾಲ್ಕು ರಾಜ್ಯಗಳು ಭಾನುವಾರ ಸಾಕಷ್ಟು ಲಸಿಕೆಗಳನ್ನು ಹೊಂದಿರದ ಕಾರಣ ಮೇ 1 ರಂದು ಅಭಿಯಾನ ಪ್ರಾರಂಭಿಸಲು ಸಾಧ್ಯವಾಗುವುದಿಲ್ಲ ಎಂದು ಹೇಳಿವೆ.

ಮೇ 15 ರ ಮೊದಲು ಡೋಸೆಜ್ ಪೂರೈಸಲು ಸಾಧ್ಯವಾಗುವುದಿಲ್ಲ ಎಂದು ಕೋವಿಶೀಲ್ಡ್ ತಯಾರಿಸುವ ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ (ಎಸ್‌ಐಐ) ತಿಳಿಸಿದೆ ಎಂದು ಕಾಂಗ್ರೆಸ್ ಆಡಳಿತದ ರಾಜಸ್ಥಾನ ಹೇಳಿದೆ.

“ನಮಗೆ ಸೀರಮ್ ಸಂಸ್ಥೆಯೊಂದಿಗೆ ಮಾತನಾಡಲು ತಿಳಿಸಲಾಯಿತು. ಕೇಂದ್ರ ಸರ್ಕಾರದಿಂದ ನಮಗೆ ಆರ್ಡರ್‌ಗಳು ದೊರೆತಿವೆ. ಆದರೆ ಪೂರೈಸಲು ಮೇ 15 ರವರೆಗೆ ಸಮಯ ಬೇಕಾಗುತ್ತದೆ ಎಂಬುದು ಅವರ ಪ್ರತಿಕ್ರಿಯೆ. ಆದ್ದರಿಂದ ಅವರು ನಮಗೆ ಲಸಿಕೆ ನೀಡುವ ಸ್ಥಿತಿಯಲ್ಲಿಲ್ಲ. ಪ್ರಶ್ನೆಯೆಂದರೆ, ರಾಜ್ಯಗಳು ನೇರವಾಗಿ ಲಸಿಕೆಗಳನ್ನು ಸಂಗ್ರಹಿಸಲು ಬಯಸಿದರೆ ಯಾವ ಪ್ರಕ್ರಿಯೆ ಅನುಸರಿಸಬೇಕು? ಇದನ್ನು ಕೇಂದ್ರ ಸರ್ಕಾರ ನಿರ್ಧರಿಸಬೇಕು. ನಮ್ಮ ಮುಂದಿರುವ ಪ್ರಶ್ನೆ ಏನೆಂದರೆ, 18-45 ವಯೋಮಾನದವರಲ್ಲಿ ನಾವು 3.13 ಕೋಟಿ ಜನರನ್ನು ಹೊಂದಿದ್ದೇವೆ; ಸ್ಟಾಕ್ ಇಲ್ಲದೇ ನಾವು ಅವರಿಗೆ ಹೇಗೆ ಲಸಿಕೆ ನೀಡುತ್ತೇವೆ?” ಎಂದು ರಾಜಸ್ಥಾನ ಆರೋಗ್ಯ ಸಚಿವ ರಘು ಶರ್ಮಾ ಹೇಳಿದ್ದಾರೆ.

“ಎಸ್‌ಐಐ ಮತ್ತು ಭಾರತ್ ಬಯೋಟೆಕ್‌ಗೆ ಕೇಂದ್ರ ಸರ್ಕಾರವು ರಾಜ್ಯಗಳಿಗೆ ಈ ಹೆಚ್ಚಿನ ಪ್ರಮಾಣವನ್ನು ಪೂರೈಸಲು ಸೂಚಿಸಬೇಕು. ನಾವು ಹಣ ಪಾವತಿಸಲು ಸಿದ್ಧರಿದ್ದೇವೆ. ಆದರೆ ದರಗಳು ಏಕರೂಪವಾಗಿರಬೇಕು. ಇದನ್ನು ಕೇಂದ್ರ ಸರ್ಕಾರ ಗಮನಿಸಬೇಕು” ಎಂದು ಶರ್ಮಾ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.

ರಾಜಸ್ಥಾನ, ಛತ್ತೀಸಘಡ ಮತ್ತು ಪಂಜಾಬ್‌ನಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರಗಳಿವೆ ಮತ್ತು ಜಾರ್ಖಂಡ್‌ನಲ್ಲಿ ಜೆಎಂಎಂನೊಂದಿಗೆ ಕಾಂಗ್ರೆಸ್ ಅಧಿಕಾರ ಹಂಚಿಕೊಂಡಿದೆ. ಈ ನಾಲ್ಕು ರಾಜ್ಯಗಳ ಆರೋಗ್ಯ ಸಚಿವರು ಜಂಟಿ ಆನ್‌ಲೈನ್ ಪತ್ರಿಕಾಗೋಷ್ಟಿ ನಡೆಸಿ ಲಸಿಕೆ ಕೊರತೆಯ ಸಮಸ್ಯೆಯನ್ನು ಎತ್ತಿತೋರಿಸಿದ್ದಾರೆ.

ಛತ್ತೀಸಘಡ್ ಆರೋಗ್ಯ ಸಚಿವ ಟಿ.ಎಸ್ ಸಿಂಗ್ ದಿಯೋ ಮತ್ತು ಪಂಜಾಬ್ ಆರೋಗ್ಯ ಸಚಿವ ಬಲ್ಬೀರ್ ಸಿಂಗ್ ಸಿಧು ಶರ್ಮಾ ಅವರ ಅಭಿಪ್ರಾಯಗಳನ್ನು ಅನುಮೋದಿಸಿ ಮಾತನಾಡಿದರು.
‘ಲಸಿಕೆಗಾಗಿ ಆರ್ಡರ್ ನೀಡಲು ಅಸ್ಸಾಂ ಪ್ರಯತ್ನಿಸಿದೆ ಎಂದು ಕೇಳಿದ್ದೇನೆ, ಆದರೆ ಒಂದು ತಿಂಗಳ ನಂತರ ಅವು ಸಿಗಲಿವೆ ಎಂದು ತಿಳಿಸಲಾಗಿದೆ’ ಎಂದು ದಿಯೋ ತಿಳಿಸಿದರು. ನಾಲ್ವರೂ ಆರೋಗ್ಯ ಸಚಿವರು, ಮೇ 1 ರಿಂದ ಮುಂದಿನ ಹಂತದ ವ್ಯಾಕ್ಸಿನೇಷನ್‌ಗಳಿಗೆ ಸಿದ್ಧವಾಗಿದ್ದೇವೆ. ಆದರೆ ತಯಾರಕರು ಡೋಸೇಜ್ ನೀಡಲು ಅಸಮರ್ಥರಾಗಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.


ಇದನ್ನೂ ಓದಿ: ಲಸಿಕಾ ರಾಜಕೀಯ: ಮೇ 1 ರಿಂದ ಲಸಿಕೆ ಎಂಬುದು ನಿಜವೇ? ನಿಮಗೆ ಲಸಿಕೆ ಸಿಗಲು ಎಷ್ಟು ತಿಂಗಳು/ವರ್ಷ ಬೇಕು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...