Homeಕರೋನಾ ತಲ್ಲಣಉಚಿತ ಕೊರೊನಾ ಲಸಿಕೆ ನೀಡುವುದಾಗಿ ಒರಿಸ್ಸಾ ಘೋಷಣೆ

ಉಚಿತ ಕೊರೊನಾ ಲಸಿಕೆ ನೀಡುವುದಾಗಿ ಒರಿಸ್ಸಾ ಘೋಷಣೆ

ಗುಜರಾತ್, ರಾಜಸ್ಥಾನ, ಉತ್ತರ ಪ್ರದೇಶ, ಅಸ್ಸಾಂ, ಕೇರಳ, ಛತ್ತೀಸ್‌ಗಡ, ಮಹಾರಾಷ್ಟ್ರ, ದೆಹಲಿ, ಬಿಹಾರ ಮತ್ತು ಮಧ್ಯಪ್ರದೇಶ ರಾಜ್ಯಗಳು ಈಗಾಗಲೇ ಉಚಿತ ಲಸಿಕೆ ನೀಡುವುದಾಗಿ ಘೋಷಿಸಿವೆ.

- Advertisement -
- Advertisement -

18 ರಿಂದ 45 ವರ್ಷ ವಯಸ್ಸಿನವರಿಗೆ ಉಚಿತ ವ್ಯಾಕ್ಸಿನೇಷನ್ ಘೋಷಿಸುವ ಸರ್ಕಾರಗಳ ಪಟ್ಟಿಯಲ್ಲಿ ಒರಿಸ್ಸಾ ಕೂಡಾ ಸೇರಿಕೊಂಡಿದೆ. ರಾಜ್ಯದ ಮುಖ್ಯಮಂತ್ರಿ ನವೀನ್‌‌ ಪಟ್ನಾಯಕ್ ಈ ಘೋಷಣೆಯನ್ನು ಮಾಡಿದ್ದು, ಎಲ್ಲಾ ಜನರ ಚುಚ್ಚುಮದ್ದಿನ ಸಂಪೂರ್ಣ ವೆಚ್ಚವನ್ನು ರಾಜ್ಯ ಸರ್ಕಾರ ಭರಿಸಲಿದೆ ಎಂದು ಹೇಳಿದ್ದಾರೆ. 18 ರಿಂದ 45 ವರ್ಷದ ಜನರಿಗೆ ವ್ಯಾಕ್ಸಿನೇಷನ್ ಮೇ 1 ರಿಂದ ಪ್ರಾರಂಭವಾಗುತ್ತದೆ.

ಗುಜರಾತ್, ರಾಜಸ್ಥಾನ, ಉತ್ತರ ಪ್ರದೇಶ, ಅಸ್ಸಾಂ, ಕೇರಳ, ಛತ್ತೀಸ್‌ಗಡ, ಮಹಾರಾಷ್ಟ್ರ, ದೆಹಲಿ, ಬಿಹಾರ ಮತ್ತು ಮಧ್ಯಪ್ರದೇಶ ರಾಜ್ಯಗಳು ಈಗಾಗಲೇ ಉಚಿತ ಲಸಿಕೆ ನೀಡುವುದಾಗಿ ಘೋಷಿಸಿವೆ.

ಇದನ್ನೂ ಓದಿ: ಸಂಪಾದಕರ ವಿರುದ್ಧ ಪತ್ರ: ಟೈಮ್ಸ್ ನೌ ಚಾನೆಲ್‌ನ ಹಾಲಿ, ಮಾಜಿ ಪತ್ರಕರ್ತರ ಜೊತೆ ನಿಲ್ಲೋಣ

3.87 ಕೋಟಿ ಡೋಸ್ ಲಸಿಕೆಗಳನ್ನು ಸರ್ಕಾರ ಭಾನುವಾರ ಆದೇಶಿಸಿದೆ. ಭಾರತ್ ಬಯೋಟೆಕ್‌ನಿಂದ 10.34 ಲಕ್ಷ ಡೋಸ್ ಕೋವಾಕ್ಸಿನ್ ಅನ್ನು ಆದೇಶಿಸಲಾಗಿದ್ದು, 377 ಲಕ್ಷ ಡೋಸ್ ಕೋವಿಶೀಲ್ಡ್ ಅನ್ನು ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾದಿಂದ ಪಡೆಯಲಾಗುತ್ತದೆ. ಭುವನೇಶ್ವರ ಮುನ್ಸಿಪಲ್ ಕಾರ್ಪೊರೇಶನ್‌ನ ವ್ಯಾಪ್ತಿಯ ಜನರಿಗೆ ಕೋವಾಕ್ಸಿನ್ ಹಾಗೂ ಉಳಿದಂತೆ ಒಡಿಶಾದಾದ್ಯಂತ ಕೋವಿಶೀಲ್ಡ್ ಅನ್ನು ನೀಡಲಾಗುವುದು ಎಂದು ತಿಳಿದು ಬಂದಿದೆ.

ರಾಜ್ಯದ ಜನರನ್ನುದ್ದೇಶಿಸಿ ಮಾತನಾಡಿದ ನವೀನ್ ಪಟ್ನಾಯಕ್, “ಸುಮಾರು ಎರಡು ಕೋಟಿ ಜನರು ಇದರ ಪ್ರಯೋಜನ ಪಡೆಯಲಿದ್ದಾರೆ. ಲಸಿಕೆಗಳನ್ನು ಖರೀದಿಸಲು ರಾಜ್ಯ ಸರ್ಕಾರ 2,000 ಕೋಟಿ ರೂ. ಖರ್ಚು ಮಾಡುತ್ತದೆ. ವ್ಯಾಕ್ಸಿನೇಷನ್ಗಾಗಿ ನೀವು ಏನನ್ನೂ ಖರ್ಚು ಮಾಡಬೇಕಾಗಿಲ್ಲ. ಇದು ಸರ್ಕಾರದ ಜವಾಬ್ದಾರಿಯಾಗಿದೆ. ಆದರೆ ಎಲ್ಲಾ ಕೊರೊನಾ ಮಾರ್ಗಸೂಚಿಗಳನ್ನು ಪಾಲಿಸುವ ಮೂಲಕ ನಿಮ್ಮ ಜವಾಬ್ದಾರಿಯನ್ನು ನೀವು ತೆಗೆದುಕೊಳ್ಳಬೇಕಾಗುತ್ತದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಕೊರೊನಾ ಉಲ್ಬಣ: ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆ‌ ಮುಂದೂಡಿಕೆ

ದೆಹಲಿ, ಉತ್ತರ ಪ್ರದೇಶ, ಮಧ್ಯಪ್ರದೇಶ, ಕರ್ನಾಟಕ, ಗುಜರಾತ್, ಮಹಾರಾಷ್ಟ್ರ ಮತ್ತು ಚತ್ತೀಸ್‌ಗಡದಂತಹ ರಾಜ್ಯಗಳಲ್ಲಿ ಪರಿಸ್ಥಿತಿ ಆತಂಕಕಾರಿಯಾಗಿದೆ. ಮಾರಣಾಂತಿಕ ವೈರಸ್‌ಗೆ ಬಲಿಯಾಗುವವರ ಅಂತ್ಯ ಸಂಸ್ಕಾರ ಮಾಡಲು ಕೂಡಾ ಸ್ಥಳವಿಲ್ಲದ ಪರಿಸ್ಥಿತಿ ಏರ್ಪಟ್ಟಿದೆ. ದೇಶವು ತನ್ನ ಇತಿಹಾಸದಲ್ಲಿ ಇಂತಹ ಅಪಾಯಕಾರಿ ಪರಿಸ್ಥಿತಿಯನ್ನು ಎದುರಿಸಲಿಲ್ಲ ಎಂದು ಮುಖ್ಯಮಂತ್ರಿ ಪಟ್ನಾಯಕ್ ಹೇಳಿದ್ದಾರೆ.

ಒರಿಸ್ಸಾದಲ್ಲಿ ಇದುವರೆಗೂ 4 ಲಕ್ಷ ಕೊರೊನಾ ಪ್ರಕರಣಗಳು ವರದಿಯಾಗಿದ್ದು, 1981 ಜನರು ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ 3.59 ಲಕ್ಷ ಜನರು ಇರುವರೆಗೂ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ.

ಇದನ್ನೂ ಓದಿ: ಲಸಿಕೆ ಸ್ಟಾಕ್ ಇಲ್ಲ: ಮೇ 1ರಿಂದ ‘ಎಲ್ಲರಿಗೂ ಲಸಿಕೆ’ ಅಭಿಯಾನ ಅಸಾಧ್ಯವೆಂದ 4 ರಾಜ್ಯಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...