Homeಕರೋನಾ ತಲ್ಲಣಇನ್ನೂ ಮೂರು ರಾಜ್ಯಗಳಿಂದ ಉಚಿತ ಲಸಿಕೆ ಘೋಷಣೆ: ಬಾಯಿ ಬಿಡದ ಕರ್ನಾಟಕ!

ಇನ್ನೂ ಮೂರು ರಾಜ್ಯಗಳಿಂದ ಉಚಿತ ಲಸಿಕೆ ಘೋಷಣೆ: ಬಾಯಿ ಬಿಡದ ಕರ್ನಾಟಕ!

ಬಿಹಾರ, ಉತ್ತರಪ್ರದೇಶ, ಛತ್ತೀಸಘಡ್ನಂತಹ ಆರ್ಥಿಕವಾಗಿ ಹಿಂದುಳಿದ ರಾಜ್ಯಗಳ ಸರ್ಕಾರಗಳೇ ಉಚಿತ ಲಸಿಕೆ ನೀಡಲು ತಯಾರು ಇರುವಾಗ, ಮುಂದುವರೆದ ರಾಜ್ಯ ಕರ್ನಾಟಕ ಈ ಕುರಿತು ಮಾತೇ ಆಡದಿರುವುದು ಆಶ್ಚರ್ಯ ಮೂಡಿಸಿದೆ.

- Advertisement -
- Advertisement -

ಗುಜರಾತ್, ಒಡಿಶಾ ಮತ್ತು ರಾಜಸ್ಥಾನ ಸರ್ಕಾರಗಳು ಎಲ್ಲರಿಗೂ ಉಚಿತ ಲಸಿಕೆ ಎಂದು ಭಾನುವಾರ ಘೋಷಣೆ ಮಾಡಿವೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಈಗಾಗಲೇ ಉತ್ತರ ಪ್ರದೇಶ, ಅಸ್ಸಾಂ, ಕೇರಳ, ಛತ್ತೀಸ್‌ಗಡ, ಮಹಾರಾಷ್ಟ್ರ, ದೆಹಲಿ, ಬಿಹಾರ ಮತ್ತು ಮಧ್ಯಪ್ರದೇಶ ರಾಜ್ಯಗಳು ಉಚಿತ ಲಸಿಕೆ ನಿಡುವುದಾಗಿ ಘೋಷಿಸಿವೆ. ಸದ್ಯ ಒಟ್ಟು 11 ರಾಜ್ಯಗಳು ತಮ್ಮ ಸಂಪನ್ಮೂಲ ಬಳಸಿ ಉಚಿತ ಲಸಿಕೆ ಘೋಷಿಸಿದಂತಾಗಿದೆ.

ಮೇ 1ರಿಂದ ಆರಂಭವಾಗಬೇಕಿರುವ ಲಸಿಕಾ ಅಭಿಯಾನಕ್ಕೆ ಇನ್ನು ಐದು ದಿನಗಳು ಮಾತ್ರ ಇವೆ. ಆದರೆ ಕರ್ನಾಟಕ ಸರ್ಕಾರ ತನ್ನ ಬಳಿ ಎಷ್ಟು ಲಸಿಕೆಗಳು ಸ್ಟಾಕ್ ಇವೆ ಎಂಬುದನ್ನು ಸ್ಪಷ್ಟಪಡಿಸುತ್ತಿಲ್ಲ. ಹಾಗೆಯೇ 18-45 ವಯಸ್ಸಿನವರು ಲಸಿಕೆಗೆ ಹಣ ಪಾವತಿ ಮಾಡಬೇಕೆ ಅಥವಾ ಉಚಿತವೇ ಎಂಬುದರ ಕುರಿತು ಯಾವದೇ ನಿರ್ಧಾರ ತೆಗೆದುಕೊಂಡಿಲ್ಲ.

45 ವರ್ಷ ಮೇಲ್ಪಟ್ಟವರಿಗೆ ಮಾತ್ರ ಕೇಂದ್ರ ಸರ್ಕಾರ ಉಚಿತ ಲಸಿಕೆ ನೀಡಿತು. ಆದರೆ, ನಂತರದಲ್ಲಿ ಲಸಿಕಾ ಕಂಪನಿಗಳಿಗೆ ದರ ನಿಗದಿ ಮಾಡಲು ತಿಳಿಸಿತು. ಈಗ ರಾಜ್ಯ ಸರ್ಕಾರಗಳು ಲಸಿಕೆ ಖರೀದಿಸಿ ಅದನ್ನು ಜನರಿಗೆ ಒದಗಿಸಬೇಕಿದೆ.

ಗುಜರಾತ್ ಮತ್ತು ರಾಜಸ್ಥಾನಗಳು 18-45 ವಯಸ್ಸಿನವರಿಗೆ ಲಸಿಕೆಗಳನ್ನು ಉಚಿತವಾಗಿ ನೀಡಿವೆ. ಜೊತೆಗೆ ಒಡಿಶಾದಲ್ಲಿ 18 ರಿಂದ 44 ವಯಸ್ಸಿನ ನಡುವಿನವರಿಗೆ ಉಚಿತವೆಂದು ಘೋಷಿಸಿದೆ.

ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್, “ಮಹಾರಾಷ್ಟ್ರ ಸರ್ಕಾರ 18-45ರ ವಯಸ್ಸಿನವರಿಗೂ ಉಚಿತ ಲಸಿಕೆ ನಿಡಲು ಯೋಚಿಚಿದೆ. ಮೇ 1 ರಂದು ಸಿಎಂ ಉದ್ಧವ್ ಠಾಕ್ರೆ ಅವರು ಔಪಚಾರಿಕ ನಿರ್ಧಾರ ತೆಗೆದುಕೊಳ್ಳುತ್ತಾರೆ’ ಎಂದು ಹೇಳಿದ್ದಾರೆ.

ಕಾಂಗ್ರೆಸ್, ಎನ್‌ಸಿಪಿ ಮತ್ತು ಶಿವಸೇನೆ ಒಕ್ಕೂಟವು ರಾಜ್ಯದ ಪ್ರತಿಯೊಬ್ಬರಿಗೂ ಲಸಿಕೆ ಉಚಿತವಾಗಿರಬೇಕು ಎಂಬ ಅಭಿಪ್ರಾಯ ಹೊಂದಿದೆ. ಅದರಂತೆ ರಾಜ್ಯ ಸರ್ಕಾರ ತನ್ನ ಕಾರ್ಯತಂತ್ರವನ್ನು ರೂಪಿಸುತ್ತಿದೆ ಎನ್ನಲಾಗಿದೆ.

ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು 18-44 ವಯಸ್ಸಿನ ಸುಮಾರು 2 ಕೋಟಿ ಜನರಿಗೆ ಉಚಿತವಾಗಿ ಲಸಿಕೆ ನೀಡಲಾಗುವುದು ಎಂದು ಹೇಳಿದ್ದಾರೆ. “ಖರೀದಿಗಾಗಿ ಈಗಾಗಲೇ ಆರ್ಡರ್ ನೀಡಲಾಗಿದೆ ಮತ್ತು ಇದಕ್ಕಾಗಿ ಸರ್ಕಾರವು ಸುಮಾರು 2,000 ಕೋಟಿ ರೂ. ಖರ್ಚು ಮಾಡುತ್ತದೆ” ಎಂದು ಮುಖ್ಯಮಂತ್ರಿ ಹೇಳಿದ್ದಾರೆ. 377 ಲಕ್ಷ ಡೋಸ್ ಕೋವಿಶೀಲ್ಡ್ ಲಸಿಕೆ ಸಂಗ್ರಹಿಸಲು ರಾಜ್ಯ ಸಜ್ಜಾಗಿದೆ.

ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ರಾಜ್ಯದಲ್ಲಿ 18-45 ವಯೋಮಾನದವರಲ್ಲಿ ಸುಮಾರು 3.75 ಕೋಟಿ ಜನರಿದ್ದಾರೆ, ಮತ್ತು ಪ್ರತಿ ವ್ಯಕ್ತಿಗೆ ಎರಡು ಲಸಿಕೆಗಳನ್ನು ಸುಮಾರು 3,000 ಕೋಟಿ ರೂ.ಗಳನ್ನು ರಾಜ್ಯ ಸರ್ಕಾರ ವ್ಯಯಿಸಲಿದೆ ಎಂದಿದ್ದಾರೆ. ಆದರೆ ಸೀರಂ ಸಂಸ್ಥೆಗೆ ಲಸಿಕೆ ಬೇಕು ಎಂದು ತಿಳಿಸಿದರೆ ಮೇ 15ರ ವರೆಗೂ ಪೂರೈಕೆ ಸಾಧ್ಯವಿಲ್ಲ ಎನ್ನುತ್ತಿದ್ದಾರೆ ಎಂದು ದೂರಿದ್ದಾರೆ.

ಕರ್ನಾಟಕದ ಸಮಸ್ಯೆ ಏನು?

ಬಿಹಾರ, ಉತ್ತರಪ್ರದೇಶ, ಛತ್ತೀಸಘಡ್ನಂತಹ ಆರ್ಥಿಕವಾಗಿ ಹಿಂದುಳಿದ ರಾಜ್ಯಗಳ ಸರ್ಕಾರಗಳೇ ಉಚಿತ ಲಸಿಕೆ ನೀಡಲು ತಯಾರು ಇರುವಾಗ, ಮುಂದುವರೆದ ರಾಜ್ಯ ಕರ್ನಾಟಕ ಈ ಕುರಿತು ಮಾತೇ ಆಡದಿರುವುದು ಆಶ್ಚರ್ಯ ಮೂಡಿಸಿದೆ. ಖಜಾನೆಯಲ್ಲಿ ಸಂಪನ್ಮೂಲ ಇಲ್ಲವೆ ಎಂಬ ಸಂಶಯ ಜನರನ್ನು ಕಾಡತೊಡಗಿದೆ. ಇತ್ತೀಚೆಗೆ ಸರ್ಕಾರ ಅನ್ನಭಾಗ್ಯ ಅಕ್ಕಿ ಪ್ರಮಾಣವನ್ನು ಕಡಿತಗೊಳಿಸಿದ್ದನ್ನು ನೋಡಿದರೆ ಈ ಅನುಮಾನ ದಟ್ಟವಾಗುತ್ತಿದೆ ಎನ್ನಲಾಗಿದೆ.


ಇದನ್ನೂ ಓದಿ: ಲಸಿಕೆ ಸ್ಟಾಕ್ ಇಲ್ಲ: ಮೇ 1ರಿಂದ ‘ಎಲ್ಲರಿಗೂ ಲಸಿಕೆ’ ಅಭಿಯಾನ ಅಸಾಧ್ಯವೆಂದ 4 ರಾಜ್ಯಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...