Homeಕರೋನಾ ತಲ್ಲಣಇನ್ನೂ ಮೂರು ರಾಜ್ಯಗಳಿಂದ ಉಚಿತ ಲಸಿಕೆ ಘೋಷಣೆ: ಬಾಯಿ ಬಿಡದ ಕರ್ನಾಟಕ!

ಇನ್ನೂ ಮೂರು ರಾಜ್ಯಗಳಿಂದ ಉಚಿತ ಲಸಿಕೆ ಘೋಷಣೆ: ಬಾಯಿ ಬಿಡದ ಕರ್ನಾಟಕ!

ಬಿಹಾರ, ಉತ್ತರಪ್ರದೇಶ, ಛತ್ತೀಸಘಡ್ನಂತಹ ಆರ್ಥಿಕವಾಗಿ ಹಿಂದುಳಿದ ರಾಜ್ಯಗಳ ಸರ್ಕಾರಗಳೇ ಉಚಿತ ಲಸಿಕೆ ನೀಡಲು ತಯಾರು ಇರುವಾಗ, ಮುಂದುವರೆದ ರಾಜ್ಯ ಕರ್ನಾಟಕ ಈ ಕುರಿತು ಮಾತೇ ಆಡದಿರುವುದು ಆಶ್ಚರ್ಯ ಮೂಡಿಸಿದೆ.

- Advertisement -
- Advertisement -

ಗುಜರಾತ್, ಒಡಿಶಾ ಮತ್ತು ರಾಜಸ್ಥಾನ ಸರ್ಕಾರಗಳು ಎಲ್ಲರಿಗೂ ಉಚಿತ ಲಸಿಕೆ ಎಂದು ಭಾನುವಾರ ಘೋಷಣೆ ಮಾಡಿವೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಈಗಾಗಲೇ ಉತ್ತರ ಪ್ರದೇಶ, ಅಸ್ಸಾಂ, ಕೇರಳ, ಛತ್ತೀಸ್‌ಗಡ, ಮಹಾರಾಷ್ಟ್ರ, ದೆಹಲಿ, ಬಿಹಾರ ಮತ್ತು ಮಧ್ಯಪ್ರದೇಶ ರಾಜ್ಯಗಳು ಉಚಿತ ಲಸಿಕೆ ನಿಡುವುದಾಗಿ ಘೋಷಿಸಿವೆ. ಸದ್ಯ ಒಟ್ಟು 11 ರಾಜ್ಯಗಳು ತಮ್ಮ ಸಂಪನ್ಮೂಲ ಬಳಸಿ ಉಚಿತ ಲಸಿಕೆ ಘೋಷಿಸಿದಂತಾಗಿದೆ.

ಮೇ 1ರಿಂದ ಆರಂಭವಾಗಬೇಕಿರುವ ಲಸಿಕಾ ಅಭಿಯಾನಕ್ಕೆ ಇನ್ನು ಐದು ದಿನಗಳು ಮಾತ್ರ ಇವೆ. ಆದರೆ ಕರ್ನಾಟಕ ಸರ್ಕಾರ ತನ್ನ ಬಳಿ ಎಷ್ಟು ಲಸಿಕೆಗಳು ಸ್ಟಾಕ್ ಇವೆ ಎಂಬುದನ್ನು ಸ್ಪಷ್ಟಪಡಿಸುತ್ತಿಲ್ಲ. ಹಾಗೆಯೇ 18-45 ವಯಸ್ಸಿನವರು ಲಸಿಕೆಗೆ ಹಣ ಪಾವತಿ ಮಾಡಬೇಕೆ ಅಥವಾ ಉಚಿತವೇ ಎಂಬುದರ ಕುರಿತು ಯಾವದೇ ನಿರ್ಧಾರ ತೆಗೆದುಕೊಂಡಿಲ್ಲ.

45 ವರ್ಷ ಮೇಲ್ಪಟ್ಟವರಿಗೆ ಮಾತ್ರ ಕೇಂದ್ರ ಸರ್ಕಾರ ಉಚಿತ ಲಸಿಕೆ ನೀಡಿತು. ಆದರೆ, ನಂತರದಲ್ಲಿ ಲಸಿಕಾ ಕಂಪನಿಗಳಿಗೆ ದರ ನಿಗದಿ ಮಾಡಲು ತಿಳಿಸಿತು. ಈಗ ರಾಜ್ಯ ಸರ್ಕಾರಗಳು ಲಸಿಕೆ ಖರೀದಿಸಿ ಅದನ್ನು ಜನರಿಗೆ ಒದಗಿಸಬೇಕಿದೆ.

ಗುಜರಾತ್ ಮತ್ತು ರಾಜಸ್ಥಾನಗಳು 18-45 ವಯಸ್ಸಿನವರಿಗೆ ಲಸಿಕೆಗಳನ್ನು ಉಚಿತವಾಗಿ ನೀಡಿವೆ. ಜೊತೆಗೆ ಒಡಿಶಾದಲ್ಲಿ 18 ರಿಂದ 44 ವಯಸ್ಸಿನ ನಡುವಿನವರಿಗೆ ಉಚಿತವೆಂದು ಘೋಷಿಸಿದೆ.

ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್, “ಮಹಾರಾಷ್ಟ್ರ ಸರ್ಕಾರ 18-45ರ ವಯಸ್ಸಿನವರಿಗೂ ಉಚಿತ ಲಸಿಕೆ ನಿಡಲು ಯೋಚಿಚಿದೆ. ಮೇ 1 ರಂದು ಸಿಎಂ ಉದ್ಧವ್ ಠಾಕ್ರೆ ಅವರು ಔಪಚಾರಿಕ ನಿರ್ಧಾರ ತೆಗೆದುಕೊಳ್ಳುತ್ತಾರೆ’ ಎಂದು ಹೇಳಿದ್ದಾರೆ.

ಕಾಂಗ್ರೆಸ್, ಎನ್‌ಸಿಪಿ ಮತ್ತು ಶಿವಸೇನೆ ಒಕ್ಕೂಟವು ರಾಜ್ಯದ ಪ್ರತಿಯೊಬ್ಬರಿಗೂ ಲಸಿಕೆ ಉಚಿತವಾಗಿರಬೇಕು ಎಂಬ ಅಭಿಪ್ರಾಯ ಹೊಂದಿದೆ. ಅದರಂತೆ ರಾಜ್ಯ ಸರ್ಕಾರ ತನ್ನ ಕಾರ್ಯತಂತ್ರವನ್ನು ರೂಪಿಸುತ್ತಿದೆ ಎನ್ನಲಾಗಿದೆ.

ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು 18-44 ವಯಸ್ಸಿನ ಸುಮಾರು 2 ಕೋಟಿ ಜನರಿಗೆ ಉಚಿತವಾಗಿ ಲಸಿಕೆ ನೀಡಲಾಗುವುದು ಎಂದು ಹೇಳಿದ್ದಾರೆ. “ಖರೀದಿಗಾಗಿ ಈಗಾಗಲೇ ಆರ್ಡರ್ ನೀಡಲಾಗಿದೆ ಮತ್ತು ಇದಕ್ಕಾಗಿ ಸರ್ಕಾರವು ಸುಮಾರು 2,000 ಕೋಟಿ ರೂ. ಖರ್ಚು ಮಾಡುತ್ತದೆ” ಎಂದು ಮುಖ್ಯಮಂತ್ರಿ ಹೇಳಿದ್ದಾರೆ. 377 ಲಕ್ಷ ಡೋಸ್ ಕೋವಿಶೀಲ್ಡ್ ಲಸಿಕೆ ಸಂಗ್ರಹಿಸಲು ರಾಜ್ಯ ಸಜ್ಜಾಗಿದೆ.

ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ರಾಜ್ಯದಲ್ಲಿ 18-45 ವಯೋಮಾನದವರಲ್ಲಿ ಸುಮಾರು 3.75 ಕೋಟಿ ಜನರಿದ್ದಾರೆ, ಮತ್ತು ಪ್ರತಿ ವ್ಯಕ್ತಿಗೆ ಎರಡು ಲಸಿಕೆಗಳನ್ನು ಸುಮಾರು 3,000 ಕೋಟಿ ರೂ.ಗಳನ್ನು ರಾಜ್ಯ ಸರ್ಕಾರ ವ್ಯಯಿಸಲಿದೆ ಎಂದಿದ್ದಾರೆ. ಆದರೆ ಸೀರಂ ಸಂಸ್ಥೆಗೆ ಲಸಿಕೆ ಬೇಕು ಎಂದು ತಿಳಿಸಿದರೆ ಮೇ 15ರ ವರೆಗೂ ಪೂರೈಕೆ ಸಾಧ್ಯವಿಲ್ಲ ಎನ್ನುತ್ತಿದ್ದಾರೆ ಎಂದು ದೂರಿದ್ದಾರೆ.

ಕರ್ನಾಟಕದ ಸಮಸ್ಯೆ ಏನು?

ಬಿಹಾರ, ಉತ್ತರಪ್ರದೇಶ, ಛತ್ತೀಸಘಡ್ನಂತಹ ಆರ್ಥಿಕವಾಗಿ ಹಿಂದುಳಿದ ರಾಜ್ಯಗಳ ಸರ್ಕಾರಗಳೇ ಉಚಿತ ಲಸಿಕೆ ನೀಡಲು ತಯಾರು ಇರುವಾಗ, ಮುಂದುವರೆದ ರಾಜ್ಯ ಕರ್ನಾಟಕ ಈ ಕುರಿತು ಮಾತೇ ಆಡದಿರುವುದು ಆಶ್ಚರ್ಯ ಮೂಡಿಸಿದೆ. ಖಜಾನೆಯಲ್ಲಿ ಸಂಪನ್ಮೂಲ ಇಲ್ಲವೆ ಎಂಬ ಸಂಶಯ ಜನರನ್ನು ಕಾಡತೊಡಗಿದೆ. ಇತ್ತೀಚೆಗೆ ಸರ್ಕಾರ ಅನ್ನಭಾಗ್ಯ ಅಕ್ಕಿ ಪ್ರಮಾಣವನ್ನು ಕಡಿತಗೊಳಿಸಿದ್ದನ್ನು ನೋಡಿದರೆ ಈ ಅನುಮಾನ ದಟ್ಟವಾಗುತ್ತಿದೆ ಎನ್ನಲಾಗಿದೆ.


ಇದನ್ನೂ ಓದಿ: ಲಸಿಕೆ ಸ್ಟಾಕ್ ಇಲ್ಲ: ಮೇ 1ರಿಂದ ‘ಎಲ್ಲರಿಗೂ ಲಸಿಕೆ’ ಅಭಿಯಾನ ಅಸಾಧ್ಯವೆಂದ 4 ರಾಜ್ಯಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...