Homeಕರೋನಾ ತಲ್ಲಣನಾಳೆಯಿಂದ 14 ದಿನಗಳವರೆಗೆ ರಾಜ್ಯದಾದ್ಯಂತ ಲಾಕ್‌ಡೌನ್!‌

ನಾಳೆಯಿಂದ 14 ದಿನಗಳವರೆಗೆ ರಾಜ್ಯದಾದ್ಯಂತ ಲಾಕ್‌ಡೌನ್!‌

- Advertisement -
- Advertisement -

ರಾಜ್ಯದಾದ್ಯಂತ ಕೊರೊನಾ ಉಲ್ಬಣಗೊಂಡಿದ್ದು ಮಂಗಳವಾರದಿಂದ ಮುಂದಿನ ಹದಿನಾಲ್ಕು ದಿನಗಳ ವರೆಗೆ ಲಾಕ್‌ಡೌನ್ ಮಾಡುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಸೋಮವಾರ ಘೋಷಣೆ ಮಾಡಿದ್ದಾರೆ.

ಇಂದು ವಿಧಾನಸೌಧದಲ್ಲಿ ಮಾತಾಡಿದ ಮುಖ್ಯಮಂತ್ರಿ, ರಾಜ್ಯದಾದ್ಯಂತ ಮಂಗಳವಾರ ರಾತ್ರಿಯಿಂದ ಮೇ 10ರ ವರೆಗೆ ಸಂಪೂರ್ಣ ಲಾಕ್‌ಡೌನ್‌ ಮಾಡುತ್ತಿರುವುದಾಗಿ ಹೇಳಿದ್ದಾರೆ. ಬಿಗಿಯಾದ ಕ್ರಮಗಳು ಹೇರಲಾಗಿದ್ದು, ಲಾಕ್‌ಡೌನ್‌ ಸಮಯದಲ್ಲಿ ಬೆಳಿಗ್ಗೆ 6 ರಿಂದ 10 ಗಂಟೆಗಳ ವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿದೆ.

ಇದನ್ನೂ ಓದಿ: ಮೋದಿಯವರೆ ಬಾಯಿ ಬಡಾಯಿ ಬಿಟ್ಟಾಕಿ ಉಚಿತ ಲಸಿಕೆ ನೀಡಿ: ಸಿದ್ದರಾಮಯ್ಯ

ಗಾರ್ಮೆಂಟ್‌ ಬಿಟ್ಟು ಉಳಿದ ಎಲ್ಲಾ ಕೈಗಾರಿಗಕೆಗಳಿಗೆ ಅವಕಾಶ ನೀಡಲಾಗಿದೆ. ಜನರ ಓಡಾಟಕ್ಕೆ ನಿರ್ಬಂಧ ಹೇರಲಾಗಿದೆ. ಆದರೆ ಬೆಳಿಗ್ಗೆ 6 ರಿಂದ 10 ಗಂಟೆಗಳ ವರೆಗೆ ಮದ್ಯದ ಅಂಗಡಿಗಳನ್ನು ತೆರೆಯಲು ಅವಕಾಶ ನೀಡಲಾಗಿದ್ದು, ಪಾರ್ಸೆಲ್‌ಗೆ ಅವಕಾಶವಿದೆ.

ಮುಂದಿನ ಹದಿನಾಲ್ಕು ದಿನಗಳ ಕಾಲ ಸಾರ್ವಜನಿಕ ಸಾರಿಗೆಯನ್ನು ಕೂಡ ಬಂದ್ ಮಾಡಲಾಗುತ್ತದೆ, ಮೆಟ್ರೋ ಓಡಾಟ ಕೂಡಾ ಇರುವುದಿಲ್ಲ. ಕಟ್ಟಡ ನಿರ್ಮಾಣ ಕಾಮಗಾರಿಗಳು ಯಾವುದೆ ಅಡ್ಡಿಯಿಲ್ಲದೆ ಮುಂದುವರೆಯಬಹುದು ಎಂದು ರಾಜ್ಯ ಸರ್ಕಾರ ಹೇಳಿದೆ.

ಅಂತರಾಜ್ಯ ವಾಹನ ಓಡಾಟಕ್ಕೆ ನಿರ್ಬಂಧ ಹೇರಲಾಗಿದೆ. ಕೃಷಿ ಚಟುವಟಿಕೆಗಳಿಗೆ ಅನುಮತಿ ನೀಡಲಾಗಿದೆ.

“ಲಾಕ್‌ಡೌನ್‌ ದಿನಗಳಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಬರದಿದ್ದರೆ, ಇನ್ನೂ ಒಂದು ವಾರ ಮುಂದುವರೆಯುತ್ತದೆ” ಎಂದು ಮುಖ್ಯಮಂತ್ರಿ ಲಾಕ್‌ಡೌನ್‌ ಮುಂದುವರಿಕೆಯ ಸೂಚನೆ ಕೂಡಾ ನೀಡಿದ್ದಾರೆ.

ಮುಂದಿನ ಕೆಲವೇ ಗಂಟೆಗಳಲ್ಲಿ ವಿಸ್ತೃತ ಮಾಹಿತಿಯನ್ನು ಸರ್ಕಾರವು ಹೊರಡಿಸಲಿದೆ.

ಇದನ್ನೂ ಓದಿ: ಕೊರೊನಾ ಮಾರ್ಗಸೂಚಿ ಉಲ್ಲಂಘಿಸಿದ ಉಡುಪಿ ಜಿಲ್ಲಾಧಿಕಾರಿ? ಅವರು ಹೇಳಿದ್ದೇನು?

ವಿಡಿಯೊ ನೋಡಿ: ಕೋವಿಡ್ ತೀವ್ರವಾಗಿ ಹರಡುತ್ತಿರುವ ಸಂದರ್ಭದಲ್ಲಿ ಜಿಲ್ಲಾ/ತಾಲೂಕು ಮಟ್ಟದಲ್ಲಿ ನಾವೇನು ಮಾಡಬಹುದು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...