Homeಮುಖಪುಟಸಿಪಿಐ (ಮಾವೋವಾದಿ) ಜೊತೆಗೆ ನಂಟು ಆರೋಪ:16 ಸಂಘಟನೆಗಳನ್ನು ಬ್ಯಾನ್ ಮಾಡಿದ ತೆಲಂಗಾಣ

ಸಿಪಿಐ (ಮಾವೋವಾದಿ) ಜೊತೆಗೆ ನಂಟು ಆರೋಪ:16 ಸಂಘಟನೆಗಳನ್ನು ಬ್ಯಾನ್ ಮಾಡಿದ ತೆಲಂಗಾಣ

ಸರ್ಕಾರದ ಆದೇಶವನ್ನು ವಿರೋಧಿಸಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ), ಸರ್ಕಾರದ ಈ ನಡೆಯು ಪ್ರಜಾಪ್ರಭುತ್ವ ವಿರೋಧಿ ಎಂದಿದೆ.

- Advertisement -
- Advertisement -

ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ-ಮಾವೋವಾದಿ (ಸಿಪಿಐ-ಮಾವೋವಾದಿ)ಯೊಂದಿಗೆ ಸಂಬಂಧ ಹೊಂದಿವೆ ಎನ್ನಲಾಗಿರುವ 16 ಸಂಘಟನೆಗಳು ತೆಲಂಗಾಣ ಸರ್ಕಾರ ಒಂದು ವರ್ಷದ ಅವಧಿಗೆ ನಿಷೇಧಿಸಿ ಆದೇಶಿಸಿದೆ. ಈ 16 ಸಂಘಟನೆಗಳು ಕಾನೂನುಬಾಹಿರ ಸಂಘಟನೆಗಳು ಎಂದು ಹೇಳಿದ್ದು, ಮಾರ್ಚ್‌ 30 ರಿಂದ ಒಂದು ವರ್ಷದ ಅವಧಿಗೆ ನಿಷೇಧಿಸಲಾಗಿದೆ ಎಂದು ಘೋಷಿಸಲಾಗಿದೆ.

ತೆಲಂಗಾಣ ಸರ್ಕಾರ ಕಾನೂನುಬಾಹಿರವೆಂದು ಘೋಷಿಸಿರುವ ಸಂಘಟನೆಗಳು: ತೆಲಂಗಾಣ ಪ್ರಜಾ ಫ್ರಂಟ್ (TPD), ತೆಲಂಗಾಣ ಅಸಂಘಟಿತ ಕಾರ್ಮಿಕ ಸಮಾಕ್ಯ (TAKS), ತೆಲಂಗಾಣ ವಿದ್ಯಾರ್ಥಿ ವೇದಿಕಾ (TVV), ಡೆಮಾಕ್ರಟಿಕ್‌ ಸ್ಟೂಡೆಂಟ್‌ ಯೂನಿಯನ್‌ (DSU), ತೆಲಂಗಾಣ ವಿದ್ಯಾರ್ಥಿ ಸಂಘ (TVS), ಆದಿವಾಸಿ ಸ್ಟೂಡೆಂಟ್ಸ್ ಯೂನಿಯನ್ (ASU), ರಾಜಕೀಯ ಕೈದಿಗಳ ಬಿಡುಗಡೆ ಸಮಿತಿ (CRPP), ತೆಲಂಗಾಣ ರೈತಂಗ ಸಮಿತಿ (TRS), ತುಡುಮ್ ಡೆಬ್ಬಾ (TD), ಪ್ರಜಾ ಕಲಾ ಮಂಡಳಿ (PKM), ತೆಲಂಗಾಣ ಡೆಮಾಕ್ರಟಿಕ್ ಫ್ರಂಟ್ (TDF), ಹಿಂದೂ ಫ್ಯಾಸಿಸಂ ಆಕ್ರಮಣ ವಿರೋಧಿ ವೇದಿಕೆ (FAHFO), ಸಿವಿಲ್ ಲಿಬರ್ಟೀಸ್ ಕಮಿಟಿ (CLC), ಅಮರುಲಾ ಬಂಧು ಮಿಥ್ರುಲಾ ಸಂಘ (ABMS), ಚೈತನ್ಯ ಮಹಿಳಾ ಸಂಘ (CMS) ಮತ್ತು ಕ್ರಾಂತಿಕಾರಿ ಬರಹಗಾರರ ಸಂಘ (RWA).

ನಿಷೇಧಿಸಲಾಗಿರುವ ಈ 16 ಸಂಘಟನೆಗಳು ಯುಎಪಿಎ ಕಾಯ್ದೆ, ವಿವಾದಿತ ಮೂರು ಕೃಷಿ ಕಾನೂನುಗಳು, ಸಿಎಎ – ಎನ್‌ಆರ್‌ಸಿ ಮುಂತಾದ ವಿಷಯಗಳ ವಿರುದ್ದ ಪ್ರಚೋದನಾಕಾರಿ ಹೇಳಿಕೆಗಳು, ಸಭೆಗಳು ಮತ್ತು ರ್‍ಯಾಲಿಗಳನ್ನು ನಡೆಸುತ್ತಿದ್ದವು. ಈ ಮೂಲಕ ಜನರನ್ನು ತಮ್ಮ ಸಂಘಟನೆಯತ್ತ ಸೆಳೆಯುತ್ತಿವೆ. ಅಲ್ಲದೆ, ಈ ಸಂಘಟನೆಗಳು ಸಿಪಿಐ-ಮಾವೋವಾದಿ ನಾಯಕತ್ವದ ನಿರ್ದೇಶನದಂತೆ ಕೆಲಸ ಮಾಡುತ್ತವೆ ಎಂದು ಸರ್ಕಾರ ತಿಳಿಸಿದೆ.

ಇದನ್ನೂ ಓದಿ: ಕೊರೊನಾ ಸೋಂಕಿತ ವರ, ಪಿಪಿಇ ಕಿಟ್ ಧರಿಸಿದ ವಧು: ಮದುವೆ ಮಂಟಪವಾದ ಕೋವಿಡ್ ವಾರ್ಡ್!

ಈ ಸಂಘಟನೆಗಳ ಕೆಲವು ಸದಸ್ಯರು ಸರ್ಕಾರವನ್ನು “ರಾಜ್ಯದ ದಬ್ಬಾಳಿಕೆ” ಎಂದು ಕರೆಯುತ್ತಾರೆ ಮತ್ತು ಈ ಸಂಘಟನೆಗಳು ಪಿ. ವರವರ ರಾವ್, ಪ್ರೊಫೆಸರ್ ಜಿ.ಎನ್. ರೋಮಾ ವಿಲ್ಸನ್ ಮತ್ತು ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಬಂಧಿಸಲ್ಪಟ್ಟ ವಿವಿಧ ಸಂಘಟನೆಗಳ ಮುಖಂಡರನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ 16 ಸಂಘಟನೆಗಳನ್ನು ಒಂದು ವರ್ಷದ ಅವಧಿಗೆ ನಿಷೇಧಿಸಿರುವುದಾಗಿ ಸರ್ಕಾರ ತನ್ನ ಆದೇಶದಲ್ಲಿ ಹೇಳಿದೆ.

ಸಂಘಟನೆಗಳನ್ನು ನಿಷೇಧಿಸಿರುವ ಸರ್ಕಾರ ಆದೇಶವನ್ನು ವಿರೋಧಿಸಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ), ಸರ್ಕಾರದ ಈ ನಡೆಯು ಪ್ರಜಾಪ್ರಭುತ್ವ ವಿರೋಧಿಯಾಗಿದ್ದು, ರಾಜಕೀಯ ಭಿನ್ನಮತದ ವಿರುದ್ಧ ರಾಜ್ಯ ಸರ್ಕಾರ ಈ ರೀತಿಯ ಪ್ರತೀಕಾರಕ್ಕೆ ಇಳಿದಿದೆ ಎಂದು ಆರೋಪಿಸಿದೆ.

ಯಾವುದೇ ಸಿದ್ಧಾಂತಗಳನ್ನು ಬಲಪ್ರಯೋಗದ ಮೂಲಕ ಸೋಲಿಸಲಾಗದು. ಸಮಾಜದಲ್ಲಿ ಪ್ರಜಾಸತ್ತಾತ್ಮಕವಾಗಿ ಕೆಲಸ ಮಾಡಲು ಅವಕಾಶ ನಿರಾಕರಿಸುವುದು‌ ನಮ್ಮ ಪ್ರಜಾಸತ್ತಾತ್ಮಕ ಮೌಲ್ಯಗಳ ಮೇಲೆ ಜನರು ನಂಬಿಕೆ ಕಳೆದುಕೊಳ್ಳುವಂತೆ ಮಾಡುತ್ತದೆ ಎಂದು ಹೇಳಿದೆ.

ಕಾನೂನುಬಾಹಿರ ಕೆಲಸವನ್ನು‌ ಮಾಡಿರುವುದಕ್ಕೆ ಯಾವುದೇ ವ್ಯಕ್ತಿ ಅಥವಾ ಸಂಘಟನೆಯ ವಿರುದ್ಧ ಸರ್ಕಾರದ  ಬಳಿ ಸಾಕ್ಷಿಯಿದ್ದರೇ ಸಂಬಂಧಿಸಿದ ಪ್ರಕರಣವನ್ನು ನ್ಯಾಯಾಲಯದಲ್ಲಿ ಸಾಬೀತುಪಡಿಸಬೇಕು. ಅದನ್ನು ಬಿಟ್ಟು, ಈ ರೀತಿಯಲ್ಲಿ ದಮನ ಮಾಡುವುದು ಪ್ರಜಾಸತ್ತಾತ್ಮಕ ಸಮಾಜಕ್ಕೆ ವಿನಾಶಕಾರಿಯಾಗಿದೆ ಎಂದು ಪಿಎಫ್‌ಐ ಪ್ರಧಾನ ಕಾರ್ಯದರ್ಶಿ ಅನೀಸ್ ಅಹ್ಮದ್ ಆಕ್ಷೇಪಿಸಿದ್ದಾರೆ.


ಇದನ್ನೂ ಓದಿ: ಸಂಕೇಶ್ವರರ Some-ಶೋಧನೆಗಳು: ಉಚಿತ ರೇಷನ್ ಕೊಟ್ಟರೆ ಜನ ಕೆಲಸಕ್ಕೆ ಬರಲ್ಲ! ಆಮ್ಲಜನಕ ಸಮಸ್ಯೆ ಬಗೆಹರಿಸಲು ನಿಂಬೆರಸ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ತೆಲಂಗಾಣ ಸರ್ಕಾರದ ಈ ಕ್ರಮ ಪ್ರಜಾಪ್ರಭುತ್ವದ ನಾಶಕ್ಕೆ ನಾಂದಿ ಹಾಡಿದೆ.

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...