Homeಮುಖಪುಟಸಿಪಿಐ (ಮಾವೋವಾದಿ) ಜೊತೆಗೆ ನಂಟು ಆರೋಪ:16 ಸಂಘಟನೆಗಳನ್ನು ಬ್ಯಾನ್ ಮಾಡಿದ ತೆಲಂಗಾಣ

ಸಿಪಿಐ (ಮಾವೋವಾದಿ) ಜೊತೆಗೆ ನಂಟು ಆರೋಪ:16 ಸಂಘಟನೆಗಳನ್ನು ಬ್ಯಾನ್ ಮಾಡಿದ ತೆಲಂಗಾಣ

ಸರ್ಕಾರದ ಆದೇಶವನ್ನು ವಿರೋಧಿಸಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ), ಸರ್ಕಾರದ ಈ ನಡೆಯು ಪ್ರಜಾಪ್ರಭುತ್ವ ವಿರೋಧಿ ಎಂದಿದೆ.

- Advertisement -
- Advertisement -

ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ-ಮಾವೋವಾದಿ (ಸಿಪಿಐ-ಮಾವೋವಾದಿ)ಯೊಂದಿಗೆ ಸಂಬಂಧ ಹೊಂದಿವೆ ಎನ್ನಲಾಗಿರುವ 16 ಸಂಘಟನೆಗಳು ತೆಲಂಗಾಣ ಸರ್ಕಾರ ಒಂದು ವರ್ಷದ ಅವಧಿಗೆ ನಿಷೇಧಿಸಿ ಆದೇಶಿಸಿದೆ. ಈ 16 ಸಂಘಟನೆಗಳು ಕಾನೂನುಬಾಹಿರ ಸಂಘಟನೆಗಳು ಎಂದು ಹೇಳಿದ್ದು, ಮಾರ್ಚ್‌ 30 ರಿಂದ ಒಂದು ವರ್ಷದ ಅವಧಿಗೆ ನಿಷೇಧಿಸಲಾಗಿದೆ ಎಂದು ಘೋಷಿಸಲಾಗಿದೆ.

ತೆಲಂಗಾಣ ಸರ್ಕಾರ ಕಾನೂನುಬಾಹಿರವೆಂದು ಘೋಷಿಸಿರುವ ಸಂಘಟನೆಗಳು: ತೆಲಂಗಾಣ ಪ್ರಜಾ ಫ್ರಂಟ್ (TPD), ತೆಲಂಗಾಣ ಅಸಂಘಟಿತ ಕಾರ್ಮಿಕ ಸಮಾಕ್ಯ (TAKS), ತೆಲಂಗಾಣ ವಿದ್ಯಾರ್ಥಿ ವೇದಿಕಾ (TVV), ಡೆಮಾಕ್ರಟಿಕ್‌ ಸ್ಟೂಡೆಂಟ್‌ ಯೂನಿಯನ್‌ (DSU), ತೆಲಂಗಾಣ ವಿದ್ಯಾರ್ಥಿ ಸಂಘ (TVS), ಆದಿವಾಸಿ ಸ್ಟೂಡೆಂಟ್ಸ್ ಯೂನಿಯನ್ (ASU), ರಾಜಕೀಯ ಕೈದಿಗಳ ಬಿಡುಗಡೆ ಸಮಿತಿ (CRPP), ತೆಲಂಗಾಣ ರೈತಂಗ ಸಮಿತಿ (TRS), ತುಡುಮ್ ಡೆಬ್ಬಾ (TD), ಪ್ರಜಾ ಕಲಾ ಮಂಡಳಿ (PKM), ತೆಲಂಗಾಣ ಡೆಮಾಕ್ರಟಿಕ್ ಫ್ರಂಟ್ (TDF), ಹಿಂದೂ ಫ್ಯಾಸಿಸಂ ಆಕ್ರಮಣ ವಿರೋಧಿ ವೇದಿಕೆ (FAHFO), ಸಿವಿಲ್ ಲಿಬರ್ಟೀಸ್ ಕಮಿಟಿ (CLC), ಅಮರುಲಾ ಬಂಧು ಮಿಥ್ರುಲಾ ಸಂಘ (ABMS), ಚೈತನ್ಯ ಮಹಿಳಾ ಸಂಘ (CMS) ಮತ್ತು ಕ್ರಾಂತಿಕಾರಿ ಬರಹಗಾರರ ಸಂಘ (RWA).

ನಿಷೇಧಿಸಲಾಗಿರುವ ಈ 16 ಸಂಘಟನೆಗಳು ಯುಎಪಿಎ ಕಾಯ್ದೆ, ವಿವಾದಿತ ಮೂರು ಕೃಷಿ ಕಾನೂನುಗಳು, ಸಿಎಎ – ಎನ್‌ಆರ್‌ಸಿ ಮುಂತಾದ ವಿಷಯಗಳ ವಿರುದ್ದ ಪ್ರಚೋದನಾಕಾರಿ ಹೇಳಿಕೆಗಳು, ಸಭೆಗಳು ಮತ್ತು ರ್‍ಯಾಲಿಗಳನ್ನು ನಡೆಸುತ್ತಿದ್ದವು. ಈ ಮೂಲಕ ಜನರನ್ನು ತಮ್ಮ ಸಂಘಟನೆಯತ್ತ ಸೆಳೆಯುತ್ತಿವೆ. ಅಲ್ಲದೆ, ಈ ಸಂಘಟನೆಗಳು ಸಿಪಿಐ-ಮಾವೋವಾದಿ ನಾಯಕತ್ವದ ನಿರ್ದೇಶನದಂತೆ ಕೆಲಸ ಮಾಡುತ್ತವೆ ಎಂದು ಸರ್ಕಾರ ತಿಳಿಸಿದೆ.

ಇದನ್ನೂ ಓದಿ: ಕೊರೊನಾ ಸೋಂಕಿತ ವರ, ಪಿಪಿಇ ಕಿಟ್ ಧರಿಸಿದ ವಧು: ಮದುವೆ ಮಂಟಪವಾದ ಕೋವಿಡ್ ವಾರ್ಡ್!

ಈ ಸಂಘಟನೆಗಳ ಕೆಲವು ಸದಸ್ಯರು ಸರ್ಕಾರವನ್ನು “ರಾಜ್ಯದ ದಬ್ಬಾಳಿಕೆ” ಎಂದು ಕರೆಯುತ್ತಾರೆ ಮತ್ತು ಈ ಸಂಘಟನೆಗಳು ಪಿ. ವರವರ ರಾವ್, ಪ್ರೊಫೆಸರ್ ಜಿ.ಎನ್. ರೋಮಾ ವಿಲ್ಸನ್ ಮತ್ತು ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಬಂಧಿಸಲ್ಪಟ್ಟ ವಿವಿಧ ಸಂಘಟನೆಗಳ ಮುಖಂಡರನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ 16 ಸಂಘಟನೆಗಳನ್ನು ಒಂದು ವರ್ಷದ ಅವಧಿಗೆ ನಿಷೇಧಿಸಿರುವುದಾಗಿ ಸರ್ಕಾರ ತನ್ನ ಆದೇಶದಲ್ಲಿ ಹೇಳಿದೆ.

ಸಂಘಟನೆಗಳನ್ನು ನಿಷೇಧಿಸಿರುವ ಸರ್ಕಾರ ಆದೇಶವನ್ನು ವಿರೋಧಿಸಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ), ಸರ್ಕಾರದ ಈ ನಡೆಯು ಪ್ರಜಾಪ್ರಭುತ್ವ ವಿರೋಧಿಯಾಗಿದ್ದು, ರಾಜಕೀಯ ಭಿನ್ನಮತದ ವಿರುದ್ಧ ರಾಜ್ಯ ಸರ್ಕಾರ ಈ ರೀತಿಯ ಪ್ರತೀಕಾರಕ್ಕೆ ಇಳಿದಿದೆ ಎಂದು ಆರೋಪಿಸಿದೆ.

ಯಾವುದೇ ಸಿದ್ಧಾಂತಗಳನ್ನು ಬಲಪ್ರಯೋಗದ ಮೂಲಕ ಸೋಲಿಸಲಾಗದು. ಸಮಾಜದಲ್ಲಿ ಪ್ರಜಾಸತ್ತಾತ್ಮಕವಾಗಿ ಕೆಲಸ ಮಾಡಲು ಅವಕಾಶ ನಿರಾಕರಿಸುವುದು‌ ನಮ್ಮ ಪ್ರಜಾಸತ್ತಾತ್ಮಕ ಮೌಲ್ಯಗಳ ಮೇಲೆ ಜನರು ನಂಬಿಕೆ ಕಳೆದುಕೊಳ್ಳುವಂತೆ ಮಾಡುತ್ತದೆ ಎಂದು ಹೇಳಿದೆ.

ಕಾನೂನುಬಾಹಿರ ಕೆಲಸವನ್ನು‌ ಮಾಡಿರುವುದಕ್ಕೆ ಯಾವುದೇ ವ್ಯಕ್ತಿ ಅಥವಾ ಸಂಘಟನೆಯ ವಿರುದ್ಧ ಸರ್ಕಾರದ  ಬಳಿ ಸಾಕ್ಷಿಯಿದ್ದರೇ ಸಂಬಂಧಿಸಿದ ಪ್ರಕರಣವನ್ನು ನ್ಯಾಯಾಲಯದಲ್ಲಿ ಸಾಬೀತುಪಡಿಸಬೇಕು. ಅದನ್ನು ಬಿಟ್ಟು, ಈ ರೀತಿಯಲ್ಲಿ ದಮನ ಮಾಡುವುದು ಪ್ರಜಾಸತ್ತಾತ್ಮಕ ಸಮಾಜಕ್ಕೆ ವಿನಾಶಕಾರಿಯಾಗಿದೆ ಎಂದು ಪಿಎಫ್‌ಐ ಪ್ರಧಾನ ಕಾರ್ಯದರ್ಶಿ ಅನೀಸ್ ಅಹ್ಮದ್ ಆಕ್ಷೇಪಿಸಿದ್ದಾರೆ.


ಇದನ್ನೂ ಓದಿ: ಸಂಕೇಶ್ವರರ Some-ಶೋಧನೆಗಳು: ಉಚಿತ ರೇಷನ್ ಕೊಟ್ಟರೆ ಜನ ಕೆಲಸಕ್ಕೆ ಬರಲ್ಲ! ಆಮ್ಲಜನಕ ಸಮಸ್ಯೆ ಬಗೆಹರಿಸಲು ನಿಂಬೆರಸ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ತೆಲಂಗಾಣ ಸರ್ಕಾರದ ಈ ಕ್ರಮ ಪ್ರಜಾಪ್ರಭುತ್ವದ ನಾಶಕ್ಕೆ ನಾಂದಿ ಹಾಡಿದೆ.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...