Homeಅಂಕಣಗಳುನೂರರ ನೋಟ: ಸಾಗುವಳಿ ಭೂಮಿಯ ಅಕ್ರಮ ಸಕ್ರಮ ಅರ್ಜಿಗಳು ಶೀಘ್ರ ಇತ್ಯರ್ಥವಾಗಲಿ..

ನೂರರ ನೋಟ: ಸಾಗುವಳಿ ಭೂಮಿಯ ಅಕ್ರಮ ಸಕ್ರಮ ಅರ್ಜಿಗಳು ಶೀಘ್ರ ಇತ್ಯರ್ಥವಾಗಲಿ..

- Advertisement -
- Advertisement -

ಅಕ್ರಮವಾಗಿ ಸರ್ಕಾರಿ ಭೂಮಿ ಸಾಗುವಳಿಯನ್ನು ಮಾಡುತ್ತಿದ್ದ ಒಬ್ಬ ರೈತ ಅಕ್ರಮ ಸಕ್ರಮ ಅರ್ಜಿ ಸಲ್ಲಿಸಿ, ತಹಶೀಲ್ದಾರರ ಕಚೇರಿಗೆ ತಿರುಗಿ ತಿರುಗಿ ಬೇಸತ್ತು ಹತಾಶನಾಗಿ ತಹಶೀಲ್ದಾರರನ್ನೇ ಗುಂಡಿಕ್ಕಿ ಕೊಂದ ಸುದ್ದಿ ಪತ್ರಿಕೆಯಲ್ಲಿ ಪ್ರಕಟವಾಗಿದೆ. ಇದರಲ್ಲಿ ತಹಶೀಲ್ದಾರನ ತಪ್ಪೇನೂ ಇಲ್ಲ. ಅಕ್ರಮ ಸಕ್ರಮ ಜಮೀನನ್ನು ರೈತನ ಹೆಸರಿಗೆ ಪಟ್ಟ ಮಾಡಿಕೊಡಿ ಎಂದು ಜಿಲ್ಲಾಧಿಕಾರಿಗಳಿಗೆ ಸರ್ಕಾರ ಪತ್ರ ಬರೆಯದ ಹೊರತು ಜಿಲ್ಲಾಧಿಕಾರಿಯಾಗಲಿ, ತಹಶೀಲ್ದಾರರಾಗಲಿ ಆ ಕೆಲಸ ಕೈಗೆತ್ತಿಕೊಳ್ಳಲು ಸಾಧ್ಯವಿಲ್ಲ. ಸರ್ಕಾರ ಅಕ್ರಮ ಸಕ್ರಮದ ಅರ್ಜಿಗಳನ್ನು ಕರೆಯಲು ತೀರ್ಮಾನ ತೆಗೆದುಕೊಂಡು 3-4 ವರ್ಷ ಆಗಿದೆ. ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದೊಡನೆ ಅರ್ಜಿ ಸ್ವೀಕರಿಸಲು ಕೊನೆಯ ದಿನವನ್ನು 1-2 ವರ್ಷ ಕಾಲ ವಿಸ್ತರಿಸುತ್ತಾ ಹೋಗುತ್ತದೆ.

ಅಕ್ರಮ ಸಕ್ರಮ ಅರ್ಜಿಗಳನ್ನು ಪರಿಶೀಲಿಸಿ ಅಕ್ರಮವಾಗಿರುವುದನ್ನು ತಿರಸ್ಕರಿಸಲು, ಸಕ್ರಮವಾಗಿರುವುದನ್ನು ಅಂಗೀಕರಿಸಲು ಸರ್ಕಾರ ಜಿಲ್ಲಾಧಿಕಾರಿಗಳಿಗೆ ಅನುಮತಿ ನೀಡಿದೆ. ಇದಕ್ಕಾಗಿ ಪ್ರತಿ ತಾಲ್ಲೂಕಿನಲ್ಲೂ ಒಂದು ಸಮಿತಿಯನ್ನು ಸರ್ಕಾರ ರಚಿಸಿದೆ. ಈ ಸಮಿತಿಯ ಸಂಚಾಲಕರ ಸದಸ್ಯರು ಆಯಾ ತಾಲ್ಲೂಕಿನ ತಹಶೀಲ್ದಾರರು. ಮೂರು ಸದಸ್ಯರ ಈ ಸಮಿತಿಗೆ ಅಲ್ಲಿಯ ಶಾಸಕರು ಮತ್ತು ಒಬ್ಬ ಖಾಸಗಿ ವ್ಯಕ್ತಿ ಸದಸ್ಯರು. ಈ ಸಮಿತಿ ಪ್ರತಿ ಶನಿವಾರ ಸಭೆ ನಡೆಸಿ ಅರ್ಜಿಗಳನ್ನು ಪರಿಶೀಲಿಸಿ ತೀರ್ಮಾನಕ್ಕೆ ಬರುವ ಅಧಿಕಾರ ಹೊಂದಿದೆ. ಆದರೆ ಅನೇಕ ತಾಲ್ಲೂಕುಗಳಲ್ಲಿ ಅಲ್ಲಿಯ ಶಾಸಕರ ಆಲಕ್ಷ್ಯದಿಂದ ಸಮಿತಿಯ ಸಭೆಗಳೇ ನಡೆದಿಲ್ಲ. ಇದನ್ನು ಗಮನಿಸಿದ ಸಿದ್ದರಾಮಯ್ಯ ಸರ್ಕಾರದಲ್ಲಿ ಕಂದಾಯ ಮಂತ್ರಿಗಳಾಗಿದ್ದ ಕಾಗೋಡು ತಿಮ್ಮಪ್ಪನವರು ರೋಸಿ ಹೋಗಿ ಶನಿವಾರದ ಸಭೆಗಳಿಗೆ ಇಬ್ಬರು ಸದಸ್ಯರು ಹಾಜರಾದರೂ ಸಾಕು, ಸಭೆ ನಡೆಸಿ ಎಂದು ತಹಶೀಲ್ದಾರರಿಗೆ ಪತ್ರಗಳನ್ನು ಬರೆದರು. ಅದೂ ಕಾರ್ಯಗತವಾಗಲಿಲ್ಲ. ಈ ಜಮೀನನ್ನೇ ನಂಬಿಕೊಂಡು ಜೀವನ ನಡೆಸುತ್ತಿರುವ ಬಡ ರೈತರ ಕೆಲಸವನ್ನು ಆದ್ಯತೆಯಿಂದ ಮಾಡಿಕೊಡಬೇಕು ಎಂದು ಈ ಶಾಸಕರಿಗೆ ಅನ್ನಿಸಲೇ ಇಲ್ಲ, ಇಂದಿಗೂ ಈ ಪರಿಸ್ಥಿತಿ ಮುಂದುವರೆಯುತ್ತಿದೆ. ಬಡ ರೈತರು ತಾವು ಹಿಡಿದಿರುವ ಸರ್ಕಾರಿ ಜಮೀನನ್ನು ತಮ್ಮ ಹೆಸರಿಗೆ ಪಟ್ಟ ಮಾಡಿಕೊಡುತ್ತಾರೆಂದು ತಾಲ್ಲೂಕು ಆಫೀಸಿಗೆ ಅಲೆದಾಡಿ ಹತಾಶರಾಗಿದ್ದಾರೆ. ಹೊಟ್ಟೆ ತುಂಬಿದ ಶಾಸಕರಿಗೆ ಈ ಬಡ ಜನರ ಬವಣೆ ಗೊತ್ತಿದ್ದರೂ ಅವರನ್ನು ಆಲಕ್ಷ್ಯ ಮಾಡಿದ್ದಾರೆ. ಇದು ಬಡವರ ಆಕ್ರೋಶಕ್ಕೆ ಕಾರಣವಾಗಿದೆ.

ಕೆಲವು ತಾಲ್ಲೂಕುಗಳಲ್ಲಿ ಶಾಸಕರು ಮುತುವರ್ಜಿವಹಿಸಿ ಸಭೆಗಳನ್ನು ನಡೆಸಿ ಅಕ್ರಮ ಸಕ್ರಮ ಅರ್ಜಿಗಳನ್ನು ಪರಿಶೀಲಿಸಿ ಅನರ್ಹವಾದದ್ದು ಯಾವುದು, ಅರ್ಹವಾದದ್ದು ಯಾವುದು ಎಂದು ಪರಿಶೀಲಿಸಿ ಪಟ್ಟ ಮಾಡಿದ್ದಾರೆ. ನನಗೆ ತಿಳಿದಂತೆ ಗೌರಿಬಿದನೂರಿನ ಶಾಸಕರು ಅರ್ಹರಾದವರಿಗೆ ಪಟ್ಟ ಕೊಡಿಸಿದ್ದಾರೆ ಅಲೆಮಾರಿ ಹಕ್ಕಿಪಿಕ್ಕರಿಗೆ ಪಟ್ಟ ಹಂಚುವ ಸಮಾರಂಭಕ್ಕೆ ಶಾಸಕರು ನನ್ನನ್ನು ಆಹ್ವಾನಿಸಿದ್ದರು. ನಾನು ಹೋಗಿದ್ದೆ.

PC : Patrika

ಈಗ ನನಗೆ ತಿಳಿದುಬಂದಿರುವಂತೆ ಕೆಲವು ತಾಲ್ಲೂಕುಗಳಲ್ಲಿ ಒಟ್ಟು 4 ಲಕ್ಷ ಅರ್ಜಿಗಳು ಬಂದಿದ್ದರೂ ಅವುಗಳ ಪೈಕಿ ಸಮಿತಿ ಎರಡೂವರೆ ಲಕ್ಷ ಅರ್ಜಿಗಳನ್ನು ತಿರಸ್ಕರಿಸಿ ಒಂದೂವರೆ ಲಕ್ಷ ಅರ್ಜಿದಾರರಿಗೆ ಪಟ್ಟ ಮಾಡಿ ಕೊಡಬಹುದೆಂದು ಶಿಫಾರಸು ಮಾಡಿದೆ.

ಜಾತಕ ಪಕ್ಷಿಗಳಂತೆ ಪಟ್ಟಕ್ಕಾಗಿ ಕಾಯುತ್ತಿರುವ ಈ ಬಡ ರೈತರಿಗೆ, ತೀರ್ಮಾನಗೊಂಡ ಈ ಒಂದೂವರೆ ಲಕ್ಷ ಅರ್ಹ ಅರ್ಜಿದಾರರಿಗೆ ಪಟ್ಟವನ್ನು ಕೂಡಲೇ ಹಂಚಲು ಸರ್ಕಾರ ಸುತ್ತೋಲೆ ಹೊರಡಿಸಬೇಕು. ಜಿಲ್ಲಾಧಿಕಾರಿಗಳ ಉಸ್ತುವಾರಿಯಲ್ಲಿ ಈ ಅರ್ಹ ಅರ್ಜಿದಾರರಿಗೆ ಪಟ್ಟ ಮಾಡಿಕೊಡಲು ಅನುಮತಿ ನೀಡಬೇಕು. ಈ ಪ್ರಕ್ರಿಯೆ ಕೂಡಲೇ ಕಾರ್ಯಗತಗೊಳ್ಳಲು ಸೂಚಿಸಿ, 6 ತಿಂಗಳೊಳಗೆ ಈ ಒಂದೂವರೆ ಲಕ್ಷ ಅರ್ಹ ಅರ್ಜಿದಾರರಿಗೆ ಪಟ್ಟ ದೊರೆಯುವಂತೆ ಸುಗ್ರೀವಾಜ್ಞೆ ಹೊರಡಿಸಬೇಕು.

ಸರ್ಕಾರ ಬಡ ರೈತರ ಕಾತರವನ್ನು ಅರ್ಥಮಾಡಿಕೊಳ್ಳಬೇಕು. ಈ ರೈತರು ತಹಶೀಲ್ದಾರರ ಕಚೇರಿಗೆ ನೂರಾರು ಸಲ ಹೋಗಿ ಹತಾಶರಾಗಿ ಹಿಂದಿರುಗಿರುವುದನ್ನು ಗಮನಿಸಬೇಕು. ಬಡ ರೈತರ ತಾಳ್ಮೆಯನ್ನು ಪರೀಕ್ಷಿಸುವುದಕ್ಕಲ್ಲ ಸರ್ಕಾರ ಇರುವುದು. ಅವರ ಕಣ್ಣೀರನ್ನು ಒರೆಸುವುದಕ್ಕೆ. ಸಾಂತ್ವನ ಹೇಳುವುದಕ್ಕೆ. ಹತಾಶನಾದ ರೈತ ತಾಲ್ಲೂಕು ಕಚೇರಿಗೆ ತಿರುಗಿ ತಿರುಗಿ ಬೇಸತ್ತು ಅಸಹಾಯಕರಾದ ತಹಶೀಲ್ದಾರರನ್ನೂ ಗುಂಡಿಟ್ಟು ಕೊಂದಿರುವುದನ್ನು ಸರ್ಕಾರ ಒಂದು ಎಚ್ಚರಿಕೆಯ ಗಂಟೆ ಎಂದು ಪರಿಭಾವಿಸಬೇಕು. ತ್ವರಿತಗತಿಯಿಂದ ಅವರ ಬವಣೆಯನ್ನು ನೀಗುವುದು ಸರ್ಕಾರದ ಆದ್ಯತೆಯಾಗಬೇಕು.

ಹಿಂದೆ ಎರಡನೇ ಮಹಾಯುದ್ಧದ ಸಮಯದಲ್ಲಿ ಮತ್ತು ಸ್ವಾತಂತ್ರ ಪ್ರಾಪ್ತವಾದ ಹೊಸದರಲ್ಲಿ ಆಹಾರ ಧಾನ್ಯಗಳ ಕೊರೆತೆಯಿಂದ ಬಡಜನರು ತೊಳಲಾಡುವುದನ್ನು ಗಮನಿಸಿದ ಅಂದಿನ ಸರ್ಕಾರ ಭೂಹೀನ ಬಡರೈತರಿಗೆ ಸರ್ಕಾರಿ ಜಮೀನಿನಲ್ಲಿ ಬೆಳೆ ಬೆಳೆದುಕೊಳ್ಳಲು ಅನುಮತಿ ನೀಡಿತು. ಇದಕ್ಕಾಗಿ ಸರ್ಕಾರ Grow more food campaign ಆರಂಭ ಮಾಡಿತು. ಸಹಸ್ರಾರು ಬಡರೈತರು ಒಂದು ಎಕರೆ, ಎರಡು ಎಕರೆ ಸರ್ಕಾರಿ ಜಮೀನಿನಲ್ಲಿ ವ್ಯವಸಾಯ ಮಾಡಲು ಆರಂಭಿಸಿದರು. ಈ ಮೂಲಕ ಈ ಬಡರೈತರು ತಮ್ಮ ಮನೆಗೆ ಬೇಕಾದಷ್ಟನ್ನು ಬೆಳೆದುಕೊಂಡು ಸ್ವಾವಲಂಬಿಗಳಾದರು. ಆಹಾರ ಧಾನ್ಯವನ್ನು ಜನರಿಗೆ ಒದಗಿಸುವ ಹೊಣೆಗಾರಿಕೆಯಿಂದ ಸ್ವಲ್ಪಮಟ್ಟಿಗೆ ಪಾರಾಗಲು ಈ Grow more food campaign ಯೋಜನೆ ಸಹಕಾರಿಯಾಯಿತು.

ಈ ರೈತರು ಕೂಡ ತಮ್ಮ ಜಮೀನಿಗೆ ಸರ್ಕಾರ ಪಟ್ಟ ಕೊಡುವುದೆಂದು ಅಂದಿನಿಂದ ಕಾಯುತ್ತಿದ್ದಾರೆ. ಸರ್ಕಾರವೇ ಸರ್ಕಾರಿ ಜಮೀನನ್ನು ಆಹಾರಧಾನ್ಯ ಬೆಳೆದುಕೊಳ್ಳುವುದಕ್ಕಾಗಿ ರೈತರಿಗೆ ಕೊಟ್ಟಿರುವುದರಿಂದ ಈ ಜಮೀನು ಅಕ್ರಮ ಸಕ್ರಮದಡಿಯಲ್ಲಿ ಪರಿಶೀಲಿಸಲು ಬರುವುದಿಲ್ಲ.

ಆದ್ದರಿಂದ ಈ ರೈತರು ಬೇರೆ ಜಮೀನನ್ನು ಹೊಂದಿರದಿದ್ದರೆ ಅಂಥವರಿಗೆ ನೇರವಾಗಿ ಪಟ್ಟ ನೀಡಲು ತಹಶೀಲ್ದಾರುಗಳಿಗೆ ಅಧಿಕಾರ ನೀಡಬೇಕು. ಇಂತಹವರು ಸಕ್ರಮ ಅಕ್ರಮದಡಿ ಅರ್ಜಿ ಸಲ್ಲಿಸಿದ್ದರೆ ಅದನ್ನು ಬೇರ್ಪಡಿಸಿ ಈ ರೈತರಿಗೆ ಕೂಡಲೇ ಪಟ್ಟ ಮಾಡಿಕೊಡಬೇಕು.


ಇದನ್ನೂ ಓದಿ: ನೂರರ ನೋಟ: ಪ್ರಜಾಪ್ರಭುತ್ವದ ಕಗ್ಗೊಲೆಯ ಮೂರು ಪ್ರಕರಣಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಸೊಹ್ರಾಬುದ್ದೀನ್ ಶೇಖ್ ಎನ್‌ಕೌಂಟರ್ ಪ್ರಕರಣ : 22 ಆರೋಪಿಗಳ ಖುಲಾಸೆ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಸಹೋದರ

ಸೊಹ್ರಾಬುದ್ದೀನ್ ಶೇಖ್ ಮತ್ತು ಅವರ ಪತ್ನಿ ಕೌಸರ್ ಬಿ ಹಾಗೂ ಆಪ್ತ ತುಳಸಿರಾಮ್ ಪ್ರಜಾಪತಿ ಅವರ 2005ರ ನಕಲಿ ಎನ್‌ಕೌಂಟರ್ ಪ್ರಕರಣದಲ್ಲಿ ಗುಜರಾತ್, ರಾಜಸ್ಥಾನ ಮತ್ತು ಆಂಧ್ರಪ್ರದೇಶದ 21 ಪೊಲೀಸರು ಸೇರಿದಂತೆ ಒಟ್ಟು...

ಉತ್ತರ ಪ್ರದೇಶ| ಚಲಿಸುವ ರೈಲಿನಲ್ಲಿ ಮದರಸಾ ವಿದ್ಯಾರ್ಥಿ ಮೇಲೆ ಹಲ್ಲೆ; ಬಲವಂತವಾಗಿ ಮದ್ಯ ಕುಡಿಸಿದ ದುಷ್ಕರ್ಮಿಗಳು

ಪಶ್ಚಿಮ ಉತ್ತರ ಪ್ರದೇಶದಲ್ಲಿ ಶನಿವಾರ ರಾತ್ರಿ ಚಲಿಸುತ್ತಿದ್ದ ರೈಲಿನಲ್ಲಿ ಮದರಸಾ ವಿದ್ಯಾರ್ಥಿಯೊಬ್ಬನ ಮೇಲೆ ಕುಡಿದ ಮತ್ತಿನಲ್ಲಿದ್ದ ಯುವಕರ ಗುಂಪೊಂದು ಹಲ್ಲೆ ನಡೆಸಿ, ಆತನ ಧಾರ್ಮಿಕ ಗುರುತನ್ನು ನಿಂದಿಸಿ, ಬಲವಂತವಾಗಿ ಮದ್ಯ ಕುಡಿಸಿರುವ ಘಟನೆ...

ಶೈಕ್ಷಣಿಕ ಬೇಡಿಕೆಗಳಿಗಾಗಿ ವಾರ್ಧಾ ಎಂಜಿಎಎಚ್‌ವಿಯಲ್ಲಿ ವಿದ್ಯಾರ್ಥಿಗಳ ಅಹೋರಾತ್ರಿ ಸತ್ಯಾಗ್ರಹ: 47ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ, 6 ವಿದ್ಯಾರ್ಥಿಗಳ ವಿರುದ್ಧ ಎಫ್‌ಐಆರ್

ವಾರ್ಧಾ (ಮಹಾರಾಷ್ಟ್ರ): ಮಹಾರಾಷ್ಟ್ರದ ವಾರ್ಧಾದಲ್ಲಿರುವ ಪ್ರತಿಷ್ಠಿತ ಮಹಾತ್ಮ ಗಾಂಧಿ ಅಂತರರಾಷ್ಟ್ರೀಯ ಹಿಂದಿ ವಿಶ್ವವಿದ್ಯಾಲಯದಲ್ಲಿ (ಎಂಜಿಎಎಚ್‌ವಿ) ಶೈಕ್ಷಣಿಕ ಹಾಗೂ ವಿದ್ಯಾರ್ಥಿ ಕಲ್ಯಾಣಕ್ಕೆ ಸಂಬಂಧಿಸಿದ ವಿವಿಧ ಮೂಲಭೂತ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ವಿದ್ಯಾರ್ಥಿಗಳು ನಡೆಸುತ್ತಿರುವ ಸತ್ಯಾಗ್ರಹವು...

ಮೀಸಲಾತಿ ವಿರೋಧಿ ಬೇಡಿಕೆಗಳ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿ: ಕೇಂದ್ರ ಸಚಿವ ಅಠಾವಳೆ ಆಗ್ರಹ

ಮೀಸಲಾತಿಯನ್ನು ವಿರೋಧಿಸುವ ಅಥವಾ ಅದನ್ನು ರದ್ದುಗೊಳಿಸಲು ಆಗ್ರಹಿಸುವವರ ವಿರುದ್ಧ ದೇಶದ್ರೋಹದ ಪ್ರಕರಣಗಳನ್ನು ದಾಖಲಿಸಬೇಕೆಂದು ಕೇಂದ್ರ ಸಚಿವ ಹಾಗೂ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ (ಅಠಾವಳೆ) ಅಧ್ಯಕ್ಷ ರಾಮದಾಸ್ ಅಠಾವಳೆ ಭಾನುವಾರ ಆಗ್ರಹಿಸಿದ್ದಾರೆ. ಮೀಸಲಾತಿ ವಿರೋಧಿಸಿ...

Karnataka SIR : ಇಂದು ಕರಡು ಪಟ್ಟಿ ಪ್ರಕಟ; 43.80 ಲಕ್ಷ ಮತದಾರರಿಗೆ ದಾಖಲೆ ಕೇಳಿ ನೋಟಿಸ್

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್‌) ಮನೆ ಮನೆ ಗಣತಿಯ (ಎನ್ಯುಮರೇಷನ್ ಫಾರಂ ಹಂತ) ಬಳಿಕ ಕರಡು ಮತದಾರರ ಪಟ್ಟಿಯನ್ನು ರಾಜ್ಯ ಚುನಾವಣಾ ಆಯೋಗ ಇಂದು (ಆ.24, ಸೋಮವಾರ) ಪ್ರಕಟಿಸಲಿದೆ....

ಅಮೆರಿಕದೊಂದಿಗಿನ ಯುದ್ಧಕ್ಕೆ ಇರಾನ್ 40 ವರ್ಷಗಳಿಂದ ಸಿದ್ಧವಾಗಿತ್ತು: ನಿವೃತ್ತ ಲೆಫ್ಟಿನೆಂಟ್ ಜನರಲ್ ಧಿಲ್ಲೋನ್

"ತನ್ನ ಅತ್ಯುನ್ನತ ನಾಯಕತ್ವವನ್ನು ಕಳೆದುಕೊಳ್ಳುವಂತಹ ತುರ್ತು ಪರಿಸ್ಥಿತಿಗಳು ಸೇರಿದಂತೆ, ಅಮೆರಿಕದೊಂದಿಗಿನ ಸಂಭಾವ್ಯ ಯುದ್ಧಕ್ಕಾಗಿ ಇರಾನ್ ನಾಲ್ಕು ದಶಕಗಳಿಂದ ಸಿದ್ಧತೆ ನಡೆಸಿದೆ. ಹೀಗಾಗಿ ಎದುರಾಳಿಗಳಿಗೆ ಆ ದೇಶವನ್ನು ಸಂಪೂರ್ಣವಾಗಿ ನಾಶಪಡಿಸುವುದು ಕಷ್ಟಕರವಾಗಿದೆ" ಎಂದು ಭಾರತೀಯ...

ಸಚಿವ ಬಿ. ನಾಗೇಂದ್ರ ವಜಾಗೆ ಆಗ್ರಹಿಸಿ ಆಗಸ್ಟ್ 24ರಂದು ವಿಧಾನಸೌಧ ಮುತ್ತಿಗೆಗೆ ಕರೆ ನೀಡಿದ ಬಿಜೆಪಿ: ಉಲ್ಬಣಗೊಂಡ ರಾಜಕೀಯ ಸಂಘರ್ಷ

ಕರ್ನಾಟಕದ ರಾಜಕೀಯ ವಲಯದಲ್ಲಿ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣಕಾಸು ಅಕ್ರಮ ಪ್ರಕರಣವು ಭಾರಿ ಸಂಚಲನ ಮೂಡಿಸಿದ್ದು, ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಮತ್ತು ವಿರೋಧ ಪಕ್ಷಗಳ ನಡುವಿನ ಸಮರ...

ಕೇರಳ ವಿಶ್ವವಿದ್ಯಾಲಯದಲ್ಲಿ ಜಾತಿ ತಾರತಮ್ಯ; ದಲಿತ ಪಿಎಚ್‌ಡಿ ಸಂಶೋಧಕಿಯಿಂದ ಆರೋಪ

ತುಂಚತ್ ಎಝುತ್ತಚ್ಚನ್ ಮಲಯಾಳಂ ವಿಶ್ವವಿದ್ಯಾಲಯದ (ಟಿಇಎಂಯು) ದಲಿತ ಸಂಶೋಧಕಿಯೊಬ್ಬರು, "ಸಹಾಯಕ ಪ್ರಾಧ್ಯಾಪಕರೊಬ್ಬರು ತಮ್ಮ ವಿರುದ್ಧ ಜಾತಿ ಆಧಾರಿತ ತಾರತಮ್ಯ, ಕಿರುಕುಳ ಮತ್ತು ಪಿಎಚ್‌ಡಿ ಸಂಶೋಧನೆಗೆ ಅಡ್ಡಿಪಡಿಸುತ್ತಿದ್ದಾರೆ" ಎಂದು ಆರೋಪಿಸಿದ್ದಾರೆ. ಆಗಸ್ಟ್ 15 ರಿಂದ ತಿರೂರಿನ...

ಉತ್ತರ ಪ್ರದೇಶ| ಆಹಾರ ಸುರಕ್ಷತಾ ಅಧಿಕಾರಿಗಳ ದಾಳಿ; ತನ್ನದೇ ಅಂಗಡಿಯ ಸಿಹಿತಿಂಡಿ ತಿನ್ನಲು ನಿರಾಕರಿಸಿದ ಮಾಲೀಕ

ಆಹಾರ ಸುರಕ್ಷತಾ ದಾಳಿಯ ವೇಳೆ ಸಿಹಿ ತಿಂಡಿ ಅಂಗಡಿಯ ಮಾಲೀಕನೊಬ್ಬ ತನ್ನದೇ ಅಂಗಡಿಯಲ್ಲಿ ಮಾರಾಟಕ್ಕಿಟ್ಟಿದ್ದ ಸಿಹಿತಿಂಡಿಯನ್ನು ತಿನ್ನಲು ನಿರಾಕರಿಸಿ ಸುದ್ದಿಯಾಗಿರುವ ಘಟನೆ ಉತ್ತರ ಪ್ರದೇಶದ ಹಮೀರ್‌ಪುರದಲ್ಲಿ ನಡೆದಿದೆ. ಕಲಬೆರಕೆ ಹಾಗೂ ನಕಲಿ ಸಿಹಿತಿಂಡಿಗಳನ್ನು ಮಾರಾಟ...

ದೇಶದ ಅಭಿವೃದ್ಧಿಗೆ ಕೌಶಲ್ಯದ ಕೊರತೆ ಸವಾಲು: 8.7 ಕೋಟಿ ಯುವಜನರು ಶಿಕ್ಷಣ, ಉದ್ಯೋಗದಿಂದ ವಂಚಿತರಾಗಿದ್ದಾರೆ ಎಂದ ನೀತಿ ಆಯೋಗ

ಭಾರತದ ಆರ್ಥಿಕ ಪ್ರಗತಿ ಹಾಗೂ ಭವಿಷ್ಯದ ಅಭಿವೃದ್ಧಿಯ ಹಾದಿಯಲ್ಲಿ ದೇಶದ ಯುವಶಕ್ತಿಯನ್ನು ಬಳಸಿಕೊಳ್ಳುವುದು ಅತ್ಯಂತ ನಿರ್ಣಾಯಕವಾಗಿದೆ. ಆದರೆ ಪ್ರಸ್ತುತ ದೇಶದಲ್ಲಿ ಕೋಟ್ಯಂತರ ಯುವಜನರು ಯಾವುದೇ ರೀತಿಯ ಶಿಕ್ಷಣ, ಉದ್ಯೋಗ ಅಥವಾ ಕೌಶಲ್ಯ ತರಬೇತಿಯಲ್ಲಿ...